ಎಟಿಎಫ್ ಬೆಲೆ ನಿಗದಿ ಸಂಬಂಧ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಬೆಲೆ ಸ್ಥಿರೀಕರಣ ನಿಧಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

June 03rd, 03:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ತೈಲ ಮಾರುಕಟ್ಟೆ ಕಂಪನಿಗಳಿಗೆ (ಒಎಂಸಿ) ದೇಶೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಾಚರಣೆಗಳಿಗಾಗಿ ಎಟಿಎಫ್ ಬೆಲೆ ಸ್ಥಿರೀಕರಣ ಬೆಂಬಲವನ್ನು ಒದಗಿಸಲು 10,000 ಕೋಟಿ ರೂ.ಗಳನ್ನು ಮೀರದ ಒಂದು ಬಾರಿಯ ಬಜೆಟ್ ಬೆಂಬಲವನ್ನು ಅನುಮೋದಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಅನುದಾನಗಳ ಬೇಡಿಕೆಗಳ ಮೂಲಕ ತೈಲ ಮಾರುಕಟ್ಟೆ ಕಂಪನಿಗಳಿಗೆ ಬಜೆಟ್ ಬೆಂಬಲವು ಬಡ್ಡಿರಹಿತ ಮುಂಗಡಗಳ ರೂಪದಲ್ಲಿರುತ್ತದೆ. ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಉಂಟಾಗುವ ಅಸಾಧಾರಣ ಇಂಧನ ಬೆಲೆ ಏರಿಳಿತದ ಅವಧಿಯಲ್ಲಿ ವಿಮಾನಯಾನ ಸಂಸ್ಥೆಗಳಿಗೆ ಸ್ಥಿರವಾದ ಎಟಿಎಫ್ ಬೆಲೆ ನಿಗದಿಯನ್ನು ಸುಗಮಗೊಳಿಸಲು ತೈಲ ಮಾರುಕಟ್ಟೆ ಕಂಪನಿಗಳಿಗೆ ಬೆಂಬಲವನ್ನು ಒದಗಿಸಲಾಗುತ್ತದೆ.

ಮ್ಯಾನ್ಮಾರ್ ಅಧ್ಯಕ್ಷರ ಭಾರತದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ-ಮ್ಯಾನ್ಮಾರ್ ಜಂಟಿ ಹೇಳಿಕೆ

June 01st, 07:16 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಮ್ಯಾನ್ಮಾರ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಯು ಮಿನ್ ಆಂಗ್ ಹ್ಲೇಂಗ್ ಅವರು 30 ಮೇ ನಿಂದ 3 ಜೂನ್ 2026 ರವರೆಗೆ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯನ್ನು ನೀಡಿದರು.

ಇಟಲಿ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

May 20th, 05:00 pm

ಕಳೆದ ಸುಮಾರು ಮೂರೂವರೆ ವರ್ಷಗಳಲ್ಲಿ ಪ್ರಧಾನಮಂತ್ರಿ ಮೆಲೋನಿ ಅವರನ್ನು ಭೇಟಿ ಮಾಡಲು ನನಗೆ ಹಲವಾರು ಅವಕಾಶಗಳು ಸಿಕ್ಕಿವೆ. ಇದು ಭಾರತ ಮತ್ತು ಇಟಲಿ ನಡುವಿನ ನಿಕಟ ಸಹಕಾರ ಮತ್ತು ತಿಳಿವಳಿಕೆಯನ್ನು ಪ್ರತಿಬಿಂಬಿಸುತ್ತದೆ. ಅವರ ನಾಯಕತ್ವದಲ್ಲಿ, ನಮ್ಮ ಸಂಬಂಧಗಳು ಹೊಸ ಆವೇಗ, ಹೊಸ ದಿಕ್ಕು ಮತ್ತು ನವೀಕೃತ ವಿಶ್ವಾಸವನ್ನು ಪಡೆದುಕೊಂಡಿವೆ. ನಾವು ನಮ್ಮ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸುತ್ತಿದ್ದಂತೆ, ನಾವು ವಿಶೇಷ ಕಾರ್ಯತಂತ್ರ ಪಾಲುದಾರಿಕೆಯನ್ನು ಘೋಷಿಸುತ್ತಿದ್ದೇವೆ ಎಂಬುದರಿಂದ ನನಗೆ ಸಂತೋಷವಾಗಿದೆ.

ಯುರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 18th, 05:00 am

ಮೊದಲನೆಯದಾಗಿ, ಈ ದುಂಡು ಮೇಜಿನ ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಸ್ವೀಡನ್ ಪ್ರಧಾನಮಂತ್ರಿ ಉಲ್ಫ್ ಕ್ರಿಸ್ಟರ್ಸನ್ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಈ ಸಭೆ ಗೋಥೆನ್‌ಬರ್ಗ್‌ನಲ್ಲಿ ನಡೆಯುತ್ತಿರುವುದು ನನಗೆ ಸಂತೋಷ ತಂದಿದೆ. ಇದು ನಾವೀನ್ಯತೆಗೆ ಹೆಸರುವಾಸಿಯಾಗಿದೆ ಮಾತ್ರವಲ್ಲದೆ, ಯುರೋಪಿನ ಉತ್ಪಾದನಾ ಮನೋಭಾವದ ಚೈತನ್ಯಶೀಲ ಸಂಕೇತವಾಗಿಯೂ ನಿಂತಿದೆ.

ಯೂರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ (ಇಆರ್‌ಟಿ) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 17th, 12:12 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 17ರಂದು ಗೋಥೆನ್‌ಬರ್ಗ್‌ನಲ್ಲಿ ನಡೆದ ಯೂರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ(ಇಆರ್‌ಟಿ)ಯನ್ನು ಉದ್ದೇಶಿಸಿ ಮಾತನಾಡಿದರು. ಸ್ವೀಡನ್‌ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಉಲ್ಫ್ ಕ್ರಿಸ್ಟರ್ಸನ್, ಐರೋಪ್ಯ ಒಕ್ಕೂಟ ಆಯೋಗದ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್, ಯೂರೋಪಿನ ಹಿರಿಯ ಉದ್ಯಮ ಮುಖಂಡರು ಮತ್ತು ಪ್ರಮುಖ ಯೂರೋಪ್ ಮತ್ತು ಭಾರತೀಯ ಕಂಪನಿಗಳ ಪ್ರತಿನಿಧಿಗಳು ವೋಲ್ವೊ ಸಮೂಹ ಆಯೋಜಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದರು.

ಪ್ರಮುಖ ಡಚ್ ಕಂಪನಿಗಳ ʻಸಿಇಒʼಗಳನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

May 16th, 10:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರಾಬ್ ಜೆಟ್ಟನ್ ಅವರು ಇಂದು ಇಂಧನ, ಬಂದರುಗಳು, ಆರೋಗ್ಯ, ಕೃಷಿ ವ್ಯಾಪಾರ ಮತ್ತು ತಂತ್ರಜ್ಞಾನದಂತಹ ವಿವಿಧ ಕ್ಷೇತ್ರಗಳ ಪ್ರಮುಖ ಡಚ್ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಜೊತೆ ಚರ್ಚೆ ನಡೆಸಿದರು. ಉದ್ಯಮ ಮುಖಂಡರು ಮೂರು ಕ್ಲಸ್ಟರ್‌ಗಳ ಬಗ್ಗೆ ಪ್ರಸ್ತುತಿಗಳನ್ನು ನೀಡಿದರು ಮತ್ತು ಭಾರತಕ್ಕಾಗಿ ತಮ್ಮ ಕಾರ್ಯತಂತ್ರಗಳನ್ನು ವಿವರಿಸಿದರು, ಅವುಗಳೆಂದರೆ: ಸೆಮಿಕಂಡಕ್ಟರ್‌ಗಳು, ತಂತ್ರಜ್ಞಾನ ಮತ್ತು ನಾವೀನ್ಯತೆ; ಮೂಲಸೌಕರ್ಯ, ಸರಕು-ಸಾಗಣೆ ಮತ್ತು ಕಡಲಯಾನ; ಸುಸ್ಥಿರತೆ, ಇಂಧನ ಮತ್ತು ಕೃಷಿ.

