ಪಶ್ಚಿಮ ಬಂಗಾಳ, ಒಡಿಶಾ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಎಂಟು ಜಿಲ್ಲೆಗಳನ್ನು ಒಳಗೊಂಡ ನಾಲ್ಕು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ; ಇದು ಭಾರತೀಯ ರೈಲ್ವೆಯ ಪ್ರಸ್ತುತ ಜಾಲವನ್ನು ಸುಮಾರು 410 ಕಿ.ಮೀ ಹೆಚ್ಚಿಸಲಿದೆ

August 19th, 03:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ರೈಲ್ವೆ ಸಚಿವಾಲಯದ ಒಟ್ಟು ಸುಮಾರು 9,450 ಕೋಟಿ ರೂ. ವೆಚ್ಚದ ನಾಲ್ಕು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಹೀಗಿವೆ:

80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಉದ್ದೇಶಿಸಿ ಕೆಂಪುಕೋಟೆಯ ಮೇಲಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

August 15th, 07:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.

80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 15th, 06:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ವಂದೇ ಮಾತರಂನ 150ನೇ ವರ್ಷವನ್ನು ಆಚರಿಸುವಾಗ ದೇಶಾದ್ಯಂತ ಪ್ರತಿ ಹೃದಯದ ಬಡಿತ ಮತ್ತು ಮನೆ ತ್ರಿವರ್ಣ ಧ್ವಜದ ಚೈತನ್ಯ ಮತ್ತು ಹೊಸ ಸಂಕಲ್ಪಗಳೊಂದಿಗೆ ಪ್ರತಿಧ್ವನಿಸುತ್ತದೆ ಎಂದು ಹೇಳಿದ ಅವರು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ತ್ಯಾಗದ ಮಹಾನ್ ಸಂಪ್ರದಾಯವನ್ನು ಜಾಗೃತಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾನ್ ಕ್ರಾಂತಿಕಾರಿಗಳಿಗೆ ನಾನು ಗೌರವಪೂರ್ವಕವಾಗಿ ನಮಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದರು.

ಭಾರತವು 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ

August 15th, 06:45 am

80 ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 140 ಕೋಟಿ ಭಾರತೀಯರ ಶಕ್ತಿ ಮತ್ತು ಸಂಕಲ್ಪದಿಂದ 2047 ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಕನಸಿನ ಬಗ್ಗೆ ಮಾತನಾಡಿದರು. ಅವರು ಶಾಂತಿ ಕಾಯ್ದೆ, ರೈಲ್ವೆ ವಿದ್ಯುದೀಕರಣ, ಭಾರತದ ವ್ಯಾಪಾರ ಒಪ್ಪಂದಗಳು, ನಕ್ಸಲಿಸಂನ ಅಂತ್ಯ ಮತ್ತು ಇನ್ನೂ ಹೆಚ್ಚಿನ ಪ್ರಮುಖ ಉಪಕ್ರಮಗಳನ್ನು ಎತ್ತಿ ತೋರಿಸಿದರು. 'ಶಕ್ತಿ ಕಿ ಸಪ್ತಧಾರ'ವನ್ನು ಅಳವಡಿಸಿಕೊಳ್ಳಲು ಅವರು ರಾಷ್ಟ್ರಕ್ಕೆ ಕರೆ ನೀಡಿದರು.

ಕರ್ನಾಟಕ ಮತ್ತು ಆಂಧ್ರಪ್ರದೇಶದಾದ್ಯಂತ ಮೂರು ಜಿಲ್ಲೆಗಳನ್ನು ಒಳಗೊಂಡಂತೆ ಒಂದು ಬಹು-ಟ್ರ್ಯಾಕಿಂಗ್ ಯೋಜನೆಗೆ ಸಂಪುಟ ಅನುಮೋದನೆ, ಭಾರತೀಯ ರೈಲ್ವೆಯ ಪ್ರಸ್ತುತ ಜಾಲ ಸುಮಾರು 46 ಕಿ.ಮೀ.ಗಳಷ್ಟು ವಿಸ್ತರಣೆ

July 24th, 04:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿರುವ ಬಳ್ಳಾರಿ - ಗುಂತಕಲ್ ವಿಭಾಗದ 3 ನೇ ಮತ್ತು 4 ನೇ ರೈಲು ಮಾರ್ಗಕ್ಕೆ ಸುಮಾರು ₹1,264 ಕೋಟಿ ಒಟ್ಟು ವೆಚ್ಚದಲ್ಲಿ ಅನುಮೋದನೆ ನೀಡಿದೆ.

