ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶ

August 23rd, 11:00 am

ರಾಷ್ಟ್ರೀಯ ಬಾಹ್ಯಾಕಾಶ ದಿನದಂದು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ವರ್ಷದ ಬಾಹ್ಯಾಕಾಶ ದಿನದ ವಿಷಯ 'ಆರ್ಯಭಟದಿಂದ ಗಗನಯಾನಕ್ಕೆ: ಪ್ರಾಚೀನ ಜ್ಞಾನದಿಂದ ಅನಂತ ಸಾಧ್ಯತೆಗಳಿಗೆ'. ಇದು ಭೂತಕಾಲದ ವಿಶ್ವಾಸ ಮತ್ತು ಭವಿಷ್ಯದ ಸಂಕಲ್ಪವನ್ನು ಸಾಕಾರಗೊಳಿಸುತ್ತದೆ. ಇಂದು ಇಷ್ಟು ಕಡಿಮೆ ಅವಧಿಯಲ್ಲಿ, ರಾಷ್ಟ್ರೀಯ ಬಾಹ್ಯಾಕಾಶ ದಿನವು ನಮ್ಮ ಯುವಕರಿಗೆ ಉತ್ಸಾಹ ಮತ್ತು ಸ್ಫೂರ್ತಿಯ ಸೆಲೆಯಾಗಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಇದು ನಿಜಕ್ಕೂ ರಾಷ್ಟ್ರಕ್ಕೆ ಅಪಾರ ಹೆಮ್ಮೆ ತರುವ ವಿಷಯವಾಗಿದೆ. ರಾಷ್ಟ್ರೀಯ ಬಾಹ್ಯಾಕಾಶ ದಿನದಂದು ಬಾಹ್ಯಾಕಾಶ ವಲಯದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ನಮ್ಮ ವಿಜ್ಞಾನಿಗಳಿಗೆ ಮತ್ತು ಎಲ್ಲಾ ಯುವಕರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇತ್ತೀಚೆಗೆ ಭಾರತವು 'ಖಗೋಳಶಾಸ್ತ್ರ ಮತ್ತು ಖಗೋಳ ಭೌತಶಾಸ್ತ್ರದ ಅಂತಾರಾಷ್ಟ್ರೀಯ ಒಲಿಂಪಿಯಾಡ್' ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ, ವಿಶ್ವಾದ್ಯಂತದ 60ಕ್ಕೂ ಹೆಚ್ಚು ದೇಶಗಳಿಂದ ಸುಮಾರು 300 ಯುವ ಪ್ರತಿನಿಧಿಗಳು ಭಾಗವಹಿಸಿದ್ದರು. ನಮ್ಮ ಭಾರತೀಯ ಯುವಕರು ಸಹ ಪದಕಗಳನ್ನು ಗೆದ್ದಿದ್ದಾರೆ. ಈ ಒಲಿಂಪಿಯಾಡ್ ಬಾಹ್ಯಾಕಾಶ ವಲಯದಲ್ಲಿ ಭಾರತದ ಉದಯೋನ್ಮುಖ ನಾಯಕತ್ವದ ಸಂಕೇತವಾಗಿದೆ.

2025ನೇ ಸಾಲಿನ ʻರಾಷ್ಟ್ರೀಯ ಬಾಹ್ಯಾಕಾಶ ದಿನʼದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

