The best chapters of the Seychelles story are yet to be written: PM Modi at the National Assembly of Seychelles
June 28th, 05:00 pm
PM Modi addressed the National Assembly of Seychelles, congratulating the people on the Golden Jubilee celebrations. Recalling the centuries-old India-Seychelles relationship, he noted that the Indian Ocean connects the two countries, while reiterating the commitment to continue working together for a safer and more secure Indian Ocean region. The PM assured Seychelles that India will remain its trusted partner and support all its aspirations as a true friend.The commissioning of INS Agray, INS Dunagiri and INS Sanshodhak is a reflection of India's increasing self-reliance: PM Modi in Kolkata
June 21st, 12:51 pm
PM Modi has commissioned three indigenously designed and built naval ships - INS Dunagiri, INS Sanshodhak and INS Agray in Kolkata, West Bengal. Speaking on the occasion, he said the event represented an important milestone in the journey towards an Aatmanirbhar Bharat, adding that around 40 indigenously built warships and submarines have been inducted into the Indian Navy over the past few years.PM Modi commissions three indigenously designed and built naval ships – INS Dunagiri, INS Sanshodhak and INS Agray
June 21st, 12:50 pm
PM Modi has commissioned three indigenously designed and built naval ships - INS Dunagiri, INS Sanshodhak and INS Agray in Kolkata, West Bengal. Speaking on the occasion, he said the event represented an important milestone in the journey towards an Aatmanirbhar Bharat, adding that around 40 indigenously built warships and submarines have been inducted into the Indian Navy over the past few years.ಸಿ.ಎಂ.ಎ ಸಿ.ಜಿ.ಎಂ ಅಧ್ಯಕ್ಷರು ಮತ್ತು ಸಿ.ಇ.ಒ ರೊಡಾಲ್ಫ್ ಸಾದೇ ಅವರೊಂದಿಗೆ ಕಡಲ ಸಂಪರ್ಕ ಮತ್ತು ಸಹಯೋಗದ ಅವಕಾಶಗಳ ಕುರಿತು ಚರ್ಚೆ ನಡೆಸಿದ ಪ್ರಧಾನಮಂತ್ರಿ
June 18th, 06:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿ.ಎಂ.ಎ ಸಿ.ಜಿ.ಎಂ (CMA CGM) ನ ಅಧ್ಯಕ್ಷರಾದ ಶ್ರೀ ರೊಡಾಲ್ಫ್ ಸಾದೇ ಅವರೊಂದಿಗೆ ಕಡಲ ಸಂಪರ್ಕ, ಜಾಗತಿಕ ಹಡಗು ಪ್ರವೃತ್ತಿಗಳು ಮತ್ತು ಭಾರತದ ವೇಗವಾಗಿ ಬೆಳೆಯುತ್ತಿರುವ ಕಡಲ ವಲಯದಲ್ಲಿ ಉದಯೋನ್ಮುಖ ಅವಕಾಶಗಳ ಕುರಿತು ಫಲಪ್ರದ ಚರ್ಚೆ ನಡೆಸಿದರು.ಗುಜರಾತ್ನ ಸೂರತ್ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 05th, 04:30 pm
