ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 24th, 12:00 pm

ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಬಿಹಾರದ ಮಧುಬನಿಯಲ್ಲಿ 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು

April 24th, 11:50 am

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಇಂದು ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಆಚರಿಸಿ ಪ್ರಾರ್ಥಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಧಾನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ದಿನದ ಅಂಗವಾಗಿ ಇಡೀ ರಾಷ್ಟ್ರವು ಮಿಥಿಲಾ ಮತ್ತು ಬಿಹಾರದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು. ಬಿಹಾರದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು, ವಿದ್ಯುತ್, ರೈಲ್ವೆ ಮತ್ತು ಮೂಲಸೌಕರ್ಯದಲ್ಲಿನ ಈ ಉಪಕ್ರಮಗಳು ಬಿಹಾರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು. ಮಹಾನ್ ಕವಿ ಮತ್ತು ರಾಷ್ಟ್ರೀಯ ಐಕಾನ್ ರಾಮಧಾರಿ ಸಿಂಗ್ ದಿನಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು.