ಜ್ಞಾನದ ಮಹತ್ವ ಮತ್ತು ಪರಿವರ್ತನಾ ಶಕ್ತಿಯನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

September 09th, 10:46 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜ್ಞಾನವು ಸಮಾಜದೊಂದಿಗೆ ಸಾಮರಸ್ಯದಿಂದ ಬಾಳುವ ಕಲೆಯನ್ನು ಕಲಿಸುತ್ತದೆ ಎಂಬುದನ್ನು ಎತ್ತಿಹಿಡಿಯುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. ಜ್ಞಾನವು ಬುದ್ಧಿವಂತಿಕೆ ಮತ್ತು ಸಮೃದ್ಧಿಯನ್ನು ನೀಡುತ್ತದೆ, ಹೃದಯವನ್ನು ಆನಂದದಿಂದ ತುಂಬಿಸುತ್ತದೆ ಮತ್ತು ವ್ಯಕ್ತಿಯ ಘನತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ವಿವೇಚನಾಶೀಲ ಬುದ್ಧಿವಂತಿಕೆಯ ಮಹತ್ವವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

September 08th, 07:51 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ, ಬುದ್ಧಿವಂತ ಮತ್ತು ವಿವೇಚನಾಶೀಲ ವ್ಯಕ್ತಿಯು ದೊಡ್ಡ ಅಥವಾ ಸಣ್ಣದಾಗಿರಲಿ ಜ್ಞಾನದ ಪ್ರತಿಯೊಂದು ಶಾಖೆಯಿಂದ ಸಾರವನ್ನು ಪಡೆಯಬೇಕು ಎಂದು ಒತ್ತಿ ಹೇಳಿದರು. ಪ್ರತಿಯೊಂದು ಮೂಲದಿಂದಲೂ ಅಮೂಲ್ಯವಾದ ಜ್ಞಾನವನ್ನು ಹುಡುಕುವ ಮತ್ತು ಸಂಯೋಜಿಸುವ ಮಹತ್ವವನ್ನು ಅವರು ಪ್ರತಿಪಾದಿಸಿದರು.

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ವಿಜೇತರೊಂದಿಗೆ ಪ್ರಧಾನಮಂತ್ರಿ ಸಂವಾದ

September 05th, 10:00 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ವಿಜೇತರೊಂದಿಗೆ ಸಂವಾದ ನಡೆಸಿದರು. ಈ ವರ್ಷ 3 ವಿಭಾಗಗಳಿಂದ ಒಟ್ಟು 82 ಶಿಕ್ಷಕರು ಮತ್ತು ಶಿಕ್ಷ ತಜ್ಞರನ್ನು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಇವರಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 48 ಶಿಕ್ಷಕರು, ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಪಾಲಿಟೆಕ್ನಿಕ್‌ಗಳ 21 ಶಿಕ್ಷಕರು ಮತ್ತು ಅಧ್ಯಾಪಕರು, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ 13 ಕೌಶಲ್ಯ ತರಬೇತುದಾರರು ಸೇರಿದ್ದಾರೆ.

ಪ್ರಧಾನಮಂತ್ರಿ ಅವರು ನೀರು ಕುರಿತ ರಾಷ್ಟ್ರೀಯ ಇಲಾಖಾ ಶೃಂಗಸಭೆಯ ಸಮಾರೋಪ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು

September 02nd, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲಶಕ್ತಿ ಸಚಿವಾಲಯ ಆಯೋಜಿಸಿದ್ದ ಎರಡು ದಿನಗಳ 'ನೀರು ಕುರಿತ ರಾಷ್ಟ್ರೀಯ ಇಲಾಖಾ ಶೃಂಗಸಭೆ'ಯ ಸಮಾರೋಪ ಅಧಿವೇಶನದ ಅಧ್ಯಕ್ಷತೆ ವಹಿಸಿದರು.