August 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ರಾಷ್ಟ್ರೀಯ ಬಾಹ್ಯಾಕಾಶ ದಿನ- 2025’ರ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿಯವರು, ಆರ್ಯಭಟದಿಂದ ಗಗನಯಾನದವರೆಗೆ ಎಂಬ ಈ ವರ್ಷದ ಧ್ಯೇಯವಾಕ್ಯವು ಭಾರತದ ಗತಕಾಲದ ವಿಶ್ವಾಸ ಮತ್ತು ಅದರ ಭವಿಷ್ಯದ ಸಂಕಲ್ಪ ಎರಡನ್ನೂ ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಅತ್ಯಲ್ಪ ಕಾಲದಲ್ಲಿ, ʻರಾಷ್ಟ್ರೀಯ ಬಾಹ್ಯಾಕಾಶ ದಿನʼವು ಭಾರತದ ಯುವಕರಿಗೆ ಉತ್ಸಾಹ ಮತ್ತು ಆಕರ್ಷಣೆಯ ಸಂದರ್ಭವಾಗಿ ಮಾರ್ಪಟ್ಟಿದೆ, ಇದು ರಾಷ್ಟ್ರೀಯ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದರು. ವಿಜ್ಞಾನಿಗಳು ಮತ್ತು ಯುವಕರು ಸೇರಿದಂತೆ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ವ್ಯಕ್ತಿಗಳಿಗೆ ಅವರು ಶುಭಾಶಯಗಳನ್ನು ತಿಳಿಸಿದರು. ಭಾರತವು ಪ್ರಸ್ತುತ ಖಗೋಳ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರ ಕುರಿತ ಅಂತಾರಾಷ್ಟ್ರೀಯ ಒಲಿಂಪಿಯಾಡ್ಗೆ ಆತಿಥ್ಯ ವಹಿಸುತ್ತಿದ್ದು, ಅರವತ್ತಕ್ಕೂ ಹೆಚ್ಚು ದೇಶಗಳ ಸುಮಾರು 300 ಯುವ ಸ್ಪರ್ಧಿಗಳು ಅದರಲ್ಲಿ ಭಾಗವಹಿಸುತ್ತಿದ್ದಾರೆ ಎಂದರು. ಈ ಸ್ಪರ್ಧೆಯಲ್ಲಿ ಅನೇಕ ಭಾರತೀಯ ಸ್ಪರ್ಧಿಗಳು ಪದಕಗಳನ್ನು ಗೆದ್ದಿರುವುದಕ್ಕೆ ಶ್ರೀ ಮೋದಿ ಸಂತಸ ವ್ಯಕ್ತಪಡಿಸಿದರು. ಈ ಒಲಿಂಪಿಯಾಡ್ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಉದಯೋನ್ಮುಖ ಜಾಗತಿಕ ನಾಯಕತ್ವದ ಸಂಕೇತವಾಗಿದೆ ಎಂದು ಅವರು ಹೇಳಿದರು. ಯುವಜನರಲ್ಲಿ ಬಾಹ್ಯಾಕಾಶದ ಬಗ್ಗೆ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸಲು, ʻಭಾರತೀಯ ಬಾಹ್ಯಾಕಾಶ ಹ್ಯಾಕಥಾನ್ʼ ಮತ್ತು ʻರೊಬೊಟಿಕ್ಸ್ ಚಾಲೆಂಜ್ʼ ನಂತಹ ಉಪಕ್ರಮಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ʻಇಸ್ರೋʼ) ಪ್ರಾರಂಭಿಸಿದೆ ಎಂದು ಪ್ರಧಾನಮಂತ್ರಿ ಸಂತೋಷ ವ್ಯಕ್ತಪಡಿಸಿದರು. ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಜೇತರನ್ನು ಅವರು ಅಭಿನಂದಿಸಿದರು.

