Seva Sankalp Resolution

February 24th, 04:53 pm

In resolute commitment to ‘Viksit Bharat 2047’, the historic first meeting of the Union Cabinet was held at the new Prime Minister’s Office, ‘Seva Teerth’, under the chairmanship of PM Modi. The Union Cabinet reiterated its resolve that every decision taken will be guided by a spirit of service towards 1.4 billion citizens and aligned with the broader goal of nation-building, reflecting the sentiment of ‘Nagrik Devo Bhava’.

ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ

October 24th, 11:20 am

ಈ ಬಾರಿ ಬೆಳಕಿನ ಹಬ್ಬ ದೀಪಾವಳಿ ನಿಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಯ ನಡುವೆ, ಅಂದರೆ ಆಚರಣೆಯ 2 ಪಟ್ಟು ಸಂತೋಷ ಮತ್ತು ಯಶಸ್ಸಿನ ನಡುವೆ, ಕಾಯಂ ಉದ್ಯೋಗದ ನೇಮಕಾತಿ ಪತ್ರ ಪಡೆದಿರುವ ಈ ಸಂತೋಷವನ್ನು ಇಂದು ದೇಶದ 51 ಸಾವಿರಕ್ಕೂ ಹೆಚ್ಚು ಯುವಕರು ಸ್ವೀಕರಿಸಿದ್ದಾರೆ. ನಿಮ್ಮ ಎಲ್ಲಾ ಕುಟುಂಬಗಳಲ್ಲಿ ಎಷ್ಟು ಸಂತೋಷ ತುಂಬಿದೆ ಎಂಬುದು ನನಗೆ ತಿಳಿದಿದೆ. ನಿಮಗೆ ಮತ್ತು ನಿಮ್ಮ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಜೀವನದಲ್ಲಿ ಈ ಹೊಸ ಆರಂಭಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.

ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

October 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಈ ವರ್ಷದ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಗಳ ನಡುವೆ, ಕಾಯಂ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಸ್ವೀಕರಿಸುವುದು ಹಬ್ಬದ ಮೆರಗು ಮತ್ತು ಉದ್ಯೋಗದ ಯಶಸ್ಸು ಎರಡರಲ್ಲೂ ದುಪ್ಪಟ್ಟು ಸಂತೋಷ ನೀಡುತ್ತದೆ. ಈ ಸಂತೋಷವು ಇಂದು ದೇಶಾದ್ಯಂತ 51,000ಕ್ಕೂ ಹೆಚ್ಚು ಯುವಕರನ್ನು ತಲುಪಿದೆ. ಇದು ಅವರ ಕುಟುಂಬಗಳಿಗೆ ಅಪಾರ ಸಂತೋಷ ತಂದಿದೆ. ಉದ್ಯೋಗ ನೇಮಕಾತಿ ಪತ್ರ ಪಡೆದ ಎಲ್ಲಾ ಯುವಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ಅಭಿನಂದನೆಗಳನ್ನು ಸಲ್ಲಿಸಿದರು. ಅವರ ಜೀವನದ ಈ ಹೊಸ ಆರಂಭಕ್ಕಾಗಿ ಅವರು ಶುಭಾಶಯಗಳನ್ನು ತಿಳಿಸಿದರು.

ಮಾರಿಷಸ್ ಪ್ರಧಾನಮಂತ್ರಿ ಅವರ ಭಾರತ ಭೇಟಿ: ಫಲಪ್ರದತೆಯ ವಿವರ

September 11th, 02:10 pm

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಮಾರಿಷಸ್ ಗಣರಾಜ್ಯದ ತೃತೀಯ ಶಿಕ್ಷಣ, ವಿಜ್ಞಾನ ಮತ್ತು ಸಂಶೋಧನಾ ಸಚಿವಾಲಯದ ನಡುವೆ ಒಪ್ಪಂದ

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 11th, 12:30 pm

ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.

ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 10th, 01:30 pm

ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,

ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 10th, 01:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.

ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 06th, 07:00 pm

ಕೇಂದ್ರ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂಸತ್ ಸದಸ್ಯರೆ, ಎಲ್ಲಾ ಸರ್ಕಾರಿ ನೌಕರರೆ, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

August 06th, 06:30 pm

ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ಕರ್ತವ್ಯ ಭವನ-3 ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರಾಂತಿಯ ಮಾಸವಾದ ಆಗಸ್ಟ್, ಆಗಸ್ಟ್ 15 ಕ್ಕೆ ಮುನ್ನವೇ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಂದಿದೆ ಎಂದು ಹೇಳಿದರು. ಆಧುನಿಕ ಭಾರತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಧನೆಗಳಿಗೆ ಭಾರತ ಸಾಕ್ಷಿಯಾಗುತ್ತಿದೆ ಎಂದು ಅವರು ಹೇಳಿದರು. ನವದೆಹಲಿಯ ಇತ್ತೀಚಿನ ಮೂಲಸೌಕರ್ಯಗಳಾದ ಕರ್ತವ್ಯ ಪಥ, ಹೊಸ ಸಂಸತ್ತು ಕಟ್ಟಡ, ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣ, ಭಾರತ ಮಂಟಪ, ಯಶೋಭೂಮಿ, ಹುತಾತ್ಮರಿಗೆ ಸಮರ್ಪಿತವಾದ ರಾಷ್ಟ್ರೀಯ ಯುದ್ಧ ಸ್ಮಾರಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕರ್ತವ್ಯ ಭವನದ ನಿರ್ಮಾಣ ಮುಂತಾದದವುಗಳನ್ನು ಪಟ್ಟಿಮಾಡಿದರು. ಇವು ಕೇವಲ ಹೊಸ ಕಟ್ಟಡಗಳು ಅಥವಾ ಸಾಮಾನ್ಯ ಮೂಲಸೌಕರ್ಯಗಳಲ್ಲ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ , ಅಮೃತ ಕಾಲದಲ್ಲಿ, ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸುವ ನೀತಿಗಳನ್ನು ಈ ಕಟ್ಟಡಗಳಲ್ಲಿ ರೂಪಿಸಲಾಗುತ್ತಿದೆ ಮತ್ತು ಮುಂಬರುವ ದಶಕಗಳಲ್ಲಿ, ರಾಷ್ಟ್ರದ ದಿಕ್ಕನ್ನು ಈ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಹೇಳಿದರು. ಕರ್ತವ್ಯ ಭವನದ ಉದ್ಘಾಟನೆಗಾಗಿ ಎಲ್ಲಾ ನಾಗರಿಕರನ್ನು ಅಭಿನಂದಿಸಿದ ಅವರು, ಅದರ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್‌ ಗಳು ಮತ್ತು ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು.

ಪ್ರಧಾನಮಂತ್ರಿ ಅವರಿಂದ ರೋಜ್‌ ಗಾರ್ ಮೇಳದಡಿ ಜುಲೈ 12 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಅಧಿಕ ನೇಮಕಾತಿ ಪತ್ರಗಳ ವಿತರಣೆ

July 11th, 11:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ 12 ರಂದು ಬೆಳಿಗ್ಗೆ 11:00 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಅಧಿಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಹೊಸದಾಗಿ ನೇಮಕಗೊಂಡಿರುವವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ರೋಜ್‌ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 26th, 11:23 am

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

April 26th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿಯವರ ಭಾಷಣ

April 21st, 11:30 am

ನನ್ನ ಸಂಪುಟ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಶಕ್ತಿಕಾಂತ ದಾಸ್ ಜಿ, ಡಾ. ಸೋಮನಾಥನ್ ಜಿ, ಇತರ ಹಿರಿಯ ಅಧಿಕಾರಿಗಳು, ದೇಶಾದ್ಯಂತ ನಾಗರಿಕ ಸೇವೆಗಳ ಎಲ್ಲಾ ಸಹೋದ್ಯೋಗಿಗಳು, ಮಹಿಳೆಯರೇ ಮತ್ತು ಮಹನೀಯರೇ!

17ನೇ ನಾಗರಿಕ ಸೇವಾ ದಿನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

April 21st, 11:00 am

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ 17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗರಿಕ ಸೇವೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಯವರ ಪ್ರಶಸ್ತಿಗಳನ್ನು ಸಹ ಅವರು ಪ್ರದಾನ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು ಮತ್ತು ಸಂವಿಧಾನದ 75ನೇ ವರ್ಷ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಾದ ಈ ವರ್ಷದ ಆಚರಣೆಯ ಮಹತ್ವವನ್ನು ಎತ್ತಿ ತೋರಿಸಿದರು. ಏಪ್ರಿಲ್ 21, 1947 ರಂದು ಸರ್ದಾರ್ ಪಟೇಲ್ ಅವರು 'ಭಾರತದ ಉಕ್ಕಿನ ಚೌಕಟ್ಟು' ಎಂದು ನಾಗರಿಕ ಸೇವಕರನ್ನು ಬಣ್ಣಿಸಿದ ಐತಿಹಾಸಿಕ ಹೇಳಿಕೆಯನ್ನು ಸ್ಮರಿಸಿದ ಶ್ರೀ ಮೋದಿ, ಶಿಸ್ತು, ಪ್ರಾಮಾಣಿಕತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ, ಅತ್ಯಂತ ಸಮರ್ಪಣಾಬಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಅಧಿಕಾರಶಾಹಿಯನ್ನು ಕುರಿತ ಪಟೇಲ್‌ ಅವರ ದೃಷ್ಟಿಕೋನವನ್ನು ಒತ್ತಿ ಹೇಳಿದರು. ಭಾರತವು ವಿಕಸಿತ ಭಾರತವಾಗುವ ಸಂಕಲ್ಪದ ಸಂದರ್ಭದಲ್ಲಿ ಸರ್ದಾರ್ ಪಟೇಲ್ ಅವರ ಆದರ್ಶಗಳ ಪ್ರಸ್ತುತತೆಯನ್ನು ಅವರು ಒತ್ತಿ ಹೇಳಿದರು ಮತ್ತು ಸರ್ದಾರ್ ಪಟೇಲ್ ಅವರ ದೃಷ್ಟಿಕೋನ ಮತ್ತು ಪರಂಪರೆಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.

ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ ಅಡಿಯಲ್ಲಿ 71,000ಕ್ಕೂ ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 23rd, 11:00 am

ನನ್ನ ಸಂಪುಟ ಸಹೋದ್ಯೋಗಿಗಳು, ದೇಶದಾದ್ಯಂತದ ಇತರ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!

ರೋಜ್‌ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್‌ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಶಕ್ತಗೊಳಿಸುತ್ತದೆ.

ಡಿಸೆಂಬರ್ 23 ರಂದು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ರೋಜ್‌ ಗಾರ್ ಮೇಳದಲ್ಲಿ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಮಂತ್ರಿ

December 22nd, 09:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 23 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕವಾಗಿರುವ ಸುಮಾರು 71 ಸಾವಿರಕ್ಕೂ ಅಧಿಕ ಮಂದಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಸರೆನ್ಸ್‌ ಮೂಲಕ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ

2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ

December 13th, 12:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ.

ರೋಜ್ ಗಾರ್ ಮೇಳದ ಅಡಿಯಲ್ಲಿ 51,000+ ನೇಮಕಾತಿ ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

October 29th, 11:00 am

ದೇಶದ ವಿವಿಧ ಭಾಗಗಳಿಂದ ನಮ್ಮ ಜೊತೆಗೆ ಸೇರಿರುವ ನನ್ನ ಸಂಪುಟ ಸಹೋದ್ಯೋಗಿಗಳು, ಸಂಸತ್ ಸದಸ್ಯರು, ವಿಧಾನಸಭೆಗಳ ಸದಸ್ಯರು, ರಾಷ್ಟ್ರದ ಯುವ ಸ್ನೇಹಿತರು, ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

October 29th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಉದ್ಯೋಗ ಮೇಳ ಬಿಂಬಿಸುತ್ತದೆ. ಇದು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಬಲಗೊಳಿಸುತ್ತದೆ.