ಮಹಾಕವಿ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಗೌರವ ಸಲ್ಲಿಸಿದ್ದಾರೆ
December 11th, 10:29 am
ಇಂದು ಮಹಾಕವಿ ಶ್ರೀ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಸುಬ್ರಮಣ್ಯ ಭಾರತಿ ಅವರ ವಚನಗಳು ಧೈರ್ಯವನ್ನು ಹುಟ್ಟುಹಾಕಿವೆ, ಅವರ ಆಲೋಚನೆಗಳು ಅಸಂಖ್ಯಾತ ಜನರ ಮನಸ್ಸಿನಲ್ಲಿ ಶಾಶ್ವತವಾದ ಪ್ರಭಾವ ಬೀರುವ ಶಕ್ತಿಯನ್ನು ಹೊಂದಿವೆ. ಭಾರತದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಬೆಳಗಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ. ಸುಬ್ರಹ್ಮಣ್ಯ ಭಾರತಿ ಅವರು, ನ್ಯಾಯಯುತ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜವನ್ನು ನಿರ್ಮಿಸಲು ಶ್ರಮಿಸಿದರು. ತಮಿಳು ಸಾಹಿತ್ಯವನ್ನು ಶ್ರೀಮಂತಗೊಳಿಸಲು ಅವರ ಕೊಡುಗೆಗಳು ಅಪ್ರತಿಮವಾಗಿವೆ ಎಂದು ಹೇಳಿದ್ದಾರೆ,