ನವದೆಹಲಿಯಲ್ಲಿ ಆಯೋಜಿತವಾಗಿದ್ದ ನಾರಿ ಶಕ್ತಿ ವಂದನ್ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 13th, 11:15 am
ವೇದಿಕೆಯಲ್ಲಿ ಉಪಸ್ಥಿತರಿರುವ ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಜಿ, ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಜಿ, ಶ್ರೀಮತಿ ಸಾವಿತ್ರಿ ಠಾಕೂರ್ ಜಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ವಿಜಯ ರಹತ್ಕರ್ ಜಿ. ನಿಮ್ಮಲ್ಲಿ ಅನೇಕ ಹಿರಿಯರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು ಮತ್ತು ನಮ್ಮ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಜಿ ಕೂಡ ಇದ್ದಾರೆ. ನನ್ನ ಎಲ್ಲಾ ಗೌರವಾನ್ವಿತ ಸಹೋದರಿಯರು ಇಲ್ಲಿದ್ದಾರೆ, ಈ ಸಮಯದಲ್ಲಿ ದೇಶದೆಲ್ಲೆಡೆ ಬೈಸಾಖಿ ಹಬ್ಬದ ಸಂತಸ ಮನೆಮಾಡಿದೆ. ನಾಳೆ, ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷ ಆಚರಿಸಲಾಗುತ್ತದೆ. ಇಂದು ನಾನು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಧೈರ್ಯಶಾಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸುತ್ತೇನೆ.‘ನಾರಿ ಶಕ್ತಿ ವಂದನ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 13th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ನಾರಿ ಶಕ್ತಿ ವಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಸಾಖಿಯ ಶುಭ ಸಂದರ್ಭದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಮಾತನಾಡಿದ ಪ್ರಧಾನಮಂತ್ರಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಭಾರತವು 21ನೇ ಶತಮಾನದ ಅತಿದೊಡ್ಡ ನಿರ್ಧಾರಗಳಲ್ಲಿ ಒಂದನ್ನು ತೆಗೆದುಕೊಳ್ಳಲಿದ್ದು, ಇದು ನಾರಿ ಶಕ್ತಿಗೆ ಅರ್ಪಿಸುತ್ತಿರುವ ನಿರ್ಧಾರ’’ ಎಂದು ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.