ಗುಜರಾತ್ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು
June 05th, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.ಜೂನ್ 5 ರಂದು ಸೂರತ್ ಮತ್ತು ದಮನ್ ಗೆ ಪ್ರಧಾನಮಂತ್ರಿ ಅವರ ಭೇಟಿ
June 04th, 10:03 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 5 ರಂದು ಗುಜರಾತ್ ಮತ್ತು ದಮನ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಸುಮಾರು 2:30 ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ಜಿಲ್ಲೆಯ ಹಜಿರಾಗೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕೈಗಾರಿಕಾ ಕಾರ್ಯಗಳು ಮತ್ತು ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ ಸುಮಾರು 4:15ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ನಲ್ಲಿ ಸುಮಾರು ₹18,800 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ರೋಜ್ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಸೈಪ್ರಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 22nd, 01:00 pm
ನಿಮ್ಮ ಸಂಪೂರ್ಣ ಭೇಟಿ ಸಮಯದಲ್ಲಿ, ನಾವು ನಿಜವಾಗಿಯೂ ನಿಮ್ಮ ಬೆಚ್ಚಗಿನ ಸ್ನೇಹ ಮತ್ತು ಭಾರತದೊಂದಿಗಿನ ಬಲವಾದ ಸಂಪರ್ಕವನ್ನು ಅನುಭವಿಸಿದ್ದೇವೆ. ಇಂದು ನಿಮ್ಮ ಭಾರತ ಭೇಟಿಯು ನಮ್ಮ ಹಂಚಿಕೆಯ ಪ್ರಯಾಣದಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಸೂಚಿಸುತ್ತದೆ.ಪ್ರಧಾನಮಂತ್ರಿ ಅವರಿಂದ ಇಟಲಿ ಅಧ್ಯಕ್ಷರ ಭೇಟಿ
May 20th, 07:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರೋಮ್ ನ ಅಧ್ಯಕ್ಷರ ಅರಮನೆಯಾದ ಕ್ವಿರಿನಾಲೆಯಲ್ಲಿ ಇಟಲಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸೆರ್ಗಿಯೋ ಮಟ್ಟರೆಲ್ಲಾ ಅವರನ್ನು ಭೇಟಿ ಮಾಡಿದರು.ಇಟಲಿ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 20th, 05:00 pm
ಕಳೆದ ಸುಮಾರು ಮೂರೂವರೆ ವರ್ಷಗಳಲ್ಲಿ ಪ್ರಧಾನಮಂತ್ರಿ ಮೆಲೋನಿ ಅವರನ್ನು ಭೇಟಿ ಮಾಡಲು ನನಗೆ ಹಲವಾರು ಅವಕಾಶಗಳು ಸಿಕ್ಕಿವೆ. ಇದು ಭಾರತ ಮತ್ತು ಇಟಲಿ ನಡುವಿನ ನಿಕಟ ಸಹಕಾರ ಮತ್ತು ತಿಳಿವಳಿಕೆಯನ್ನು ಪ್ರತಿಬಿಂಬಿಸುತ್ತದೆ. ಅವರ ನಾಯಕತ್ವದಲ್ಲಿ, ನಮ್ಮ ಸಂಬಂಧಗಳು ಹೊಸ ಆವೇಗ, ಹೊಸ ದಿಕ್ಕು ಮತ್ತು ನವೀಕೃತ ವಿಶ್ವಾಸವನ್ನು ಪಡೆದುಕೊಂಡಿವೆ. ನಾವು ನಮ್ಮ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸುತ್ತಿದ್ದಂತೆ, ನಾವು ವಿಶೇಷ ಕಾರ್ಯತಂತ್ರ ಪಾಲುದಾರಿಕೆಯನ್ನು ಘೋಷಿಸುತ್ತಿದ್ದೇವೆ ಎಂಬುದರಿಂದ ನನಗೆ ಸಂತೋಷವಾಗಿದೆ.ನಾರ್ವೆ-ಭಾರತ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 18th, 11:49 pm
ಇದು ಕೇವಲ ಸಾಧ್ಯತೆಗಳ ಪಾಲುದಾರಿಕೆಯಲ್ಲ, ಇದು ಸಾಬೀತಾಗಿರುವ ಪಾಲುದಾರಿಕೆಯಾಗಿದೆ. ಇಂದು ಆಹಾರ, ಇಂಧನ ಮತ್ತು ರಸಗೊಬ್ಬರ ಭದ್ರತೆಯು ಜಾಗತಿಕ ಸವಾಲುಗಳಾಗಿ ಮಾರ್ಪಟ್ಟಿರುವಾಗ, ಭಾರತ ಮತ್ತು ನಾರ್ವೆ ಅವುಗಳನ್ನು ಪರಿಹರಿಸಲು ಒಟ್ಟಾಗಿ ಕೆಲಸ ಮಾಡುತ್ತಿವೆ. ಅದು ಭಾರತದ ಆಹಾರ ವಲಯದಲ್ಲಿ ಓರ್ಕ್ಲಾದ ಹೂಡಿಕೆಗಳಾಗಲಿ, ಈಕ್ವಿನಾರ್ ಭಾರತಕ್ಕೆ ಮಾಡುವ ಎಲ್ಪಿಜಿ ಮತ್ತು ಎಲ್ಎನ್ ಜಿ ಪೂರೈಕೆಯಾಗಿರಲಿ ಅಥವಾ ಭಾರತದ ರಸಗೊಬ್ಬರ ವಲಯಕ್ಕೆ ಯಾರಾ ಇಂಟರ್ ನ್ಯಾಷನಲ್ನ ಕೊಡುಗೆಯಾಗಿರಲಿ - ಈ ಸಹಭಾಗಿತ್ವಗಳು ನಮ್ಮ ಪಾಲುದಾರಿಕೆಯನ್ನು ಬಲಪಡಿಸುತ್ತಿವೆ.ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
