ಪ್ರಧಾನಮಂತ್ರಿ ಅವರಿಗೆ ಅಧ್ಯಕ್ಷೀಯ ಪ್ರಶಸ್ತಿ 'ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್' ಗೌರವ ಪ್ರದಾನ

June 28th, 03:07 pm

ವಿಶೇಷ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೀಶೆಲ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಪ್ಯಾಟ್ರಿಕ್ ಹರ್ಮಿನಿ ಅವರು ಇಂದು ಅಧ್ಯಕ್ಷೀಯ ಪ್ರಶಸ್ತಿ 'ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್' ಪ್ರದಾನ ಮಾಡಿದರು. ಪ್ರಧಾನಮಂತ್ರಿಗಳಿಗೆ ಅವರ ಹಸಿರು ನಾಯಕತ್ವ, ಅಭಿವೃದ್ಧಿಶೀಲ ರಾಷ್ಟ್ರಗಳ ಹಿತಾಸಕ್ತಿಗಳನ್ನು ಮುನ್ನಡೆಸುವ ಪ್ರಯತ್ನಗಳು ಮತ್ತು ನೀಲಿ ಆರ್ಥಿಕತೆ, ಹವಾಮಾನ ನಿಯಂತ್ರಣ ಕ್ರಮಗಳು, ಸಾಗರ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ ಮತ್ತು ಸಣ್ಣ ದ್ವೀಪ ಅಭಿವೃದ್ಧಿಶೀಲ ರಾಜ್ಯಗಳ ಅಭಿವೃದ್ಧಿಯ ಆಕಾಂಕ್ಷೆಗಳನ್ನು ಉತ್ತೇಜಿಸುವ ಅವರ ದೀರ್ಘಕಾಲದ ಬದ್ಧತೆಗಾಗಿ ಈ ಗೌರವವನ್ನು ನೀಡಲಾಗಿದೆ. ಈ ವಿಶಿಷ್ಟ ಗೌರವವನ್ನು ನೀಡುತ್ತಿರುವುದು ಇದೇ ಮೊದಲು.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪರವಾಗಿ ಬೆಂಬಲ ಸೂಚಿಸಿದವರಿಗೆ ಪ್ರಧಾನಮಂತ್ರಿ ಅವರು ಗೌರವ ಸಲ್ಲಿಸಿದರು

June 25th, 10:53 am

ತುರ್ತು ಪರಿಸ್ಥಿತಿಯ ಸಮಯದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದೃಢವಾಗಿ ಬೆಂಬಲ ಸೂಚಿಸಿ, ರಕ್ಷಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗೌರವ ಸಲ್ಲಿಸಿದರು. ಇದನ್ನು ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದು ಎಂದು ಶ್ರೀ ಮೋದಿಯವರು ಬಣ್ಣಿಸಿದರು. ಬಂಡಾಯವೆದ್ದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಆದರ್ಶಗಳನ್ನು ಎತ್ತಿಹಿಡಿದ ಅಸಂಖ್ಯಾತ ನಾಗರಿಕರ ಅಸಾಧಾರಣ ಧೈರ್ಯ ಮತ್ತು ಸ್ಥಿತಿಸ್ಥಾಪಕತ್ವವನ್ನು ಈ ಅವಧಿಯು ಪ್ರತಿಪಾದಿಸುತ್ತದೆ ಎಂದು ಅವರು ಹೇಳಿದರು.

Prime Minister congratulates Mr. Nikol Pashinyan on the impressive victory of the Civil Contract Party in the parliamentary elections in Armenia

June 08th, 04:51 pm

Prime Minister Shri Narendra Modi today congratulated Mr. Nikol Pashinyan on the impressive victory of the Civil Contract Party in the parliamentary elections in Armenia. The Prime Minister stated that the renewed mandate reflects the enduring trust and confidence of the people of Armenia in his leadership and vision.