ಮ್ಯಾನ್ಮಾರ್ ಅಧ್ಯಕ್ಷರ ಭಾರತದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ-ಮ್ಯಾನ್ಮಾರ್ ಜಂಟಿ ಹೇಳಿಕೆ

June 01st, 07:16 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಮ್ಯಾನ್ಮಾರ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರಾದ ಯು ಮಿನ್ ಆಂಗ್ ಹ್ಲೇಂಗ್ ಅವರು 30 ಮೇ ನಿಂದ 3 ಜೂನ್ 2026 ರವರೆಗೆ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯನ್ನು ನೀಡಿದರು.

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

April 28th, 05:30 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳೆ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಜಿ, ಉತ್ತರ ಪ್ರದೇಶದ ಸಂಸದ ಮತ್ತು ಯುಪಿ ಬಿಜೆಪಿ ಅಧ್ಯಕ್ಷರಾದ ಶ್ರೀ ಪಂಕಜ್ ಚೌಧರಿ ಜಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಹೋದರಿ ಪೂನಂ ಮೌರ್ಯ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಕಾಶಿಯ ಮಹಿಳಾ ಕೌನ್ಸಿಲರ್‌ಗಳು ಮತ್ತು ಗ್ರಾಮ ಮುಖ್ಯಸ್ಥರೆ, ಇತರೆ ಜನಪ್ರತಿನಿಧಿಗಳೆ ಮತ್ತು ಇಲ್ಲಿಗೆ ಬಂದಿರುವ ನನ್ನ ತಾಯಂದಿರು, ಸಹೋದರಿಯರು ಮತ್ತು ಹೆಣ್ಣು ಮಕ್ಕಳೆ ನಿಮ್ಮೆಲ್ಲರಿಗೂ ನಮಸ್ಕಾರ.

ವಾರಣಾಸಿಯಲ್ಲಿ ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಸುಮಾರು 6,350 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ

April 28th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಣಾಸಿಯಲ್ಲಿ ನಡೆದ ಸಮಾವೇಶದಲ್ಲಿ ಬೃಹತ್ ಮಹಿಳಾ ಸಭೆಯನ್ನುದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ಮಾಡಿದರು.

ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ

April 26th, 03:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 28 ರಂದು ಸಂಜೆ 5 ಗಂಟೆಗೆ ಪ್ರಧಾನಮಂತ್ರಿಯವರು ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ, ಅವರು ವಾರಣಾಸಿಯಲ್ಲಿ ಸುಮಾರು 6,350 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಂತ Iರ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 28th, 12:15 pm

ಉದ್ಘಾಟನೆ ನೆರವೇರಿದೆಯೇ? ಉದ್ಘಾಟನೆ ನೆರವೇರಿದೆಯೇ? ಇನ್ನೂ ಇಲ್ಲ, ಈಗ ಅರ್ಧ ಕೆಲಸ ಮಾತ್ರವೇ ಮುಗಿದಿದೆ. ನಾನು ಆ ಪರದೆಯನ್ನು ಮಾತ್ರ ಸರಿಸಿದ್ದೇನೆ, ಆದರೆ ಇಂದು ಈ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ಇಲ್ಲಿ ಹಾಜರಿರುವ ನೀವೆಲ್ಲರೂ ಮಾಡಬೇಕೆಂದು ನಾನು ಬಯಸುತ್ತೇನೆ. ಆದ್ದರಿಂದ, ನಿಮ್ಮ ಮೊಬೈಲ್ ಫೋನ್‌ಗಳನ್ನು ಹೊರತೆಗೆಯಿರಿ, ನಿಮ್ಮ ಮೊಬೈಲ್ ಫೋನ್‌ನ ದೀಪವನ್ನು ಆನ್ ಮಾಡಿ, ನೀವೇ ಅದನ್ನು ಉದ್ಘಾಟಿಸುತ್ತಿದ್ದೀರಿ. ದೀಪವನ್ನು ಬೆಳಗುವ ಮೂಲಕ, ಇಲ್ಲಿ ಹಾಜರಿರುವ ಪ್ರತಿಯೊಬ್ಬರೂ ಇಂದು ಈ ವಿಮಾನ ನಿಲ್ದಾಣವನ್ನು ಉದ್ಘಾಟಿಸುತ್ತಿದ್ದಾರೆ. ಇದು ನಿಮ್ಮ ಆಸ್ತಿ, ಇದು ನಿಮ್ಮ ಭವಿಷ್ಯ, ಇದು ನಿಮ್ಮ ಕಠಿಣ ಪರಿಶ್ರಮ. ಆದ್ದರಿಂದ ಇದರ ಉದ್ಘಾಟನೆಯನ್ನು ನಿಮ್ಮ ಕೈಗಳಿಂದಲೇ ಮಾಡಲಾಗುತ್ತಿದೆ. ಭಾರತ ಮಾತೆಗೆ ಜಯವಾಗಲಿ ಎಂದು ಹೇಳುವ ಮೂಲಕ, ನಿಮ್ಮ ಕೈಗಳನ್ನು ಮೇಲಕ್ಕೆತ್ತಿ, ದೀಪವನ್ನು ಸಂಪೂರ್ಣ ತೋರಿಸಿ. ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ತುಂಬು ಧನ್ಯವಾದಗಳು. ಈಗ ಉದ್ಘಾಟನೆ ಪೂರ್ಣವಾಗಿದೆ.

