ಹೊಸದಿಲ್ಲಿಯಲ್ಲಿ ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವಿಕೆ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

November 08th, 05:33 pm

ಸಿಜೆಐ ಶ್ರೀ ಬಿ ಆರ್ ಗವಾಯಿ ಜೀ, ನ್ಯಾಯಮೂರ್ತಿ ಸೂರ್ಯ ಕಾಂತ್ ಜೀ, ನ್ಯಾಯಮೂರ್ತಿ ವಿಕ್ರಮ್ ನಾಥ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿ ಅರ್ಜುನ್ ರಾಮ್ ಮೇಘವಾಲ್ ಜೀ, ಸುಪ್ರೀಂ ಕೋರ್ಟ್‌ನ ಇತರ ಗೌರವಾನ್ವಿತ ನ್ಯಾಯಮೂರ್ತಿಗಳು, ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು, ಹಾಗು ಮಹಿಳೆಯರೇ ಮತ್ತು ಮಹನೀಯರೇ,

"ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು" ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

November 08th, 05:00 pm

ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದ ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಈ ಮಹತ್ವದ ಸಂದರ್ಭದಲ್ಲಿ ನೆರೆದಿರುವ ನಿಮ್ಮೆಲ್ಲರ ನಡುವೆ ಇರುವುದು ನಿಜವಾಗಿಯೂ ವಿಶೇಷವಾದದ್ದು ಎಂದು ಹೇಳಿದರು. ಕಾನೂನು ನೆರವು ವಿತರಣಾ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಕಾನೂನು ಸೇವಾ ದಿನಕ್ಕೆ ಸಂಬಂಧಿಸಿದ ಕಾರ್ಯಕ್ರಮವು ಭಾರತದ ನ್ಯಾಯಾಂಗ ವ್ಯವಸ್ಥೆಗೆ ಹೊಸ ಶಕ್ತಿಯನ್ನು ನೀಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 20ನೇ ರಾಷ್ಟ್ರೀಯ ಸಮ್ಮೇಳನಕ್ಕೆ ಪ್ರಧಾನಮಂತ್ರಿ ಅವರು ಎಲ್ಲರಿಗೂ ಶುಭ ಹಾರೈಸಿದರು. ಅಲ್ಲದೆ, ಉಪಸ್ಥಿತರಿದ್ದ ಗಣ್ಯರು, ನ್ಯಾಯಾಂಗದ ಸದಸ್ಯರು ಹಾಗೂ ಕಾನೂನು ಸೇವಾ ಪ್ರಾಧಿಕಾರಗಳ ಪ್ರತಿನಿಧಿಗಳಿಗೆ ಅವರು ಶುಭಾಶಯ ಕೋರಿದರು.

ನವ ರಾಯ್‌ಪುರದಲ್ಲಿ ಛತ್ತೀಸ್‌ಗಢ ವಿಧಾನಸಭಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 01st, 01:30 pm