ವಿಶ್ವ ಸಂಸ್ಕೃತ ದಿನದಂದು ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ

August 28th, 12:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರಾವಣ ಪೂರ್ಣಿಮೆಯ ವಿಶ್ವ ಸಂಸ್ಕೃತ ದಿನದಂದು ಆತ್ಮೀಯ ಶುಭಾಶಯಗಳನ್ನು ಕೋರಿದ್ದಾರೆ. ಭಾರತದ ಜ್ಞಾನ, ಚಿಂತನೆ ಮತ್ತು ಸೃಜನಶೀಲತೆಯ ನಿರಂತರ ವಾಹಕವಾಗಿರುವ ಸಂಸ್ಕೃತದ ಸಾರ್ವಕಾಲಿಕ ಶ್ರೀಮಂತಿಕೆಯನ್ನು ನಾವು ಆಚರಿಸುತ್ತೇವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಈ ವಿಶೇಷ ದಿನದಂದು ಭಾರತ ಮತ್ತು ವಿಶ್ವದಾದ್ಯಂತ ಸಂಸ್ಕೃತವನ್ನು ಅಧ್ಯಯನ ಮಾಡುವ ಮತ್ತು ಕಲಿಸುವ ಮತ್ತು ಆ ಭಾಷೆಯಲ್ಲಿ ಹುದುಗಿರುವ ಸಾರ್ವಕಾಲಿಕ ಜ್ಞಾನ ಭಂಡಾರವನ್ನು ಭವಿಷ್ಯದ ಪೀಳಿಗೆಗೆ ತಿಳಿಸಲು ಶ್ರಮಿಸುತ್ತಿರುವ ಎಲ್ಲರನ್ನೂ ನಾನು ಶ್ಲಾಘಿಸುತ್ತೇನೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಒಬ್ಬ ವ್ಯಕ್ತಿಯ ಜೀವನವನ್ನು ಬೆಳಗಿಸುವ ಮತ್ತು ವ್ಯಕ್ತಿತ್ವವನ್ನು ನಿರ್ಮಿಸುವ ಎಂಟು ಅಗತ್ಯ ಗುಣಗಳನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಧಾನಮಂತ್ರಿಯವರು ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

August 11th, 08:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವ್ಯಕ್ತಿಯ ಜೀವನವನ್ನು ಉಜ್ವಲಗೊಳಿಸುವ ಮತ್ತು ವ್ಯಕ್ತಿತ್ವವನ್ನು ನಿರ್ಮಿಸುವ ಎಂಟು ಅಗತ್ಯ ಗುಣಗಳನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

Prime Minister shares Sanskrit Subhashitam highlighting the role of teachers on Guru Purnima

July 29th, 08:20 am

PM Modi extends Guru Purnima greetings and shares a Sanskrit Subhashitam highlighting the invaluable role of teachers in shaping lives. He reflects on how Gurus inspire, guide, educate and awaken wisdom, encouraging everyone to make their ideals a guiding force in life.

ಜ್ಞಾನ, ಕೌಶಲ್ಯ ಮತ್ತು ಆರೋಗ್ಯಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ

July 15th, 12:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದು, ಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ, ಹೊಸ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಮತ್ತು ಉತ್ತಮ ಆರೋಗ್ಯಕ್ಕೆ ಆದ್ಯತೆ ನೀಡುವ ಮೂಲಕ ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ರಾಷ್ಟ್ರದ ಯುವಕರು ಪ್ರಬಲ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಒತ್ತಿ ಹೇಳಿದರು. ಈ ಗುಣಗಳು ವ್ಯಕ್ತಿಗಳನ್ನು ಸಶಕ್ತಗೊಳಿಸುವುದಲ್ಲದೆ ರಾಷ್ಟ್ರ ನಿರ್ಮಾಣಕ್ಕೂ ಗಮನಾರ್ಹ ಕೊಡುಗೆ ನೀಡುತ್ತವೆ.

ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 11:47 pm

ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!

ಜಕಾರ್ತದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

July 07th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಕಾರ್ತದಲ್ಲಿಂದು ನಡೆದ ಅನಿವಾಸಿ ಭಾರತೀಯ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅವರಿಗೆ, ಅನಿವಾಸಿ ಭಾರತೀಯರು ಮತ್ತು ಭಾರತದ ಇಂಡೋನೇಷ್ಯಾದ ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ನೀಡಿದರು. ವಿಶೇಷ ಗೌರವದ ಸಂಕೇತವಾಗಿ ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಪಾಲ್ಗೊಂಡರು.

ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 03:15 pm

ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.

ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 07th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.

ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್‌ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

June 28th, 10:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್‌ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಶ್ರೀ ಪಿ.ವಿ.ನರಸಿಂಹ ರಾವ್‌ ಅವರು ನಮ್ಮ ರಾಷ್ಟ್ರದ ಇತಿಹಾಸದ ನಿರ್ಣಾಯಕ ಹಂತದಲ್ಲಿ ಭಾರತದ ಪ್ರಗತಿಗೆ ಶಾಶ್ವತ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಜ್ಞಾನ, ಬುದ್ಧಿವಂತಿಕೆ ಮತ್ತು ದೂರದೃಷ್ಟಿಯ ಮಹತ್ವವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ

June 19th, 08:15 am

ಜ್ಞಾನ, ಬುದ್ಧಿವಂತಿಕೆ ಮತ್ತು ದೂರದೃಷ್ಟಿಯಂತಹ ಸದ್ಗುಣಗಳು ಜೀವನದಲ್ಲಿ ಯಶಸ್ಸಿನ ಅಡಿಪಾಯ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಈ ಗುಣಗಳಿಂದ ಶ್ರೀಮಂತರಾಗಿರುವ ವ್ಯಕ್ತಿಯು ಅತ್ಯಂತ ಕಷ್ಟಕರವಾದ ಸವಾಲುಗಳನ್ನು ಸಹ ಜಯಿಸಲು ಮತ್ತು ವಿಜಯಶಾಲಿಯಾಗಿ ಹೊರಹೊಮ್ಮಲು ಸಮರ್ಥನಾಗಿರುತ್ತಾನೆ ಎಂದು ಅವರು ಹೇಳಿದರು.

'ಸತ್ಯ, ಸೇವೆ, ಅಧ್ಯಯನ ಮತ್ತು ಕಾರ್ಯದ ಸತ್ಪ್ರವೃತ್ತಿ' ಗುಣಗಳನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

June 18th, 09:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸತ್ಯದ ಹಿಂದೆ ಸಂಪತ್ತು ಬರುತ್ತದೆ, ನಿಸ್ವಾರ್ಥ ಸೇವೆಯ ಹಿಂದೆ ಕೀರ್ತಿ ಬರುತ್ತದೆ, ನಿರಂತರ ಅಭ್ಯಾಸದ ಹಿಂದೆ ಜ್ಞಾನ ಬರುತ್ತದೆ ಮತ್ತು ಕಾರ್ಯದ ಹಿಂದೆ ವಿವೇಕ ಬರುತ್ತದೆ ಎಂದು ಹೇಳಿದ್ದಾರೆ. ಈ ಮೌಲ್ಯಗಳು ವ್ಯಕ್ತಿಯ ಸ್ವಭಾವ ರೂಪಿಸುವಲ್ಲಿ ಹಾಗೂ ಸಮೂಹದ ಪ್ರಗತಿಗೆ ಕೊಡುಗೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದ್ದಾರೆ.

ವಿವೇಚನೆ ಮತ್ತು ಚಿಂತನಾಶೀಲ ನಿರ್ಧಾರ ಕೈಗೊಳ್ಳುವಿಕೆಯ ಮಹತ್ವವನ್ನು ಎತ್ತಿಹಿಡಿಯುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

June 16th, 08:53 am

ತಾಳ್ಮೆ, ಬುದ್ಧಿವಂತಿಕೆ ಮತ್ತು ದೂರದೃಷ್ಟಿಯಿಂದ ಮಾರ್ಗದರ್ಶನ ಮಾಡುವ ಕ್ರಿಯೆಗಳ ಮೂಲಕ ಸಂತೋಷ ಮತ್ತು ಸಮೃದ್ಧಿಯ ಬಾಗಿಲು ತೆರೆಯುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಸರಿಯಾದ ಚಿಂತನೆ ಮತ್ತು ಪರಿಗಣನೆಯೊಂದಿಗೆ ತೆಗೆದುಕೊಂಡ ಹೆಜ್ಜೆಗಳ ಮೇಲೆ ಯಶಸ್ಸು ನಿರ್ಮಾಣವಾಗುವುದರಿಂದ ಪ್ರತಿಯೊಂದು ನಿರ್ಧಾರಕ್ಕೂ ಎಚ್ಚರಿಕೆಯ ತಿಳುವಳಿಕೆ ಅಗತ್ಯವಿರುತ್ತದೆ ಎಂದು ಅವರು ವಿವರಿಸಿದರು.

ನಾವೀನ್ಯತೆ ಮತ್ತು ಉದ್ಯಮಶೀಲತೆಯಲ್ಲಿ ವೈವಿಧ್ಯತೆಯ ಪಾತ್ರವನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