ಬೇಸಿಗೆಯ ಬಿಸಿಲನ್ನು ನಿವಾರಿಸಲು ಪ್ರಧಾನಿ ಮೋದಿ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ, ಮನ್ ಕಿ ಬಾತ್‌ನಲ್ಲಿ ನಾಗರಿಕರಿಗೆ ನೀರಿನಂಶ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ

May 31st, 11:30 am

ನನ್ನ ಪ್ರಿಯ ದೇಶ ಬಾಂಧವರೆ, ನಮಸ್ಕಾರ. ‘ಮನದ ಮಾತಿನ’ ಮೂಲಕ ಮತ್ತೊಮ್ಮೆ ನಿಮ್ಮನ್ನು ಸಂಪರ್ಕಿಸುತ್ತಿರುವುದು ನನಗೆ ಬಹಳ ಸಂತೋಷವೆನಿಸಿದೆ. ದೇಶದ ವಿವಿಧ ಭಾಗಗಳಲ್ಲಿ, ನಮ್ಮ ಜನರು ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಸಾಕಷ್ಟು ಗಮನಾರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಮತ್ತು ಅವರ ಪ್ರಯತ್ನಗಳ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೊಸ ಸ್ಫೂರ್ತಿಯ ಸೆಲೆ ಹುಟ್ಟುತ್ತದೆ. ಇಂದು, ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅಂತಹ ಒಂದು ರಾಷ್ಟ್ರೀಯ ಸಾಧನೆಯ ಕುರಿತು ಪ್ರಸ್ತಾಪಿಸುವ ಮೂಲಕ ನಾನು ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಬಯಸುತ್ತೇನೆ. ಕೆಲವೇ ದಿನಗಳ ಹಿಂದೆ, ಜಾರ್ಖಂಡ್‌ನ ರಾಂಚಿಯಲ್ಲಿ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ದೇಶದ ಮೂಲೆ ಮೂಲೆಗಳಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ನಾಲ್ಕು ರಾಷ್ಟ್ರೀಯ ದಾಖಲೆಗಳನ್ನು ಮುರಿಯಲಾಯಿತು. ಗುರಿಂದರ್‌ವೀರ್ ಸಿಂಗ್, ವಿಶಾಲ್ ಟಿ.ಕೆ., ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ - ಈ ಕ್ರೀಡಾಪಟುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸ್ಥಾಪಿಸಿದರು. ಮೊದಲನೆಯದಾಗಿ, ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ

May 15th, 03:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಅಧಿಕೃತ ಭೇಟಿ ನೀಡಿದರು. ಅವರನ್ನು ಯುಎಇ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು ಮತ್ತು ಔಪಚಾರಿಕ ಸ್ವಾಗತ ನೀಡಿದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸುವೇಂದು ಅಧಿಕಾರಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

May 09th, 02:06 pm

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸುವೇಂದು ಅಧಿಕಾರಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ನೇಪಾಳ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಬಾಲೇಂದ್ರ ಶಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

March 27th, 01:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಮಂತ್ರಿಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಬಾಲೇಂದ್ರ ಶಾ ಅವರನ್ನು ಅಭಿನಂದಿಸಿದ್ದಾರೆ. “ನಿಮ್ಮ ಆಯ್ಕೆಯು ನೇಪಾಳದ ಜನರು ನಿಮ್ಮ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ಎರಡು ರಾಷ್ಟ್ರಗಳ ಜನರ ಪರಸ್ಪರ ಪ್ರಯೋಜನಕ್ಕಾಗಿ ಭಾರತ-ನೇಪಾಳ ಸ್ನೇಹ ಮತ್ತು ಸಹಕಾರವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಥೈಲ್ಯಾಂಡ್ ಸಾಮ್ರಾಜ್ಯದ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಅನುತಿನ್ ಚರ್ಣವಿರಕುಲ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

March 20th, 02:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಲ್ಯಾಂಡ್ ಸಾಮ್ರಾಜ್ಯದ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಅನುತಿನ್ ಚರ್ಣವಿರಕುಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

The greatest pride of my life is that I am a karyakarta of the Bharatiya Janata Party: PM Modi at BJP HQ

January 20th, 11:16 am

Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”

PM Modi addresses BJP karyakartas at felicitation of New Party President

January 20th, 11:15 am

Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”

Prime Minister pays tributes to all people who took part in Quit India Movement

August 09th, 08:44 am

The Prime Minister, Shri Narendra Modi today paid tributes with deep gratitude to all brave people who took part in the Quit India Movement under the inspiring leadership of Mahatma Gandhi.

ಭಾರತದ ಪ್ರಧಾನಮಂತ್ರಿ ಮತ್ತು ಯುಕೆ ಪ್ರಧಾನಮಂತ್ರಿ ಅವರು ಭಾರತೀಯ ಮತ್ತು ಯುಕೆ ಉದ್ಯಮ ಪ್ರಮುಖರನ್ನು ಭೇಟಿಯಾದರು

July 24th, 07:38 pm

'ಐತಿಹಾಸಿಕ ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ'ಕ್ಕೆ (CETA) ಸಹಿ ಹಾಕಿದ ಬಳಿಕ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುನೈಟೆಡ್ ಕಿಂಗ್‌ಡಮ್‌ ನ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರು, ಇಂದು ಭಾರತ ಮತ್ತು ಯುಕೆಯ ಉದ್ಯಮ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆರೋಗ್ಯ, ಫಾರ್ಮಾಸ್ಯುಟಿಕಲ್ಸ್, ರತ್ನ ಮತ್ತು ಆಭರಣ, ಆಟೋಮೊಬೈಲ್, ಇಂಧನ, ಉತ್ಪಾದನೆ, ದೂರಸಂಪರ್ಕ, ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ (ಐ.ಟಿ.), ಲಾಜಿಸ್ಟಿಕ್ಸ್, ಜವಳಿ ಮತ್ತು ಹಣಕಾಸು ಸೇವೆಗಳ ವಲಯಗಳನ್ನು ಪ್ರತಿನಿಧಿಸುವ ಉಭಯ ದೇಶಗಳ ಪ್ರಮುಖ ಉದ್ಯಮ ದಿಗ್ಗಜರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಈ ವಲಯಗಳು ಎರಡೂ ದೇಶಗಳಲ್ಲಿ ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಆರ್ಥಿಕ ಅಭಿವೃದ್ಧಿಗೆ ಗಣನೀಯವಾಗಿ ಕೊಡುಗೆ ನೀಡುತ್ತವೆ.

ಶ್ರೀ ಕೆ. ಕಾಮರಾಜ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

July 15th, 10:50 am

ಶ್ರೀ ಕೆ. ಕಾಮರಾಜ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

ಮಾರಿಷಸ್ ಭೇಟಿಗೆ ಮುನ್ನ ಪ್ರಧಾನಮಂತ್ರಿಯವರ ನಿರ್ಗಮನದ ಹೇಳಿಕೆ

March 10th, 06:18 pm

ಮಾರಿಷಸ್‌ ಪ್ರಧಾನಿ, ನನ್ನ ಸ್ನೇಹಿತ ಡಾ. ನವೀನ್ ಚಂದ್ರ ರಾಮಗೂಲಂ ಅವರ ಆಹ್ವಾನದ ಮೇರೆಗೆ, ನಾನು ಮಾರಿಷಸ್‌ ನ 57ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಆ ರಾಷ್ಟ್ರಕ್ಕೆ ಎರಡು ದಿನಗಳ ಭೇಟಿ ಕೈಗೊಳ್ಳುತ್ತಿದ್ದೇನೆ.

