India-Indonesia Joint Statement on the State Visit by Prime Minister of India to Indonesia

July 07th, 05:15 pm

At the invitation of Indonesian President Prabowo Subianto, PM Modi is on a State Visit to Indonesia from 6-8 July 2026. PM Modi's visit reflects the shared commitment of the two leaders to achieve a substantial upward trajectory in the India-Indonesia Comprehensive Strategic Partnership. The two leaders held discussions at Istana Merdeka in Jakarta, covering the full spectrum of bilateral relations.

ಮುಂಬೈನಲ್ಲಿ ನಡೆದ 6ನೇ ಆವೃತ್ತಿಯ ಜಾಗತಿಕ ಫಿನ್ ಟೆಕ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

October 09th, 02:51 pm

ಗೌರವಾನ್ವಿತ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್, ರಿಸರ್ಬ್ ಬ್ಯಾಂಕ್ ಇಂಡಿಯಾದ ಗವರ್ನರ್, ನಾವಿನ್ಯಕಾರರೇ, ನಾಯಕರೇ ಮತ್ತು ಜಗತ್ತಿನ ಎಲ್ಲಾ ಮೂಲೆಗಳಿಂದ ಆಗಮಿಸಿರುವ ಹೂಡಿಕೆದಾರರೆ, ಮಹಿಳೆಯರೆ ಮತ್ತು ಮಹನೀಯರೆ, ನಿಮ್ಮೆಲ್ಲರಿಗೂ ಮುಂಬೈಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.

ಮುಂಬೈನ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

October 09th, 02:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025' ಅನ್ನುದ್ದೇಶಿಸಿ ಮಾತನಾಡಿದರು. ಮುಂಬೈಗೆ ಆಗಮಿಸಿದ ಎಲ್ಲ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಶ್ರೀ ಮೋದಿ ಅವರು, ಮುಂಬೈಯನ್ನು 'ಶಕ್ತಿಯ ನಗರ, ಉದ್ಯಮಶೀಲತೆಯ ನಗರ, ಮತ್ತು ಅನಂತ ಸಾಧ್ಯತೆಗಳ ನಗರ' ಎಂದು ಬಣ್ಣಿಸಿದರು. ಅವರು ತಮ್ಮ ಸ್ನೇಹಿತ, ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಕೀರ್ ಸ್ಟಾರ್ಮರ್ ಅವರನ್ನು ವಿಶೇಷವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ಸಮಯ ಮೀಸಲಿಟ್ಟು ಆಗಮಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ರೋಜ್‌ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 26th, 11:23 am

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

April 26th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಣ್ಣ ಉದ್ಯಮಗಳ ಸಬಲೀಕರಣ ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಒ ಎನ್ ಡಿ ಸಿ ಕೊಡುಗೆ ಅಪಾರ: ಪ್ರಧಾನಮಂತ್ರಿ

January 02nd, 10:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸಣ್ಣ ಉದ್ಯಮಗಳನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಇ-ಕಾಮರ್ಸ್ ನಲ್ಲಿ ಕ್ರಾಂತಿಕಾರಕ ಬದಲಾವಣೆ ತರುವಲ್ಲಿ ಡಿಜಿಟಲ್ ಕಾಮರ್ಸ್ ಗಾಗಿ ಓಪನ್ ನೆಟ್ ವರ್ಕ್ ನ ಕೊಡುಗೆಯನ್ನು ಎತ್ತಿ ತೋರಿಸಿ, ಬೆಳವಣಿಗೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.