ಸಂಸತ್ತಿನ ಬಜೆಟ್ ಅಧಿವೇಶನ ಆರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 29th, 10:15 am

ನಿನ್ನೆ ಗೌರವಾನ್ವಿತ ರಾಷ್ಟ್ರಪತಿಗಳು ಮಾಡಿದ ಭಾಷಣವು 140 ಕೋಟಿ ದೇಶವಾಸಿಗಳ ಆತ್ಮವಿಶ್ವಾಸದ ಅಭಿವ್ಯಕ್ತಿಯಾಗಿತ್ತು, 140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದ ವರದಿ ಅದಾಗಿತ್ತು. 140 ಕೋಟಿ ನಾಗರಿಕರ ವಿಶೇಷವಾಗಿ ಯುವಕರ ಆಕಾಂಕ್ಷೆಗಳ ನಿಖರವಾದ ಅಭಿವ್ಯಕ್ತಿಯೂ ಅದಾಗಿತ್ತು. ಇದು ಎಲ್ಲಾ ಸಂಸತ್ ಸದಸ್ಯರಿಗೆ ಹಲವಾರು ಮಾರ್ಗದರ್ಶಿ ಆಲೋಚನೆಗಳನ್ನು ಸಹ ರೂಪಿಸಿತು. ಅಧಿವೇಶನದ ಆರಂಭದಲ್ಲಿ ಮತ್ತು 2026ರ ಆರಂಭದಲ್ಲಿ, ಗೌರವಾನ್ವಿತ ರಾಷ್ಟ್ರಪತಿಗಳು ಸದನದ ಮುಂದೆ ವ್ಯಕ್ತಪಡಿಸಿದ ನಿರೀಕ್ಷೆಗಳು, ಸರಳ ಪದಗಳಲ್ಲಿ ಮತ್ತು ರಾಷ್ಟ್ರದ ಒಬ್ಬ ಮುಖ್ಯಸ್ಥರ ಸಾಮರ್ಥ್ಯದಲ್ಲಿ ಆಳವಾದ ಭಾವನೆಗಳನ್ನು ಪ್ರತಿಬಿಂಬಿಸಿದೆ. ಸಂಸತ್ತಿನ ಎಲ್ಲಾ ಗೌರವಾನ್ವಿತ ಸದಸ್ಯರು ಅವುಗಳನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಈ ಅಧಿವೇಶನವು ಸಹ ಸ್ವತಃ ಬಹಳ ಮುಖ್ಯವಾಗಿದೆ. ಇದು ಬಜೆಟ್ ಅಧಿವೇಶನ.

2026ರ ಬಜೆಟ್ ಅಧಿವೇಶನದ ಪ್ರಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಪ್ರಾಸ್ತಾವಿಕ ಭಾಷಣ