June 15th, 08:55 am

ನಾವೀನ್ಯತೆ ಮತ್ತು ಉದ್ಯಮಶೀಲತೆಯ ಕ್ಷೇತ್ರಗಳಲ್ಲಿ, ಪ್ರತಿಯೊಬ್ಬ ವ್ಯಕ್ತಿಯು ವಿಭಿನ್ನವಾದ ಚಿಂತನೆಯ ಮಾರ್ಗ ಮತ್ತು ವಿಶಿಷ್ಟವಾದ ಸೃಜನಶೀಲ ದೃಷ್ಟಿಕೋನವನ್ನು ಹೊಂದಿರುತ್ತಾನೆ ಮತ್ತು ಈ ವೈವಿಧ್ಯತೆಯೇ ಹೊಸ ಸಾಧ್ಯತೆಗಳಿಗೆ ಕಾರಣವಾಗುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ. ಪ್ರತಿಯೊಂದು ನೀರಿನ ಮೂಲವು ವಿಭಿನ್ನ ರುಚಿಸ್ವಾದಯನ್ನು ಹೊಂದಿರುವಂತೆ, ಪ್ರತಿಯೊಂದು ಪ್ರತಿಭೆಯೂ ತನ್ನದೇ ಆದ ವಿಶಿಷ್ಟ ಗುರುತು ಮತ್ತು ಕೊಡುಗೆಯನ್ನು ಹೊಂದಿದೆ. ವೈವಿಧ್ಯಮಯ ವಿಚಾರಗಳು ಮತ್ತು ಸಾಮರ್ಥ್ಯಗಳ ಒಮ್ಮುಖದ ಮೂಲಕ ನಾವೀನ್ಯತೆ ಮತ್ತು ಪ್ರಗತಿ ಸಾಧ್ಯವಾಗುತ್ತದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

ಬೇಸಿಗೆಯ ಬಿಸಿಲನ್ನು ನಿವಾರಿಸಲು ಪ್ರಧಾನಿ ಮೋದಿ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ, ಮನ್ ಕಿ ಬಾತ್‌ನಲ್ಲಿ ನಾಗರಿಕರಿಗೆ ನೀರಿನಂಶ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ

May 31st, 11:30 am

ನನ್ನ ಪ್ರಿಯ ದೇಶ ಬಾಂಧವರೆ, ನಮಸ್ಕಾರ. ‘ಮನದ ಮಾತಿನ’ ಮೂಲಕ ಮತ್ತೊಮ್ಮೆ ನಿಮ್ಮನ್ನು ಸಂಪರ್ಕಿಸುತ್ತಿರುವುದು ನನಗೆ ಬಹಳ ಸಂತೋಷವೆನಿಸಿದೆ. ದೇಶದ ವಿವಿಧ ಭಾಗಗಳಲ್ಲಿ, ನಮ್ಮ ಜನರು ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಸಾಕಷ್ಟು ಗಮನಾರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಮತ್ತು ಅವರ ಪ್ರಯತ್ನಗಳ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೊಸ ಸ್ಫೂರ್ತಿಯ ಸೆಲೆ ಹುಟ್ಟುತ್ತದೆ. ಇಂದು, ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅಂತಹ ಒಂದು ರಾಷ್ಟ್ರೀಯ ಸಾಧನೆಯ ಕುರಿತು ಪ್ರಸ್ತಾಪಿಸುವ ಮೂಲಕ ನಾನು ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಬಯಸುತ್ತೇನೆ. ಕೆಲವೇ ದಿನಗಳ ಹಿಂದೆ, ಜಾರ್ಖಂಡ್‌ನ ರಾಂಚಿಯಲ್ಲಿ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ದೇಶದ ಮೂಲೆ ಮೂಲೆಗಳಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ನಾಲ್ಕು ರಾಷ್ಟ್ರೀಯ ದಾಖಲೆಗಳನ್ನು ಮುರಿಯಲಾಯಿತು. ಗುರಿಂದರ್‌ವೀರ್ ಸಿಂಗ್, ವಿಶಾಲ್ ಟಿ.ಕೆ., ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ - ಈ ಕ್ರೀಡಾಪಟುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸ್ಥಾಪಿಸಿದರು. ಮೊದಲನೆಯದಾಗಿ, ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ನಿಜವಾದ ಜ್ಞಾನದ ಪರಿವರ್ತನಾ ಶಕ್ತಿಯನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

May 26th, 09:20 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ನಿಜವಾದ ಜ್ಞಾನವು ರಾಷ್ಟ್ರ, ಸಮಾಜ ಮತ್ತು ಇಡೀ ಮಾನವಕುಲದ ಕಲ್ಯಾಣಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು. ನಮ್ಮ ಜ್ಞಾನ ಮತ್ತು ಕಾರ್ಯಗಳು ಸಮಸ್ತ ಮಾನವಕುಲಕ್ಕೆ ಪ್ರೇರಣೆಯ ಮೂಲವಾಗುವುದು ಮುಖ್ಯ ಎಂದು ಅವರು ಗಮನಿಸಿದರು.

ನಿರಂತರ ಪ್ರಯತ್ನಗಳ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

May 18th, 02:04 pm

ಇಂದು ನಿರಂತರ ಪ್ರಯತ್ನಗಳ ಮೂಲಕ ಜ್ಞಾನ, ಸಂಪತ್ತು ಮತ್ತು ಧರ್ಮವನ್ನು ಕ್ರಮೇಣ ಹೇಗೆ ಸಾಧಿಸಬಹುದು ಎಂಬುದನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.