PM to visit Assam on 20-21 December

December 19th, 02:29 pm

PM Modi will visit Assam on 20-21 December to launch multiple development projects. In Guwahati, the PM will pay tribute to martyrs at Swahid Smarak Kshetra and also inaugurate the new terminal building of Lokapriya Gopinath Bardoloi International Airport. Additionally, the PM will perform the Bhoomipujan of the new brownfield Ammonia-Urea Fertilizer Project at Namrup, which will benefit farmers across the region.

2001ರ ಸಂಸತ್ ದಾಳಿಯ ಹುತಾತ್ಮರಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ

December 13th, 11:46 am

2001ರ ಡಿಸೆಂಬರ್ 13 ರಂದು ನಡೆದ ಹೇಯ ಭಯೋತ್ಪಾದಕ ದಾಳಿಯ ಸಮಯದಲ್ಲಿ ಭಾರತದ ಸಂಸತ್ತನ್ನು ರಕ್ಷಿಸುವಾಗ ಪ್ರಾಣ ತ್ಯಾಗ ಮಾಡಿದ ಧೈರ್ಯಶಾಲಿ ಭದ್ರತಾ ಸಿಬ್ಬಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗೌರವ ನಮನ ಸಲ್ಲಿಸಿದರು.

ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 13th, 09:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. ಈ ಹುತಾತ್ಮರ ಅದಮ್ಯ ಮನೋಭಾವವನ್ನು ಮುಂದಿನ ಪೀಳಿಗೆಗಳು ಸದಾ ಸ್ಮರಿಸುತ್ತವೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನಮನ

December 13th, 10:21 am

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗೌರವ ನಮನ ಸಲ್ಲಿಸಿದ್ದಾರೆ.

ಕಾರ್ಗಿಲ್‌ನಲ್ಲಿ ನಾವು ಕೇವಲ ಯುದ್ಧವನ್ನು ಗೆಲ್ಲಲಿಲ್ಲ; ನಾವು ಸತ್ಯ, ಸಂಯಮ ಮತ್ತು ಸಾಮರ್ಥ್ಯದ ನಂಬಲಾಗದ ಶಕ್ತಿಯನ್ನು ಪ್ರದರ್ಶಿಸಿದ್ದೇವೆ: ಲಡಾಖ್‌ನಲ್ಲಿ ಪ್ರಧಾನಿ ಮೋದಿ

July 26th, 09:30 am

ಲಡಾಖ್‌ನಲ್ಲಿ 25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಧೀರರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ನಾವು ಯುದ್ಧವನ್ನು ಗೆದ್ದಿದ್ದಷ್ಟೇ ಅಲ್ಲ, ಸತ್ಯ, ಸಂಯಮ ಮತ್ತು ಶಕ್ತಿಯ ಅದ್ಭುತ ಉದಾಹರಣೆಯನ್ನು ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ʻಕಾರ್ಗಿಲ್ ವಿಜಯ ದಿನʼದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಪ್ರಧಾನ ಮಂತ್ರಿಗಳು ಗೌರವ ನಮನ ಸಲ್ಲಿಸಿದರು ಮತ್ತು ಲಡಾಖ್‌ನಲ್ಲಿ ನಡೆದ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗಿಯಾದರು

July 26th, 09:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಡಾಖ್‌ನಲ್ಲಿ ನಡೆದ 25ನೇ ʻಕಾರ್ಗಿಲ್ ವಿಜಯ ದಿನʼದ ಸಂದರ್ಭದಲ್ಲಿ ಕರ್ತವ್ಯದ ವೇಳೆ ಪರಮೋಚ್ಚ ತ್ಯಾಗ ಮಾಡಿದ ವೀರ ಕಲಿಗಳಿಗೆ ಗೌರವ ನಮನ ಸಲ್ಲಿಸಿದರು. ಕಾರ್ಗಿಲ್‌ ವೀರ ಯೋಧರ ಶ್ರದ್ಧಾಂಜಲಿ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದರು. ಕಾರ್ಗಿಲ್ ಯುದ್ಧದ ಬಗ್ಗೆ ʻಎನ್‌ಸಿಓʼಗಳ ಸಂಕ್ಷಿಪ್ತ ವಿವರಣೆಯಾದ ʻಗೌರವ್ ಗಾಥಾʼವನ್ನು ಪ್ರಧಾನಮಂತ್ರಿಯವರು ಆಲಿಸಿದರು. ಅಲ್ಲದೆ, ʻಅಮರ್ ಸಂಸ್ಮರಣ್: ನೆನಪಿನ ಗುಡಿಸಲುʼ ಹಾಗೂ ʻವೀರ ಭೂಮಿʼಗೂ ಅವರು ಭೇಟಿ ನೀಡಿದರು.