January 29th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಆವರಣದಲ್ಲಿ 2026 ರ ಬಜೆಟ್ ಅಧಿವೇಶನ ಪ್ರಾರಂಭವಾಗುವ ಮೊದಲು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ರಾಷ್ಟ್ರಪತಿಯವರ ಭಾಷಣವು 140 ಕೋಟಿ ನಾಗರಿಕರ ವಿಶ್ವಾಸದ ಅಭಿವ್ಯಕ್ತಿಯಾಗಿದೆ, ಅವರ ಕಠಿಣ ಪರಿಶ್ರಮದ ಖಾತೆ ಮತ್ತು ಯುವಕರ ಆಕಾಂಕ್ಷೆಗಳ ನಿಖರವಾದ ಪ್ರತಿಬಿಂಬವಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. 2026 ರ ಅಧಿವೇಶನದ ಆರಂಭದಲ್ಲಿ ಮತ್ತು ಅದರ ಆರಂಭದಲ್ಲಿ ರಾಷ್ಟ್ರಪತಿಯವರು ಎಲ್ಲಾ ಸಂಸತ್ ಸದಸ್ಯರ ಮುಂದೆ ಹಲವಾರು ಮಾರ್ಗದರ್ಶಿ ಅಂಶಗಳನ್ನು ಇಟ್ಟಿದ್ದಾರೆ ಎಂದು ಅವರು ಹೇಳಿದರು. ರಾಷ್ಟ್ರದ ಮುಖ್ಯಸ್ಥರಾಗಿ ರಾಷ್ಟ್ರಪತಿಯವರು ಸರಳ ಪದಗಳಲ್ಲಿ ವ್ಯಕ್ತಪಡಿಸಿದ ನಿರೀಕ್ಷೆಗಳನ್ನು ಎಲ್ಲಾ ಸಂಸದರು ಖಂಡಿತವಾಗಿಯೂ ಗಂಭೀರವಾಗಿ ಪರಿಗಣಿಸುತ್ತಿದ್ದಾರೆ, ಹಾಗೂ ಈ ಅಧಿವೇಶನವು ಬಹಳ ಮಹತ್ವದ್ದಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. 21 ನೇ ಶತಮಾನದ ಮೊದಲ ತ್ರೈಮಾಸಿಕದ ಪೂರ್ಣಗೊಳಿಸುವಿಕೆ ಮತ್ತು ಎರಡನೇ ತ್ರೈಮಾಸಿಕದ ಆರಂಭವನ್ನು ಗುರುತಿಸುವ ಬಜೆಟ್ ಅಧಿವೇಶನ ಇದಾಗಿದೆ ಎಂದು ಅವರು ಹೇಳಿದರು. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲು ನಮಗೆ ಮುಂದಿನ 25 ವರ್ಷಗಳು ನಿರ್ಣಾಯಕವಾಗಿವೆ ಮತ್ತು ಈ ಬಜೆಟ್, ಈ ಶತಮಾನದ ಎರಡನೇ ತ್ರೈಮಾಸಿಕ ಅವಧಿಯಲ್ಲಿನ ಮೊದಲನೆಯ ಬಜೆಟ್ ಆಗಿದೆ ಎಂದು ಅವರು ಹೇಳಿದರು. ದೇಶದ ಮೊದಲ ಮಹಿಳಾ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ನಮ್ಮ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಸತತ ಒಂಬತ್ತನೇ ಬಾರಿಗೆ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ, ಇದು ಭಾರತದ ಸಂಸದೀಯ ಇತಿಹಾಸದಲ್ಲಿ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು.

ಸಂಸತ್ತಿನಲ್ಲಿ ಭಾರತದ ಸಾಂಸ್ಕೃತಿಕ ಮತ್ತು ಭಾಷಾ ವೈವಿಧ್ಯತೆಯನ್ನು ಬಿಂಬಿಸಿದ್ದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದ ಪ್ರಧಾನಮಂತ್ರಿ

December 23rd, 06:19 pm

ಲೋಕಸಭಾ ಭಾಷಣಗಳಲ್ಲಿ ಪ್ರಾದೇಶಿಕ-ಭಾಷೆಗಳಿಗೆ ಆದ್ಯತೆ ನೀಡುತ್ತಿರುವುದರಿಂದ ಭಾರತದ ಸಾಂಸ್ಕೃತಿಕ ಮತ್ತು ಭಾಷಾ ವೈವಿಧ್ಯತೆಯನ್ನು ಸಂಸತ್ತಿನಲ್ಲಿ ಬಿಂಬಿಸಿದ್ದಕ್ಕಾಗಿ ಸ್ಪೀಕರ್‌ ಓಂ ಬಿರ್ಲಾ ಜೀ ಮತ್ತು ಪಕ್ಷಾತೀತ ಸಂಸದರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಸಂಸತ್‌ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

August 11th, 11:00 am

ಶ್ರೀ ಓಂ ಬಿರ್ಲಾ ಜೀ, ಮನೋಹರ್‌ ಲಾಲ್‌ ಜೀ, ಕಿರಣ್‌ ರಿಜಿಜು ಜೀ, ಮಹೇಶ್‌ ಶರ್ಮಾ ಜೀ, ಎಲ್ಲಗೌರವಾನ್ವಿತ ಸಂಸತ್‌ ಸದಸ್ಯರು, ಲೋಕಸಭೆಯ ಪ್ರಧಾನ ಕಾರ್ಯದರ್ಶಿ, ಮಹಿಳೆಯರೇ ಮತ್ತು ಮಹನೀಯರೇ!

ನವದೆಹಲಿಯಲ್ಲಿ ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು

August 11th, 10:30 am

ನವದೆಹಲಿಯ ಬಾಬಾ ಖರಕ್ ಸಿಂಗ್ ಮಾರ್ಗದಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ 184 ಟೈಪ್-VII ಬಹುಮಹಡಿ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕರ್ತವ್ಯ ಪಥದಲ್ಲಿರುವ ಕರ್ತವ್ಯ ಭವನ ಎಂದು ಕರೆಯಲಾಗುವ ಸಾಮಾನ್ಯ ಕೇಂದ್ರ ಸಚಿವಾಲಯವನ್ನು ಇತ್ತೀಚೆಗೆ ಉದ್ಘಾಟಿಸಿದೆ ಮತ್ತು ಇಂದು ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಉದ್ಘಾಟಿಸುವ ಅವಕಾಶ ದೊರೆತಿದೆ ಎಂದು ಹೇಳಿದರು. ಭಾರತದ ನಾಲ್ಕು ಮಹಾ ನದಿಗಳಾದ ಕೃಷ್ಣಾ, ಗೋದಾವರಿ, ಕೋಸಿ ಮತ್ತು ಹೂಗ್ಲಿ ಹೆಸರುಗಳನ್ನು ಸಮುಚ್ಚಯದ ನಾಲ್ಕು ಗೋಪುರಗಳಿಗೆ ಇಡಲಾಗಿದೆ. ಲಕ್ಷಾಂತರ ಜನರಿಗೆ ಬದುಕು ನೀಡುವ ಈ ನದಿಗಳು ಈಗ ಸಾರ್ವಜನಿಕ ಪ್ರತಿನಿಧಿಗಳ ಜೀವನದಲ್ಲಿ ಹೊಸ ಸಂತೋಷದ ಅಲೆಯನ್ನು ತರುತ್ತವೆ ಎಂದು ಅವರು ಹೇಳಿದರು. ನದಿಗಳಿಗೆ ಹೆಸರಿಡುವ ಸಂಪ್ರದಾಯವು ದೇಶವನ್ನು ಏಕತೆಯ ಎಳೆಯಲ್ಲಿ ಬಂಧಿಸುತ್ತದೆ ಎಂದು ಅವರು ಹೇಳಿದರು. ಈ ಹೊಸ ಸಮುಚ್ಚಯವು ದೆಹಲಿಯಲ್ಲಿ ಸಂಸದರ ಜೀವನವನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ದೆಹಲಿಯಲ್ಲಿ ಸಂಸದರಿಗೆ ಸರ್ಕಾರಿ ವಸತಿ ಸೌಕರ್ಯಗಳು ಈಗ ಹೆಚ್ಚಾಗಲಿವೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು ಎಲ್ಲಾ ಸಂಸದರನ್ನು ಅಭಿನಂದಿಸಿದರು ಮತ್ತು ವಸತಿ ಸಮುಚ್ಚಯ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರನ್ನು ಶ್ಲಾಘಿಸಿದರು. ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಅವರು ಶ್ಲಾಘಿಸಿದರು.

ನವದೆಹಲಿಯಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾಗಿರುವ ಫ್ಲಾಟ್‌ಗಳನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

August 10th, 10:44 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಆಗಸ್ಟ್ 11 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನವದೆಹಲಿಯ ಬಾಬಾ ಖರಕ್ ಸಿಂಗ್ ಮಾರ್ಗದಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾಗಿರುವ 184 ಟೈಪ್-VII ಬಹುಮಹಡಿ ಫ್ಲಾಟ್‌ಗಳನ್ನು ಉದ್ಘಾಟಿಸಲಿದ್ದಾರೆ.

