ತಮಿಳುನಾಡಿನ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಅವರ ಸಂವಾದ

April 13th, 04:00 pm

‘ಮೇರಾ ಬೂತ್, ಸಬ್ಸೆ ಮಜ್ಬೂತ್ ಸಂವಾದ’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ತಮಿಳುನಾಡಿನ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು, ರಾಜ್ಯಾದ್ಯಂತ ಎನ್‌ಡಿಎಯ ಪ್ರಭಾವವನ್ನು ಬಲಪಡಿಸುವಲ್ಲಿ ಅವರ ಅವಿರತ ತಳಮಟ್ಟದ ಪ್ರಯತ್ನಗಳನ್ನು ಶ್ಲಾಘಿಸಿದರು.

ತಮಿಳುನಾಡಿನ ಮಧುರೈನಲ್ಲಿ ನಡೆದ ಉತ್ಸಾಹಭರಿತ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

March 01st, 04:30 pm

ಮಧುರೈನಲ್ಲಿ ನಡೆದ ಬೃಹತ್ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು, ತಮಿಳುನಾಡಿನ ಆಧ್ಯಾತ್ಮಿಕ ಪರಂಪರೆಯ ಬಗ್ಗೆ ಆಳವಾದ ಗೌರವದಿಂದ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಾವು ಇತ್ತೀಚೆಗೆ ತಿರುಪ್ಪರಾಂಕುಂದ್ರಂಗೆ ಭೇಟಿ ನೀಡಿ ಭಗವಾನ್ ಮುರುಗನ್ ದರ್ಶನ ಪಡೆದಿರುವುದಾಗಿಯೂ, ಇದು ನಿಜವಾದ ದೈವಿಕ ಅನುಭವ ಎಂದು ಬಣ್ಣಿಸಿರುವುದಾಗಿಯೂ ಅವರು ಹೇಳಿದರು. ತಮಿಳುನಾಡು ಮತ್ತು ಇಡೀ ರಾಷ್ಟ್ರದ ಸಮೃದ್ಧಿಗಾಗಿ ಪ್ರಾರ್ಥಿಸುವುದಾಗಿ ಅವರು ಹೇಳಿದರು.

ತಮಿಳುನಾಡಿನ ಮಧುರೈನಲ್ಲಿ ವಿವಿಧ ಮೂಲಸೌಕರ್ಯ ಕಾಮಗಾರಿಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

March 01st, 03:30 pm

ಶ್ರೀ ಆರ್.ಎನ್. ರವಿ, ಎಲ್. ಮುರುಗನ್, ಎಡಪ್ಪಾಡಿ ಕೆ. ಪಳನಿಸ್ವಾಮಿ, ನೈನಾರ್ ನಾಗೇಂದ್ರನ್, ಇ.ವಿ. ವೇಲು, ಮತ್ತು ತಮಿಳುನಾಡಿನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ವನಕ್ಕಂ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧುರೈನಲ್ಲಿ 4,400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಮಧುರೈನ ಮೂಲಸೌಕರ್ಯ ಕಾಮಗಾರಿಗಳು ಸಂಪರ್ಕವನ್ನು ಸುಧಾರಿಸಲಿವೆ ಮತ್ತು ತಮಿಳುನಾಡಿನಾದ್ಯಂತ ಜನರಿಗೆ ಗಮನಾರ್ಹ ಪ್ರಯೋಜನವನ್ನು ನೀಡಲಿವೆ: ಪ್ರಧಾನಮಂತ್ರಿ