ಪುಲ್ವಾಮಾದಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ

February 14th, 11:10 am

ಪುಲ್ವಾಮಾದಲ್ಲಿ 2019ರಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ

ವಿಜಯ ದಿವಸದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರಿಂದ ವೀರ ಯೋಧರಿಗೆ ಗೌರವ ಸಲ್ಲಿಕೆ

December 16th, 09:44 am

ವಿಜಯ ದಿವಸದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 1971 ರ ಯುದ್ಧದಲ್ಲಿ ಭಾರತಕ್ಕೆ ಸೇವೆ ಸಲ್ಲಿಸಿದ ವೀರ ಯೋಧರಿಗೆ ಹೃತ್ಪೂರ್ವಕ ನಮನಗಳನ್ನು ಸಲ್ಲಿಸಿದ್ದಾರೆ.

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದ ಧೈರ್ಯಶಾಲಿ ಭದ್ರತಾ ಸಿಬ್ಬಂದಿಗೆ ಪ್ರಧಾನಮಂತ್ರಿಯವರಿಂದ ಹೃತ್ಪೂರ್ವಕ ಗೌರವ ನಮನ ಸಲ್ಲಿಕೆ

December 13th, 09:47 am

ಇಂದು, ನಾವು 2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದ ಧೈರ್ಯಶಾಲಿ ಭದ್ರತಾ ಸಿಬ್ಬಂದಿಯನ್ನು ನೆನಪಿಸಿಕೊಂಡು ಹೃತ್ಪೂರ್ವಕವಾಗಿ ಗೌರವ ಸಲ್ಲಿಸೋಣ. ಅಪಾಯದ ಸಮಯದಲ್ಲಿ ಅವರು ತೋರಿದ ಧೈರ್ಯ ಮತ್ತು ತ್ಯಾಗ ನಮ್ಮೆಲ್ಲರ ನೆನಪಿನಲ್ಲಿ ಎಂದೆಂದಿಗೂ ಅಚ್ಚಳಿಯದೆ ಅಜರಾಮರವಾಗಿ ಉಳಿದಿದೆ ಎಂದು ಟ್ವೀಟ್ ಮಾಡಿದ್ದಾರೆ.

ವಿಜಯ್ ದಿವಸದ ಮುನ್ನಾದಿನದಂದು ಆರ್ಮಿ ಹೌಸ್ನಲ್ಲಿ 'ಅಟ್ ಹೋಮ್' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು

December 15th, 08:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ್ ದಿವಸದ ಮುನ್ನಾದಿನದಂದು ಆರ್ಮಿ ಹೌಸ್ನಲ್ಲಿ 'ಅಟ್ ಹೋಮ್' ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ನಮ್ಮ ಯುವಕರು ಪ್ರತಿಯೊಂದು ಕ್ಷೇತ್ರದಲ್ಲೂ ದೇಶವನ್ನು ಹೆಮ್ಮೆ ಪಡುವಂತೆ ಮಾಡುತ್ತಿದ್ದಾರೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

July 31st, 11:30 am

ಮಿತ್ರರೇ, ಜುಲೈ 31 ರಂದು, ಅಂದರೆ ಈ ಇಂದು ನಾವೆಲ್ಲ ದೇಶವಾಸಿಗಳು, ಹುತಾತ್ಮ ಯೋಧ ಶಹೀದ್ ಉಧಂ ಸಿಂಗ್ ಅವರಿಗೆ ನಮಿಸುತ್ತೇವೆ. ದೇಶಕ್ಕಾಗಿ ಸರ್ವಸ್ವವನ್ನೇ ತ್ಯಾಗ ಮಾಡಿದ ಇತರ ಎಲ್ಲ ಮಹಾನ್ ಕ್ರಾಂತಿಕಾರಿಗಳಿಗೆ ನಾನು ವಿನಮ್ರ ಗೌರವ ನಮನವನ್ನು ಸಲ್ಲಿಸುತ್ತೇನೆ.

