The party governing Punjab today has neither clean intentions nor honesty: PM Modi in Jalandhar

July 17th, 04:31 pm

PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.

PM addresses an energy-packed public rally in Jalandhar, Punjab

July 17th, 04:30 pm

PM Modi addressed a massive public rally in Jalandhar, Punjab, where he highlighted the transformation of India's railway infrastructure, outlined the BJP's vision for a Viksit Punjab and called for a double-engine government to unlock the state's full potential. He also spoke about the growing opportunities for Punjab's youth through India's emerging sports economy.

ಮಧ್ಯಮ ವರ್ಗದವರಿಗೆ ಜೀವನ ಸುಗಮಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ

June 15th, 01:16 pm

ಮಧ್ಯಮ ವರ್ಗದವರಿಗೆ ಜೀವನ ಸುಗಮಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಲ್ಲೇಖಿಸಿದ್ದಾರೆ ಮತ್ತು ಮಧ್ಯಮ ವರ್ಗದ ಆಕಾಂಕ್ಷೆಗಳನ್ನು ಈಡೇರಿಸುವತ್ತ ಕೆಲಸ ಮಾಡುವುದು ಸರ್ಕಾರದ ಸೌಭಾಗ್ಯ ಎಂದು ಅವರು ಹೇಳಿದ್ದಾರೆ. ಮಧ್ಯಮ ವರ್ಗವು ರಾಷ್ಟ್ರ ನಿರ್ಮಾಣಕ್ಕೆ ಲೆಕ್ಕವಿಲ್ಲದಷ್ಟು ರೀತಿಯಲ್ಲಿ ಕೊಡುಗೆ ನೀಡಿದೆ ಎಂದು ಅವರು ತಿಳಿಸಿದರು.

ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಅವರ ಭಾಷಣ

February 01st, 01:38 pm

ಇಂದಿನ ಬಜೆಟ್ ಐತಿಹಾಸಿಕವಾಗಿದೆ; ಇದು ದೇಶದ ನಾರಿ ಶಕ್ತಿ (ಮಹಿಳಾ ಶಕ್ತಿ) ಯ ಪ್ರಬಲ ಪ್ರತಿಬಿಂಬವಾಗಿದೆ. ಮಹಿಳಾ ಹಣಕಾಸು ಸಚಿವೆಯಾಗಿ, ನಿರ್ಮಲಾ ಅವರು ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದೆ. ಈ ಬಜೆಟ್ ಪ್ರಸ್ತುತ ಕನಸುಗಳನ್ನು ಸಾಕಾರಗೊಳಿಸುತ್ತದೆ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ. 2047ರ ಹೊತ್ತಿಗೆ 'ವಿಕಸಿತ ಭಾರತ'ದ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಉನ್ನತ ಹಾರಾಟಕ್ಕೆ ಈ ಬಜೆಟ್ ಬಲವಾದ ಅಡಿಪಾಯವಾಗಿದೆ.

ಕೇಂದ್ರ ಬಜೆಟ್ 2026ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ

February 01st, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 2026ರ ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಇಂದಿನ ಬಜೆಟ್ ಐತಿಹಾಸಿಕವಾಗಿದ್ದು, ದೇಶದ ಮಹಿಳೆಯರ ಸಬಲೀಕರಣದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಹಣಕಾಸು ಸಚಿವರಾಗಿ, ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದ್ದು, ವರ್ತಮಾನದ ಕನಸುಗಳನ್ನು ನನಸಾಗಿಸುವ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುವ ಕೆಲಸ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಉನ್ನತ ಮಟ್ಟದ ಹಾರಾಟ ನಡೆಸಲು ಈ ಬಜೆಟ್ ಅಡಿಪಾಯವಾಗಿದೆ ಎಂದು ಅವರು ಒತ್ತಿ ಹೇಳಿದರು.

ಸ್ಟಾರ್ಟಪ್ ಇಂಡಿಯಾ ಮಹತ್ವಾಕಾಂಕ್ಷಿ ಉಪಕ್ರಮ 1 ದಶಕ ಗುರುತಿಸುವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 16th, 01:30 pm

ಇದೀಗ ಸ್ಟಾರ್ಟಪ್‌ ಜಗತ್ತಿನ ಕೆಲವು ಜನರನ್ನು ಭೇಟಿ ಮಾಡಲು, ಅವರ ಸಾಧನೆಗಳು ಮತ್ತು ಪ್ರಯೋಗಗಳನ್ನು ನೋಡಲು ಮತ್ತು ಅವರಲ್ಲಿ ಕೆಲವರೊಂದಿಗೆ ಚರ್ಚೆ ನಡೆಸಲು ನನಗೆ ಅವಕಾಶ ಸಿಕ್ಕಿದೆ. ಕೃಷಿ, ಹಣಕಾಸು ತಂತ್ರಜ್ಞಾನ, ಚಲನಶೀಲತೆ, ಆರೋಗ್ಯ ಮತ್ತು ಸುಸ್ಥಿರತೆಯಲ್ಲಿ ಕೆಲಸ ಮಾಡುತ್ತಿರುವ ಸ್ಟಾರ್ಟಪ್‌ಗಳು - ಅವರ ಆಲೋಚನೆಗಳು ನನಗೆ ಮಾತ್ರವಲ್ಲದೆ ಎಲ್ಲರಿಗೂ ಪ್ರಭಾವಶಾಲಿಯಾಗಿವೆ. ಆದರೂ, ನನ್ನನ್ನು ಹೆಚ್ಚು ಪ್ರಭಾವಿತಗೊಳಿಸಿದ್ದು ನಿಮ್ಮ ಆತ್ಮವಿಶ್ವಾಸ ಮತ್ತು ನಿಮ್ಮ ಮಹತ್ವಾಕಾಂಕ್ಷೆಗಳೇ ಕಾರಣವಾಗಿವೆ.

ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:14 pm

ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:13 pm

ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.