ನವದೆಹಲಿಯಲ್ಲಿ ನಡೆದ ಸೋಲ್ ಲೀಡರ್‌ಶಿಪ್ ಕಾನ್ ಕ್ಲೆವ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

February 21st, 11:30 am

ಭೂತಾನ್ ಪ್ರಧಾನಮಂತ್ರಿ, ನನ್ನ ಸಹೋದರ ದಾಶೋ ತ್ಸೆರಿಂಗ್ ಟೋಬ್ಗೆ ಜಿ, ಸೋಲ್ ಬೋರ್ಡ್ ಅಧ್ಯಕ್ಷ ಸುಧೀರ್ ಮೆಹ್ತಾ, ಉಪಾಧ್ಯಕ್ಷ ಹನ್ಸುಮುಖ್ ಅಧಿಯಾ, ತಮ್ಮ ಜೀವನದಲ್ಲಿ, ತಮ್ಮ ಕ್ಷೇತ್ರಗಳಲ್ಲಿ ನಾಯಕತ್ವವನ್ನು ಒದಗಿಸುವಲ್ಲಿ ಯಶಸ್ವಿಯಾದ ಕೈಗಾರಿಕಾ ಜಗತ್ತಿನ ದಿಗ್ಗಜರು ಸೇರಿದಂತೆ ಅನೇಕ ಮಹಾನ್ ವ್ಯಕ್ತಿಗಳನ್ನು ನಾನು ಇಲ್ಲಿ ನೋಡುತ್ತಿದ್ದೇನೆ. ಭವಿಷ್ಯಕ್ಕಾಗಿ ಕಾಯುತ್ತಿರುವ ನನ್ನ ಯುವ ಸ್ನೇಹಿತರನ್ನೂ ನಾನು ಇಲ್ಲಿ ನೋಡುತ್ತಿದ್ದೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೋಲ್ ಲೀಡರ್ ಷಿಪ್ ಸಮ್ಮೇಳನದ ಮೊದಲ ಆವೃತ್ತಿಯನ್ನು ಉದ್ಘಾಟಿಸಿದರು

February 21st, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್ ಷಿಪ್ (ಸೋಲ್) ಲೀಡರ್ ಷಿಪ್ ಸಮ್ಮೇಳನ 2025 ಅನ್ನು ಉದ್ಘಾಟಿಸಿದರು. ಎಲ್ಲಾ ಗೌರವಾನ್ವಿತ ನಾಯಕರು ಮತ್ತು ಭವಿಷ್ಯದ ಮುಂಬರುವ ಯುವ ನಾಯಕರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, ಕೆಲವು ಘಟನೆಗಳು ಬಹಳ ಪ್ರಿಯವಾಗಿವೆ ಮತ್ತು ಇಂದು ಅಂತಹ ಒಂದು ಕಾರ್ಯಕ್ರಮವಾಗಿದೆ ಎಂದರು. ರಾಷ್ಟ್ರ ನಿರ್ಮಾಣಕ್ಕೆ ಉತ್ತಮ ನಾಗರಿಕರ ಅಭಿವೃದ್ಧಿ ಅಗತ್ಯ, ಪ್ರತಿಯೊಂದು ಕ್ಷೇತ್ರದಲ್ಲೂ ಅತ್ಯುತ್ತಮ ನಾಯಕರ ಅಭಿವೃದ್ಧಿ ಅಗತ್ಯ ಎಂದು ಪ್ರಧಾನಿ ಹೇಳಿದರು. ಪ್ರತಿಯೊಂದು ಕ್ಷೇತ್ರದಲ್ಲೂ ಅತ್ಯುತ್ತಮ ನಾಯಕರನ್ನು ರೂಪಿಸುವುದು ಅಗತ್ಯವಾಗಿದೆ, ಇದು ಸಮಯದ ಅಗತ್ಯವಾಗಿದೆ ಎಂದು ಅವರು ಹೇಳಿದರು. ಆದ್ದರಿಂದ, ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್ ಷಿಪ್ ವಿಕಸಿತ ಭಾರತದ ಅಭಿವೃದ್ಧಿಯ ಪಯಣದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ ಎಂದು ಅವರು ಒತ್ತಿ ಹೇಳಿದರು. ಆತ್ಮವು ಕೇವಲ ಸಂಘಟನೆಯ ಹೆಸರಿನಲ್ಲಿಲ್ಲ ಎಂದು ಹೇಳಿದ ಪ್ರಧಾನಮಂತ್ರಿ ಅವರು, ಆತ್ಮವು ಭಾರತದ ಸಾಮಾಜಿಕ ಜೀವನದ ಆತ್ಮವಾಗಲಿದೆ ಎಂದರು. ಇನ್ನೊಂದು ಅರ್ಥದಲ್ಲಿ, ಆತ್ಮವು ಆಧ್ಯಾತ್ಮಿಕ ಅನುಭವದ ಸಾರವನ್ನು ಸುಂದರವಾಗಿ ಸೆರೆಹಿಡಿಯುತ್ತದೆ ಎಂದು ಅವರು ಹೇಳಿದರು. ಸೋಲ್ ನ ಎಲ್ಲ ಪಾಲುದಾರರಿಗೆ ಶುಭಾಶಯಗಳನ್ನು ತಿಳಿಸಿದ ಶ್ರೀ ನರೇಂದ್ರ ಮೋದಿ ಅವರು, ಮುಂದಿನ ದಿನಗಳಲ್ಲಿ ಗುಜರಾತ್ ನ ಗಿಫ್ಟ್ ಸಿಟಿ ಬಳಿ ಸೋಲ್ ನ ಹೊಸ, ವಿಶಾಲವಾದ ಕ್ಯಾಂಪಸ್ ಸಿದ್ಧವಾಗಲಿದೆ ಎಂದು ಘೋಷಿಸಿದರು.

