Cabinet approves revamped Khelo India Scheme and enhanced Assistance to National Sports Federations (ANSFs)

July 31st, 04:15 pm

The Union Cabinet chaired by PM Modi has approved an expanded Khelo India Scheme and enhanced Assistance to National Sports Federations (ANSFs) with a combined outlay of Rs.36,441 crore for the period 2026-27 to 2030-31. Aligned with the vision of Khelo Bharat Niti 2025 and the NEP 2020, the scheme integrates sports with education, fitness, technology and high-performance training.

ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 23rd, 10:10 pm

ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.

ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 23rd, 05:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು

August 15th, 03:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.

79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 15th, 07:00 am

ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.

India celebrates 79th Independence Day

August 15th, 06:45 am

PM Modi, in his address to the nation on the 79th Independence day paid tribute to the Constituent Assembly, freedom fighters, and Constitution makers. He reiterated that India will always protect the interests of its farmers, livestock keepers and fishermen. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047. Special guests like Panchayat members and “Drone Didis” graced the Red Fort celebrations.

2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 27th, 11:30 am

‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.