ಛತ್ತೀಸ್‌ಗಢದ ಅಭಿವೃದ್ಧಿಯ ಪಯಣಕ್ಕೆ ಇಂದು ಸುವರ್ಣ ಆರಂಭವಾಗಿದೆ. ವೈಯಕ್ತಿಕವಾಗಿ ಇದು ನನಗೆ ತುಂಬಾ ವಿಶೇಷ ಮತ್ತು ಸಂತೋಷದ ದಿನವಾಗಿದೆ. ಹಲವಾರು ದಶಕಗಳಿಂದ ನಾನು ಈ ಭೂಮಿಯೊಂದಿಗೆ ಸುದೀರ್ಘ ಭಾವನಾತ್ಮಕ ಬಾಂಧವ್ಯ ಹೊಂದಿದ್ದೇನೆ. ಒಬ್ಬ ಕೆಲಸಗಾರನಾಗಿ, ನಾನು ಛತ್ತೀಸ್‌ಗಢದಲ್ಲಿ ಸಾಕಷ್ಟು ಸಮಯ ಕಳೆದಿದ್ದೇನೆ, ಈ ಸ್ಥಳದಿಂದ ನಾನು ಬಹಳಷ್ಟು ಕಲಿತಿದ್ದೇನೆ. ಛತ್ತೀಸ್‌ಗಢದ ಜನರು ಮತ್ತು ಮಣ್ಣು ನನ್ನ ಜೀವನವನ್ನು ಬಹಳ ಆಶೀರ್ವದಿಸಿದೆ ಮತ್ತು ರೂಪಿಸಿದೆ. ಛತ್ತೀಸ್‌ಗಢದ ಕಲ್ಪನೆ ಮತ್ತು ಪರಿಕಲ್ಪನೆಯಿಂದ, ಅದರ ರಚನೆಗೆ ಕಾರಣವಾದ ಸಂಕಲ್ಪದವರೆಗೆ ಮತ್ತು ಆ ಕನಸಿನ ಸಾಕಾರದವರೆಗೆ, ರಾಜ್ಯದ ರೂಪಾಂತರದ ಪ್ರತಿಯೊಂದು ಹಂತಕ್ಕೂ ನಾನು ಸಾಕ್ಷಿಯಾಗಿದ್ದೇನೆ. ಇಂದು ಛತ್ತೀಸ್‌ಗಢವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ತಲುಪುತ್ತಿರುವಾಗ, ಈ ಐತಿಹಾಸಿಕ ಕ್ಷಣದ ಭಾಗವಾಗಲು ನನಗೆ ಮತ್ತೊಮ್ಮೆ ಗೌರವ ದೊರೆತಿದೆ. ಈ ಬೆಳ್ಳಿ ಮಹೋತ್ಸವ ಆಚರಣೆ ಗುರುತಿಸಲು ರಾಜ್ಯದ ಜನರಿಗಾಗಿ ಈ ಹೊಸ ಶಾಸಕಾಂಗ ಕಟ್ಟಡವನ್ನು ಉದ್ಘಾಟಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ಈ ಶುಭ ಸಂದರ್ಭದಲ್ಲಿ ಛತ್ತೀಸ್‌ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಛತ್ತೀಸ್‌ಗಢ ವಿಧಾನಸಭಾ ನೂತನ ಕಟ್ಟಡವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 01st, 01:00 pm

ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಇಂದು ಛತ್ತೀಸ್‌ಗಢ ವಿಧಾನಸಭೆಯ ಹೊಸ ಕಟ್ಟಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಛತ್ತೀಸ್‌ಗಢದ ಅಭಿವೃದ್ಧಿ ಪ್ರಯಾಣಕ್ಕೆ ಇಂದಿನ ದಿನ ಸುವರ್ಣ ಆರಂಭ ಎಂದು ಹೇಳಿದರು. ವೈಯಕ್ತಿಕವಾಗಿ, ಇದು ತಮಗೆ ಬಹಳ ಸಂತೋಷದಾಯಕ ಮತ್ತು ಮಹತ್ವದ ದಿನ ಎಂದು ಅವರು ಹೇಳಿದರು. ಹಲವಾರು ದಶಕಗಳಿಂದ ಪೋಷಿಸಲ್ಪಟ್ಟ ಈ ಭೂಮಿಯೊಂದಿಗಿನ ತಮ್ಮ ಆಳವಾದ ಭಾವನಾತ್ಮಕ ಬಾಂಧವ್ಯವನ್ನು ಅವರು ಉಲ್ಲೇಖಿಸಿದರು. ಪಕ್ಷದ ಕಾರ್ಯಕರ್ತನಾಗಿ ತಾವಿಲ್ಲಿದ್ದ ಸಮಯವನ್ನು ನೆನಪಿಸಿಕೊಳ್ಳುತ್ತಾ, ಶ್ರೀ ಮೋದಿ ಅವರು ಛತ್ತೀಸ್‌ಗಢದಲ್ಲಿ ತಾವು ಸಾಕಷ್ಟು ಸಮಯವನ್ನು ಕಳೆದಿದ್ದನ್ನು ಮತ್ತು ಬಹಳಷ್ಟು ಕಲಿತುದನ್ನು ಹೇಳಿದರು. ಛತ್ತೀಸ್‌ಗಢದ ದೃಷ್ಟಿಕೋನ, ಅದರ ಸೃಷ್ಟಿಗಾಗಿನ ಸಂಕಲ್ಪ ಮತ್ತು ಆ ಸಂಕಲ್ಪದ ನೆರವೇರಿಕೆಯನ್ನು ಅವರು ನೆನಪಿಸಿಕೊಂಡರು, ಛತ್ತೀಸ್‌ಗಢದ ರೂಪಾಂತರದ ಪ್ರತಿ ಕ್ಷಣಕ್ಕೂ ತಾವು ಸಾಕ್ಷಿಯಾಗಿರುವುದನ್ನು ಅವರು ಉಲ್ಲೇಖಿಸಿದರು. ರಾಜ್ಯವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲನ್ನು ತಲುಪುತ್ತಿರುವಾಗ, ಈ ಕ್ಷಣದ ಭಾಗವಾಗಲು ಅವಕಾಶ ನೀಡಿದ್ದಕ್ಕಾಗಿ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಬೆಳ್ಳಿ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ, ರಾಜ್ಯದ ಜನತೆಗಾಗಿ ಹೊಸ ವಿಧಾನಸಭಾ ಕಟ್ಟಡವನ್ನು ಉದ್ಘಾಟಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಸಂದರ್ಭದಲ್ಲಿ ಛತ್ತೀಸ್‌ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.