ಸುಮಾರು ₹11,200 ಕೋಟಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲಾದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ I ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 28th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜೇವರ್‌ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಮ್ಮ ಹೆಮ್ಮೆ ಮತ್ತು ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ , ಇಂದು ವಿಕ್ಷಿತ್ ಯುಪಿ, ವಿಕಸಿತ ಭಾರತ ಅಭಿಯಾನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ ಎಂದು ಹೇಳಿದರು. ಭಾರತದ ಅತಿದೊಡ್ಡ ರಾಜ್ಯವು ಈಗ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂಬುದರತ್ತ ಅವರು ಗಮನ ಸೆಳೆದರು. ಮೊದಲನೆಯದಾಗಿ, ಈ ವಿಮಾನ ನಿಲ್ದಾಣದ ಅಡಿಪಾಯವನ್ನು ಹಾಕಿದ್ದಕ್ಕಾಗಿ ಮತ್ತು ಈಗ ಅದನ್ನು ಉದ್ಘಾಟಿಸಿದ್ದಕ್ಕಾಗಿ ಹಾಗು ಎರಡನೆಯದಾಗಿ, ಈ ಭವ್ಯ ವಿಮಾನ ನಿಲ್ದಾಣದ ಹೆಸರು ಉತ್ತರ ಪ್ರದೇಶದೊಂದಿಗೆ ಸಂಬಂಧ ಹೊಂದಿರುವುದರಿಂದಾಗಿ ತಮಗೆ ಎರಡು ಪಟ್ಟು ಹೆಮ್ಮೆಯಾಗಿದೆ ಎಂದು ಪ್ರಧಾನಮಂತ್ರಿ ಮೋದಿ ಸಂತಸ ಹಂಚಿಕೊಂಡರು. ನನ್ನನ್ನು ತನ್ನ ಪ್ರತಿನಿಧಿಯಾಗಿ ಆಯ್ಕೆ ಮಾಡಿ ಸಂಸತ್ ಸದಸ್ಯನನ್ನಾಗಿ ಮಾಡಿದ ರಾಜ್ಯ ಇದು, ಮತ್ತು ಅದರ ಗುರುತು ಈಗ ಈ ಭವ್ಯ ವಿಮಾನ ನಿಲ್ದಾಣದೊಂದಿಗೆ ಸಂಬಂಧ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು.

Cabinet approves 4 lane construction from Barabanki to Bahraich in Uttar Pradesh worth Rs.6969.04 crore

March 18th, 04:10 pm

The Cabinet Committee on Economic Affairs, chaired by PM Narendra Modi has approved construction of 4-Lane Access-Controlled National Highway-927 from Barabanki to Bahraich in Uttar Pradesh worth Rs.6969.04 crore. The project will bypass major habitations, increase average travel speeds, reduce travel time to about one hour, and improve overall road safety, fuel efficiency, and vehicle operating costs.

ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ 5 ಜಿಲ್ಲೆಗಳನ್ನು ಒಳಗೊಂಡ ಎರಡು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದ್ದು, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 192 ಕಿ.ಮೀ.ಗಳಷ್ಟು ಹೆಚ್ಚಿಸಿದೆ.