'ದಿ ಸಬರಮತಿ ರಿಪೋರ್ಟ್' ಸಿನಿಮಾ ವೀಕ್ಷಿಸಿದ ಪ್ರಧಾನಮಂತ್ರಿ

December 02nd, 08:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಎನ್ ಡಿ ಎ ಸಂಸತ್ ಸದಸ್ಯರೊಂದಿಗೆ 'ದಿ ಸಬರಮತಿ ರಿಪೋರ್ಟ್' ಚಲನಚಿತ್ರವನ್ನು ವೀಕ್ಷಿಸಿದರು.

ಮಾಜಿ ಸಂಸದ ಶ್ರೀ ಪ್ರಭಾತ್ ಝಾ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

July 26th, 01:05 pm

ಮಾಜಿ ಸಂಸತ್ ಸದಸ್ಯರಾದ ಶ್ರೀ ಪ್ರಭಾತ್ ಝಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಸದ ಡಿ.ಶ್ರೀನಿವಾಸ್ ಅವರ ನಿಧನಕ್ಕೆ ಪ್ರಧಾನಿಯವರಿಂದ ಸಂತಾಪ ಸೂಚನೆ

June 29th, 08:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಾಜಿ ರಾಜ್ಯಸಭಾ ಸದಸ್ಯ (ಸಂಸದ) ಶ್ರೀ ಡಿ. ಶ್ರೀನಿವಾಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರಿಗೆ ಭಾರತ ರತ್ನ ಪ್ರಶಸ್ತಿ: ಪ್ರಧಾನಿ

February 09th, 01:30 pm

ಶ್ರೀ ನರಸಿಂಹ ರಾವ್ ಅವರು ಪ್ರಧಾನ ಮಂತ್ರಿಯಾಗಿ ಭಾರತವನ್ನು ಜಾಗತಿಕ ಮಾರುಕಟ್ಟೆಗಳಿಗೆ ತೆರೆದು, ಆರ್ಥಿಕ ಅಭಿವೃದ್ಧಿಯ ಹೊಸ ಯುಗವನ್ನು ಬೆಳೆಸುವ ಮಹತ್ವದ ಕ್ರಮಗಳಿಂದ ಗುರುತಿಸಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

Rajya Sabha is a diverse university of six years, shaped by experiences: PM Modi

February 08th, 12:20 pm

PM Modi bid farewell to the retiring members of the Rajya Sabha. He said that the Members leaving for another public platform will hugely benefit from the experience in Rajya Sabha. “This is a perse university of six years, shaped by experiences. Anyone who goes out from here goes enriched and strengthens the work of nation-building, he said.

ನಿವೃತ್ತರಾಗುತ್ತಿರುವ ರಾಜ್ಯಸಭಾ ಸದಸ್ಯರಿಗೆ ಬೀಳ್ಕೊಡುಗೆ ನೀಡಿದ ಪ್ರಧಾನಿ

February 08th, 12:16 pm

ರಾಜ್ಯಸಭೆಯಲ್ಲಿ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಲೋಕಸಭೆಯು ಪ್ರತಿ ಐದು ವರ್ಷಗಳಿಗೊಮ್ಮೆ ಬದಲಾಗುತ್ತದೆ ಮತ್ತು ರಾಜ್ಯಸಭೆಯು ಪ್ರತಿ ಎರಡು ವರ್ಷಗಳಿಗೊಮ್ಮೆ ಹೊಸ ಜೀವನ ಚೈತನ್ಯ ಪಡೆಯುತ್ತದೆ ಎಂದರು. ಅಂತೆಯೇ, ದ್ವೈವಾರ್ಷಿಕ ಬೀಳ್ಕೊಡುಗೆಯು ಹೊಸ ಸದಸ್ಯರಿಗೆ ಅಳಿಸಲಾಗದ ನೆನಪುಗಳನ್ನು ಮತ್ತು ಅಮೂಲ್ಯ ಪರಂಪರೆಯನ್ನು ಉಳಿಸುತ್ತದೆ ಎಂದು ಪ್ರಧಾನಿ ಹೇಳಿದರು.