Let’s take a pledge together — Bihar will stay away from Jungle Raj! Once again – NDA Government: PM Modi in Chhapra

October 30th, 11:15 am

In his public rally at Chhapra, Bihar, PM Modi launched a sharp attack on the INDI alliance, stating that the RJD-Congress bloc, driven by vote-bank appeasement and opposed to faith and development, can never respect the beliefs of the people. Highlighting women empowerment, he said NDA initiatives like Drone Didis, Bank Sakhis, Lakhpati Didis have strengthened women across Bihar and this support will be expanded when NDA returns to power.

This election will bring RJD-Congress their biggest defeat ever, and NDA’s biggest victory: PM Modi in Muzaffarpur, Bihar

October 30th, 11:10 am

PM Modi addressed a massive public meeting in Muzaffarpur, Bihar and began by saying that this was his first public meeting after the Chhath Mahaparv. He said Chhath is the pride of Bihar and the nation, a festival celebrated across India and even around the world. PM Modi also launched a campaign to promote Chhath songs across the nation. He said, “The public will choose the best tracks, and their creators will be awarded - boosting the preservation of Chhath tradition.”

PM Modi’s grand rallies electrify Muzaffarpur and Chhapra, Bihar

October 30th, 11:00 am

PM Modi addressed two massive public meetings in Muzaffarpur and Chhapra, Bihar. Beginning his first rally, he noted that this was his first public meeting after the Chhath Mahaparv. He said that Chhath is the pride of Bihar and of the entire nation—a festival celebrated not just across India, but around the world. PM Modi also announced a campaign to promote Chhath songs nationwide, stating, “The public will choose the best tracks, and their creators will be awarded - helping preserve and celebrate the tradition of Chhath.”

ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 06th, 07:00 pm

ಕೇಂದ್ರ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂಸತ್ ಸದಸ್ಯರೆ, ಎಲ್ಲಾ ಸರ್ಕಾರಿ ನೌಕರರೆ, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