May 18th, 08:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಡೆದ ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಗೌರವಾನ್ವಿತ ರಾಜಕುಮಾರ ಹಾಕನ್ ಮತ್ತು ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಜೋನಾಸ್ ಗಹರ್ ಸ್ಟೋರೆ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.ಭಾರತದ ಪ್ರಧಾನಮಂತ್ರಿ ಅವರ ನೆದರ್ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್ಲ್ಯಾಂಡ್ಸ್ ಜಂಟಿ ಹೇಳಿಕೆ
May 17th, 03:45 am
ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)
May 17th, 03:15 am
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.ಫಲಿತಾಂಶಗಳ ಪಟ್ಟಿ: ನೆದರ್ಲ್ಯಾಂಡ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ
May 17th, 02:47 am
ಭಾರತ-ನೆದರ್ಲ್ಯಾಂಡ್ಸ್ ವ್ಯೂಹಾತ್ಮಕ ಪಾಲುದಾರಿಕೆಯ ಮಾರ್ಗಸೂಚಿ (2026-2030)ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಅವರ ಜೊತೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ
May 17th, 02:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರಾಬ್ ಜೆಟ್ಟನ್ ಅವರೊಂದಿಗೆ ಹೇಗ್ ನಲ್ಲಿರುವ ಡಚ್ ಪ್ರಧಾನಮಂತ್ರಿಯವರ ಅಧಿಕೃತ ನಿವಾಸದಲ್ಲಿ (ಕ್ಯಾಟ್ಶುಯಿಸ್) ಅಧಿಕೃತ ಮಾತುಕತೆ ನಡೆಸಿದರು.ಗುಜರಾತ್ ರಾಜ್ಯದ ಅಹಮದಾಬಾದ್ ಜಿಲ್ಲೆಯನ್ನು ಒಳಗೊಂಡ ಒಂದು ಹೊಸ ಯೋಜನೆಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದ್ದು, ಇದು ಭಾರತೀಯ ರೈಲ್ವೆ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 134 ಕಿಲೋಮೀಟರ್ ಗಳಷ್ಟು ಹೆಚ್ಚಿಸಲಿದೆ
May 13th, 03:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಅಹಮದಾಬಾದ್ (ಸರ್ಖೇಜ್) - ಧೋಲೇರಾ ಸೆಮಿ ಹೈ-ಸ್ಪೀಡ್ ಡಬಲ್ ಲೈನ್ ಯೋಜನೆಗೆ ಒಟ್ಟು ಸುಮಾರು 20,667 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ ನೀಡಿದೆ. ಇದು ಭಾರತೀಯ ರೈಲ್ವೇಯ ಮೊದಲ ಸೆಮಿ ಹೈ-ಸ್ಪೀಡ್ ಯೋಜನೆಯಾಗಿದ್ದು, ಸಂಪೂರ್ಣವಾಗಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಯೋಜಿಸಲಾಗಿದೆ.ಗುಜರಾತ್ ನ ವಡಿನಾರ್ ನಲ್ಲಿ ಹಡಗು ದುರಸ್ತಿ ಸೌಲಭ್ಯ ಸ್ಥಾಪನೆಗೆ ಸಚಿವ ಸಂಪುಟದ ಅನುಮೋದನೆ
May 05th, 06:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ರಾಷ್ಟ್ರೀಯ ಹಡಗು ದುರಸ್ತಿ ಪರಿಸರ ವ್ಯವಸ್ಥೆಯ ಪ್ರಮುಖ ವಿಸ್ತರಣೆಯ ಭಾಗವಾಗಿ ಗುಜರಾತ್ ನ ವಡಿನಾರ್ ನಲ್ಲಿ ಅತ್ಯಾಧುನಿಕ ಹಡಗು ದುರಸ್ತಿ ಸೌಲಭ್ಯದ ಸ್ಥಾಪನೆಗೆ ಅನುಮೋದನೆ ನೀಡಿದೆ. ಈ ಯೋಜನೆಯನ್ನು ದೀನ್ ದಯಾಳ್ ಬಂದರು ಪ್ರಾಧಿಕಾರ (ಡಿಪಿಎ) ಮತ್ತು ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (ಸಿ ಎಸ್ ಎಲ್) ಜಂಟಿಯಾಗಿ ಅನುಷ್ಠಾನಗೊಳಿಸಲಿದ್ದು, ಒಟ್ಟು 1,570 ಕೋಟಿ ರೂಪಾಯಿ ಹೂಡಿಕೆ ಮಾಡಲಾಗುವುದು.