ನೀರನ್ನು ಉಳಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡಬೇಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

March 27th, 11:00 am

ನನ್ನ ಪ್ರಿಯ ದೇಶಬಾಂಧವರೆ, ಕಳೆದ ವಾರ ನಾವು ಮಾಡಿದ ಸಾಧನೆ ನಮ್ಮನ್ನು ಹೆಮ್ಮೆಯಿಂದ ಬೀಗುವಂತೆ ಮಾಡಿದೆ. ಭಾರತ ಕಳೆದ ವಾರ 400 ಶತಕೋಟಿ ಡಾಲರ್ ಅಂದರೆ 30 ಲಕ್ಷಕೋಟಿ ರೂಪಾಯಿಗಳ ರಫ್ತಿನ ಗುರಿಯನ್ನು ಸಾಧಿಸಿದೆ ಎಂದು ನೀವು ಕೇಳಿರಬಹುದು. ಮೊದಲ ಬಾರಿಗೆ ಕೇಳಿದಾಗ ಅರ್ಥವ್ಯವಸ್ಥೆಗೆ ಸಂಬಂಧಿಸಿದ ವಿಷಯ ಅನ್ನಿಸಬಹುದು. ಆದರೆ ಇದು ಅರ್ಥವ್ಯವಸ್ಥೆಗೂ ಮೀರಿ ಭಾರತದ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ಒಂದು ಕಾಲದಲ್ಲಿ ಭಾರತದ ರಫ್ತಿನ ಅಂಕಿ ಸಂಖ್ಯೆ ಕೆಲವೊಮ್ಮೆ 100 ಶತಕೋಟಿ ಇನ್ನು ಕೆಲವೊಮ್ಮೆ 150 ಶತಕೋಟಿ 200 ಶತಕೋಟಿವರೆಗೂ ತಲುಪುತ್ತಿತ್ತು. ಈಗ ಭಾರತ 400 ಶತಕೋಟಿ ಡಾಲರ್ ತಲುಪಿದೆ. ಇದರರ್ಥ ವಿಶ್ವಾದ್ಯಂತ ಭಾರತದಲ್ಲಿ ತಯಾರಿಸಲಾದ ವಸ್ತುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಮತ್ತೊಂದು ಅರ್ಥ ಸರಬರಾಜು ಸರಪಳಿ ದಿನೇ ದಿನೇ ಸಶಕ್ತಗೊಳ್ಳುತ್ತಿದೆ. ಇದರ ಹಿಂದೆ ಒಂದು ಪ್ರಮುಖ ಸಂದೇಶವೂ ನೀಡುತ್ತಿದೆ. ಕನಸುಗಳಿಗಿಂತ ಹಿರಿದಾದ ಸಂಕಲ್ಪವಿದ್ದಾಗ ದೇಶ ಬೃಹತ್ ಹೆಜ್ಜೆಯನ್ನು ಇಡುತ್ತದೆ. ಸಂಕಲ್ಪಗಳ ಪೂರೈಕೆಗೆ ಹಗಲಿರುಳು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಆ ಸಂಕಲ್ಪಗಳನ್ನು ಸಾಧಿಸಲಾಗುತ್ತದೆ. ಯಾವುದೇ ವ್ಯಕ್ತಿಯ ಜೀವನದಲ್ಲೂ ಹೀಗೆಯೇ ಆಗುವುದನ್ನು ನೀವು ಕಾಣಬಹುದು. ಯಾರದೇ ಸಂಕಲ್ಪ, ಪ್ರಯತ್ನಗಳು ಅವರ ಕನಸುಗಳನ್ನು ಮೀರಿ ಬೆಳೆಯುತ್ತವೆಯೋ ಆಗ ಸಫಲತೆ ಆತನ ಬಳಿ ತಾನಾಗೇ ಅರಸಿ ಬರುತ್ತದೆ.

