ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

July 17th, 11:04 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಬಿಹಾರದ ಮೋತಿಹರಿಯಲ್ಲಿ 7,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಮಂತ್ರಿ ಅವರು ಅರ್ಜೆಂಟೀನಾದ ಅಧ್ಯಕ್ಷ ಜೇವಿಯರ್ ಮಿಲೀ ಅವರನ್ನು ಭೇಟಿಯಾದರು

July 06th, 01:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರ್ಜೆಂಟೀನಾದ ಅಧ್ಯಕ್ಷ ಘನತೆವೆತ್ತ ಜೇವಿಯರ್ ಮಿಲೀ ಅವರನ್ನು ಭೇಟಿ ಮಾಡಿದರು. ಕಾಸಾ ರೊಸಾಡಾಗೆ ಆಗಮಿಸಿದಾಗ ಅಧ್ಯಕ್ಷ ಮಿಲೀ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಿನ್ನೆ ಬ್ಯೂನಸ್ ಐರಿಸ್ ಗೆ ಆಗಮಿಸಿದ ಪ್ರಧಾನಮಂತ್ರಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು. 57 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಅರ್ಜೆಂಟೀನಾಕ್ಕೆ ನೀಡುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿರುವುದರಿಂದ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಉಭಯ ದೇಶಗಳು ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ವರ್ಷಗಳನ್ನು ಆಚರಿಸುತ್ತಿರುವುದರಿಂದ ಇದು ಭಾರತ-ಅರ್ಜೆಂಟೀನಾ ಸಂಬಂಧಗಳಿಗೆ ಮಹತ್ವದ ವರ್ಷವಾಗಿದೆ. ತಮಗೆ ಮತ್ತು ತಮ್ಮ ನಿಯೋಗಕ್ಕೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ಪ್ರಧಾನಮಂತ್ರಿ ಅವರು ಅಧ್ಯಕ್ಷ ಮಿಲೀ ಅವರಿಗೆ ಧನ್ಯವಾದ ಅರ್ಪಿಸಿದರು.

ಪ್ರಧಾನಮಂತ್ರಿ ಅವರಿಂದ ಅರ್ಜೆಂಟೀನಾ ಅಧ್ಯಕ್ಷರ ಭೇಟಿ

November 20th, 08:09 pm

ಇದು ಉಭಯ ನಾಯಕರ ನಡುವಿನ ಮೊದಲ ದ್ವಿಪಕ್ಷೀಯ ಸಭೆಯಾಗಿತ್ತು. ಐತಿಹಾಸಿಕ ಮೂರನೇ ಅವಧಿಯ ಅಧಿಕಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಧ್ಯಕ್ಷ ಮಿಲೀ ಅವರು ಅಭಿನಂದಿಸಿದರು. ಪ್ರಧಾನಮಂತ್ರಿ ಸಹ ಅಧ್ಯಕ್ಷ ಮೈಲಿ ಅವರು ಅಧಿಕಾರ ವಹಿಸಿಕೊಂಡಿರುವುದಕ್ಕೆ ಶುಭ ಕೋರಿದರು.

ಫೆಬ್ರವರಿ 16 ರಂದು ವಿಕಸಿತ ‘ಭಾರತ – ವಿಕಸಿತ ರಾಜಸ್ಥಾನ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ

February 15th, 03:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಫೆಬ್ರವರಿ 16 ರಂದು ಬೆಳಿಗ್ಗೆ 11 ಗಂಟೆಗೆ ‘ವಿಕಸಿತ ಭಾರತ – ವಿಕಸಿತ ರಾಜಸ್ಥಾನ’ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ರಾಜಸ್ಥಾನದಲ್ಲಿ 17,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ರಸ್ತೆ, ರೈಲ್ವೆ, ಸೌರ ವಿದ್ಯುತ್, ವಿದ್ಯುತ್ ಪ್ರಸರಣ, ಕುಡಿಯುವ ನೀರು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದಂತಹ ಪ್ರಮುಖ ಕ್ಷೇತ್ರಗಳ ಯೋಜನೆಗಳನ್ನು ಇವು ಒಳಗೊಂಡಿವೆ.

​​​​​​​ಗೋವಾದಲ್ಲಿ ನಡೆದ ಭಾರತ ಇಂಧನ ಸಪ್ತಾಹ 2024 ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ

February 06th, 12:00 pm

ಇದು ಭಾರತ ಇಂಧನ ಸಪ್ತಾಹದ ಎರಡನೇ ಆವೃತ್ತಿ, ನಾನು ನಿಮ್ಮೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಇದು ಕ್ರಿಯಾಶೀಲ ಶಕ್ತಿಗೆ ಹೆಸರಾದ ರಾಜ್ಯ ಗೋವಾದಲ್ಲಿ ನಡೆಯುತ್ತಿರುವುದು ನನಗೆ ಅತೀವ ಆನಂದ ತಂದಿದೆ. ತನ್ನ ಆತಿಥ್ಯಕ್ಕೆ ಹೆಸರುವಾಸಿಯಾದ ಗೋವಾ ತನ್ನ ಶ್ರೀಮಂತ ಸೌಂದರ್ಯ ಮತ್ತು ಸಂಸ್ಕೃತಿಯಿಂದಾಗಿ ಜಗತ್ತಿನೆಲ್ಲೆಡೆಯಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಪ್ರಸ್ತುತ ಗೋವಾ ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಏರುತ್ತಿದೆ. ಆದ್ದರಿಂದ, ಪರಿಸರ ಪ್ರಜ್ಞೆ ಮತ್ತು ಸುಸ್ಥಿರ ಭವಿಷ್ಯವನ್ನು ಚರ್ಚಿಸಲು ನಾವು ಸಭೆ ನಡೆಸುತ್ತಿರುವಾಗ, ಗೋವಾ ಒಂದು ಸೂಕ್ತ ಸ್ಥಳವಾಗಿದೆ. ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ನಮ್ಮ ಗೌರವಾನ್ವಿತ ವಿದೇಶಿ ಅತಿಥಿಗಳು ಜೀವಮಾನವಿಡೀ ಗೋವಾದ ಅಚ್ಚುಮೆಚ್ಚಿನ ನೆನಪುಗಳನ್ನು ತಮ್ಮೊಂದಿಗೆ ಒಯ್ಯುತ್ತಾರೆಂಬ ವಿಶ್ವಾಸ ನನಗಿದೆ

​​​​​​​ಇಂಡಿಯಾ ಇಂಧನ ಸಪ್ತಾಹ-2024 ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಮಂತ್ರಿ

February 06th, 11:18 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದಲ್ಲಿಂದು “ಭಾರತ ಇಂಧನ ಸಪ್ತಾಹ-2024” ಕಾರ್ಯಕ್ರಮ ಉದ್ಘಾಟಿಸಿದರು. “ಭಾರತ ಇಂಧನ ಸಪ್ತಾಹ-2024” ಕಾರ್ಯಕ್ರಮವು ಭಾರತದ ಅತಿ ದೊಡ್ಡ ಮತ್ತು ಎಲ್ಲವನ್ನು ಒಳಗೊಂಡಿರುವ ಇಂಧನ ಪ್ರದರ್ಶನ ಮತ್ತು ಸಮ್ಮೇಳನವಾಗಿದ್ದು, ಭಾರತದ ಇಂಧನ ಪರಿವರ್ತನೆಯ ಗುರಿಗಳನ್ನು ವೇಗಗೊಳಿಸಲು ಸಂಪೂರ್ಣ ಇಂಧನ ಮೌಲ್ಯ ಸರಪಳಿಯನ್ನು ಒಟ್ಟುಗೂಡಿಸುತ್ತದೆ. ಪ್ರಧಾನ ಮಂತ್ರಿ ಅವರು ಜಾಗತಿಕ ಮಟ್ಟದ ತೈಲ ಮತ್ತು ಅನಿಲ ಕ್ಷೇತ್ರದ ಸಿಇಒಗಳು ಮತ್ತು ತಜ್ಞರೊಂದಿಗೆ ದುಂಡುಮೇಜಿನ ಸಭೆ ನಡೆಸಿದರು.

​​​​​​​ಕೃಷ್ಣಾ- ಗೋದಾವರಿ ಜಲಾನಯನ ಪ್ರದೇಶದಿಂದ ಆಳ ನೀರಿನಲ್ಲಿ ತೈಲ ಉತ್ಪಾದನೆ ಶುಭಾರಂಭಕ್ಕೆ ಪ್ರಧಾನ ಮಂತ್ರಿಗಳ ಶ್ಲಾಘನೆ

January 08th, 10:06 am

ಕೃಷ್ಣಾ- ಗೋದಾವರಿ ಜಲಾನಯನ ಪ್ರದೇಶದಲ್ಲಿ ಸಂಕೀರ್ಣ ಮತ್ತು ಕ್ಲಿಷ್ಟಕರವಾದ ಆಳವಾದ ನೀರಿನಲ್ಲಿ ಮೊದಲ ತೈಲ ಉತ್ಪಾದನಾ ಕಾರ್ಯ (ಕೆಜಿ-ಡಿಡಬ್ಲ್ಯೂಎನ್-98/2 ಬ್ಲಾಕ್, ಬಂಗಾಳ ಕೊಲ್ಲಿಯ ಕರಾವಳಿಯಲ್ಲಿದೆ) ಶುಭಾರಂಭಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂದು ಶ್ಲಾಘಿಸಿದ್ದಾರೆ.

ಜಾಗತಿಕ ತೈಲ ಮತ್ತು ಅನಿಲ ವಲಯದ ತಜ್ಞರು ಮತ್ತು ಸಿಇಒಗಳ ಜತೆ ಪ್ರಧಾನ ಮಂತ್ರಿ ವೀಡಿಯೊ ಕಾನ್ಫರೆನ್ಸ್ ಸಂವಾದ

October 20th, 09:17 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾಗತಿಕ ತೈಲ ಮತ್ತು ಅನಿಲ ವಲಯದ ಸಿಇಒಗಳು ಮತ್ತು ತಜ್ಞರ ಜತೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.