​​​​​​​ಸ್ಥಳೀಯ ಸಂಸದರ ಸಂಪರ್ಕ ಕಲ್ಪಿಸಲು ಸಹಾಯ ಮಾಡುವ ಮಹತ್ವದ ವಿಭಾಗ ಹೊಂದಿರುವ 'ನಮೋ ಆಪ್': ಪ್ರಧಾನಿ ಮೋದಿ

October 16th, 09:50 pm

ಸ್ಥಳೀಯ ಸಂಸದರೊಂದಿಗೆ ಸಂಪರ್ಕ ಸಾಧಿಸಲು ಸಹಾಯ ಮಾಡುವ ಮಹತ್ವದ ವಿಭಾಗವನ್ನು ನಮೋ ಆಪ್(NaMo App) ಹೊಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ವಿಭಾಗವು ನಮ್ಮ ಪ್ರಜಾಸತ್ತಾತ್ಮಕ ಚೈತನ್ಯವನ್ನು ಹೆಚ್ಚಿಸುವಲ್ಲಿ ಬಹಳ ದೂರ ಸಾಗುತ್ತದೆ ಎಂದು ಹೇಳಿದ್ದಾರೆ. ಸಂಬಂಧಿತ ಸ್ಥಳೀಯ ಸಂಸದರೊಂದಿಗೆ ಆಳವಾಗಿ ಸಂಪರ್ಕ ಸಾಧಿಸಲು ಇದು ಸುಲಭವಾದ ಮಾರ್ಗವನ್ನು ತೋರಿಸುತ್ತದೆ. ನಾಗರಿಕರು ಈ ಆಪ್ ಮೂಲಕ ಸಂಸದರೊಂದಿಗೆ ಸುಲಭವಾಗಿ ಸಂಪರ್ಕ ಸಾಧಿಸಬಹುದು ಮತ್ತು ಸರ್ಕಾರ ಆಯೋಜಿಸುವ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

​​​​​​​ಸಂವಿಧಾನದ [ನೂರಾ ಇಪ್ಪತ್ತೆಂಟನೇ ತಿದ್ದುಪಡಿ] ಮಸೂದೆ 2023 ಲೋಕಸಭೆಯಲ್ಲಿ ಅಂಗೀಕಾರ : ಪ್ರಧಾನಮಂತ್ರಿ ಶ್ಲಾಘನೆ

September 20th, 09:36 pm

ಲೋಕಸಭೆಯಲ್ಲಿ ಸಂವಿಧಾನ [ನೂರಾ ಇಪ್ಪತ್ತೆಂಟನೇ ತಿದ್ದುಪಡಿ] ಮಸೂದೆ 2023 ಅಂಗೀಕಾರವಾಗಿರುವುದನ್ನು ಪ್ರಧಾನಮಂತ್ರಿ ‍ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ.

ಎಸ್. ಫಾಂಗ್ನಾನ್ ಕೊನ್ಯಾಕ್ ಅವರು ನಾಗಾಲ್ಯಾಂಡ್ ನ ಮೊದಲ ರಾಜ್ಯಸಭೆ ಸದಸ್ಯೆ ಉಪಾಧ್ಯಕ್ಷ ಸಮಿತಿಗೆ ಸೇರ್ಪಡೆಯಾಗಿರುವುದಕ್ಕೆ ಪ್ರಧಾನ ಮಂತ್ರಿ ಸಂತಸ

