ರಾಷ್ಟ್ರೀಯ ಹೆದ್ದಾರಿ-19 ಮತ್ತು ಉತ್ತರ ಪ್ರದೇಶದ ವಾರಣಾಸಿ ರಿಂಗ್ ರಸ್ತೆ ನಡುವೆ 6 ಪಥದ ಗ್ರೀನ್ಫೀಲ್ಡ್ ಎಲಿವೇಟೆಡ್ ಕಾರಿಡಾರ್ ಮತ್ತು ಇಳಿಜಾರುಗಳು/ಲೂಪ್ಗಳು ಮತ್ತು ಪಾದಚಾರಿ ಮೇಲ್ಸೇತುವೆಯನ್ನು ಹೈಬ್ರಿಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ; ರಾಷ್ಟ್ರೀಯ ಹೆದ್ದಾರಿ(O) ಅಡಿಯಲ್ಲಿ ಒಟ್ಟು 14447.64 ಕೋಟಿ ರೂ. ಬಂಡವಾಳ ವೆಚ್ಚ
July 15th, 04:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಉತ್ತರ ಪ್ರದೇಶದ ವಾರಣಾಸಿ ನಗರದ ವಾಹನ ದಟ್ಟಣೆಯನ್ನು ನಿವಾರಿಸಲು ಗಂಗಾ ನದಿಯ ಉದ್ದಕ್ಕೂ ನದಿ ದಂಡೆಯ ಸಂಪರ್ಕದೊಂದಿಗೆ ರಾಷ್ಟ್ರೀಯ ಹೆದ್ದಾರಿ-19 (NH-19) ಮತ್ತು ವಾರಣಾಸಿ ರಿಂಗ್ ರಸ್ತೆ ನಡುವೆ ಲಿಂಕ್/ಕನೆಕ್ಟರ್ ಕಾರಿಡಾರ್ ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ. ಆರು ಪಥಗಳ ಎತ್ತರದ ಮುಖ್ಯ ಕ್ಯಾರೇಜ್ವೇ, ಐಕಾನಿಕ್ ಕೇಬಲ್-ಸ್ಟೇಯ್ಡ್ ಸೇತುವೆ, ಎಕ್ಸ್ಟ್ರಾಡೋಸ್ಡ್ ಫುಟ್ ಓವರ್ ಬ್ರಿಡ್ಜ್-ಕಮ್-ಮೇಜರ್ ಬ್ರಿಡ್ಜ್, ಲೂಪ್ಗಳು, ಇಳಿಜಾರುಗಳು, ಲಿಂಕ್ ರಸ್ತೆಗಳು ಮತ್ತು ಸೇವಾ ರಸ್ತೆಗಳನ್ನು ಒಳಗೊಂಡಿರುವ 46.039 ಕಿ.ಮೀ ಯೋಜನೆಯನ್ನು ಹೈಬ್ರಿಡ್ ಅನ್ಯುಟಿ ಮಾದರಿ (HAM) ಅಡಿಯಲ್ಲಿ14,447.64 ಕೋಟಿ ರೂ. ಒಟ್ಟು ಬಂಡವಾಳ ವೆಚ್ಚದಲ್ಲಿ ಜಾರಿಗೊಳಿಸಲಾಗುವುದು, ಇದರಲ್ಲಿ ಸಿವಿಲ್ ಕಾಮಗಾರಿ ವೆಚ್ಚ 6,037.85 ಕೋಟಿ ರೂ. (ಯುಟಿಲಿಟಿ ಶಿಫ್ಟಿಂಗ್ ಸೇರಿದಂತೆ, ಜಿಎಸ್ಟಿ ಹೊರತುಪಡಿಸಿ) ಮತ್ತು 541.11 ಕೋಟಿ ರೂ. ಭೂಸ್ವಾಧೀನ ವೆಚ್ಚ ಸೇರಿವೆ.ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಅವರ ಭಾಷಣ
April 11th, 11:00 am
ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್; ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಬನಾಸ್ ಡೈರಿಯ ಅಧ್ಯಕ್ಷ ಶಂಕರ್ ಭಾಯ್ ಚೌಧರಿ; ಮತ್ತು ತಮ್ಮ ಆಶೀರ್ವಾದವನ್ನು ಅರ್ಪಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿಇಲ್ಲಿ ನೆರೆದಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರೆಲ್ಲರೂ- ನಮ್ಮ ಕಾಶಿ ಕುಟುಂಬದ ಪ್ರೀತಿಯ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ಸಂದರ್ಭದಲ್ಲಿ ನಾನು ವಿನಮ್ರತೆಯಿಂದ ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ. ಈ ಅಗಾಧ ಪ್ರೀತಿಗೆ ನಾನು ನಿಜವಾಗಿಯೂ ಋುಣಿಯಾಗಿದ್ದೇನೆ. ಕಾಶಿ ನನ್ನದು, ನಾನು ಕಾಶಿಗೆ ಸೇರಿದವನು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
