ಶ್ರೀ ಎಂ.ಟಿ.ವಾಸುದೇವನ್ ನಾಯರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

December 26th, 10:16 am

ಮಲಯಾಳಂ ಚಿತ್ರರಂಗ ಮತ್ತು ಸಾಹಿತ್ಯದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರಾದ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮಾನವ ಭಾವನೆಗಳ ಆಳವಾದ ಅನ್ವೇಷಣೆಯೊಂದಿಗೆ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ಕೃತಿಗಳು ಹಲವು ಪೀಳಿಗೆಗಳನ್ನು ರೂಪಿಸಿವೆ ಮತ್ತು ಇನ್ನೂ ಅನೇಕರಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.