ಗುಜರಾತ್ ರಾಜ್ಯದ ಅಹಮದಾಬಾದ್ ಜಿಲ್ಲೆಯನ್ನು ಒಳಗೊಂಡ ಒಂದು ಹೊಸ ಯೋಜನೆಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದ್ದು, ಇದು ಭಾರತೀಯ ರೈಲ್ವೆ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 134 ಕಿಲೋಮೀಟರ್ ಗಳಷ್ಟು ಹೆಚ್ಚಿಸಲಿದೆ

May 13th, 03:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಅಹಮದಾಬಾದ್ (ಸರ್ಖೇಜ್) - ಧೋಲೇರಾ ಸೆಮಿ ಹೈ-ಸ್ಪೀಡ್ ಡಬಲ್ ಲೈನ್ ಯೋಜನೆಗೆ ಒಟ್ಟು ಸುಮಾರು 20,667 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ ನೀಡಿದೆ. ಇದು ಭಾರತೀಯ ರೈಲ್ವೇಯ ಮೊದಲ ಸೆಮಿ ಹೈ-ಸ್ಪೀಡ್ ಯೋಜನೆಯಾಗಿದ್ದು, ಸಂಪೂರ್ಣವಾಗಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಯೋಜಿಸಲಾಗಿದೆ.

ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 19 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿ-ಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟ ಅನುಮೋದನೆ; ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲಕ್ಕೆ ಸುಮಾರು 901 ಕಿ.ಮೀ ಸೇರ್ಪಡೆ

May 05th, 07:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ರೈಲ್ವೆ ಸಚಿವಾಲಯದ ಸುಮಾರು 23,437 ಕೋಟಿ ರೂ.ಗಳ ಒಟ್ಟು ವೆಚ್ಚದ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಈ ಕೆಳಗಿನವುಗಳನ್ನು ಒಳಗೊಂಡಿವೆ:

ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ

April 26th, 03:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 28 ರಂದು ಸಂಜೆ 5 ಗಂಟೆಗೆ ಪ್ರಧಾನಮಂತ್ರಿಯವರು ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ, ಅವರು ವಾರಣಾಸಿಯಲ್ಲಿ ಸುಮಾರು 6,350 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶ ರಾಜ್ಯಗಳಾದ್ಯಂತ 15 ಜಿಲ್ಲೆಗಳನ್ನು ಒಳಗೊಂಡ ಎರಡು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟದ ಅನುಮೋದನೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 601 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ

April 18th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆ, ರೈಲ್ವೆ ಸಚಿವಾಲಯದ ಒಟ್ಟು 24,815 ಕೋಟಿ ರೂಪಾಯಿ (ಅಂದಾಜು) ವೆಚ್ಚದ 02 (ಎರಡು) ಯೋಜನೆಗಳಿಗೆ ತನ್ನ ಅನುಮೋದನೆ ನೀಡಿದೆ. ಈ ಯೋಜನೆಗಳೆಂದರೆ :

ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಪರಾಮರ್ಶೆಗಾಗಿ ತಮ್ಮ ನೇತೃತ್ವದಲ್ಲಿ ಭದ್ರತೆ ಕುರಿತಾದ ಸಂಪುಟ ಸಮಿತಿ (ಸಿಸಿಎಸ್) ಸಭೆಯ ನಡೆಸಿದ ಪ್ರಧಾನಮಂತ್ರಿ

April 01st, 10:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ವಿವಿಧ ಸಚಿವಾಲಯಗಳು/ಇಲಾಖೆಗಳು ಕೈಗೊಂಡಿರುವ ಕ್ರಮಗಳ ಪರಾಮರ್ಶೆಗಾಗಿ ಇಂದು ದಿಲ್ಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಬಿಕ್ಕಟ್ಟು ಎದುರಿಸಲು ಮುಂದೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಈ ವಿಷಯದ ಬಗ್ಗೆ ನಡೆದ ಎರಡನೇ ವಿಶೇಷ ʻಸಿಸಿಎಸ್ʼ ಸಭೆ ಇದಾಗಿದೆ.