“ಪರೀಕ್ಷಾ ಪೇ ಚರ್ಚಾ 2025” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

February 10th, 11:30 am

ಈ ಕಾರ್ಯಕ್ರಮಕ್ಕೆ ಇಷ್ಟೊಂದು ಮಕ್ಕಳು ನೋಂದಾಯಿಸಿಕೊಂಡಿರುವುದು ಒಂದು ದೊಡ್ಡ ಸೌಭಾಗ್ಯ, ಮತ್ತು ನಾವು ಅವರಲ್ಲಿ ಒಬ್ಬರಾಗಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2025ರ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು

February 10th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸುಂದರ್ ನರ್ಸರಿಯಲ್ಲಿ 8ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (ಪಿಪಿಸಿ) ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿಯವರು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ತಮ್ಮ ಅನೌಪಚಾರಿಕ ಸಂವಾದದಲ್ಲಿ ವ್ಯಾಪಕ ವಿಷಯಗಳ ಬಗ್ಗೆ ಚರ್ಚಿಸಿದರು. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಸಾಂಪ್ರದಾಯಿಕವಾಗಿ ನೀಡಲಾಗುವ ಎಳ್ಳಿನಿಂದ ತಯಾರಿಸಿದ ಸಿಹಿತಿಂಡಿಗಳನ್ನು ಅವರು ವಿತರಿಸಿದರು.

ಕುವೈತ್ ವಿದೇಶಾಂಗ ಸಚಿವರನ್ನು ಪ್ರಧಾನಮಂತ್ರಿ ಮೋದಿ ಬರಮಾಡಿಕೊಂಡರು.

December 04th, 08:39 pm

ಕುವೈತ್‌ನ ವಿದೇಶಾಂಗ ಸಚಿವ ಗೌರವಾನ್ವಿತ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.

ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಸರ್ವರಿಗೂ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ

August 09th, 08:58 am

ಮಹಾತ್ಮಾ ಗಾಂಧಿಯವರ ನಾಯಕತ್ವದಲ್ಲಿ ನಡೆದ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಭಾರತ ಬಿಟ್ಟು ತೊಲಗಿ ಚಳವಳಿಯ ಕುರಿತ ದೃಶ್ಯದ ತುಣುಕನ್ನು ಕೂಡಾ ಶ್ರೀ ಮೋದಿ ಅವರು ಹಂಚಿಕೊಂಡಿದ್ದಾರೆ.