March 01st, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಮಧುರೈನಲ್ಲಿ 4,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು. ಪವಿತ್ರ ನಗರವಾದ ಮಧುರೈನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ತಮಿಳುನಾಡಿನ ಅಭಿವೃದ್ಧಿ ಪ್ರಯಾಣದಲ್ಲಿ ಹೆಮ್ಮೆಯ ಅಧ್ಯಾಯವಾಗಿದೆ ಎಂದು ಹೇಳಿದರು. ಈ ಯೋಜನೆಗಳು ಸಂಪರ್ಕವನ್ನು ಪರಿವರ್ತಿಸುವುದು, ಆರ್ಥಿಕತೆಯನ್ನು ಹೆಚ್ಚಿಸುವುದು ಮತ್ತು ಯುವಕರಿಗೆ ಗಮನಾರ್ಹ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮತ್ತು ರಾಜ್ಯದ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸುವ ಗುರಿಯನ್ನು ಹೊಂದಿವೆ. ಉತ್ತಮ ಗುಣಮಟ್ಟದ ಮೂಲಸೌಕರ್ಯವನ್ನು ನಿರ್ಮಿಸುವುದು ಮೂಲಭೂತವಾಗಿ ಜನರನ್ನು ಸಬಲೀಕರಣಗೊಳಿಸುವುದಾಗಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಬೆಳವಣಿಗೆಗಳು ರೈತರು ಮಾರುಕಟ್ಟೆಗಳನ್ನು ತಲುಪಲು ಉತ್ತಮ ರಸ್ತೆಗಳು, ಯಾತ್ರಿಕರು ಮತ್ತು ಪ್ರವಾಸಿಗರಿಗೆ ಸುಲಭ ಪ್ರಯಾಣ ಮತ್ತು ವ್ಯವಹಾರಗಳಿಗೆ ವೇಗವಾದ ಸಾರಿಗೆಯನ್ನು ಅರ್ಥೈಸುತ್ತವೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು.

ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 14th, 11:00 am

ಇಂದು ಪೊಂಗಲ್ ನಿಜವಾಗಿಯೂ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಪ್ರಪಂಚದಾದ್ಯಂತ, ತಮಿಳು ಸಮುದಾಯ ಮತ್ತು ತಮಿಳು ಸಂಸ್ಕೃತಿಯನ್ನು ಪ್ರೀತಿಸುವವರು ಇದನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ನಾನು ಅವರಲ್ಲಿ ಒಬ್ಬನಾಗಿದ್ದೇನೆ. ಈ ವಿಶೇಷ ಹಬ್ಬವನ್ನು ಆಚರಿಸಲು ನಿಮ್ಮೊಂದಿಗೆ ಕೈಜೋಡಿಸುವುದು ನನ್ನ ಸೌಭಾಗ್ಯವಾಗಿದೆ. ತಮಿಳು ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವವಾಗಿದೆ. ಇದು ನಮ್ಮ ರೈತರು, ಭೂಮಿ ಮತ್ತು ಸೂರ್ಯನ ಬಗ್ಗೆ ಕೃತಜ್ಞತೆಯನ್ನು ಸಾಕಾರಗೊಳಿಸುತ್ತದೆ. ಇದು ಪ್ರಕೃತಿ, ಕುಟುಂಬ ಮತ್ತು ಸಮಾಜದೊಂದಿಗೆ ಸಾಮರಸ್ಯದ ಮಹತ್ವವನ್ನು ನಮಗೆ ಕಲಿಸುತ್ತದೆ. ಈ ಸಮಯದಲ್ಲಿ, ಭಾರತದ ಇತರ ಪ್ರದೇಶಗಳು ಸಹ ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಹೆಚ್ಚಿನವುಗಳಲ್ಲಿ ಮುಳುಗಿರುತ್ತವೆ. ಪೊಂಗಲ್ ಮತ್ತು ಈ ಎಲ್ಲಾ ಹಬ್ಬಗಳಲ್ಲಿ ನಾನು ಭಾರತ ಮತ್ತು ಪ್ರಪಂಚದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ಪೊಂಗಲ್ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

January 14th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯಲ್ಲಿಂದು ನಡೆದ ಪೊಂಗಲ್ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ತಮಿಳಿನಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ಶ್ರೀ ನರೇಂದ್ರ ಮೋದಿ, ”ಪೊಂಗಲ್ ಇಂದು ಜಾಗತಿಕ ಹಬ್ಬವಾಗಿದೆ’’ ಎಂದು ಒತ್ತಿ ಹೇಳಿದರು. ಈ ಹಬ್ಬವನ್ನು ತಮಿಳು ಸಮುದಾಯಗಳು ಮತ್ತು ಪ್ರಪಂಚದಾದ್ಯಂತ ತಮಿಳು ಸಂಸ್ಕೃತಿಯನ್ನು ಪಾಲಿಸುವವರು ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ತಾವೂ ಅವರಲ್ಲಿ ಒಬ್ಬರು ಎಂದು ಹೇಳಿದರು. ಈ ವಿಶೇಷ ಹಬ್ಬವನ್ನು ಎಲ್ಲರ ಜೊತೆ ಸೇರಿ ಆಚರಿಸುವುದು ತಮ್ಮ ಅದೃಷ್ಟ ಎಂದು ಅವರು ಹೇಳಿದರು. ತಮಿಳು ಜನರ ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವದಂತೆ, ರೈತರು, ಭೂಮಿ ಮತ್ತು ಸೂರ್ಯನ ಶ್ರಮಕ್ಕೆ ಕೃತಜ್ಞತೆ ಸಲ್ಲಿಸುವುದನ್ನು ಸಾಕಾರಗೊಳಿಸುತ್ತದೆ ಮತ್ತು ಪ್ರಕೃತಿ, ಕುಟುಂಬ ಮತ್ತು ಸಮಾಜದಲ್ಲಿ ಸಮತೋಲನದತ್ತ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಇದೇ ವೇಳೆ ದೇಶದ ವಿವಿಧ ಭಾಗಗಳು ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಇತರ ಹಬ್ಬಗಳ ಆಚರಣೆಯಲ್ಲಿ ಮುಳುಗಿವೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಪೊಂಗಲ್ ಹಬ್ಬದಂದು ಭಾರತ ಮತ್ತು ವಿಶ್ವದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು ಮತ್ತು ಇತರೆ ಎಲ್ಲಾ ಹಬ್ಬಗಳಿಗೆ ಶುಭ ಕೋರಿದರು.

ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 26th, 08:16 pm

ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು

July 26th, 07:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ದೇಶದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು. ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ, ಸಾರಿಗೆ ಸೌಲಭ್ಯದ ದಕ್ಷತೆಯನ್ನು ಹೆಚ್ಚಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ಹಾಗು ತಮಿಳುನಾಡಿನಾದ್ಯಂತ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವ ಬಹು ವಲಯಗಳಲ್ಲಿ ಪ್ರಮುಖವಾದ ಯೋಜನೆಗಳ ಸರಣಿ ಇದಾಗಿದೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ, ಶ್ರೀ ಮೋದಿ ಕಾರ್ಗಿಲ್ ನ ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದರು ಮತ್ತು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರಕ್ಕಾಗಿ ಬೆಲೆಕಟ್ಟಲಾಗದ ತ್ಯಾಗ ಮಾಡಿದ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.

ರಾಜಸ್ಥಾನದ ಬಿಕಾನೇರ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 22nd, 12:00 pm

ರಾಜಸ್ಥಾನ ರಾಜ್ಯಪಾಲರಾದ ಹರಿಭಾವು ಬಾಗ್ಡೆ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀಮನ್ ಭಜನ್ ಲಾಲ್ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಅರ್ಜುನ್ ರಾಮ್ ಮೇಘವಾಲ್ ಜಿ, ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಜಿ, ಪ್ರೇಮ್ ಚಂದ್ ಜಿ, ರಾಜಸ್ಥಾನ ಸರ್ಕಾರದ ಸಚಿವರುಗಳೆ, ಸಂಸತ್ತಿನ ನನ್ನ ಸಹೋದ್ಯೋಗಿ ಮದನ್ ರಾಥೋಡ್ ಜಿ, ಇತರೆ ಸಂಸದರು ಮತ್ತು ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ರಾಜಸ್ಥಾನದ ಬಿಕಾನೇರ್‌ನಲ್ಲಿ 26,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 22nd, 11:30 am

ರಾಜಸ್ಥಾನದ ಬಿಕಾನೇರ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ, ಕಾರ್ಯಕ್ರಮದಲ್ಲಿ ನೆರೆದಿದ್ದ ಬೃಹತ್ ಜನಸಮೂಹವನ್ನು ಸ್ವಾಗತಿಸಿ ಮಾತನಾಡಿದ ಅವರು, ಆನ್‌ಲೈನ್‌ನಲ್ಲಿ ಭಾಗವಹಿಸಿರುವ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನರನ್ನು ಶ್ಲಾಘಿಸಿದರು. ಹಲವಾರು ರಾಜ್ಯಪಾಲರು, ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಇತರೆ ಸಾರ್ವಜನಿಕ ಪ್ರತಿನಿಧಿಗಳು ಇಲ್ಲಿ ಉಪಸ್ಥಿತರಿದ್ದು, ಜತೆಗೆ ದೇಶಾದ್ಯಂತ ಸಂಪರ್ಕ ಹೊಂದಿರುವ ಎಲ್ಲಾ ಗೌರವಾನ್ವಿತ ಗಣ್ಯರು ಮತ್ತು ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ತಮಿಳುನಾಡಿನ ರಾಮೇಶ್ವರಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 06th, 02:00 pm

ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಜಿ ಮತ್ತು ಡಾ. ಎಲ್. ಮುರುಗನ್ ಜಿ, ಇಲ್ಲಿರುವ ತಮಿಳುನಾಡು ಸರ್ಕಾರದ ಸಚಿವರು, ಸಂಸತ್ ಸದಸ್ಯರು, ಇತರೆ ಗಣ್ಯ ಅತಿಥಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ರಾಮೇಶ್ವರಂನಲ್ಲಿ ₹8,300 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು

April 06th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ರಾಮೇಶ್ವರಂನಲ್ಲಿ 8,300 ಕೋಟಿ ರೂಪಾಯಿ ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಇದಕ್ಕೂ ಮುನ್ನ, ಅವರು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯಾದ ಹೊಸ ಪಂಬನ್ ರೈಲು ಸೇತುವೆಯನ್ನು ಉದ್ಘಾಟಿಸಿದರು ಮತ್ತು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗಿಗೆ ಹಸಿರು ನಿಶಾನೆ ತೋರಿದರು ಮತ್ತು ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಅವರು ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆಯನ್ನು ಸಹ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಶ್ರೀ ರಾಮ ನವಮಿಯ ಶುಭ ಸಂದರ್ಭವಾಗಿದೆ ಎಂದರು. ಇಂದು ಮುಂಜಾನೆ, ಸೂರ್ಯನ ದಿವ್ಯ ಕಿರಣಗಳು ಅಯೋಧ್ಯೆಯ ಭವ್ಯವಾದ ರಾಮ ಮಂದಿರದಲ್ಲಿ ರಾಮ ಲಲ್ಲಾ ಅವರನ್ನು ಭವ್ಯವಾದ ತಿಲಕದಿಂದ ಅಲಂಕರಿಸಿವೆ ಎಂದು ಅವರು ಹೇಳಿದರು. “ಶ್ರೀ ರಾಮರ ಜೀವನ ಮತ್ತು ಅವರ ಆಳ್ವಿಕೆಯಿಂದ ದೊರೆತ ಉತ್ತಮ ಆಡಳಿತದ ಸ್ಫೂರ್ತಿ ರಾಷ್ಟ್ರ ನಿರ್ಮಾಣಕ್ಕೆ ಒಂದು ಮಹತ್ವದ ಅಡಿಪಾಯವಾಗಿದೆ” ಎಂದು ಅವರು ಹೇಳಿದರು. ತಮಿಳುನಾಡಿನ ಸಂಗಮ್ ಯುಗದ ಸಾಹಿತ್ಯದಲ್ಲಿ ಭಗವಾನ್ ಶ್ರೀರಾಮನ ಉಲ್ಲೇಖವಿದೆ ಎಂದು ಹೇಳಿದ ಅವರು, ಪವಿತ್ರ ಭೂಮಿಯಾದ ರಾಮೇಶ್ವರಂನಿಂದ ಶ್ರೀ ರಾಮ ನವಮಿಯ ಸಂದರ್ಭದಲ್ಲಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

ರಾಮನವಮಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ ಮತ್ತು ರಾಮೇಶ್ವರಂ ಅನ್ನು ಮುಖ್ಯ ಭೂಭಾಗಕ್ಕೆ ಸಂಪರ್ಕಿಸುವ ಹೊಸ ಪಂಬನ್ ರೈಲು ಸೇತುವೆಯನ್ನು ಉದ್ಘಾಟಿಸಲಿದ್ದಾರೆ

April 04th, 02:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 6ರಂದು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ರಾಮನವಮಿಯ ಸಂದರ್ಭದಲ್ಲಿ, ಮಧ್ಯಾಹ್ನ 12 ಗಂಟೆಗೆ, ಅವರು ಹೊಸ ಪಂಬನ್ ರೈಲು ಸೇತುವೆಯನ್ನು ಉದ್ಘಾಟಿಸಲಿದ್ದಾರೆ - ಭಾರತದ ಮೊದಲ ಲಂಬ ಲಿಫ್ಟ್ ಸಮುದ್ರ ಸೇತುವೆ ಮತ್ತು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗಿಗೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಲಿದ್ದಾರೆ.