August 06th, 06:30 pm

ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ಕರ್ತವ್ಯ ಭವನ-3 ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರಾಂತಿಯ ಮಾಸವಾದ ಆಗಸ್ಟ್, ಆಗಸ್ಟ್ 15 ಕ್ಕೆ ಮುನ್ನವೇ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಂದಿದೆ ಎಂದು ಹೇಳಿದರು. ಆಧುನಿಕ ಭಾರತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಧನೆಗಳಿಗೆ ಭಾರತ ಸಾಕ್ಷಿಯಾಗುತ್ತಿದೆ ಎಂದು ಅವರು ಹೇಳಿದರು. ನವದೆಹಲಿಯ ಇತ್ತೀಚಿನ ಮೂಲಸೌಕರ್ಯಗಳಾದ ಕರ್ತವ್ಯ ಪಥ, ಹೊಸ ಸಂಸತ್ತು ಕಟ್ಟಡ, ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣ, ಭಾರತ ಮಂಟಪ, ಯಶೋಭೂಮಿ, ಹುತಾತ್ಮರಿಗೆ ಸಮರ್ಪಿತವಾದ ರಾಷ್ಟ್ರೀಯ ಯುದ್ಧ ಸ್ಮಾರಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕರ್ತವ್ಯ ಭವನದ ನಿರ್ಮಾಣ ಮುಂತಾದದವುಗಳನ್ನು ಪಟ್ಟಿಮಾಡಿದರು. ಇವು ಕೇವಲ ಹೊಸ ಕಟ್ಟಡಗಳು ಅಥವಾ ಸಾಮಾನ್ಯ ಮೂಲಸೌಕರ್ಯಗಳಲ್ಲ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ , ಅಮೃತ ಕಾಲದಲ್ಲಿ, ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸುವ ನೀತಿಗಳನ್ನು ಈ ಕಟ್ಟಡಗಳಲ್ಲಿ ರೂಪಿಸಲಾಗುತ್ತಿದೆ ಮತ್ತು ಮುಂಬರುವ ದಶಕಗಳಲ್ಲಿ, ರಾಷ್ಟ್ರದ ದಿಕ್ಕನ್ನು ಈ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಹೇಳಿದರು. ಕರ್ತವ್ಯ ಭವನದ ಉದ್ಘಾಟನೆಗಾಗಿ ಎಲ್ಲಾ ನಾಗರಿಕರನ್ನು ಅಭಿನಂದಿಸಿದ ಅವರು, ಅದರ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್‌ ಗಳು ಮತ್ತು ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು.

ಮಹಾರಾಷ್ಟ್ರದ ನಾಗಪುರದಲ್ಲಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರದ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

March 30th, 11:53 am

ಗುಡಿ ಪಾಡ್ವ ಮತ್ತು ಹೊಸ ವರ್ಷಕ್ಕೆ ನಾನು ನಿಮಗೆಲ್ಲರಿಗೂ ಹೃತ್ಪೂರ್ವಕವಾಗಿ ಶುಭಾಶಯಗಳನ್ನು ಕೋರುತ್ತೇನೆ! ಅತ್ಯಂತ ಗೌರವಾನ್ವಿತ ಸರ್ಸಂಘಚಾಲಕ್ ಜಿ, ಡಾ. ಮೋಹನ್ ಭಾಗವತ್ ಜಿ, ಸ್ವಾಮಿ ಗೋವಿಂದ್ ಗಿರಿ ಜಿ ಮಹಾರಾಜ್, ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜಿ, ಡಾ. ಅವಿನಾಶ್ ಚಂದ್ರ ಅಗ್ನಿಹೋತ್ರಿ ಜಿ, ಇತರ ಗಣ್ಯರೇ ಹಾಗು ಇಲ್ಲಿ ಉಪಸ್ಥಿತರಿರುವ ಎಲ್ಲಾ ಹಿರಿಯ ಸಹೋದ್ಯೋಗಿಗಳೇ, ಇಂದು ರಾಷ್ಟ್ರ ಯಜ್ಞದ ಈ ಪವಿತ್ರ ಆಚರಣೆಯಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಇಂದು, ಚೈತ್ರ ಶುಕ್ಲ ಪ್ರತಿಪದದ ಈ ದಿನವು ತುಂಬಾ ವಿಶೇಷವಾಗಿದೆ. ನವರಾತ್ರಿಯ ಪವಿತ್ರ ಹಬ್ಬ ಇಂದಿನಿಂದ ಆರಂಭವಾಗುತ್ತಿದೆ. ಇಂದು ದೇಶದ ವಿವಿಧ ಭಾಗಗಳಲ್ಲಿ ಗುಡಿ-ಪಾಡ್ವ, ಯುಗಾದಿ ಮತ್ತು ನವರೆಹ್ ಹಬ್ಬಗಳನ್ನು ಆಚರಿಸಲಾಗುತ್ತಿದೆ. ಇಂದು ಭಗವಾನ್ ಜುಲೇಲಾಲ್ ಜಿ ಮತ್ತು ಗುರು ಅಂಗದ್ ದೇವ್ ಜಿ ಅವರ ಜನ್ಮ ದಿನಾಚರಣೆಯೂ ಆಗಿದೆ. ಇದು ನಮ್ಮ ಸ್ಫೂರ್ತಿ, ಅತ್ಯಂತ ಗೌರವಾನ್ವಿತ ಡಾಕ್ಟರ್ ಸಾಹೇಬ್ ಅವರ ಜನ್ಮ ದಿನಾಚರಣೆಯೂ ಆಗಿದೆ. ಮತ್ತು ಈ ವರ್ಷ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅದ್ಭುತ ಪ್ರಯಾಣದ 100 ವರ್ಷಗಳು ಪೂರ್ಣಗೊಂಡಿವೆ. ಇಂದು ಈ ಸಂದರ್ಭದಲ್ಲಿ, ಸ್ಮೃತಿ ಮಂದಿರಕ್ಕೆ ಭೇಟಿ ನೀಡುವ ಮತ್ತು ಗೌರವಾನ್ವಿತ ಡಾಕ್ಟರ್ ಸಾಹೇಬ್ ಮತ್ತು ಗೌರವಾನ್ವಿತ ಗುರೂಜಿ ಅವರಿಗೆ ಗೌರವ ಸಲ್ಲಿಸುವ ಸೌಭಾಗ್ಯ ನನಗೆ ಸಿಕ್ಕಿದೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು

March 30th, 11:52 am

ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ಪ್ರಧಾನಮಂತ್ರಿಯವರು ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪವಿತ್ರ ನವರಾತ್ರಿ ಉತ್ಸವದ ಆರಂಭವನ್ನು ಸೂಚಿಸುವ ಚೈತ್ರ ಶುಕ್ಲ ಪ್ರತಿಪದದ ಮಹತ್ವದ ಬಗ್ಗೆ ತಿಳಿಸಿದರು. ದೇಶಾದ್ಯಂತ ಇಂದು ಗುಡಿ ಪಡ್ವಾ, ಯುಗಾದಿ ಮತ್ತು ನವರೇಹ್‌ನಂತಹ ಹಬ್ಬಗಳನ್ನು ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು. ಭಗವಾನ್ ಜುಲೇಲಾಲ್ ಮತ್ತು ಗುರು ಅಂಗದ್ ದೇವ್ ಅವರ ಜನ್ಮ ದಿನಾಚರಣೆಯೊಂದಿಗೆ ಈ ದಿನವು ಹೊಂದಿಕೆಯಾಗುವುದರಿಂದ ಈ ದಿನದ ಮಹತ್ವವನ್ನು ಅವರು ವಿವರಿಸಿದರು. ಈ ಸಂದರ್ಭವನ್ನು ಸ್ಪೂರ್ತಿದಾಯಕ ಡಾ. ಕೆ. ಬಿ. ಹೆಡ್ಗೆವಾರ್ ಅವರ ಜನ್ಮ ವಾರ್ಷಿಕೋತ್ಸವ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶ್ರೇಷ್ಠ ಪ್ರಯಾಣದ ಶತಮಾನೋತ್ಸವ ವರ್ಷವೆಂದು ತಿಳಿಸಿದರು. ಈ ಮಹತ್ವದ ದಿನದಂದು ಡಾ. ಹೆಡ್ಗೆವಾರ್ ಮತ್ತು ಶ್ರೀ ಗೋಲ್ವಾಲ್ಕರ್ ಗುರೂಜಿ ಅವರಿಗೆ ಗೌರವ ಸಲ್ಲಿಸಲು ಸ್ಮೃತಿ ಮಂದಿರಕ್ಕೆ ಭೇಟಿ ನೀಡಿರುವುದು ನನಗೆ ಸಿಕ್ಕ ಗೌರವ ಎಂದು ಸಂತಸ ವ್ಯಕ್ತಪಡಿಸಿದರು.

ಗುಜರಾತ್ ನ ನವಸಾರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ

March 08th, 11:50 am

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ; ನವಸಾರಿಯ ಸಂಸತ್ ಸದಸ್ಯ ಮತ್ತು ನನ್ನ ಸಂಪುಟ ಸಹೋದ್ಯೋಗಿ ಕೇಂದ್ರ ಸಚಿವ ಸಿ.ಆರ್. ಪಾಟೀಲ್; ಗೌರವಾನ್ವಿತ ಪಂಚಾಯತ್ ಸದಸ್ಯರು; ವೇದಿಕೆಯಲ್ಲಿ ಉಪಸ್ಥಿತರಿರುವ ಲಕ್ಷಾಧಿಪತಿ ದೀದಿ (ಲಖ್ಪತಿ ದೀದಿ)ಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಮತ್ತು ಇಲ್ಲಿ ದೊಡ್ಡ ಸಂಖ್ಯೆಯಲ್ಲಿ ನೆರೆದಿರುವ ಎಲ್ಲರಿಗೂ, ವಿಶೇಷವಾಗಿ ನನ್ನ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳೇ - ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ನವಸಾರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

March 08th, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ನವಸಾರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳ ಪ್ರೀತಿ, ವಾತ್ಸಲ್ಯ ಮತ್ತು ಆಶೀರ್ವಾದಕ್ಕೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು ಮತ್ತು ಈ ವಿಶೇಷ ದಿನದಂದು ನಾಡಿನ ಎಲ್ಲಾ ಮಹಿಳೆಯರಿಗೆ ಶುಭ ಹಾರೈಸಿದರು. ಮಹಾಕುಂಭದಲ್ಲಿ ಗಂಗಾಮಾತೆಯ ಆಶೀರ್ವಾದ ಪಡೆದಿದ್ದೆ, ಇಂದು ಮಾತೃಶಕ್ತಿಯ ಮಹಾಕುಂಭದಲ್ಲಿ ಆಶೀರ್ವಾದ ದೊರೆತಿದೆ ಎಂದು ಹೇಳಿದರು. ಪ್ರಧಾನಮಂತ್ರಿಯವರು ಇಂದು ಗುಜರಾತಿನಲ್ಲಿ ಜಿ-ಸಫಲ್ (ಜೀವನೋಪಾಯ ವೃದ್ಧಿಗಾಗಿ ಅಂತ್ಯೋದಯ ಕುಟುಂಬಗಳಿಗೆ ಗುಜರಾತ್ ಯೋಜನೆ) ಮತ್ತು ಜಿ-ಮೈತ್ರಿ (ಗ್ರಾಮೀಣ ಆದಾಯ ಪರಿವರ್ತನೆಗಾಗಿ ವ್ಯಕ್ತಿಗಳಿಗೆ ಗುಜರಾತ್ ಮಾರ್ಗದರ್ಶನ ಮತ್ತು ವೇಗವರ್ಧನೆ) ಎಂಬ ಎರಡು ಯೋಜನೆಗಳಿಗೆ ಚಾಲನೆ ನೀಡಿದರು. ವಿವಿಧ ಯೋಜನೆಗಳ ಹಣವನ್ನು ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಉಲ್ಲೇಖಿಸಿದ ಅವರು ಈ ಸಾಧನೆಗಾಗಿ ಪ್ರತಿಯೊಬ್ಬರನ್ನು ಅಭಿನಂದಿಸಿದರು.

ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 01st, 11:00 am

ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.

ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 01st, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಗುವಾಹಟಿಯಲ್ಲಿ ನಡೆದ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

February 25th, 11:10 am

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜೀ, ಕ್ರಿಯಾಶೀಲ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಜೀ, ಉದ್ಯಮ ನಾಯಕರೇ, ಗಣ್ಯ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ!

ಅಡ್ವಾಂಟೇಜ್ ಅಸ್ಸಾಂ 2.0 ಬಂಡವಾಳ ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 25th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, “ಪೂರ್ವ ಭಾರತ ಮತ್ತು ಈಶಾನ್ಯ ಭಾರತ ಇಂದು ಭವಿಷ್ಯದ ಹೊಸ ಪಯಣವನ್ನು ಆರಂಭಿಸುತ್ತಿವೆ ಮತ್ತು ಅಡ್ವಾಂಟೇಜ್ ಅಸ್ಸಾಂ, ಅಸ್ಸಾಂನ ಅದ್ಭುತ ಸಾಮರ್ಥ್ಯ ಮತ್ತು ಪ್ರಗತಿಯನ್ನು ಪ್ರಪಂಚದೊಂದಿಗೆ ಬೆಸೆದುಕೊಳ್ಳುವ ಒಂದು ಬೃಹತ್ ಉಪಕ್ರಮವಾಗಿದೆ’’ ಎಂದು ಹೇಳಿದರು.

ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

February 24th, 10:35 am

ಮೊದಲನೆಯದಾಗಿ, ನಾನು ಇಲ್ಲಿಗೆ ಬರುವುದರಲ್ಲಿ ವಿಳಂಬವಾದದ್ದಕ್ಕೆ ಕ್ಷಮೆಯಿರಲಿ. ನಿನ್ನೆ ನಾನು ಇಲ್ಲಿಗೆ ಬಂದಾಗ, ಇಂದು 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿವೆ ಎಂದು ತಿಳಿಯಿತು. ರಾಜಭವನದಿಂದ ನಾನು ಹೊರಡುವ ಸಮಯ ಮತ್ತು ಅವರ ಪರೀಕ್ಷೆಯ ಸಮಯ ಒಂದೇ ಆಗುತ್ತಿತ್ತು. ಭದ್ರತಾ ಕಾರಣಗಳಿಂದ ರಸ್ತೆಗಳನ್ನು ಮುಚ್ಚಿದರೆ, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಲುಪಲು ತೊಂದರೆಯಾಗುವ ಸಾಧ್ಯತೆ ಇತ್ತು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದೆಂದು, ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ತಲುಪಿದ ನಂತರವೇ ರಾಜಭವನದಿಂದ ಹೊರಡಲು ನಿರ್ಧರಿಸಿದೆ. ಆದ್ದರಿಂದ, ನಾನು ಉದ್ದೇಶಪೂರ್ವಕವಾಗಿ 15-20 ನಿಮಿಷಗಳ ಕಾಲ ನನ್ನ ಹೊರಡುವಿಕೆಯನ್ನು ವಿಳಂಬ ಮಾಡಿದೆ. ಇದರಿಂದ ನಿಮಗೆಲ್ಲರಿಗೂ ಸ್ವಲ್ಪ ಅನಾನುಕೂಲವಾಯಿತು. ಮತ್ತೊಮ್ಮೆ ನಿಮ್ಮೆಲ್ಲರಿಗೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

February 24th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ (ಜಿಐಎಸ್) 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಇದ್ದುದರಿಂದ ಮತ್ತು ಕಾರ್ಯಕ್ರಮಕ್ಕೆ ಬರುವ ದಾರಿಯಲ್ಲಿ ತಮ್ಮ ಭದ್ರತಾ ಕ್ರಮಗಳು ವಿದ್ಯಾರ್ಥಿಗಳಿಗೆ ಅನಾನುಕೂಲತೆಯನ್ನುಂಟುಮಾಡಬಹುದಾಗಿದ್ದರಿಂದ ಕಾರ್ಯಕ್ರಮಕ್ಕೆ ಬರುವುದು ವಿಳಂಬವಾಗಿದ್ದಕ್ಕಾಗಿ ಕ್ಷಮೆಯಾಚಿಸಿದರು. ರಾಜ ಭೋಜ ಭೂಮಿಗೆ ಹೂಡಿಕೆದಾರರು ಮತ್ತು ವ್ಯಾಪಾರ ನಾಯಕರನ್ನು ಸ್ವಾಗತಿಸುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ದು ಹೇಳಿದರು. ವಿಕಸಿತ ಮಧ್ಯಪ್ರದೇಶ ಅಥವಾ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವು ವಿಕಸಿತ ಭಾರತದತ್ತ ಪ್ರಯಾಣದಲ್ಲಿ ಅಗತ್ಯವಾಗಿರುವುದರಿಂದ ಇಂದಿನ ಕಾರ್ಯಕ್ರಮವು ಮುಖ್ಯವಾಗಿದೆ ಎಂದು ಅವರು ಹೇಳಿದರು. ಶೃಂಗಸಭೆಯ ಅದ್ಭುತ ಸಂಘಟನೆಗಾಗಿ ಅವರು ಮಧ್ಯಪ್ರದೇಶ ಸರ್ಕಾರವನ್ನು ಅಭಿನಂದಿಸಿದರು.

Politics is about winning people's hearts, says PM Modi in podcast with Nikhil Kamath

January 10th, 02:15 pm

Prime Minister Narendra Modi engages in a deep and insightful conversation with entrepreneur and investor Nikhil Kamath. In this discussion, they explore India's remarkable growth journey, PM Modi's personal life story, the challenges he has faced, his successes and the crucial role of youth in shaping the future of politics.