July 25th, 08:16 pm

ಕಳೆದ ವಾರ ರಾಜ್ಯಸಭೆ ಸಭಾಪತಿ ಜಗದೀಪ್ ಧಂಖರ್ ಅವರು ಉಪಾಧ್ಯಕ್ಷರ ಸಮಿತಿಗೆ ಎಸ್ ಫಾಂಗ್ನಾನ್ ಕೊನ್ಯಾಕ್ ಅವರನ್ನು ನಾಮನಿರ್ದೇಶನ ಮಾಡಿದರು. ರಾಜ್ಯಸಭೆಗೆ ನಾಮನಿರ್ದೇಶನಗೊಂಡ ನಾಗಾಲ್ಯಾಂಡ್‌ ಮೂಲದ ಮೊದಲ ಸದಸ್ಯೆ ಎಸ್. ಫಾಂಗ್ನಾನ್ ಕೊನ್ಯಾಕ್ ಅವರಾಗಿದ್ದು ಅವರ ನಾಮನಿರ್ದೇಶನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ದೇಶದ ಸಮೃದ್ಧಿ ಉತ್ತಮ ಸಂಪರ್ಕ ವ್ಯವಸ್ಥೆಯಲ್ಲಿರುತ್ತದೆ ಮತ್ತು ಅದು ನಮ್ಮ ಆದ್ಯತೆಗಳಲ್ಲಿ ಅಗ್ರಸ್ಥಾನದಲ್ಲಿದೆ: ಪ್ರಧಾನಮಂತ್ರಿ

February 25th, 09:46 am

ಖಜಾನಿ ವಿಧಾನಸಭಾ ಕ್ಷೇತ್ರದ ಬೆಲ್‌ ಘಾಟ್‌ನಿಂದ ಸಿಕ್ರಿಗಂಜ್‌ ವರೆಗಿನ 8 ಕಿಲೋಮೀಟರ್ ಉದ್ದದ ರಸ್ತೆಯ ಅಗಲೀಕರಣವನ್ನು ಪೂರ್ಣಗೊಳಿಸಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಆ ಪ್ರದೇಶದ ಜನರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೇಲಿನ ರಸ್ತೆಯ ಅಗಲೀಕರಣದ ಕುರಿತು ಸಂತ ಕಬೀರ್ ನಗರದ ಸಂಸದರಾದ ಶ್ರೀ ಪ್ರವೀಣ್ ನಿಶಾದ್ ಅವರು ಮಾಡಿದ ಟ್ವೀಟ್‌ ಸಂದೇಶಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ.

2023 ಸಾಲಿನ ಸಂಸದ್ ರತ್ನ ಪ್ರಶಸ್ತಿ ಪಡೆಯಲಿರುವ ಸಂಸತ್ ಸಹೋದ್ಯೋಗಿಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ

February 22nd, 12:47 pm

ಸಂಸದ್ ರತ್ನ ಪ್ರಶಸ್ತಿ 2023 ಪಡೆಯಲಿರುವ ಸಂಸದ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಉತ್ತರ ಪ್ರದೇಶದ ಬಸ್ತಿಯಲ್ಲಿ 2 ನೇ ಸಂಸದ್ ಖೇಲ್ ಮಹಾಕುಂಭ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 18th, 04:39 pm

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ನಮ್ಮ ಯುವ ಸ್ನೇಹಿತ ಹರೀಶ್ ದ್ವಿವೇದಿ ಜೀ, ವಿವಿಧ ಕ್ರೀಡಾಪಟುಗಳು, ರಾಜ್ಯ ಸರ್ಕಾರದ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಹಿರಿಯ ಗಣ್ಯರು ಮತ್ತು ಹೆಚ್ಚಿನ ಸಂಖ್ಯೆಯ ಯುವಕರನ್ನು ನಾನು ಎಲ್ಲೆಡೆ ನೋಡಬಹುದು. ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

​​​​​​​ಬಸ್ತಿ ಜಿಲ್ಲೆಯಲ್ಲಿ 2022-23ನೇ ಸಾಲಿನ ಸಾನ್ಸದ್ ಖೇಲ್ ಮಹಾಕುಂಭದ ಎರಡನೇ ಹಂತವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ ಪ್ರಧಾನಿಮಂತ್ರಿಗಳು