March 10th, 04:19 pm

ಪ್ರಧಾನಿ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಾದ್ಯಂತ ಐದು ಜಿಲ್ಲೆಗಳನ್ನು ಒಳಗೊಂಡ ₹4,474 ಕೋಟಿ ಮೌಲ್ಯದ ಎರಡು ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಯೋಜಿಸಲಾದ ಈ ಯೋಜನೆಗಳು, ಈ ಪ್ರದೇಶದ ಜನರನ್ನು ಆತ್ಮನಿರ್ಭರರನ್ನಾಗಿ ಮಾಡುವ ಪ್ರಧಾನಮಂತ್ರಿಯವರ ನವ ಭಾರತ ದೃಷ್ಟಿಕೋನಕ್ಕೆ ಅನುಗುಣವಾಗಿವೆ.

"ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರಗೊಳಿಸುವುದು ಮತ್ತು ಬಲಪಡಿಸುವುದು" ವಿಷಯ ಕುರಿತ ಬಜೆಟ್ ನಂತರದ ವೆಬಿನಾರ್‌ನಲ್ಲಿ ಪ್ರಧಾನಮಂತ್ರಿ ಅವರ ಭಾಷಣ

March 03rd, 11:30 am

ಉತ್ಪಾದನೆ, ಸರಕು ಸಾಗಣೆ, ನಮ್ಮ ಎಂಎಸ್ಎಂಇಗಳು, ಸಣ್ಣ ಕೈಗಾರಿಕೆಗಳು, ಗುಡಿ ಕೈಗಾರಿಕೆಗಳು, ನಮ್ಮ ಸಣ್ಣ ಮತ್ತು ದೊಡ್ಡ ನಗರಗಳು - ಅವು ವಿಭಿನ್ನವಾಗಿ ಕಂಡುಬಂದರೂ - ಇವೆಲ್ಲವೂ ಆರ್ಥಿಕತೆಗೆ ಪರಸ್ಪರ ಸಂಬಂಧ ಹೊಂದಿರುವ ಆಧಾರಸ್ತಂಭಗಳಾಗಿವೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ಉದಾಹರಣೆಗೆ, ಬಲಿಷ್ಠವಾದ ಉತ್ಪಾದನೆಯು ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ, ಇದು ರಫ್ತುಗಳನ್ನು ಹೆಚ್ಚಿಸುತ್ತದೆ. ಸ್ಪರ್ಧಾತ್ಮಕ ಎಂಎಸ್ಎಂಇಗಳು ಚೇತರಿಕೆ(ನಮ್ಯತೆ) ಮತ್ತು ನಾವೀನ್ಯತೆಯನ್ನು ಉತ್ತೇಜಿಸುತ್ತವೆ. ಉತ್ತಮ ಸರಕು ಸಾಗಣೆ ವ್ಯವಸ್ಥೆಯು ವೆಚ್ಚವನ್ನು ಕಡಿಮೆ ಮಾಡುತ್ತದೆ. ಉತ್ತಮವಾಗಿ ಯೋಜಿಸಲಾದ ನಗರಗಳು ಹೂಡಿಕೆ ಮತ್ತು ಪ್ರತಿಭೆ ಎರಡನ್ನೂ ಆಕರ್ಷಿಸುತ್ತವೆ. ಈ ವರ್ಷದ ಬಜೆಟ್ ಈ ಎಲ್ಲಾ ಆಧಾರಸ್ತಂಭಗಳಿಗೆ ಹೆಚ್ಚಿನ ಶಕ್ತಿ ನೀಡಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು "ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರಗೊಳಿಸುವುದು ಮತ್ತು ಬಲಪಡಿಸುವುದು" ಎಂಬ ವಿಷಯದ ಕುರಿತಾದ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದರು

March 03rd, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಜೆಟ್ ವೆಬಿನಾರ್ ಸರಣಿಯ ಎರಡನೇ ಕಂತನ್ನು ಉದ್ದೇಶಿಸಿ ಮಾತನಾಡಿದರು, ಇದು ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರಗೊಳಿಸುವುದು ಮತ್ತು ಬಲಪಡಿಸುವುದು ಎಂಬ ವಿಷಯದ ಮೇಲೆ ಕೇಂದ್ರೀಕೃತವಾಗಿತ್ತು. ಕಳೆದ ವಾರದ ವೇಗವನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಮೊದಲ ವೆಬಿನಾರ್ ಅತ್ಯಂತ ಯಶಸ್ವಿಯಾಗಿದೆ ಮತ್ತು ಬಜೆಟ್ ನಿಬಂಧನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅತ್ಯುತ್ತಮ ಸಲಹೆಗಳನ್ನು ನೀಡಿದೆ ಎಂದು ಹೇಳಿದರು.

ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 18th, 03:30 pm

ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಶ್ರೀ ಸಿ.ವಿ.ಆನಂದ ಬೋಸ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೊವಾಲ್ ಜೀ, ಸುಕಾಂತ ಮಜುಂದಾರ್ ಜೀ, ಶಂತನು ಠಾಕೂರ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಸೌಮಿಕ್ ಭಟ್ಟಾಚಾರ್ಯ ಜೀ, ಸೌಮಿತ್ರಾ ಖಾನ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಜೀ, ಇತರ ಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೇ!

ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ, ಶಂಕುಸ್ಥಾಪನೆ ನೆರವೇರಿಸಿದ ಮತ್ತು ಹಸಿರು ನಿಶಾನೆ ತೋರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 18th, 03:00 pm

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸಿಂಗೂರಿನಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಹಲವು ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ನಿನ್ನೆ ತಾನು ಮಾಲ್ಡಾದಲ್ಲಿದ್ದೆ ಮತ್ತು ಇಂದು ಹೂಗ್ಲಿಯ ಜನರ ನಡುವೆ ಇರುವ ಭಾಗ್ಯ ನನಗೆ ಲಭಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವಿಕಸಿತ ಭಾರತಕ್ಕಾಗಿ ಪೂರ್ವ ಭಾರತದ ಅಭಿವೃದ್ಧಿ ಅತ್ಯಗತ್ಯ ಎಂದು ಪ್ರತಿಪಾದಿಸಿದ ಅವರು, ಇದೇ ಗುರಿಯೊಂದಿಗೆ ಕೇಂದ್ರ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಒತ್ತಿ ಹೇಳಿದರು. ನಿನ್ನೆಯ ಮತ್ತು ಇಂದಿನ ಕಾರ್ಯಕ್ರಮಗಳು ಈ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಅವರು ತಿಳಿಸಿದರು. ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ನೂರಾರು ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವ ಮತ್ತು ಉದ್ಘಾಟಿಸುವ ಅವಕಾಶ ಈ ಅವಧಿಯಲ್ಲಿ ತಮಗೆ ದೊರೆತಿದೆ ಎಂದು ಪ್ರಧಾನಮಂತ್ರಿಯವರು ಇದೇ ವೇಳೆ ಉಲ್ಲೇಖಿಸಿದರು.

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 16th, 03:00 pm

ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ 13,430 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದರು

October 16th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ ಸುಮಾರು ₹13,430 ಕೋಟಿ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾಪರ್ಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಹೋಬಿಲಂನ ಭಗವಾನ್ ನರಸಿಂಹ ಸ್ವಾಮಿ ಮತ್ತು ಮಹಾನಂದಿಯ ಶ್ರೀ ಮಹಾನಂದೀಶ್ವರ ಸ್ವಾಮಿಗೆ ನಮನ ಸಲ್ಲಿಸಿದರು. ಎಲ್ಲರ ಯೋಗಕ್ಷೇಮಕ್ಕಾಗಿ ಅವರು ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಕೋರಿದರು.

ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ ಮತ್ತು ಛತ್ತೀಸಗಢದ 18 ಜಿಲ್ಲೆಗಳನ್ನು ಒಳಗೊಂಡ ನಾಲ್ಕು ಮಲ್ಟಿಟ್ರ್ಯಾಕಿಂಗ್ (ಬಹುಮಾರ್ಗ) ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದೆ, ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 894 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ

October 07th, 03:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಒಟ್ಟು ₹24,634 ಕೋಟಿ ಅಂದಾಜು ವೆಚ್ಚದ ನಾಲ್ಕು ಯೋಜನೆಗಳಿಗೆ ಅನುಮೋದನೆ ನೀಡಿದೆ. ಆ ಯೋಜನೆಗಳು ಹೀಗಿವೆ: