ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 28.06.2026 ರಂದು ಮಾಡಿದ ‘ಮನ್ ಕಿ ಬಾತ್’ – 135ನೇ ಸಂಚಿಕೆಯ ಕನ್ನಡ ಅವತರಣಿಕೆ

June 28th, 11:30 am

‘ಮನದ ಮಾತು’ ಮೂಲಕ ನಿಮ್ಮೆಲ್ಲರೊಂದಿಗೆ ಮತ್ತೆ ಮಾತನಾಡಲು ಅವಕಾಶ ಸಿಕ್ಕಿರುವುದು ನನಗೆ ಅಪಾರ ಸಂತೋಷವಾಗುತ್ತಿದೆ. 2026 ನೇ ವರ್ಷದ ಅರ್ಧ ಭಾಗವು ಮುಗಿಯಲಿದೆ. ಈ ಆರು ತಿಂಗಳುಗಳಲ್ಲಿ, ಈ ಕಾರ್ಯಕ್ರಮದಲ್ಲಿ ನಮ್ಮ ದೇಶದ ನಾಗರಿಕರ ಹಲವಾರು ಸಾಧನೆಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಜೂನ್‌ನಲ್ಲಿಯೂ ಸಹ, ಪ್ರತಿಯೊಬ್ಬ ನಾಗರಿಕನು ಹೆಮ್ಮೆ ಪಡುವಂತಹ ಸಾಧನೆಗಳನ್ನು ರಾಷ್ಟ್ರವು ಸಾಧಿಸಿದೆ. ಈ ಯಶಸ್ಸು ದೇಶದ ಭದ್ರತೆ ಮತ್ತು ಸ್ವಾವಲಂಬನೆಗೆ ಸಂಬಂಧಿಸಿದ್ದಾಗಿವೆ. ಇತ್ತೀಚೆಗೆ ನನಗೆ ಕೋಲ್ಕತ್ತಾದಲ್ಲಿ ನೌಕಾಪಡೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತು. ಅಲ್ಲಿ, ಐಎನ್ಎಸ್ ದೂನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರಯಗಳನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು. ವಿನ್ಯಾಸದಿಂದ ಹಿಡಿದು ಈ ಹಡಗುಗಳ ತಯಾರಿಕೆಯವರೆಗೆ ಎಲ್ಲವೂ ಸ್ವದೇಶದಲ್ಲೇ ಸಿದ್ಧಪಡಿಸಲಾಗಿದೆ.

ಎಫ್‌ಐಎಚ್ ಹಾಕಿ ಮಹಿಳಾ ನೇಷನ್ಸ್ ಕಪ್ ಗೆದ್ದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ

June 21st, 05:13 pm

ಎಫ್‌ಐಎಚ್ ಹಾಕಿ ಮಹಿಳಾ ನೇಷನ್ಸ್ ಕಪ್‌ನಲ್ಲಿ ವಿಜೇತರಾಗಿ ಹೊರಹೊಮ್ಮಿದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಒಡಿಶಾ ಸರ್ಕಾರ 2 ವರ್ಷ ಪೂರೈಸಿದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 20th, 01:10 pm

ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಜಿ, ರಾಜ್ಯಪಾಲ ಶ್ರೀ ಹರಿಬಾಬು ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಉಪಮುಖ್ಯಮಂತ್ರಿ ಶ್ರೀ ಕನಕ ವರ್ಧನ್ ಸಿಂಗ್ ದೇವ್ ಜಿ, ಶ್ರೀಮತಿ. ಪರವತಿ ಪರಿದಾ ಜಿ, ಒಡಿಶಾ ಸಚಿವರಾದ ಶ್ರೀ ಗಣೇಶ್ ಸಿಂಗ್ ಖುಂಟಿಯಾ ಜಿ, ಶ್ರೀಕೃಷ್ಣ ಚಂದ್ರ ಮಹಾಪಾತ್ರ ಜಿ, ಸಂಸತ್ ಸದಸ್ಯರಾದ ಶ್ರೀ ನಬಾ ಚರಣ್ ಮಾಝಿ ಜಿ, ಶ್ರೀ ಮನಮೋಹನ್ ಸಮಲ್ ಜಿ, ಶ್ರೀ ಬೈಜಯಂತ್ ಪಾಂಡಾ ಜಿ, ಇತರೆ ಗಣ್ಯರೆ, ಸಹೋದರ ಮತ್ತು ಸಹೋದರಿಯರೆ,

ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಒಡಿಶಾ ಸರ್ಕಾರದ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ನೆನಪಿಗಾಗಿ, ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

June 20th, 01:00 pm

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಯೂರ್‌ಭಂಜ್ ಜಿಲ್ಲೆಯ ಪಹದ್ಪುರ್ ಗ್ರಾಮಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರು ಪವಿತ್ರ ತೋಪುಗಳಾದ ಸಂತಾಲಿ ಜಾಹೇರಾ ಮತ್ತು ಹೋ ಜಾಹೇರಾ, ಕೌಶಲ್ಯ ಕೇಂದ್ರ ಹಾಗೂ ಪಹಾಡ್‌ಪುರ ಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಒಡಿಶಾ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಥೀಮ್ ವಿಕಾಸ್ ರ ಧಾರಾ, ಒಡಿಶಾ ಸಾರಾ ಎಂಬುದಾಗಿತ್ತು. ಶ್ರೀ ಮೋದಿ ಅವರು ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 19th, 05:15 pm

ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.

ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

June 19th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್‌ ಭಾರತ್‌ ರೋಜ್‌ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.

ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

June 18th, 11:41 pm

ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.

ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 18th, 09:30 pm

ಜೂನ್ 18, 2026 ರಂದು ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.

ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

June 14th, 04:36 pm

ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್‌ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್‌, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.

2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

June 14th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ವಿಭಿನ್ನ ಕ್ಷೇತ್ರಗಳಲ್ಲಿ ಮಹಿಳೆಯರ ನೇತೃತ್ವದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರದ ಪ್ರಯತ್ನಗಳನ್ನು ಬಲವಾಗಿ ಪ್ರತಿಪಾದಿಸಿದ ಪ್ರಧಾನಮಂತ್ರಿ

June 12th, 12:39 pm

ಕಳೆದ 12 ವರ್ಷಗಳಲ್ಲಿ ಸರ್ಕಾರವು ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಇದು ಎಲ್ಲಾ ವಲಯಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದ್ದು, ಆರ್ಥಿಕ ಸೇರ್ಪಡೆ ಮತ್ತು ಉದ್ಯಮಶೀಲತೆಯಿಂದ ಶಿಕ್ಷಣ, ಆರೋಗ್ಯ ರಕ್ಷಣೆ, ನೈರ್ಮಲ್ಯ, ವಸತಿ, ಕ್ರೀಡೆ, ವಿಜ್ಞಾನ ಮತ್ತು ಆಡಳಿತದವರೆಗೆ, ಮಹಿಳೆಯರು ವೈವಿಧ್ಯಮಯ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆ ನಡೆಯಿತು

June 11th, 08:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು ನಡೆದ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವರ್ಷದ ಆಶಯ ‘ವಿಕಸಿತ ಭಾರತ@2047 ಕ್ಕಾಗಿ ಸರ್ವರನ್ನೂ ಒಳಗೊಂಡ ಮಾನವ ಅಭಿವೃದ್ಧಿ’ ಎಂಬುದಾಗಿತ್ತು. ಈ ಸಭೆಯಲ್ಲಿ 28 ರಾಜ್ಯಗಳು ಮತ್ತು 5 ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುವ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ ಗಳು ಮತ್ತು ಆಡಳಿತಾಧಿಕಾರಿಗಳು ಭಾಗವಹಿಸಿದ್ದರು. ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಎಲ್ಲಾ 28 ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದು ಇದೇ ಮೊದಲ ಬಾರಿಯಾಗಿದೆ.

The trust of 140 crore Indians is our greatest strength and responsibility: PM Modi at the NDA Leaders’ Conclave

June 10th, 06:33 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

PM Modi addresses NDA Leaders' Conclave, reaffirms commitment to Viksit Bharat

June 10th, 06:30 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಮೀಸಲಾದ 12 ವರ್ಷಗಳ ಸರ್ಕಾರದ ಸಾಧನೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ

June 09th, 10:30 am

ಕಳೆದ 12 ವರ್ಷಗಳ ಸರ್ಕಾರವು ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಮರ್ಪಿತವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹೇಳಿದ್ದಾರೆ. 140 ಕೋಟಿ ದೇಶವಾಸಿಗಳ ಆಶೀರ್ವಾದ ಮತ್ತು 'ರಾಷ್ಟ್ರ ಮೊದಲು' ಎಂಬ ಮನೋಭಾವದಿಂದ, ಯುವಕರು, ಮಹಿಳೆಯರು ಮತ್ತು ರೈತ ಸಹೋದರ ಸಹೋದರಿಯರನ್ನು ಸಬಲೀಕರಣಗೊಳಿಸುವಲ್ಲಿ ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ ಎಂದು ಪ್ರಧಾನಿಯವರು ಹೇಳಿದರು.

ವರ್ಷದ ಯುಎನ್ ಮಿಲಿಟರಿ ಜೆಂಡರ್ ಅಡ್ವೊಕೇಟ್ ಪ್ರಶಸ್ತಿಗೆ ಭಾಜನರಾಗಿರುವ ಅಭಿಲಾಷಾ ಬರಾಕ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

June 07th, 02:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಯುಎನ್ ಮಿಲಿಟರಿ ಜೆಂಡರ್ ಅಡ್ವೊಕೇಟ್ ಆಫ್ ದ ಇಯರ್’ ಪ್ರಶಸ್ತಿಗೆ ಭಾಜನರಾಗಿರುವ ಮೇಜರ್ ಅಭಿಲಾಷಾ ಬರಾಕ್ ಅವರನ್ನು ಇಂದು ಅಭಿನಂದಿಸಿದ್ದಾರೆ. ಮೇಜರ್ ಬರಾಕ್ ಅವರು ಲೆಬನಾನ್‌ ನ ವಿಶ್ವಸಂಸ್ಥೆ ಮಧ್ಯಂತರ ಪಡೆ (ಯು ಎನ್ ಐ ಎಫ್ ಐ ಎಲ್) ನಲ್ಲಿ ಎಂಗೇಜ್‌ ಮೆಂಟ್ ಟೀಮ್ ಕಮಾಂಡರ್ ಮತ್ತು ಜೆಂಡರ್ ಫೋಕಲ್ ಪಾಯಿಂಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಗಮನಿಸಿದರು.

ಎಸ್ ಎ ಎಫ್ ಎಫ್ ಮಹಿಳಾ ಚಾಂಪಿಯನ್‌ ಶಿಪ್ 2026 ಜಯಿಸಿರುವ ಭಾರತೀಯ ಮಹಿಳಾ ಫುಟ್‌ಬಾಲ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ

June 07th, 01:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಏಷ್ಯಾ ಫುಟ್ಬಾಲ್ ಒಕ್ಕೂಟ (ಸ್ಯಾಫ್ - ಎಸ್ ಎ ಎಫ್ ಎಫ್) ಮಹಿಳಾ ಫುಟ್ಬಾಲ್ ಚಾಂಪಿಯನ್‌ ಶಿಪ್ 2026 ಜಯಿಸಿರುವ ಭಾರತೀಯ ಮಹಿಳಾ ಫುಟ್‌ಬಾಲ್ ತಂಡವನ್ನು ಅಭಿನಂದಿಸಿದ್ದಾರೆ. ಪಂದ್ಯಾವಳಿಯಾದ್ಯಂತ ವನಿತೆಯರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ.

2026ರ ಯು18 ಏಷ್ಯಾ ಕಪ್‌ ನಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಮಹಿಳಾ ಯು18 ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ

June 06th, 06:16 pm

2026ರ ಯು18 ಏಷ್ಯಾ ಕಪ್‌ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಮಹಿಳಾ ಯು18 ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ಪಂದ್ಯಾವಳಿಯಾದ್ಯಂತ ತಂಡವು ಗಮನಾರ್ಹ ಧೈರ್ಯವನ್ನು ಪ್ರದರ್ಶಿಸಿದೆ ಎಂದು ಪ್ರಧಾನಮಂತ್ರಿ ಅವರು ಗಮನಿಸಿದರು.

ಅಸ್ಸಾಂನ ಶ್ಲಾಘನೀಯ ಪರಿಸರ ಸಾಧನೆಗಾಗಿ ಅಲ್ಲಿನ ಜನತೆಗೆ ಪ್ರಧಾನಮಂತ್ರಿ ಅಭಿನಂದನೆ

June 05th, 11:42 pm

ಪರಿಸರ ಸಂರಕ್ಷಣೆಯಲ್ಲಿ ಶ್ಲಾಘನೀಯ ಸಾಧನೆ ಮಾಡಿದ ಅಸ್ಸಾಂನ ಜನತೆಗೆ, ವಿಶೇಷವಾಗಿ ಆ ರಾಜ್ಯದ ನಾರಿ ಶಕ್ತಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಸುಸ್ಥಿರ ಗ್ರಹವನ್ನು ನಿರ್ಮಿಸುವ ಗುರಿಯನ್ನು ಹೊಂದಿರುವ ಈ ಮಹತ್ವದ ಪ್ರಯತ್ನದಲ್ಲಿ ರಾಜ್ಯದ ನಾರಿ ಶಕ್ತಿಯು ಮುಂಚೂಣಿ ವಹಿಸಿದೆ ಎಂದು ಪ್ರಧಾನಮಂತ್ರಿ ಶ್ಲಾಘಿಸಿದ್ದಾರೆ.

ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 23rd, 11:15 am

ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.