'ಮನ್ ಕಿ ಬಾತ್' (119ನೇ ಸಂಚಿಕೆ) ಪ್ರಸಾರ ದಿನಾಂಕ: 23.02.2025

February 23rd, 11:30 am

എന്റെ പ്രിയപ്പെട്ട നാട്ടുകാരേ, നമസ്‌കാരം. നിങ്ങളെയെല്ലാം 'മൻ കി ബാത്തിലേക്ക്' സ്വാഗതം ചെയ്യുന്നു. ചാമ്പ്യൻസ് ട്രോഫി ഇപ്പോൾ നടന്നുകൊണ്ടിരിക്കുകയാണ്. എല്ലാം ക്രിക്കറ്റ് മയമാണ്. ക്രിക്കറ്റിൽ ഒരു സെഞ്ചുറിയുടെ ആവേശം എന്താണെന്ന് നമുക്കെല്ലാവർക്കും നന്നായി അറിയാം, പക്ഷേ ഇന്ന് ഞാൻ നിങ്ങളോട് ക്രിക്കറ്റിനെക്കുറിച്ചല്ല, മറിച്ച് ഭാരതം ബഹിരാകാശത്ത് നേടിയ അത്ഭുതകരമായ സെഞ്ചുറിയെക്കുറിച്ചാണ് സംസാരിക്കുന്നത്. കഴിഞ്ഞ മാസം, ഐഎസ്ആർഒയുടെ നൂറാമത്തെ റോക്കറ്റിന്റെ വിക്ഷേപണത്തിന് രാജ്യം സാക്ഷ്യം വഹിച്ചു. ഇത് വെറുമൊരു അക്കമല്ല, ബഹിരാകാശ ശാസ്ത്രത്തിൽ പുതിയ ഉയരങ്ങൾ കീഴടക്കാനുള്ള നമ്മുടെ ദൃഢനിശ്ചയത്തിന്റെ പ്രതിഫലനമാണ്. നമ്മുടെ ബഹിരാകാശ യാത്ര വളരെ സാധാരണമായ രീതിയിലാണ് ആരംഭിച്ചത്. ഓരോ ഘട്ടത്തിലും വെല്ലുവിളികൾ ഉണ്ടായിരുന്നു, പക്ഷേ നമ്മുടെ ശാസ്ത്രജ്ഞർ വിജയികളായി മുന്നേറിക്കൊണ്ടിരുന്നു. കാലക്രമേണ, ബഹിരാകാശ മേഖലയിലെ നമ്മുടെ വിജയങ്ങളുടെ പട്ടിക വളരെ നീണ്ടതായി. വിക്ഷേപണ വാഹന നിർമ്മാണമായാലും, ചന്ദ്രയാൻ, മംഗൾയാൻ, ആദിത്യ എൽ-1 എന്നിവയുടെ വിജയമായാലും, ഒറ്റ റോക്കറ്റ് ഉപയോഗിച്ച് 104 ഉപഗ്രഹങ്ങളെ ഒറ്റയടിക്ക് ബഹിരാകാശത്തേക്ക് അയയ്ക്കുക എന്ന അഭൂതപൂർവമായ ദൗത്യമായാലും - ഇസ്രോയുടെ വിജയങ്ങളുടെ വ്യാപ്തി വളരെ വലുതാണ്. കഴിഞ്ഞ 10 വർഷത്തിനുള്ളിൽ മാത്രം ഏകദേശം 460 ഉപഗ്രഹങ്ങൾ വിക്ഷേപിച്ചു, ഇതിൽ മറ്റ് രാജ്യങ്ങളുടെ നിരവധി ഉപഗ്രഹങ്ങളും ഉൾപ്പെടുന്നു. സമീപ വർഷങ്ങളിലെ ഒരു പ്രധാന കാര്യം നമ്മുടെ ബഹിരാകാശ ശാസ്ത്രജ്ഞരുടെ സംഘത്തിൽ സ്ത്രീശക്തിയുടെ പങ്കാളിത്തം തുടർച്ചയായി വർദ്ധിച്ചുകൊണ്ടിരിക്കുകയാണ് എന്നതാണ്. ഇന്ന് നമ്മുടെ യുവാക്കൾക്ക് ബഹിരാകാശ മേഖല പ്രിയപ്പെട്ടതായി മാറിയതിൽ എനിക്ക് വളരെ സന്തോഷമുണ്ട്. ഈ മേഖലയിലെ സ്റ്റാർട്ടപ്പുകളുടെയും സ്വകാര്യ മേഖലയിലെ ബഹിരാകാശ കമ്പനികളുടെയും എണ്ണം നൂറുകണക്കിന് എത്തുമെന്ന് കുറച്ച് വർഷങ്ങൾക്ക് മുമ്പുവരെ ആരാണ് കരുതിയിരുന്നത്! ജീവിതത്തിൽ ഉൾപുളകം ഉണ്ടാക്കുന്നതും ആവേശകരവുമായ എന്തെങ്കിലും ചെയ്യാൻ ആഗ്രഹിക്കുന്ന നമ്മുടെ യുവാക്കൾക്ക്, ബഹിരാകാശ മേഖല ഒരു മികച്ച ഓപ്ഷനായി മാറുകയാണ്.

ಕುವೈತ್‌ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 21st, 06:34 pm

ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್‌ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.

ಕುವೈತ್‌ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು

December 21st, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್‌ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್‌ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನೈಜೀರಿಯಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

November 17th, 07:20 pm

ಇಂದು, ನೀವು ನಿಜವಾಗಿಯೂ ಅಬುಜಾದಲ್ಲಿ ಅದ್ಭುತ ವಾತಾವರಣವನ್ನು ಸೃಷ್ಟಿಸಿದ್ದೀರಿ. ನಿನ್ನೆ ಸಂಜೆಯಿಂದ ಎಲ್ಲವನ್ನೂ ನೋಡಿದಾಗ, ನಾನು ಅಬುಜಾದಲ್ಲಿಲ್ಲ ಆದರೆ ಭಾರತದ ನಗರದಲ್ಲಿ ಇದ್ದೇನೆ ಎಂದು ಅನಿಸುತ್ತದೆ. ನಿಮ್ಮಲ್ಲಿ ಅನೇಕರು ಲಾಗೋಸ್, ಕಾನೊ, ಕಡುನಾ ಮತ್ತು ಪೋರ್ಟ್ ಹಾರ್ಕೋರ್ಟ್ ನಿಂದ ಅಬುಜಾಗೆ ಪ್ರಯಾಣಿಸಿದ್ದೀರಿ, ವಿವಿಧ ಸ್ಥಳಗಳಿಂದ ಬಂದಿದ್ದೀರಿ ಮತ್ತು ನಿಮ್ಮ ಮುಖದ ಮೇಲಿನ ಹೊಳಪು, ನೀವು ಹೊರಸೂಸುವ ಶಕ್ತಿ ಮತ್ತು ಉತ್ಸಾಹವು ಇಲ್ಲಿರಲು ನಿಮ್ಮ ಉತ್ಸುಕತೆಯನ್ನು ಪ್ರತಿಬಿಂಬಿಸುತ್ತದೆ. ನಾನು ಕೂಡ ನಿಮ್ಮನ್ನು ಭೇಟಿಯಾಗುವ ಈ ಅವಕಾಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ನನಗೆ ಅಪಾರ ನಿಧಿಯಾಗಿದೆ. ನಿಮ್ಮ ನಡುವೆ ಇದ್ದು, ನಿಮ್ಮೊಂದಿಗೆ ಸಮಯ ಕಳೆಯುವುದರಿಂದ, ಈ ಕ್ಷಣಗಳು ನನ್ನ ಜೀವಮಾನವಿಡೀ ನೆನಪಿನಲ್ಲಿ ಉಳಿಯುತ್ತವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೈಜೀರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ

November 17th, 07:15 pm

ಪ್ರಧಾನಮಂತ್ರಿಯಾಗಿ ನೈಜೀರಿಯಾಕ್ಕೆ ಇದು ಅವರ ಮೊದಲ ಭೇಟಿ ಎಂದು ಹೇಳಿದ ಶ್ರೀ ಮೋದಿ, ತಮ್ಮೊಂದಿಗೆ ಕೋಟ್ಯಂತರ ಭಾರತೀಯರ ಶುಭ ಹಾರೈಕೆಗಳನ್ನು ತಂದಿರುವೆನು ಎಂದು ಹೇಳಿದರು. ನೈಜೀರಿಯಾದಲ್ಲಿರುವ ಭಾರತೀಯರ ಪ್ರಗತಿಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದು ಅವರು ಹೇಳಿದರು. ಅಧ್ಯಕ್ಷ ಟಿನುಬು ಮತ್ತು ನೈಜೀರಿಯಾದ ಜನರಿಗೆ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಶ್ರೀ ಮೋದಿ ಅವರು ಎಲ್ಲಾ ವಿನಮ್ರತೆಯೊಂದಿಗೆ ಪ್ರಶಸ್ತಿಯನ್ನು ಕೋಟಿಗಟ್ಟಲೆ ಭಾರತೀಯರಿಗೆ ಅರ್ಪಿಸಿದರು.

ಕೇರಳದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

February 27th, 12:24 pm

ಕೇರಳದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಜೀ, ನನ್ನ ಸಹೋದ್ಯೋಗಿ ಮತ್ತು ರಾಜ್ಯ ಸಚಿವ ಶ್ರೀ ವಿ. ಮುರಳೀಧರನ್, ಇಸ್ರೋ ಕುಟುಂಬದ ಎಲ್ಲರೂ ನಮಸ್ಕಾರ!

ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಪ್ರಧಾನಿ ಭೇಟಿ

February 27th, 12:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (ವಿಎಸ್ ಎಸ್ ಸಿ)ಗೆ ಭೇಟಿ ನೀಡಿದ್ದರು ಮತ್ತು ಸುಮಾರು 1800 ಕೋಟಿ ರೂ. ಮೌಲ್ಯದ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ಯೋಜನೆಗಳಲ್ಲಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಎಸ್ ಎಲ್ ವಿ ಇಂಟಿಗ್ರೇಷನ್ ಫೆಸಿಲಿಟಿ (ಪಿಐಎಫ್ ); ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ಹೊಸ 'ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಇಂಜಿನ್ ಮತ್ತು ಸ್ಟೇಜ್ ಟೆಸ್ಟ್ ಸೌಲಭ್ಯ'; ಮತ್ತು ತಿರುವನಂತಪುರಂನ ವಿಎಸ್ ಎಸ್ ಸಿಯಲ್ಲಿ ‘ಟ್ರೈಸಾನಿಕ್ ವಿಂಡ್ ಟನಲ್’ ಒಳಗೊಂಡಿವೆ. ಶ್ರೀ ನರೇಂದ್ರ ಮೋದಿ ಅವರು ಗಗನಯಾನ ಮಿಷನ್‌ನ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ನಾಲ್ಕು ಗಗನಯಾತ್ರಿಗಳಿಗೆ 'ಗಗನಯಾತ್ರಿ ರೆಕ್ಕೆಗಳನ್ನು' ನೀಡಿದರು. ಆ ಗಗನಯಾತ್ರಿಗಳೆಂದರೆ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಮಹಾನ್ ವ್ಯಕ್ತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಮಂತ್ರಿ

March 12th, 03:21 pm

ಸ್ವಾತಂತ್ರ್ಯ ಆಂದೋಲನದ ಎಲ್ಲಾ ಚಳವಳಿಗಳು, ದಂಗೆ, ಹೋರಾಟ ಮತ್ತು ಹೋರಾಟಗಾರರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಯಶೋಗಾಥೆಯಲ್ಲಿ ಸರಿಯಾಗಿ ಗುರುತಿಸಲಾಗದ ಚಳವಳಿ, ಹೋರಾಟಗಳು ಮತ್ತು ವ್ಯಕ್ತಿತ್ವಗಳಿಗೆ ಅವರು ವಿಶೇಷ ಗೌರವ ಸಲ್ಲಿಸಿದರು. ಅಹಮದಾಬಾದ್ ನ ಸಾಬರಮತಿ ಆಶ್ರಮದಲ್ಲಿಂದು “ ಸ್ವಾತಂತ್ರ್ಯದ ಅಮೃತ ಮಹೋತ್ಸವ “ಭಾರತ@75” ಉದ್ಘಾಟಿಸಿ ಅವರು ಮಾತನಾಡಿದರು.

“ಅಜಾದಿ ಕಾ ಅಮೃತ್ ಮಹೋತ್ಸವ್” ಪೂರ್ವಭಾವೀ ಕಾರ್ಯಕ್ರಮಗಳ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

March 12th, 10:31 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಭಾರತ@75 “ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಪೂರ್ವಭಾವಿ ಚಟುವಟಿಕೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

March 12th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Our scientific institutions should align with future requirements and try to find solutions for local problems: PM

February 28th, 04:01 pm

Conferring the Shanti Swarup Bhatnagar Prizes, PM Modi today said that India deserves nothing but the best, when it comes to innovations in the field of science and technology. He added that science must be fundamental, while on the other hand, technology must be local.

"ವಿಜ್ಞಾನ ಮತ್ತು ತಂತ್ರಜ್ಞಾನಕ್ಕಾಗಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಮಂತ್ರಿ "

February 28th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯ ವಿಜ್ಞಾನಭವನದಲ್ಲಿ ನಡೆದ ಸಮಾರಂಭದಲ್ಲಿ 2016, 2017 ಮತ್ತು 2018ನೇ ಸಾಲಿನ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ ಪ್ರಧಾನಮಂತ್ರಿಯವರು, ವಿಜ್ಞಾನ, ತಂತ್ರಜ್ಞಾನ ಮತ್ತು ನಾವಿನ್ಯತೆ ಸಮಾಜದ ಅಶೋತ್ತರ ಮತ್ತು ಅಗತ್ಯಗಳಿಗೆ ಸಂಪರ್ಕಿತವಾಗಿರಬೇಕು ಎಂದು ಹೇಳಿದರು.

Mission Mangalam: Empowering Women!

September 06th, 03:42 pm

Mission Mangalam: Empowering Women!

Hon'ble CM invites corporate houses of India, abroad to partner Gujarat’s ‘Mission Mangalam’ project

February 10th, 06:12 am

Hon'ble CM invites corporate houses of India, abroad to partner Gujarat’s ‘Mission Mangalam’ project

More than 35 private companies keen to invest Rs.20,000 crore through Mission Manglam in Gujarat

January 28th, 08:03 pm

More than 35 private companies keen to invest Rs.20,000 crore through Mission Manglam in Gujarat