ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 01st, 10:45 am

ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

October 01st, 10:30 am

ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ ಎಸ್‌ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.

ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 27th, 11:45 am

ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್‌ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 27th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.

ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 22nd, 11:36 am

ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ

September 22nd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.

ಮಧ್ಯಪ್ರದೇಶದ ಧಾರ್ ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

September 17th, 11:20 am

ಮಧ್ಯಪ್ರದೇಶದ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಮೋಹನ್ ಯಾದವ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿಗಳಾದ ಸಹೋದರಿ ಸಾವಿತ್ರಿ ಠಾಕೂರ್ ಜೀ, ದೇಶದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕೇಂದ್ರ ಸಚಿವರೇ, ರಾಜ್ಯಗಳ ರಾಜ್ಯಪಾಲರೇ, ರಾಜ್ಯಗಳ ಮುಖ್ಯಮಂತ್ರಿಗಳೇ, ವೇದಿಕೆಯ ಮೇಲೆ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ ಮತ್ತು ದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

ಮಧ್ಯಪ್ರದೇಶದ ಧಾರ್‌ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಿಲಾನ್ಯಾಸ ಮತ್ತುಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

September 17th, 11:19 am

ಮಧ್ಯಪ್ರದೇಶದ ಧಾರ್‌ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಧಾರ್ ಭೋಜಶಾಲಾದ ಪೂಜ್ಯ ಮಾತೆ ಜ್ಞಾನ ದೇವತೆ ವಾಗ್ದೇವಿಯ ಪಾದಗಳಿಗೆ ನಮಸ್ಕರಿಸಿದರು. ಇಂದು ದೈವಿಕ ವಾಸ್ತುಶಿಲ್ಪಿ ಮತ್ತು ಕೌಶಲ್ಯ ಹಾಗು ಸೃಷ್ಟಿಯ ದೇವತೆಯಾದ ಭಗವಾನ್ ವಿಶ್ವಕರ್ಮರ ಜನ್ಮ ದಿನವಾಗಿದೆ ಎಂದು ಹೇಳಿದ ಶ್ರೀ ಮೋದಿ, ಭಗವಾನ್ ವಿಶ್ವಕರ್ಮರಿಗೆ ನಮನ ಸಲ್ಲಿಸಿದರು. ತಮ್ಮ ಕರಕುಶಲತೆ ಮತ್ತು ಸಮರ್ಪಣೆಯ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿರುವ ಕೋಟ್ಯಂತರ ಸಹೋದರ ಸಹೋದರಿಯರಿಗೆ ಅವರು ಗೌರವ ಸಲ್ಲಿಸಿದರು.

ಬಿಹಾರ ರಾಜ್ಯ ಜೀವಿಕಾ ನಿಧಿ ಸಖ್ ಸಹಕಾರಿ ಸಂಘ ನಿಯಮಿತದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸಿಂಗ್ ಭಾಷಣ

September 02nd, 01:00 pm

ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜಿ, ಇತರೆ ಗಣ್ಯ ಅತಿಥಿಗಳೆ ಮತ್ತು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಬಿಹಾರದ ನನ್ನ ಲಕ್ಷಾಂತರ ಸಹೋದರಿಯರೆ - ನಿಮ್ಮೆಲ್ಲರಿಗೂ ನನ್ನ ಗೌರವಯುತ ಶುಭಾಶಯಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಬಿಹಾರ ರಾಜ್ಯ ಜೀವಿಕಾ ನಿಧಿ ಸಖ್ ಸಹಕಾರಿ ಸಂಘ ಲಿಮಿಟೆಡ್ ಉದ್ಘಾಟನೆ

September 02nd, 12:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಬಿಹಾರ ರಾಜ್ಯ ಜೀವಿಕ ನಿಧಿ ಸಖ್ ಸಹಕಾರಿ ಸಂಘ ಲಿಮಿಟೆಡ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಈ ಶುಭ ಮಂಗಳವಾರದಂದು, ಹೆಚ್ಚು ಭರವಸೆಯ ಉಪಕ್ರಮವನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು. ಬಿಹಾರದ ತಾಯಂದಿರು ಮತ್ತು ಸಹೋದರಿಯರಿಗೆ ಜೀವಿಕ ನಿಧಿ ಸಖ್ ಸಹಕಾರಿ ಸಂಘದ ಮೂಲಕ ಹೊಸ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ಅವರು ಪ್ರಕಟಿಸಿದರು. ಈ ಉಪಕ್ರಮವು ಜೀವಿಕ ನಿಧಿಯೊಂದಿಗೆ ಸಂಬಂಧ ಹೊಂದಿರುವ ಮಹಿಳೆಯರು ಹಳ್ಳಿಗಳಾದ್ಯಂತ ಆರ್ಥಿಕ ಸಹಾಯವನ್ನು ಸುಲಭವಾಗಿ ಪಡೆಯಲು ಅನುವು ಮಾಡಿಕೊಡುತ್ತದೆ, ಮತ್ತು ಅವರ ಕೆಲಸ ಹಾಗೂ ವ್ಯವಹಾರಗಳನ್ನು ಮುನ್ನಡೆಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಜೀವಿಕ ನಿಧಿ ವ್ಯವಸ್ಥೆಯು ಸಂಪೂರ್ಣವಾಗಿ ಡಿಜಿಟಲ್ ಆಗಿದ್ದು, ದೈಹಿಕ ಭೇಟಿಯ ಅಗತ್ಯತೆ ನಿವಾರಿಸುತ್ತದೆ - ಈಗ ಎಲ್ಲ ಕೆಲಸಗಳನ್ನು ಮೊಬೈಲ್ ಫೋನ್ ಮೂಲಕ ಮಾಡಬಹುದು ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಜೀವಿಕ ನಿಧಿ ಸಖ್ ಸಹಕಾರಿ ಸಂಘದ ಆರಂಭಕ್ಕಾಗಿ ಅವರು ಬಿಹಾರದ ತಾಯಂದಿರು ಮತ್ತು ಸಹೋದರಿಯರನ್ನು ಅಭಿನಂದಿಸಿದರು ಮತ್ತು ಈ ಮಹತ್ವದ ಉಪಕ್ರಮಕ್ಕಾಗಿ ಶ್ರೀ ನಿತೀಶ್ ಕುಮಾರ್ ಮತ್ತು ಬಿಹಾರ ಸರ್ಕಾರವನ್ನು ಅವರು ಶ್ಲಾಘಿಸಿದರು.

'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ

September 29th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.

ನಮ್ಮ ಸಂಕಲ್ಪ ಪತ್ರವು ಯುವ ಭಾರತದ ಯುವ ಆಕಾಂಕ್ಷೆಗಳ ಪ್ರತಿಬಿಂಬವಾಗಿದೆ: ಬಿಜೆಪಿ ಹೆಚ್ಕ್ಯುನಲ್ಲಿ ಪ್ರಧಾನಿ ಮೋದಿ

April 14th, 09:02 am

ಇಂದು ಪಕ್ಷದ ಪ್ರಧಾನ ಕಛೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ, ಇಡೀ ರಾಷ್ಟ್ರವು ಬಿಜೆಪಿಯ ಪ್ರಣಾಳಿಕೆಗಾಗಿ ಕಾತರದಿಂದ ಕಾಯುತ್ತಿದೆ, ಇದಕ್ಕೆ ಗಮನಾರ್ಹ ಕಾರಣವಿದೆ, ಕಳೆದ 10 ವರ್ಷಗಳಲ್ಲಿ, ಬಿಜೆಪಿ ತನ್ನ ಪ್ರಣಾಳಿಕೆಯ ಪ್ರತಿಯೊಂದು ಅಂಶವನ್ನು ಗ್ಯಾರಂಟಿಯಾಗಿ ಜಾರಿಗೆ ತಂದಿದೆ. ನಮ್ಮ ಸಂಕಲ್ಪ ಪತ್ರವು ತನ್ನ ಪ್ರಣಾಳಿಕೆಯ ಸಮಗ್ರತೆಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ - ಯುವಜನರು, ಮಹಿಳೆಯರು, ಬಡವರು ಮತ್ತು ರೈತರು.

ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರ ಬಿಡುಗಡೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿಯವರು ಪ್ರಮುಖ ಭಾಷಣ ಮಾಡಿದರು

April 14th, 09:01 am

ಇಂದು ಪಕ್ಷದ ಪ್ರಧಾನ ಕಛೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ, ಇಡೀ ರಾಷ್ಟ್ರವು ಬಿಜೆಪಿಯ ಪ್ರಣಾಳಿಕೆಗಾಗಿ ಕಾತರದಿಂದ ಕಾಯುತ್ತಿದೆ, ಇದಕ್ಕೆ ಗಮನಾರ್ಹ ಕಾರಣವಿದೆ, ಕಳೆದ 10 ವರ್ಷಗಳಲ್ಲಿ, ಬಿಜೆಪಿ ತನ್ನ ಪ್ರಣಾಳಿಕೆಯ ಪ್ರತಿಯೊಂದು ಅಂಶವನ್ನು ಗ್ಯಾರಂಟಿಯಾಗಿ ಜಾರಿಗೆ ತಂದಿದೆ. ನಮ್ಮ ಸಂಕಲ್ಪ ಪತ್ರವು ತನ್ನ ಪ್ರಣಾಳಿಕೆಯ ಸಮಗ್ರತೆಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ - ಯುವಜನರು, ಮಹಿಳೆಯರು, ಬಡವರು ಮತ್ತು ರೈತರು.

ನಮೋ ಭಾರತ್ ರೈಲು ಹೊಸ ಭಾರತದ ಹೊಸ ಪ್ರಯಾಣ ಮತ್ತು ಅದರ ಹೊಸ ನಿರ್ಣಯಗಳನ್ನು ವ್ಯಾಖ್ಯಾನಿಸುತ್ತಿದೆ: ಪ್ರಧಾನಿ ಮೋದಿ

October 20th, 04:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್‌ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್‌ಆರ್‌ಟಿಎಸ್ ಕಾರಿಡಾರ್‌ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ (ಆರ್‌ಆರ್‌ಟಿಎಸ್) ಪ್ರಾರಂಭವನ್ನು ಗುರುತಿಸುವ ಮೂಲಕ ಸಾಹಿಬಾಬಾದ್‌ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್‌ಎಕ್ಸ್ ರೈಲಿಗೆ ಅವರು ಫ್ಲ್ಯಾಗ್‌ಆಫ್ ಮಾಡಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ನ ಎರಡು ವಿಸ್ತರಣೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ ನಲ್ಲಿ ಭಾರತದ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್‌ ಆರ್‌ ಟಿ ಎಸ್) ಯನ್ನು ಉದ್ಘಾಟಿಸಿದ ಪ್ರಧಾನಿ

October 20th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್‌ ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್‌ ಆರ್‌ ಟಿ ಎಸ್ ಕಾರಿಡಾರ್‌ ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ಕ್ಷಿಪ್ತ ಸಾರಿಗೆ ವ್ಯವಸ್ಥೆ (ಆರ್‌ ಆರ್‌ ಟಿ ಎಸ್) ಪ್ರಾರಂಭದ ಗುರುತಾಗಿ ಸಾಹಿಬಾಬಾದ್‌ ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್‌ ಎಕ್ಸ್ ರೈಲಿಗೆ ಅವರು ಹಸಿರುನಿಶಾನೆ ತೋರಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ ನ ಎರಡು ವಿಸ್ತರಿತ ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

ಜನರ ಹಿತಾಸಕ್ತಿಗಿಂತ ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಅನ್ನು ಹೆಚ್ಚು ಪ್ರೀತಿಸುತ್ತದೆ: ಜೋಧ್‌ಪುರದಲ್ಲಿ ಪ್ರಧಾನಿ ಮೋದಿ

October 05th, 12:21 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೆಹಲಿಯಿಂದ ವಿಶೇಷ ಉಡುಗೊರೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇನೆ ಎಂದು ಹೇಳುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ನಿನ್ನೆಯಷ್ಟೇ ಬಿಜೆಪಿ ಸರಕಾರವು ಉಜ್ವಲ ಫಲಾನುಭವಿ ಸಹೋದರಿಯರಿಗೆ ಕೇಂದ್ರ ಸರಕಾರದಿಂದ ಕೇವಲ 600 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ನಿರ್ಧರಿಸಿದೆ. ದಸರಾ ಮತ್ತು ದೀಪಾವಳಿಯ ಮೊದಲು ಉಜ್ವಲ ಸಿಲಿಂಡರ್ ಅನ್ನು 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.

ಪ್ರಧಾನಿ ಮೋದಿ ಅವರು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು

October 05th, 12:20 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೆಹಲಿಯಿಂದ ವಿಶೇಷ ಉಡುಗೊರೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇನೆ ಎಂದು ಹೇಳುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ನಿನ್ನೆಯಷ್ಟೇ ಬಿಜೆಪಿ ಸರಕಾರವು ಉಜ್ವಲ ಫಲಾನುಭವಿ ಸಹೋದರಿಯರಿಗೆ ಕೇಂದ್ರ ಸರಕಾರದಿಂದ ಕೇವಲ 600 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ನಿರ್ಧರಿಸಿದೆ. ದಸರಾ ಮತ್ತು ದೀಪಾವಳಿಯ ಮೊದಲು ಉಜ್ವಲ ಸಿಲಿಂಡರ್ ಅನ್ನು 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.

Jamnagar is emerging as the hub of manufacturing and coast-led development: PM Modi

October 10th, 06:50 pm

PM Modi laid the foundation stone and dedicated to the nation multiple projects worth around Rs 1450 crore in Jamnagar, Gujarat. The PM informed everyone that five resolutions of development have created a solid foundation for the state of Gujarat. The first resolution is Jan Shakti, the second is Gyan Shakti, the third is Jal Shakti, the fourth is Urja Shakti and finally Raksha Shakti.

PM lays the foundation stone and dedicates to the nation multiple projects worth over Rs 1450 crore in Jamnagar, Gujarat

October 10th, 06:49 pm

PM Modi laid the foundation stone and dedicated to the nation multiple projects worth around Rs 1450 crore in Jamnagar, Gujarat. The PM informed everyone that five resolutions of development have created a solid foundation for the state of Gujarat. The first resolution is Jan Shakti, the second is Gyan Shakti, the third is Jal Shakti, the fourth is Urja Shakti and finally Raksha Shakti.

ಮಹಾ ಅಷ್ಟಮಿಯಂದು ಜನತೆಗೆ ಶುಭ ಕೋರಿದ ಪ್ರಧಾನಿ

October 03rd, 11:42 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾ ಅಷ್ಟಮಿಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ತಾಯಿ ಮಹಾಗೌರಿಯ ಆಶೀರ್ವಾದವು ಪ್ರತಿಯೊಬ್ಬರ ಜೀವನದಲ್ಲಿ ಅದೃಷ್ಟ, ಸಮೃದ್ಧಿ ಮತ್ತು ಯಶಸ್ಸನ್ನು ತರಲಿ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಶ್ರೀ ಮೋದಿ ಅವರು ಮಹಾಗೌರಿಯ ಪ್ರಾರ್ಥನೆಯ ಸ್ತೋತ್ರವನ್ನು ಹಂಚಿಕೊಂಡಿದ್ದಾರೆ.