ಅಸ್ಸಾಂನ ಗುವಾಹಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 13th, 05:30 pm

ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಜನಪ್ರತಿನಿಧಿಗಳೆ, ದೇಶಾದ್ಯಂತ ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ನಮ್ಮ ಎಲ್ಲಾ ರೈತ ಮಿತ್ರರೆ, ಚಹಾ ತೋಟಗಳಲ್ಲಿ ಕೆಲಸ ಮಾಡುವ ನನ್ನ ಸಹೋದರ ಸಹೋದರಿಯರೆ ಮತ್ತು ನಮ್ಮ ಅನೇಕ ಹಿರಿಯ ಮುಖ್ಯಮಂತ್ರಿಗಳು ಇಂದು ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಯಿಂದ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಎಲ್ಲರಿಗೂ ನನ್ನ ಶುಭಾಶಯಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು; ದೇಶಾದ್ಯಂತದ ಕೋಟ್ಯಂತರ ರೈತರಿಗೆ ₹18,000 ಕೋಟಿಗೂ ಹೆಚ್ಚಿನ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು

March 13th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಸುಮಾರು ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ನಡೆದ ಭವ್ಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಗರದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ದೇಶಾದ್ಯಂತದಿಂದ ಕಾರ್ಯಕ್ರಮದಲ್ಲಿ ಸೇರಿದ್ದ ರೈತರು ಹಾಗೂ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಸಹೋದರ, ಸಹೋದರಿಯರನ್ನು ಅವರು ಸ್ವಾಗತಿಸಿದರು. ನವರಾತ್ರಿಯ ಮುನ್ನಾದಿನದಂದು ಮಾ ಕಾಮಾಖ್ಯ ಅವರ ಪವಿತ್ರ ಭೂಮಿಯಲ್ಲಿ ಇರುವ ಸೌಭಾಗ್ಯಕ್ಕಾಗಿ ಪ್ರಧಾನಮಂತ್ರಿಯವರು ಕೃತಜ್ಞತೆ ಸಲ್ಲಿಸಿದರು. ನವರಾತ್ರಿ ಪ್ರಾರಂಭವಾಗುವ ಸ್ವಲ್ಪ ಮೊದಲು ಮಾ ಕಾಮಾಖ್ಯ ಅವರ ಈ ಪವಿತ್ರ ಭೂಮಿಯಲ್ಲಿ ನಿಮ್ಮ ದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ ಎಂದು ಶ್ರೀ ಮೋದಿ ಅವರು ಹೇಳಿದರು.

ಭಾರತ ಇಂಧನ ಸಪ್ತಾಹ-2026 ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ

January 27th, 10:15 am

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಗೋವಾ ಮುಖ್ಯಮಂತ್ರಿಗಳೆ, ಇತರೆ ಸಚಿವರೆ, ರಾಯಭಾರಿಗಳೆ, ಸಿಇಒಗಳೆ, ಗಣ್ಯ ಅತಿಥಿಗಳೆ, ಇತರ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ʻಭಾರತ ಇಂಧನ ಸಪ್ತಾಹ-2026ʼರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ

January 27th, 10:08 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಭಾರತ ಇಂಧನ ಸಪ್ತಾಹ-2026ʼರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಮಾತು ಆರಂಭಿಸಿದ ಶ್ರೀ ಮೋದಿಯವರು, ಇಂಧನ ಸಪ್ತಾಹದ ಈ ಹೊಸ ಆವೃತ್ತಿಗಾಗಿ ಸುಮಾರು 125 ದೇಶಗಳ ಪ್ರತಿನಿಧಿಗಳು ಗೋವಾದಲ್ಲಿ ಸೇರಿದ್ದಾರೆ ಎಂದು ಹೇಳಿದರು. ಇಂಧನ-ಸುರಕ್ಷಿತ ಮತ್ತು ಸುಸ್ಥಿರ ಭವಿಷ್ಯದ ಬಗ್ಗೆ ಚರ್ಚಿಸಲು ಅವರು ಭಾರತಕ್ಕೆ ಬಂದಿದ್ದಾರೆ ಎಂದು ಅವರು ಒತ್ತಿ ಹೇಳಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ಸ್ವಾಗತಿಸಿದರು.

ಮಂಗೋಲಿಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಪ್ರಕಟಣೆಯ ಕನ್ನಡ ಅನುವಾದ

October 14th, 01:15 pm

ಮಂಗೋಲಿಯಾ ಅಧ್ಯಕ್ಷರು ಆರು ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ, ಇದು ಬಹಳ ವಿಶೇಷ ಸಂದರ್ಭವಾಗಿದೆ. ಭಾರತ ಮತ್ತು ಮಂಗೋಲಿಯಾ 70 ವರ್ಷಗಳ ರಾಜತಾಂತ್ರಿಕ ಸಂಬಂಧಗಳು ಮತ್ತು 10 ವರ್ಷಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ಬಂದಿದೆ. ಇದನ್ನು ಗುರುತಿಸಲು, ನಾವು ನಮ್ಮ ಹಂಚಿಕೆಯ ಪರಂಪರೆ, ವೈವಿಧ್ಯತೆ ಮತ್ತು ಬಲವಾದ ನಾಗರಿಕತೆಯ ಬಾಂಧವ್ಯಗಳನ್ನು ಎತ್ತಿ ತೋರಿಸುವ ಜಂಟಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದೇವೆ.