ರಾಷ್ಟ್ರೀಯ ಕೈಮಗ್ಗ ದಿನದಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

August 07th, 11:14 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ಕೈಮಗ್ಗ ದಿನದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದರು ಮತ್ತು ಭಾರತದ ಶ್ರೀಮಂತ ಮತ್ತು ರೋಮಾಂಚಕ ಕೈಮಗ್ಗ ಪರಂಪರೆಯನ್ನು ಆಚರಿಸಿದರು. ದೇಶದ ನೇಕಾರರು ಮತ್ತು ಕುಶಲಕರ್ಮಿಗಳ ಕೌಶಲ್ಯ, ಸೃಜನಶೀಲತೆ ಮತ್ತು ಸಮರ್ಪಣೆಗೆ ಗೌರವ ಸಲ್ಲಿಸಿದ ಅವರು, ತಲೆಮಾರುಗಳಿಂದ ಅವರು ತಮ್ಮ ಕರಕುಶಲತೆಯ ಮೂಲಕ ಭಾರತದ ಕಾಲಾತೀತ ಸಂಪ್ರದಾಯಗಳನ್ನು ಸಂರಕ್ಷಿಸಿದ್ದಾರೆ ಮತ್ತು ಶ್ರೀಮಂತಗೊಳಿಸಿದ್ದಾರೆ ಎಂದು ಹೇಳಿದರು.

ಭಾರತದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಬಿಂಬಿಸುವ ಮೂಲಕ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಆಚರಿಸುವಂತೆ ಕರೆ ನೀಡಿದ ಪ್ರಧಾನಮಂತ್ರಿ

August 06th, 10:28 pm

ಭಾರತದ ಶ್ರೀಮಂತ ಹಾಗೂ ವೈವಿಧ್ಯಮಯ ಕೈಮಗ್ಗ ಪರಂಪರೆಯನ್ನು ಉತ್ತೇಜಿಸುವ ಮೂಲಕ ಆಗಸ್ಟ್ 7ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕರೆ ನೀಡಿದ್ದಾರೆ.

ಮನ್ ಕಿ ಬಾತ್ ನಲ್ಲಿ ಭಾರತದ ರಕ್ಷಣಾ ಶಕ್ತಿ, ನಾವೀನ್ಯತೆ ಮತ್ತು ಸಾಮೂಹಿಕ ಪ್ರಯತ್ನಗಳನ್ನು ಪ್ರಧಾನಿ ಮೋದಿ ಎತ್ತಿ ತೋರಿಸಿದ್ದಾರೆ

July 26th, 11:30 am

Prime Minister Narendra Modi addressed the nation through Mann Ki Baat. In his speech, he highlighted important topics such as Kargil Vijay Diwas, Catch the Rain campaign, India's space sector prowess, Science Olympiads, Environmental conservation, Khadi and more. He called upon the citizens to share their ideas and suggestions for Independence Day through MyGov.

ರಾಷ್ಟ್ರೀಯ ಕೈಮಗ್ಗ ದಿನದ ಶುಭಾಶಯ ಕೋರಿದ ಪ್ರಧಾನಮಂತ್ರಿ

August 07th, 03:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ಕೈಮಗ್ಗ ದಿನದ ಶುಭಾಶಯ ಕೋರಿದ್ದಾರೆ. ನಮ್ಮ ಜನರ ಸೃಜನಶೀಲತೆಯನ್ನು ಪ್ರದರ್ಶಿಸುವ ನಮ್ಮ ಶ್ರೀಮಂತ ನೇಯ್ಗೆ ಸಂಪ್ರದಾಯವನ್ನು ಆಚರಿಸುವ ದಿನ ಇಂದು. ನಮಗೆ ಭಾರತದ ಕೈಮಗ್ಗದ ವೈವಿಧ್ಯತೆ ಮತ್ತು ಜೀವನೋಪಾಯ ಹಾಗೂ ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಅದರ ಪಾತ್ರದ ಬಗ್ಗೆ ಹೆಮ್ಮೆಯಿದೆ ಎಂದು ಶ್ರೀ ಮೋದಿ ಅವರು ಹೇಳಿದರು.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 07th, 09:20 am

ನನ್ನ ಸಂಪುಟ ಸಹೋದ್ಯೋಗಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸೌಮ್ಯ ಸ್ವಾಮಿನಾಥನ್, ನೀತಿ ಆಯೋಗದ ಸದಸ್ಯ ಡಾ. ರಮೇಶ್ ಚಂದ್, ಸ್ವಾಮಿನಾಥನ್ ಕುಟುಂಬದ ಅನೇಕ ಸದಸ್ಯರು ಇಲ್ಲಿ ಉಪಸ್ಥಿತರಿರುವುದನ್ನು ನಾನು ನೋಡಿದ್ದೇನೆ - ನಾನು ಅವರಿಗೂ ನನ್ನ ಗೌರವಯುತ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಲ್ಲಿ ನೆರೆದಿರುವ ಎಲ್ಲಾ ವಿಜ್ಞಾನಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 07th, 09:00 am

ನಿತ್ಯಹರಿದ್ವರ್ಣ ಕ್ರಾಂತಿ, ಜೈವಿಕ ಸಂತೋಷಕ್ಕೆ ಹಾದಿ ಎಂಬ ಸಮ್ಮೇಳನದ ವಿಷಯವು ಸರ್ವರಿಗೂ ಆಹಾರವನ್ನು ಖಾತ್ರಿಪಡಿಸುವಲ್ಲಿ ಪ್ರೊ. ಸ್ವಾಮಿನಾಥನ್ ಅವರ ಜೀವಮಾನದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ಸಮ್ಮೇಳನವು ವಿಜ್ಞಾನಿಗಳು, ನೀತಿ ನಿರೂಪಕರು, ಅಭಿವೃದ್ಧಿ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರಿಗೆ 'ನಿತ್ಯಹರಿದ್ವರ್ಣ ಕ್ರಾಂತಿ'ಯ ತತ್ವಗಳನ್ನು ಮುಂದುವರಿಸುವ ಬಗ್ಗೆ ಚರ್ಚಿಸಲು ಮತ್ತು ಸಮಾಲೋಚಿಸಲು ಅವಕಾಶ ಒದಗಿಸುತ್ತದೆ. ಸಮ್ಮೇಳನದ ಪ್ರಮುಖ ವಿಷಯಗಳಲ್ಲಿ - ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ; ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಗಾಗಿ ಸುಸ್ಥಿರ ಕೃಷಿ; ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಮೂಲಕ ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು; ಸುಸ್ಥಿರ ಮತ್ತು ಸಮಾನ ಜೀವನೋಪಾಯಕ್ಕಾಗಿ ಸೂಕ್ತ ತಂತ್ರಜ್ಞಾನಗಳನ್ನು ಬಳಸುವುದು; ಮತ್ತು ಅಭಿವೃದ್ಧಿಯ ಚರ್ಚೆಗಳಲ್ಲಿ ಯುವಕರು, ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳನ್ನು ತೊಡಗಿಸಿಕೊಳ್ಳುವುದು ಮುಂತಾದವು ಸೇರಿವೆ.

2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 27th, 11:30 am

‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.

ʻರಾಷ್ಟ್ರೀಯ ಕೈಮಗ್ಗ ದಿನʼದ ಅಂಗವಾಗಿ ಪ್ರಧಾನಮಂತ್ರಿಯವರಿಂದ ಶುಭಾಶಯ

August 07th, 10:14 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻರಾಷ್ಟ್ರೀಯ ಕೈಮಗ್ಗ ದಿನ’ದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ. ಭಾರತೀಯ ಕುಶಲಕರ್ಮಿಗಳ ಪ್ರಯತ್ನಗಳನ್ನು ಶ್ಲಾಘಿಸಿರುವ ಅವರು, 'ವೋಕಲ್ ಫಾರ್ ಲೋಕಲ್' ಉಪಕ್ರಮಕ್ಕೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 28th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!

ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

August 07th, 04:16 pm

ಕೆಲವು ದಿನಗಳ ಹಿಂದೆ ಭಾರತ ಮಂಟಪವನ್ನು ಅದ್ಧೂರಿಯಾಗಿ ಉದ್ಘಾಟಿಸಲಾಗಿತ್ತು. ನಿಮ್ಮಲ್ಲಿ ಕೆಲವರು ಮೊದಲು ಇಲ್ಲಿಗೆ ಬಂದು ನಿಮ್ಮ ಮಳಿಗೆಗಳು ಅಥವಾ ಟೆಂಟ್‌ಗಳನ್ನು ಹಾಕಿದ್ದಿರಿ. ಆದರೆ ಇಂದು ನೀವು ಇಲ್ಲಿ ಪರಿವರ್ತಿತ ರಾಷ್ಟ್ರವನ್ನು ನೋಡುತ್ತಿದ್ದೀರಿ. ಇಂದು ನಾವು ಈ ಭಾರತ ಮಂಟಪದಲ್ಲಿ ರಾಷ್ಟ್ರೀಯ ಕೈಮಗ್ಗ ದಿನ ಆಚರಿಸುತ್ತಿದ್ದೇವೆ. ಭಾರತ ಮಂಟಪದ ಈ ವೈಭವದಲ್ಲಿಯೂ ಭಾರತದ ಕೈಮಗ್ಗ ಉದ್ಯಮವು ಪ್ರಮುಖ ಪಾತ್ರ ವಹಿಸುತ್ತಿದೆ. ಪ್ರಾಚೀನ ಮತ್ತು ಆಧುನಿಕತೆಯ ಈ ಸಂಗಮವು ಇಂದಿನ ಭಾರತವನ್ನು ವ್ಯಾಖ್ಯಾನಿಸುತ್ತಿದೆ. ಇಂದಿನ ಭಾರತ ಕೇವಲ ಸ್ಥಳೀಯರ ಬಗ್ಗೆ ಧ್ವನಿಯೆತ್ತದೆ, ವಿಶ್ವವ್ಯಾಪಿಯಾಗಿಸಲು ಜಾಗತಿಕ ವೇದಿಕೆ ಒದಗಿಸುತ್ತಿದೆ. ಸ್ವಲ್ಪ ಸಮಯದ ಹಿಂದೆ, ನಮ್ಮ ಕೆಲವು ನೇಕಾರರೊಂದಿಗೆ ಸಂವಹನ ನಡೆಸಲು ನನಗೆ ಅವಕಾಶ ಸಿಕ್ಕಿತು. ದೇಶಾದ್ಯಂತ ಅನೇಕ ಕೈಮಗ್ಗ ಕ್ಲಸ್ಟರ್‌ಗಳಿಂದ ನಮ್ಮ ನೇಕಾರ ಸಹೋದರರು ಮತ್ತು ಸಹೋದರಿಯರು ನಮ್ಮೊಂದಿಗೆ ಇರಲು ದೂರದೂರುಗಳಿಂದ ಇಲ್ಲಿಗೆ ಬಂದಿದ್ದಾರೆ. ಈ ಭವ್ಯ ಸಮಾರಂಭದಲ್ಲಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ!

ನವದೆಹಲಿಯಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

August 07th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದ `ಭಾರತ್ ಮಂಟಪ’ದಲ್ಲಿ ನಡೆದ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ, ʻರಾಷ್ಟ್ರೀಯ ಫ್ಯಾಶನ್ ಟೆಕ್ನಾಲಜಿ ಸಂಸ್ಥೆʼ ಅಭಿವೃದ್ಧಿಪಡಿಸಿದ 'ಭಾರತೀಯ ವಸ್ತ್ರ ಏವಮ್ ಶಿಲ್ಪ ಕೋಶ್ʼ ಎಂಬ ಜವಳಿ ಮತ್ತು ಕರಕುಶಲ ವಸ್ತುಗಳ ಭಂಡಾರ ಪೋರ್ಟಲ್‌ಗೆ ಅವರು ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನಕ್ಕೂ ಭೇಟಿ ನೀಡಿ, ನೇಕಾರರೊಂದಿಗೆ ಸಂವಾದ ನಡೆಸಿದರು.

27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

August 06th, 11:30 am

ಭಾರತವು ಅಭಿವೃದ್ಧಿಯ ಗುರಿಯತ್ತ ಸಾಗುತ್ತಿರುವುದರಿಂದ ತನ್ನ 'ಅಮೃತ ಕಾಲ' (ಸುವರ್ಣ ಯುಗ) ದ ಆರಂಭದಲ್ಲಿದೆ. ಹೊಸ ಶಕ್ತಿ, ಹೊಸ ಸ್ಫೂರ್ತಿ ಮತ್ತು ಹೊಸ ಸಂಕಲ್ಪವಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ಭಾರತದ ಸರಿಸುಮಾರು 1300 ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಈಗ 'ಅಮೃತ್ ಭಾರತ್ ರೈಲ್ವೆ ನಿಲ್ದಾಣಗಳು' ಎಂದು ಅಭಿವೃದ್ಧಿಪಡಿಸಲಾಗುವುದು ಮತ್ತು ಅವುಗಳನ್ನು ಪುನರಾಭಿವೃದ್ಧಿ ಮತ್ತು ಆಧುನೀಕರಿಸಲಾಗುವುದು. ಇಂದು, 508 ಅಮೃತ್ ಭಾರತ್ ನಿಲ್ದಾಣಗಳಿಗೆ ಪುನರಾಭಿವೃದ್ಧಿ ಕಾರ್ಯ ಪ್ರಾರಂಭವಾಗಿದೆ. ಈ 508 ಅಮೃತ್ ಭಾರತ್ ನಿಲ್ದಾಣಗಳ ನಿರ್ಮಾಣಕ್ಕೆ ಅಂದಾಜು 25,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು. ಈ ಅಭಿಯಾನವು ದೇಶದ ಮೂಲಸೌಕರ್ಯಕ್ಕೆ, ರೈಲ್ವೆಗೆ ಮತ್ತು ಮುಖ್ಯವಾಗಿ ನನ್ನ ದೇಶದ ಸಾಮಾನ್ಯ ನಾಗರಿಕರಿಗೆ ಎಷ್ಟು ಮಹತ್ವದ್ದಾಗಿದೆ ಎಂದು ನೀವು ಊಹಿಸಬಹುದು. ಈ ಯೋಜನೆಯ ಪ್ರಯೋಜನಗಳನ್ನು ದೇಶದ ಬಹುತೇಕ ಎಲ್ಲಾ ರಾಜ್ಯಗಳು ಅನುಭವಿಸಲಿವೆ. ಉದಾಹರಣೆಗೆ, ಉತ್ತರ ಪ್ರದೇಶದ 55 ಅಮೃತ್ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಸುಮಾರು 4,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು. ರಾಜಸ್ಥಾನದಲ್ಲಿ 55 ರೈಲ್ವೆ ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣಗಳಾಗಿ ಪರಿವರ್ತಿಸಲಾಗುವುದು. ಮಧ್ಯಪ್ರದೇಶದಲ್ಲಿ, 34 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಸುಮಾರು 1,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು. ಮಹಾರಾಷ್ಟ್ರದ 44 ನಿಲ್ದಾಣಗಳ ಅಭಿವೃದ್ಧಿಗೆ 2,500 ಕೋಟಿ ರೂ. ತಮಿಳುನಾಡು, ಕರ್ನಾಟಕ ಮತ್ತು ಕೇರಳ ರಾಜ್ಯಗಳು ತಮ್ಮ ಪ್ರಮುಖ ನಿಲ್ದಾಣಗಳನ್ನು ಅಮೃತ್ ಭಾರತ್ ನಿಲ್ದಾಣಗಳಾಗಿ ಅಭಿವೃದ್ಧಿಪಡಿಸಲಿವೆ. 'ಅಮೃತ್ ಕಾಲ್' ದಲ್ಲಿನ ಈ ಐತಿಹಾಸಿಕ ಅಭಿಯಾನದ ಆರಂಭದಲ್ಲಿ, ನಾನು ರೈಲ್ವೆ ಸಚಿವಾಲಯವನ್ನು ಶ್ಲಾಘಿಸುತ್ತೇನೆ ಮತ್ತು ದೇಶದ ಎಲ್ಲಾ ನಾಗರಿಕರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ದೇಶದಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

August 06th, 11:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐತಿಹಾಸಿಕ ಕ್ರಮವಾಗಿ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದರು. 24,470 ಕೋಟಿ ರೂ.ಗಿಂತ ಹೆಚ್ಚಿನ ವೆಚ್ಚದಲ್ಲಿ ಈ 508 ನಿಲ್ದಾಣಗಳನ್ನು ಮರು ಅಭಿವೃದ್ಧಿಪಡಿಸಲಾಗುತ್ತಿದೆ. ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 55, ಬಿಹಾರದಲ್ಲಿ 49, ಮಹಾರಾಷ್ಟ್ರದಲ್ಲಿ 44, ಪಶ್ಚಿಮ ಬಂಗಾಳದಲ್ಲಿ 37, ಮಧ್ಯಪ್ರದೇಶದಲ್ಲಿ 34, ಅಸ್ಸಾಂನಲ್ಲಿ 32, ಒಡಿಶಾದಲ್ಲಿ 25, ಪಂಜಾಬ್‌ನಲ್ಲಿ 22, ಗುಜರಾತ್ ಮತ್ತು ತೆಲಂಗಾಣದಲ್ಲಿ ತಲಾ 21, ಜಾರ್ಖಂಡ್‌ನಲ್ಲಿ 20, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ 18, ಹರಿಯಾಣದಲ್ಲಿ 15, ಕರ್ನಾಟಕದಲ್ಲಿ 13 ಸೇರಿದಂತೆ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಭಾಗಿ

August 05th, 10:27 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಆಗಸ್ಟ್ 7ರಂದು ಮಧ್ಯಾಹ್ನ 12 ಗಂಟೆಗೆ ದೆಹಲಿಯ ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಕೈಮಗ್ಗ ದಿನದ ಸಂದರ್ಭದಲ್ಲಿ ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಗೆ ಪ್ರಧಾನಮಂತ್ರಿಯವರು ಗೌರವ ಸಲ್ಲಿಸಿದರು

August 07th, 02:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕೈಮಗ್ಗ ದಿನದ ಸಂದರ್ಭದಲ್ಲಿ ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಭಾರತದ ಕಲಾತ್ಮಕ ಸಂಪ್ರದಾಯಗಳನ್ನು ಆಚರಿಸಲು ಶ್ರಮಿಸುತ್ತಿರುವ ಎಲ್ಲರಿಗೂ ಗೌರವ ಸಲ್ಲಿಸಿದ್ದಾರೆ. ಕೈಮಗ್ಗ ಸ್ಟಾರ್ಟ್‌ಅಪ್ ಗ್ರ್ಯಾಂಡ್ ಚಾಲೆಂಜ್‌ನಲ್ಲಿ ಭಾಗವಹಿಸುವಂತೆ ಸ್ಟಾರ್ಟ್‌ಅಪ್‌ಗಳ ಪ್ರಪಂಚದೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಯುವಜನರನ್ನು ಪ್ರಧಾನಮಂತ್ರಿ ಒತ್ತಾಯಿಸಿದರು.

ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ಕೈಮಗ್ಗ ತಯಾರಿತ ಉತ್ಪನ್ನಗಳಿಗೆ ಬೆಂಬಲ ನೀಡಲು ಪ್ರಧಾನಿ ಕರೆ

August 07th, 01:39 pm

ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ಕೈಮಗ್ಗ ತಯಾರಿತ ಉತ್ಪನ್ನಗಳಿಗೆ ಬೆಂಬಲ ನೀಡಲು ಪ್ರಧಾನಿ ಕರೆ

ಮಧ್ಯ ಪ್ರದೇಶದಲ್ಲಿಯ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನಾದ ಫಲಾನುಭವಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

August 07th, 10:55 am

ಮಧ್ಯ ಪ್ರದೇಶದ ರಾಜ್ಯಪಾಲರು ಮತ್ತು ನನ್ನ ಬಹಳ ಹಳೆಯ ಸಹೋದ್ಯೋಗಿ ಶ್ರೀ ಮಂಗೂಭಾಯಿ ಪಟೇಲ್. ಅವರು ತಮ್ಮ ಇಡೀ ಬದುಕನ್ನು ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ, ಬುಡಕಟ್ಟು ಸಮಾಜದ ಉತ್ಥಾನಕ್ಕಾಗಿ ಕಳೆದವರು, ಇಂತಹವರು ಮಧ್ಯಪ್ರದೇಶದ ರಾಜ್ಯಪಾಲ ಶ್ರೀ ಮಂಗೂಭಾಯಿ ಅವರು. ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್, ರಾಜ್ಯ ಸರಕಾರದ ಇತರ ಎಲ್ಲಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಮಧ್ಯ ಪ್ರದೇಶದ ವಿವಿಧ ಭಾಗಗಳಿಂದ ಈ ಕಾರ್ಯಕ್ರಮಕ್ಕೆ ಸೇರ್ಪಡೆಗೊಡಿರುವ ಎಲ್ಲಾ ಸಹೋದರಿಯರೇ ಮತ್ತು ಸಹೋದರರೇ!.

ಮಧ್ಯಪ್ರದೇಶದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ [ಪಿ.ಎಂ.ಜಿ.ಕೆ.ಎ.ವೈ] ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

August 07th, 10:54 am

ಮಧ್ಯಪ್ರದೇಶದಲ್ಲಿನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನಾ ಯೋಜನೆ [ಪಿ.ಎಂ.ಜಿ.ಕೆ.ಎ.ವೈ] ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಹೆಚ್ಚಿನ ಜಾಗೃತಿ ಮೂಡಿಸುತ್ತಿದ್ದು, ಯಾವುದೇ ಅರ್ಹವ್ಯಕ್ತಿ ಸೌಲಭ್ಯದಿಂದ ವಂಚಿತರಾಗುವುದಿಲ್ಲ ಎಂದು ಹೇಳಿದರು.

ಮನ್ ಕಿ ಬಾತ್' ಸಕಾರಾತ್ಮಕತೆ ಮತ್ತು ಸೂಕ್ಷ್ಮತೆಯನ್ನು ಹೊಂದಿದೆ. ಇದು ಸಾಮೂಹಿಕ ಪಾತ್ರವನ್ನು ಹೊಂದಿದೆ:ಪ್ರಧಾನಿ ಮೋದಿ

July 25th, 09:44 am

ಮನ್ ಕಿ ಬಾತ್ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ತುಕಡಿಯೊಂದಿಗೆ ನಡೆಸಿದ ಸಂವಾದವನ್ನು ನೆನಪಿಸಿಕೊಂಡರು ಮತ್ತು ದೇಶವಾಸಿಗಳು ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು . ಅಮೃತ್ ಮಹೋತ್ಸವ ಕುರಿತು ಮಾತನಾಡಿದ ಪ್ರಧಾನಿ ಮೋದಿ ಅವರು ವಿಶೇಷ ವೆಬ್‌ಸೈಟ್ ಬಗ್ಗೆ ಪ್ರಸ್ತಾಪಿಸಿದರು, ಅಲ್ಲಿ ದೇಶಾದ್ಯಂತದ ನಾಗರಿಕರು ತಮ್ಮದೇ ಗೀತೆಯಲ್ಲಿ ರಾಷ್ಟ್ರಗೀತೆ ದಾಖಲಿಸಬಹುದು. ಅವರು ದೇಶದಾದ್ಯಂತ ಹಲವಾರು ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಂಡರು, ನೀರಿನ ಸಂರಕ್ಷಣೆಯ ಮಹತ್ವವನ್ನು ಮತ್ತು ಹೆಚ್ಚಿನದನ್ನು ಎತ್ತಿ ತೋರಿಸಿದರು!

PM’s message on National Handloom Day

August 07th, 12:18 pm

On National Handloom Day, we salute all those associated with our vibrant handloom and handicrafts sector.