Cabinet approves 4 lane construction from Barabanki to Bahraich in Uttar Pradesh worth Rs.6969.04 crore

March 18th, 04:10 pm

The Cabinet Committee on Economic Affairs, chaired by PM Narendra Modi has approved construction of 4-Lane Access-Controlled National Highway-927 from Barabanki to Bahraich in Uttar Pradesh worth Rs.6969.04 crore. The project will bypass major habitations, increase average travel speeds, reduce travel time to about one hour, and improve overall road safety, fuel efficiency, and vehicle operating costs.

Cabinet approves a New Era of Plug-and-Play Industrial Development through Bharat Audyogik Vikas Yojna (BHAVYA)

March 18th, 04:05 pm

In a landmark step towards accelerating industrial growth, the Union Cabinet chaired by PM Narendra Modi has approved the Bharat Audyogik Vikas Yojna (BHAVYA), with an allocation of Rs.33,660 crore for developing 100 plug-and-play industrial parks across the country. The scheme aims to develop world-class industrial infrastructure, unlocking manufacturing potential and driving India’s growth story.

ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 14th, 02:15 pm

ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶಾಂತನು ಠಾಕೂರ್ ಜಿ, ಸುಕಾಂತ ಮಜುಂದಾರ್ ಜಿ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಶುಭೇಂದು ಅಧಿಕಾರಿ ಜಿ, ನನ್ನ ಸಹ ಸಂಸದ ಶಮಿಕ್ ಭಟ್ಟಾಚಾರ್ಯ ಜಿ, ಇತರೆ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗು ಉದ್ಘಾಟನೆ ನೆರವೇರಿಸಿದರು

March 14th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು, ಕೋಲ್ಕತ್ತಾದ ನೆಲದಿಂದ, ಪಶ್ಚಿಮ ಬಂಗಾಳ ಮತ್ತು ಪೂರ್ವ ಭಾರತಕ್ಕೆ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬರೆಯಲಾಗುತ್ತಿದೆ ಎಂದು ಹೇಳಿದರು.

ಅಸ್ಸಾಂನ ಸಿಲ್ಚಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 14th, 11:10 am

ಸಂಸ್ಕೃತಿ, ಧೈರ್ಯ ಮತ್ತು ಚೈತನ್ಯದಿಂದ ತುಂಬಿರುವ ಬರಾಕ್ ಕಣಿವೆಯ ಕುಟುಂಬಗಳನ್ನು ನೋಡಲು ಇಲ್ಲಿಗೆ ಬರುವುದು ನನಗೆ ಯಾವಾಗಲೂ ವಿಶೇಷ ಅನುಭವ ತರುತ್ತದೆ. ಸಿಲ್ಚಾರ್ ಅನ್ನು ಬರಾಕ್ ಕಣಿವೆಯ ಪ್ರವೇಶದ್ವಾರ ಎಂದು ಕರೆಯಲಾಗುತ್ತದೆ. ಇತಿಹಾಸ, ಭಾಷೆ, ಸಂಸ್ಕೃತಿ ಮತ್ತು ಉದ್ಯಮಗಳು ಒಟ್ಟಾಗಿ ಒಂದು ವಿಶಿಷ್ಟ ಗುರುತು ಸೃಷ್ಟಿಸಿದ ಸ್ಥಳ ಇದು. ಇಲ್ಲಿ ಬಂಗಾಳಿ ಮಾತನಾಡುತ್ತಾರೆ, ಅಸ್ಸಾಮಿಯ ಅನುರಣನ ಕೇಳುತ್ತದೆ ಮತ್ತು ಇತರೆ ಬುಡಕಟ್ಟು ಸಂಪ್ರದಾಯಗಳು ಸಹ ಪ್ರವರ್ಧಮಾನಕ್ಕೆ ಬರುತ್ತವೆ. ಈ ವೈವಿಧ್ಯತೆಯನ್ನು ಶಕ್ತಿಯಾಗಿ ಪರಿವರ್ತಿಸುವ ಮೂಲಕ, ನೀವೆಲ್ಲರೂ ಈ ಇಡೀ ಪ್ರದೇಶವನ್ನು ಸಹೋದರತ್ವ ಮತ್ತು ಸಾಮರಸ್ಯದಿಂದ ಅಭಿವೃದ್ಧಿಪಡಿಸುತ್ತಿದ್ದೀರಿ. ಇದು ಬರಾಕ್ ಕಣಿವೆಯ ದೊಡ್ಡ ಸಾಮರ್ಥ್ಯವಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಿಲ್ಚಾರ್ ನಲ್ಲಿ 23,550 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

March 14th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಸಿಲ್ಚಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ತನ್ನ ಸಂಸ್ಕೃತಿ ಮತ್ತು ಚೈತನ್ಯದಿಂದ ವ್ಯಾಖ್ಯಾನಿಸಲ್ಪಟ್ಟ ಭೂಮಿಯಾದ ಬರಾಕ್ ಕಣಿವೆಗೆ ಭೇಟಿ ನೀಡುವುದು ಸದಾ ತಮಗೆ ಆಳವಾದ ವಿಶೇಷ ಅನುಭವವನ್ನು ತರುತ್ತದೆ ಎಂದು ಹೇಳಿದರು. ಇತಿಹಾಸ ಮತ್ತು ಭಾಷೆ ವಿಲೀನಗೊಂಡು ವಿಶಿಷ್ಟ ಪ್ರಾದೇಶಿಕ ಗುರುತನ್ನು ಸೃಷ್ಟಿಸಲು ಸಿಲ್ಚಾರ್ ಈ ಕಣಿವೆಯ ಹೆಬ್ಬಾಗಿಲಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಬಂಗಾಳಿ, ಅಸ್ಸಾಮಿ ಮತ್ತು ಬುಡಕಟ್ಟು ಸಂಪ್ರದಾಯಗಳು ಸಾಮರಸ್ಯದಿಂದ ಜೊತೆಗೆ ಬೆಳೆಯುವ ವೈವಿಧ್ಯತೆಯಲ್ಲಿ ಈ ಪ್ರದೇಶದ ಶಕ್ತಿ ಅಡಗಿದೆ ಎಂದು ಶ್ರೀ ಮೋದಿ ಹೇಳಿದರು. ಬರಾಕ್ ಕಣಿವೆಯ ವೈವಿಧ್ಯತೆಯು ಅದರ ದೊಡ್ಡ ಆಸ್ತಿಯಾಗಿದ್ದು, ಅದರ ನಾಗರಿಕರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.

ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ

March 13th, 03:00 pm

ಪ್ರತೀಕೂಲ ಹವಾಮಾನದಿಂದಾಗಿ ನಾನು ಕೊಕ್ರಝಾರ್‌ಗೆ ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಗುವಾಹತಿಯಿಂದ ಇಲ್ಲಿ ನಿಮ್ಮೊಂದಿಗೆ ಸಂವಹನ ನಡೆಸಲು ಸಾಧ್ಯವಾಯಿತು. ನಾನು ದೆಹಲಿಯಿಂದ ನಿಮ್ಮ ಬಳಿಗೆ ಬರಲು ಹೊರಟಿದ್ದೆ, ಆದರೆ ನಾನು ಗುವಾಹತಿಯಲ್ಲೇ ಇಳಿಯಬೇಕಾಯಿತು. ಈಗ ಗುವಾಹತಿಯಿಂದಲೇ ನಾನು ನಿಮ್ಮ ದರ್ಶನ ಪಡೆಯುತ್ತಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಅಸ್ಸಾಂ ಮುಖ್ಯಮಂತ್ರಿ, ಸಹೋದರ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಜಿ, ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಸಂಸದರೆ ಮತ್ತು ಶಾಸಕರೆ, ಬಿ.ಟಿ.ಸಿ.ಯ ಎಲ್ಲಾ ಪ್ರತಿನಿಧಿಗಳೆ, ಸಮಾಜದ ಎಲ್ಲಾ ಹಿರಿಯ ಸದಸ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಅಸ್ಸಾಂನ ಕೊಕ್ರಝಾರ್‌ನಲ್ಲಿ ₹4,570 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 13th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್‌ ಮೂಲಕ ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರತಿಕೂಲ ಹವಾಮಾನದಿಂದಾಗಿ ಕೊಕ್ರಝಾರ್‌ಗೆ ಭೇಟಿ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಧಾನಮಂತ್ರಿ ಹೇಳಿದರು ಮತ್ತು ನೆರೆದಿದ್ದ ನಾಗರಿಕರಿಗೆ ಕ್ಷಮೆಯಾಚಿಸಿದರು. ಗುವಾಹಟಿಯಿಂದ ಮಾತನಾಡುತ್ತಿರುವುದಾಗಿ ಪ್ರಧಾನಿ ಮೋದಿ ಹೇಳಿದರು. ಬೋಡೋಫಾ ಉಪೇಂದ್ರನಾಥ ಬ್ರಹ್ಮ ಮತ್ತು ರೂಪನಾಥ್ ಬ್ರಹ್ಮ ಅವರಂತಹ ಮಹಾನ್ ವ್ಯಕ್ತಿಗಳಿಗೆ ನಾನು ನಮಿಸುತ್ತೇನೆ ಎಂದು ಶ್ರೀ ಮೋದಿ ತಿಳಿಸಿಸಿದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವುದು ನನ್ನ ಮೇಲಿನ ಋಣವಾಗಿದೆ, ಅದನ್ನು ಸಮರ್ಪಿತ ಸೇವೆ ಮತ್ತು ಪ್ರಾದೇಶಿಕ ಅಭಿವೃದ್ಧಿಯ ಮೂಲಕ ಮರುಪಾವತಿಸುತ್ತೇನೆ ಎಂದು ಹೇಳಿದರು. ನಿಮಗೆ ಸೇವೆ ಸಲ್ಲಿಸುವ ಮೂಲಕ ಮತ್ತು ಈ ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಈ ಋಣವನ್ನು ತೀರಿಸುವುದು ನನ್ನ ಪ್ರಯತ್ನವಾಗಿದೆ ಎಂದು ಪ್ರಧಾನಮಂತ್ರಿ ಮೋದಿ ದೃಢಪಡಿಸಿದರು.

ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೈಬ್ರಿಡ್ ಅನ್ಯುಯಿಟಿ ಮೋಡ್ ಅಡಿಯಲ್ಲಿ ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇಯ ದೆಹಲಿ-ಫರಿದಾಬಾದ್-ಬಲ್ಲಭಗಢ-ಸೋಹ್ನಾ ಸ್ಪರ್ ನಿಂದ ಜೇವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗ್ರೀನ್ ಫೀಲ್ಡ್ ಸಂಪರ್ಕದ ನಿರ್ಮಾಣಕ್ಕಾಗಿ ಪರಿಷ್ಕೃತ ವೆಚ್ಚದ ಅಂದಾಜಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ

March 10th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು, ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೈಬ್ರಿಡ್ ಅನ್ಯುಯಿಟಿ ಮೋಡ್ ಅಡಿಯಲ್ಲಿ ದೆಹಲಿ-ಮುಂಬೈ ಎಕ್ಸ್ ಪ್ರೆಸ್ವೇಯ ದೆಹಲಿ-ಫರಿದಾಬಾದ್-ಬಲ್ಲಭಗಢ-ಸೋಹ್ನಾ ಸ್ಪರ್ ನಿಂದ ಜೇವರ್ ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗ್ರೀನ್ಫೀಲ್ಡ್ ಸಂಪರ್ಕದ ನಿರ್ಮಾಣಕ್ಕಾಗಿ 3630.77 ಕೋಟಿ ರೂಪಾಯಿಗಳ ಪರಿಷ್ಕೃತ ಒಟ್ಟು ಬಂಡವಾಳ ವೆಚ್ಚಕ್ಕೆ ಅನುಮೋದನೆ ನೀಡಿದೆ.