ಸ್ವಾಮಿನಾರಾಯಣ ಶಿಕ್ಷಾಪತ್ರಿಯ ದ್ವಿಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

January 23rd, 02:12 pm

ಇಂದು ನಾವೆಲ್ಲರೂ ಒಂದು ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದ್ದೇವೆ. 200 ವರ್ಷಗಳ ಈ ಸಂದರ್ಭದಲ್ಲಿ, ಸ್ವಾಮಿನಾರಾಯಣ ಶಿಕ್ಷಾಪತ್ರಿಯ ದ್ವಿಶತಮಾನೋತ್ಸವ ಆಚರಣೆಯು, ನಾವೆಲ್ಲರೂ ಈ ಪವಿತ್ರ ಉತ್ಸವದಲ್ಲಿ ಭಾಗವಹಿಸುತ್ತಿರುವುದು ನಮಗೆಲ್ಲರಿಗೂ ಶುಭದ ಸಂಗತಿ. ಈ ಪವಿತ್ರ ಅವಧಿಯಲ್ಲಿ, ನಿಮ್ಮೆಲ್ಲ ಸಂತರಿಗೆ ನಾನು ನಮಸ್ಕರಿಸುತ್ತೇನೆ. ದ್ವಿಶತಮಾನೋತ್ಸವ ಉತ್ಸವದಂದು ಸ್ವಾಮಿನಾರಾಯಣರ ಕೋಟ್ಯಂತರ ಅನುಯಾಯಿಗಳನ್ನು ನಾನು ಅಭಿನಂದಿಸುತ್ತೇನೆ.

ʻಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವʼ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 23rd, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವʼದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗಿಯಾಗಿ ತಮ್ಮ ಮಾತುಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಗವಾನ್ ಸ್ವಾಮಿನಾರಾಯಣ ಅವರ ʻಶಿಕ್ಷಾಪತ್ರಿʼಯ 200ನೇ ವರ್ಷಾಚರಣೆಯ ವಿಶೇಷ ಸಂದರ್ಭಕ್ಕೆ ಇಂದು ಎಲ್ಲರೂ ಸಾಕ್ಷಿಯಾಗುತ್ತಿದ್ದಾರೆ ಎಂದು ಒತ್ತಿ ಹೇಳಿದರು. ದ್ವಿಶತಮಾನೋತ್ಸವ ಆಚರಣೆಯು ಈ ಪವಿತ್ರ ಸಂದರ್ಭದ ಭಾಗಿಯಾಗುವುದು ನಿಜಕ್ಕೂ ಪ್ರತಿಯೊಬ್ಬರ ಸೌಭಾಗ್ಯವೇ ಸರಿ ಎಂದರು. ಈ ಪವಿತ್ರ ಸಮಯದಲ್ಲಿ ಎಲ್ಲಾ ಸಂತರಿಗೆ ನಮಸ್ಕರಿಸುವುದಾಗಿ ಹೇಳಿದ ಶ್ರೀ ಮೋದಿ ಅವರು, ದ್ವಿಶತಮಾನೋತ್ಸವದ ಸಂದರ್ಭದಲ್ಲಿ ಭಗವಾನ್ ಸ್ವಾಮಿನಾರಾಯಣರ ಕೋಟ್ಯಂತರ ಅನುಯಾಯಿಗಳಿಗೆ ಶುಭಾಶಯಗಳನ್ನು ಕೋರಿದರು.

ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 03rd, 12:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು

January 03rd, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.

ನವದೆಹಲಿಯಲ್ಲಿ ನಡೆದ 2ನೇ ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್‌.ಒ)ಯ ಸಾಂಪ್ರದಾಯಿಕ ಔಷಧದ ಜಾಗತಿಕ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 19th, 08:11 pm

ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್‌.ಒ)ಯ ಮಹಾನಿರ್ದೇಶಕರಾದ ನಮ್ಮ ತುಳಸಿ ಭಾಯಿ ಡಾ. ಟೆಡ್ರೊಸ್, ಕೇಂದ್ರ ಆರೋಗ್ಯ ಸಚಿವರಾದ, ನನ್ನ ಸಹೋದ್ಯೋಗಿ ಜೆ. ಪಿ. ನಡ್ಡಾ ಜಿ, ಆಯುಷ್ ಖಾತೆ ರಾಜ್ಯ ಸಚಿವರಾದ ಪ್ರತಾಪ್‌ರಾವ್ ಜಾಧವ್ ಜಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಇತರೆ ದೇಶಗಳ ಸಚಿವರೆ, ವಿವಿಧ ರಾಷ್ಟ್ರಗಳ ರಾಯಭಾರಿಗಳೆ, ಎಲ್ಲಾ ಗಣ್ಯ ಪ್ರತಿನಿಧಿಗಳೆ, ಸಾಂಪ್ರದಾಯಿಕ ಔಷಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಗೌರವಾನ್ವಿತ ತಜ್ಞರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎರಡನೇ ಡಬ್ಲ್ಯು ಎಚ್‌ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು

December 19th, 07:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಎರಡನೇ ಡಬ್ಲ್ಯು ಎಚ್ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಕಳೆದ ಮೂರು ದಿನಗಳಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಕ್ಷೇತ್ರದಲ್ಲಿ ವಿಶ್ವದಾದ್ಯಂತದ ತಜ್ಞರು ಗಂಭೀರ ಮತ್ತು ಅರ್ಥಪೂರ್ಣ ಚರ್ಚೆಗಳಲ್ಲಿ ತೊಡಗಿದ್ದಾರೆ ಎಂದು ಎತ್ತಿ ತೋರಿಸಿದರು. ಈ ಉದ್ದೇಶಕ್ಕಾಗಿ ಭಾರತವು ಒಂದು ಬಲಿಷ್ಠ ವೇದಿಕೆಯಾಗಿ ಸೇವೆ ಸಲ್ಲಿಸುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು ಮತ್ತು ಈ ಪ್ರಕ್ರಿಯೆಯಲ್ಲಿ ಡಬ್ಲ್ಯು ಎಚ್ ಒ ದ ಸಕ್ರಿಯ ಪಾತ್ರವನ್ನು ಗಮನಿಸಿದರು. ಶೃಂಗಸಭೆಯ ಯಶಸ್ವಿ ಆಯೋಜನೆಗಾಗಿ ಅವರು ಡಬ್ಲ್ಯು ಎಚ್ ಒ , ಭಾರತ ಸರ್ಕಾರದ ಆಯುಷ್ ಸಚಿವಾಲಯ ಮತ್ತು ಉಪಸ್ಥಿತರಿದ್ದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.

ಮುಂದಿನ ದಶಕದ ಭಾರತ - ಜಪಾನ್ ಜಂಟಿ ಮುನ್ನೋಟ: ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮುನ್ನಡೆಸಲು ಎಂಟು ಮಾರ್ಗಗಳು

August 29th, 07:11 pm

ಕಾನೂನುಬದ್ಧ ಆಳ್ವಿಕೆಯ ಆಧಾರದ ಮೇಲೆ ಮುಕ್ತ, ತೆರೆದ, ಶಾಂತಿಯುತ, ಸಮೃದ್ಧ ಮತ್ತು ಸಂಘರ್ಷ-ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿರುವ ಎರಡು ದೇಶಗಳಾಗಿ, ಪೂರಕ ಸಂಪನ್ಮೂಲ ದತ್ತಿ, ತಾಂತ್ರಿಕ ಸಾಮರ್ಥ್ಯಗಳು ಮತ್ತು ವೆಚ್ಚ ಸ್ಪರ್ಧಾತ್ಮಕತೆಯನ್ನು ಹೊಂದಿರುವ ಎರಡು ಆರ್ಥಿಕತೆಗಳು ಮತ್ತು ಸ್ನೇಹ ಮತ್ತು ಪರಸ್ಪರ ಸದ್ಭಾವನೆಯ ದೀರ್ಘ ಸಂಪ್ರದಾಯವನ್ನು ಹೊಂದಿರುವ ಎರಡು ರಾಷ್ಟ್ರಗಳಾಗಿ, ಮುಂದಿನ ದಶಕದಲ್ಲಿ ನಮ್ಮ ದೇಶಗಳಲ್ಲಿ ಮತ್ತು ಪ್ರಪಂಚದಲ್ಲಿ ಒಟ್ಟಾರೆಯಾಗಿ ಬದಲಾವಣೆಗಳು ಮತ್ತು ಅವಕಾಶಗಳನ್ನು ಜಂಟಿಯಾಗಿ ನಿಭಾಯಿಸುವ ಉದ್ದೇಶವನ್ನು ಭಾರತ ಮತ್ತು ಜಪಾನ್ ವ್ಯಕ್ತಪಡಿಸುತ್ತವೆ, ನಮ್ಮ ಆಯಾ ದೇಶೀಯ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತವೆ ಮತ್ತು ನಮ್ಮ ದೇಶಗಳು ಹಾಗು ಮುಂದಿನ ಪೀಳಿಗೆಯ ಜನರನ್ನು ಹಿಂದೆಂದಿಗಿಂತಲೂ ಹೆಚ್ಚು ನಿಕಟವಾಗಿಸುತ್ತವೆ.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ

June 28th, 08:24 pm

ಇಂದು ನೀವು ನಿಮ್ಮ ಮಾತೃಭೂಮಿ ಭಾರತದ ಭೂಮಿಯಿಂದ ದೂರದಲ್ಲಿದ್ದೀರಿ, ಆದರೆ ನೀವು ಭಾರತೀಯರ ಹೃದಯಗಳಿಗೆ ಹತ್ತಿರವಾಗಿದ್ದೀರಿ. ನಿಮ್ಮ ಹೆಸರಿನಲ್ಲೇ ಶುಭವಿದೆ, ನಿಮ್ಮ ಪ್ರಯಾಣ ಹೊಸ ಯುಗದ ಆರಂಭವೂ ಆಗಿದೆ. ಈ ಸಮಯದಲ್ಲಿ ನಾವಿಬ್ಬರೂ ಮಾತನಾಡುತ್ತಿದ್ದೇವೆ, ಆದರೆ 140 ಕೋಟಿ ಭಾರತೀಯರ ಭಾವನೆಗಳು ನನ್ನೊಂದಿಗಿವೆ. ನನ್ನ ಧ್ವನಿಯು ಎಲ್ಲಾ ಭಾರತೀಯರ ಉತ್ಸಾಹ ಮತ್ತು ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಬಾಹ್ಯಾಕಾಶದಲ್ಲಿ ಭಾರತದ ಧ್ವಜ ಹಾರಿಸಿದ್ದಕ್ಕಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ. ನಾನು ಹೆಚ್ಚು ಸಮಯ ತೆಗೆದುಕೊಳ್ಳುತ್ತಿಲ್ಲ, ಆದ್ದರಿಂದ ಮೊದಲು ನನಗೆ ಹೇಳಿ, ಅಲ್ಲಿ ಎಲ್ಲವೂ ಸರಿಯಾಗಿದೆಯೇ? ನೀವು ಚೆನ್ನಾಗಿದ್ದೀರಾ?

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

June 28th, 08:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ಭಾರತೀಯ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಶುಭಾಂಶು ಅವರು ಪ್ರಸ್ತುತ ಭಾರತದ ಮಾತೃಭೂಮಿಯಿಂದ ಅತಿ ದೂರದಲ್ಲಿದ್ದರೂ, ಅವರು ಸಮಸ್ತ ಭಾರತೀಯರ ಹೃದಯಕ್ಕೆ ಅತ್ಯಂತ ಹತ್ತಿರವಾಗಿದ್ದಾರೆ, ಎಂದು ಬಣ್ಣಿಸಿದರು. ಶುಭಾಂಶು ಎಂಬ ಹೆಸರೇ ಶುಭ ಸೂಚಕವಾಗಿದ್ದು, ಅವರ ಈ ಪಯಣವು ಒಂದು ನವಯುಗದ ಆರಂಭಕ್ಕೆ ಮುನ್ನುಡಿಯಾಗಿದೆ, ಎಂದು ಶ್ರೀ ಮೋದಿ ನುಡಿದರು. ಇದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸಂಭಾಷಣೆಯಾಗಿದ್ದರೂ, ಇದರಲ್ಲಿ 140 ಕೋಟಿ ಭಾರತೀಯರ ಭಾವನೆಗಳು ಮತ್ತು ಉತ್ಸಾಹ ಅಡಗಿದೆ. ಶುಭಾಂಶು ಅವರೊಂದಿಗೆ ಮಾತನಾಡುತ್ತಿರುವ ಈ ಧ್ವನಿಯು, ಇಡೀ ರಾಷ್ಟ್ರದ ಸಾಮೂಹಿಕ ಹುಮ್ಮಸ್ಸು ಮತ್ತು ಹೆಮ್ಮೆಯನ್ನು ಹೊತ್ತಿದೆ, ಎಂದು ಅವರು ಹೇಳಿದರು. ಬಾಹ್ಯಾಕಾಶದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿದ್ದಕ್ಕಾಗಿ ಶುಭಾಂಶು ಅವರಿಗೆ ಪ್ರಧಾನಿಯವರು ಹೃತ್ಪೂರ್ವಕ ಅಭಿನಂದನೆಗಳನ್ನು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದರು. ಕೊನೆಯಲ್ಲಿ, ಪ್ರಧಾನಿಯವರು ಶುಭಾಂಶು ಅವರ ಯೋಗಕ್ಷೇಮವನ್ನು ವಿಚಾರಿಸಿದರು ಮತ್ತು ಬಾಹ್ಯಾಕಾಶ ನಿಲ್ದಾಣದಲ್ಲಿ ಎಲ್ಲವೂ ಸುಸೂತ್ರವಾಗಿದೆಯೇ ಎಂದು ಕೇಳಿದರು.

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.

“ಪರೀಕ್ಷಾ ಪೇ ಚರ್ಚಾ 2025” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

February 10th, 11:30 am

ಈ ಕಾರ್ಯಕ್ರಮಕ್ಕೆ ಇಷ್ಟೊಂದು ಮಕ್ಕಳು ನೋಂದಾಯಿಸಿಕೊಂಡಿರುವುದು ಒಂದು ದೊಡ್ಡ ಸೌಭಾಗ್ಯ, ಮತ್ತು ನಾವು ಅವರಲ್ಲಿ ಒಬ್ಬರಾಗಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2025ರ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು

February 10th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸುಂದರ್ ನರ್ಸರಿಯಲ್ಲಿ 8ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (ಪಿಪಿಸಿ) ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿಯವರು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ತಮ್ಮ ಅನೌಪಚಾರಿಕ ಸಂವಾದದಲ್ಲಿ ವ್ಯಾಪಕ ವಿಷಯಗಳ ಬಗ್ಗೆ ಚರ್ಚಿಸಿದರು. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಸಾಂಪ್ರದಾಯಿಕವಾಗಿ ನೀಡಲಾಗುವ ಎಳ್ಳಿನಿಂದ ತಯಾರಿಸಿದ ಸಿಹಿತಿಂಡಿಗಳನ್ನು ಅವರು ವಿತರಿಸಿದರು.

ಕುವೈತ್‌ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 21st, 06:34 pm

ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್‌ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.

ಕುವೈತ್‌ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು

December 21st, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್‌ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್‌ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತಿಯೊಬ್ಬರೂ ಧ್ಯಾನ ವನ್ನು ತಮ್ಮ ಜೀವನದ ಭಾಗವಾಗಿಸಿಕೊಳ್ಳಲು ಪ್ರಧಾನಮಂತ್ರಿ ಕರೆ

December 21st, 12:28 pm

ಇಂದು ವಿಶ್ವ ಧ್ಯಾನ ದಿನ. ಈ ಸಂದರ್ಭದಲ್ಲಿ ಧ್ಯಾನವನ್ನು ತಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕರೆ ನೀಡಿದ್ದಾರೆ. ಧ್ಯಾನವು ಒಬ್ಬರ ಜೀವನಕ್ಕೆ, ಹಾಗೆಯೇ ನಮ್ಮ ಸಮಾಜ ಮತ್ತು ಈ ಭೂಮಿಗೆ ಶಾಂತಿ ಮತ್ತು ಸೌಹಾರ್ದತೆಯನ್ನು ತರಲು ಪ್ರಬಲವಾದ ಮಾರ್ಗವಾಗಿದೆ ಎಂದು ಹೇಳಿದ್ದಾರೆ.