January 18th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಾನ್ಸದ್ ಖೇಲ್ ಮಹಾಕುಂಭ 2022-23ರ ಎರಡನೇ ಹಂತವನ್ನು ಉದ್ಘಾಟಿಸಿದರು. ಸಾನ್ಸದ್ ಖೇಲ್ ಮಹಾಕುಂಭವನ್ನು 2021ರಿಂದ ಬಸ್ತಿ ಜಿಲ್ಲೆಯ ಸಂಸದ ಶ್ರೀ ಹರೀಶ್ ದ್ವಿವೇದಿಯವರು ಬಸ್ತಿ ಜಿಲ್ಲೆಯಲ್ಲಿ ಆಯೋಜಿಸುತ್ತಿದ್ದಾರೆ. ಖೇಲ್ ಮಹಾಕುಂಭವು ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಾದ ಕುಸ್ತಿ, ಕಬಡ್ಡಿ, ಖೋ ಖೋ, ಬ್ಯಾಸ್ಕೆಟ್ ಬಾಲ್, ಫುಟ್ಬಾಲ್, ಹಾಕಿ, ವಾಲಿಬಾಲ್, ಹ್ಯಾಂಡ್ ಬಾಲ್, ಚೆಸ್, ಕೇರಂ, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಮುಂತಾದ ವಿವಿಧ ಸ್ಪರ್ಧೆಗಳನ್ನು ಆಯೋಜಿಸುತ್ತದೆ. ಇದಲ್ಲದೆ, ಖೇಲ್ ಮಹಾಕುಂಭದಲ್ಲಿ ಪ್ರಬಂಧ ಬರೆಯುವುದು, ಚಿತ್ರಕಲೆ, ರಂಗೋಲಿ ಬಿಡಿಸುವುದು ಮುಂತಾದ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗಿತ್ತು.

ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭಕ್ಕೂ ಮುನ್ನ ಪ್ರಧಾನಿಯವರ ಹೇಳಿಕೆಗಳ ಪಠ್ಯ

December 07th, 10:00 am

ಇಂದು ಚಳಿಗಾಲದ ಅಧಿವೇಶನದ ಮೊದಲ ದಿನ. ಈ ಅಧಿವೇಶನವು ಮಹತ್ವದ್ದಾಗಿದೆ.ಏಕೆಂದರೆ ಈ ಮೊದಲು ನಾವು ಆಗಸ್ಟ್ 15 ರ ಮೊದಲು ಭೇಟಿಯಾಗಿದ್ದೆವು.ಆಗಸ್ಟ್ 15 ರಂದು, ಸ್ವಾತಂತ್ರ್ಯದ 75 ವರ್ಷಗಳು ಪೂರ್ಣಗೊಂಡಿದ್ದು, ಈಗ ನಾವು ಅಮೃತಕಾಲ ಪಯಣದಲ್ಲಿ ಮುನ್ನಡೆಯುತ್ತಿದ್ದೇವೆ. ನಮ್ಮ ಭಾರತ ದೇಶವು ಜಿ-20 ಅನ್ನು ಆಯೋಜಿಸುವ ಅವಕಾಶವನ್ನು ಪಡೆದಿರುವ ಸಮಯದಲ್ಲಿ ನಾವು ಇಂದು ಮತ್ತೆ ಭೇಟಿಯಾಗುತ್ತಿದ್ದೇವೆ. ವಿಶ್ವ ಸಮುದಾಯದಲ್ಲಿ ಭಾರತದ ಸ್ಥಾನವನ್ನು ಮೂಡಿಸಿದ ರೀತಿ, ಭಾರತದಿಂದ ನಿರೀಕ್ಷೆಗಳನ್ನು ಹೆಚ್ಚಿಸಿದ ರೀತಿ ಮತ್ತು ಜಾಗತಿಕ ವೇದಿಕೆಯಲ್ಲಿ ಭಾರತ ತನ್ನ ಭಾಗವಹಿಸುವಿಕೆಯನ್ನು ಹೆಚ್ಚಿಸುತ್ತಿರುವ ರೀತಿ, ಜಿ-20 ಅನ್ನು ಆಯೋಜಿಸುವುದು ಭಾರತದ ದೊಡ್ಡ ಸಾಧನೆಯಾಗಿದೆ.