ಭಾರತೀಯ ಸಂಸ್ಕೃತಿಯ ಕಂಪನವು ಯಾವಾಗಲೂ ಪ್ರಪಂಚದಾದ್ಯಂತದ ಜನರನ್ನು ಆಕರ್ಷಿಸುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

January 30th, 11:30 am

ಸ್ನೇಹಿತರೆ, ಆಜಾದಿ ಕೆ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ದೇಶ ಇಂಥ ಪ್ರಯತ್ನಗಳ ಮೂಲಕ ರಾಷ್ಟ್ರೀಯ ಪ್ರತಿಷ್ಠೆಯನ್ನು ಪುನಃ ಪ್ರತಿಸ್ಥಾಪಿಸುತ್ತಿದೆ. ಇಂಡಿಯಾ ಗೇಟ್ ಬಳಿಯ ‘ಅಮರ ಜವಾನ್ ಜ್ಯೋತಿ’ ಯನ್ನು ಹತ್ತಿರವೇ ‘ರಾಷ್ಟ್ರೀಯ ಯುದ್ಧ ಸ್ಮಾರಕ’ ದ ಜ್ಯೋತಿಗಳಲ್ಲಿ ಲೀನಗೊಳಿಸಿದ್ದೇವೆ ಎಂಬುದನ್ನು ನಾವು ನೋಡಿದ್ದೇವೆ. ಇಂಥ ಭಾವನಾತ್ಮಕ ಸಂದರ್ಭದಲ್ಲಿ ಬಹಳಷ್ಟು ದೇಶವಾಸಿಗಳು ಮತ್ತು ಹುತಾತ್ಮ ಕುಟುಂಬದವರ ಕಣ್ಣಲ್ಲಿ ನೀರು ಜಿನುಗಿತ್ತು. ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಸ್ವಾತಂತ್ರ್ಯಾ ನಂತರ ಹುತಾತ್ಮರಾದ ಎಲ್ಲ ಯೋಧರ ಹೆಸರುಗಳನ್ನು ಬರೆಯಲಾಗಿದೆ. ನನಗೆ ಸೇನೆಯ ಕೆಲವು ಮಾಜಿ ಯೋಧರು ಪತ್ರ ಬರೆದು ಹೀಗೆ ಹೇಳಿದ್ದಾರೆ – “ಹುತಾತ್ಮರ ನೆನಪುಗಳೆದುರು ಪ್ರಜ್ವಲಿಸುತ್ತಿರುವ ‘ಅಮರ ಜವಾನ್ ಜ್ಯೋತಿ’ ಹುತಾತ್ಮರು ಅಮರರಾಗಿರುವುದಕ್ಕೆ ಸಾಕ್ಷಿಯಾಗಿದೆ.” ಅಮರ ಜವಾನ್ ಜ್ಯೋತಿ’ ಯಂತೆ ಹುತಾತ್ಮರ ತ್ಯಾಗ ಮತ್ತು ಬಲಿದಾನವೂ ಅಮರವಾಗಿದೆ. ಅವಕಾಶ ಸಿಕ್ಕಾಗಲೆಲ್ಲ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಎಂದು ನಿಮ್ಮೆಲ್ಲರಿಗೂ ಹೇಳಬಯಸುತ್ತೇನೆ. ನಿಮ್ಮ ಕುಟುಂಬ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗಿ. ಇಲ್ಲಿ ನಿಮಗೆ ಒಂದು ವಿಭಿನ್ನವಾದ ಶಕ್ತಿ ಮತ್ತು ಪ್ರೇರಣೆಯ ಅನುಭವವಾಗುತ್ತದೆ.

2001ರ ಸಂಸತ್ ಭವನದ ಮೇಲಿನ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ

December 13th, 11:42 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2001ರಲ್ಲಿ ಸಂಸತ್ ಭವನದ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

PM condemns the the attack on the Assam Rifles convoy in Manipur

November 13th, 07:15 pm

The Prime Minister, Shri Narendra Modi has condemned the attack on the Assam Rifles convoy in Manipur. He paid homage to those soldiers and family members who have been martyred today.

ಹೊಸದಿಲ್ಲಿ ರಕ್ಷಣಾ ಕಚೇರಿ ಸಂಕೀರ್ಣಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಹಿಂದಿ ಭಾಷಣದ ಇಂಗ್ಲಿಷ್ ಅವತರಣಿಕೆಯ ಕನ್ನಡಾನುವಾದ.

September 16th, 11:01 am

ಕಾರ್ಯಕ್ರಮದಲ್ಲಿ ಹಾಜರಿರುವ ಕೇಂದ್ರ ಸಂಪುಟದಲ್ಲಿ ನನ್ನ ಹಿರಿಯ ಸಹೋದ್ಯೋಗಿಯಾಗಿರುವ ಶ್ರೀ ರಾಜನಾಥ್ ಸಿಂಗ್ ಜೀ, ಅಜಯ್ ಭಟ್ ಜೀ, ಕೌಶಲ್ ಕಿಶೋರ್ ಜೀ, ರಕ್ಷಣಾ ಸಿಬ್ಬಂದಿಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಮೂರೂ ಸೇವೆಗಳ ಮುಖ್ಯಸ್ಥರೇ, ಹಿರಿಯ ಅಧಿಕಾರಿಗಳೇ ಮತ್ತು ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ,

ಕಸ್ತೂರಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

September 16th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಕಸ್ತೂರಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂಗಳಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಿದರು. ಆಫ್ರಿಕಾ ಅವೆನ್ಯೂನಲ್ಲಿರುವ ರಕ್ಷಣಾ ಕಚೇರಿ ಸಂಕೀರ್ಣಕ್ಕೂ ಭೇಟಿ ನೀಡಿದ ಅವರು, ಸೇನೆ, ನೌಕಾಪಡೆ, ವಾಯುಪಡೆ ಮತ್ತು ನಾಗರಿಕ ಸೇವಾ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ಯಾವುದೇ ದೇಶವು ತನ್ನ ಹಿಂದಿನ ಭಯಾನಕತೆಯನ್ನು ನಿರ್ಲಕ್ಷಿಸುವುದು ಸರಿಯಲ್ಲ: ಪ್ರಧಾನಿ ಮೋದಿ

August 28th, 08:48 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಸ್ಮಾರಾಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನೂ ಉದ್ಘಾಟಿಸಿದರು. ಸಂಕೀರ್ಣವನ್ನು ನವೀಕರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.

ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ

August 28th, 08:46 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಸ್ಮಾರಾಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನೂ ಉದ್ಘಾಟಿಸಿದರು. ಸಂಕೀರ್ಣವನ್ನು ನವೀಕರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.

ನವೀಕರಿಸಿದ ಜಲಿಯನ್ ವಾಲಾಬಾಗ್ ಸ್ಮಾರಕದಿಂದ ಒಂದು ನೋಟ

August 27th, 07:38 am

ಜಲಿಯನ್ ವಾಲಾ ಬಾಗ್ ಸ್ಮಾರಕ್‌ನ ನವೀಕರಿಸಿದ ಸಂಕೀರ್ಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 28, ಶನಿವಾರದಂದು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸ್ಮಾರಕದಲ್ಲಿ ಅಭಿವೃದ್ಧಿಪಡಿಸಿದ ಮ್ಯೂಸಿಯಂ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ. ಈ ಸಂಕೀರ್ಣವು ಸಂಕೀರ್ಣವನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಕೈಗೊಂಡ ಬಹು ಅಭಿವೃದ್ಧಿ ಉಪಕ್ರಮಗಳನ್ನು ಪ್ರದರ್ಶಿಸುತ್ತದೆ.