April 11th, 10:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಶಿಯೊಂದಿಗಿನ ತಮ್ಮ ಆಳವಾದ ಸಂಬಂಧವನ್ನು ಎತ್ತಿ ತೋರಿಸಿದರು, ತಮಗೆ ಕುಟುಂಬದವರು ಮತ್ತು ಈ ಪ್ರದೇಶದ ಜನರು ನೀಡಿದ ಆಶೀರ್ವಾದಕ್ಕಾಗಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ತಮಗೆ ನೀಡಿರುವ ಪ್ರೀತಿ ಮತ್ತು ಬೆಂಬಲವನ್ನು ಶ್ಲಾಘಿಸಿದರು. ಈ ಪ್ರೀತಿಗೆ ತಾವು ಋಣಿಯಾಗಿರುವುದಾಗಿ ಅವರು ಒತ್ತಿ ಹೇಳಿದರು, ಕಾಶಿ ತಮ್ಮದು ಮತ್ತು ತಾವು ಕಾಶಿಗೆ ಸೇರಿದವರು ಎಂದು ಹೇಳಿದರು. ನಾಳೆ ಹನುಮಾನ್ ಜಯಂತಿಯ ಶುಭ ಸಂದರ್ಭ ಎಂದು ಹೇಳಿದ ಶ್ರೀ ಮೋದಿ, ಕಾಶಿಯಲ್ಲಿ ಸಂಕಟ ಮೋಚನ ಮಹಾರಾಜರ ಸನ್ನಿಧಿಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ತಮಗೆ ದೊರೆತ ಗೌರವ ಎಂದರು. ಹನುಮಾನ್ ಜಯಂತಿಗೂ ಮುನ್ನ, ಕಾಶಿಯ ಜನರು ಅಭಿವೃದ್ಧಿಯ ಹಬ್ಬವನ್ನು ಆಚರಿಸಲು ಹೇಗೆ ಒಗ್ಗೂಡಿದ್ದಾರೆ ಎಂಬುದನ್ನು ಅವರು ಎತ್ತಿ ತೋರಿಸಿದರು.ಅಕ್ಟೋಬರ್ 20ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 19th, 05:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 20, 2024ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:00 ಗಂಟೆಗೆ ಆರ್.ಜೆ. ಶಂಕರ ಕಣ್ಣಿನ ಆಸ್ಪತ್ರೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ. ನಂತರ, ಸಂಜೆ 4:15 ರ ಸುಮಾರಿಗೆ, ಅವರು ವಾರಣಾಸಿಯಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಕ್ಯಾಬಿನೆಟ್ ಅನುಮೋದನೆ
June 19th, 09:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಹೊಸ ಟರ್ಮಿನಲ್ ಕಟ್ಟಡ, ಏಪ್ರನ್ ವಿಸ್ತರಣೆ, ರನ್ವೇ ವಿಸ್ತರಣೆ, ಸಮಾನಾಂತರ ಟ್ಯಾಕ್ಸಿ ಟ್ರ್ಯಾಕ್ ಮತ್ತು ಅಲೈಡ್ಗಳ ನಿರ್ಮಾಣ ಸೇರಿದಂತೆ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಕೆಲಸ ಮಾಡುತ್ತದೆ.