PM chairs CCS Meeting to review the situation in context of ongoing West Asia Conflict

July 30th, 07:38 pm

Prime Minister Shri Narendra Modi today chaired a meeting of the Cabinet Committee on Security (CSS) to review the situation in the context of ongoing West Asia conflict and measures taken by various Ministries and Departments. This was the 4th special CCS meeting on the issue.

ಹರಿಯಾಣದ ಜಿಂದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

July 17th, 12:00 pm

ಇವೆಲ್ಲ ಇಲ್ಲಿ ತರಲಾದ ಕೆಲವು ಫೋಟೋಗಳು - ದಯವಿಟ್ಟು ಅವುಗಳನ್ನು ಸಂಗ್ರಹಿಸಿ, ಇಲ್ಲದಿದ್ದರೆ ಹಿಂದೆ ಕುಳಿತಿರುವವರು ನೋಡಲು ಸಾಧ್ಯವಾಗುವುದಿಲ್ಲ. ಎಸ್‌ಪಿಜಿ ಸಿಬ್ಬಂದಿ, ದಯವಿಟ್ಟು ಅವುಗಳನ್ನು ಸಂಗ್ರಹಿಸಿ. ಧನ್ಯವಾದಗಳು, ಸಹೋದರ, ಅಂತಹ ಸುಂದರವಾದ ರೇಖಾಚಿತ್ರಗಳನ್ನು ತಂದಿದ್ದಕ್ಕಾಗಿ. ಅಲ್ಲಿ, ಒಬ್ಬ ಪುಟ್ಟ ಹುಡುಗಿ ಕೂಡ ಏನನ್ನೋ ತಂದಿದ್ದಾಳೆ - ದಯವಿಟ್ಟು ಅದನ್ನು ಸಂಗ್ರಹಿಸಿ. ಇಲ್ಲಿಯೂ ಸಹ, ಇಬ್ಬರು ಮಹನೀಯರು ಗೋಚರಿಸುತ್ತಾರೆ. ಮತ್ತು ಈಗ, ಎಲ್ಲರೂ ದಯವಿಟ್ಟು ಆರಾಮವಾಗಿ ಕುಳಿತುಕೊಳ್ಳಿ. ನಿಮ್ಮ ಪ್ರೀತಿಗಾಗಿ, ನಿಮ್ಮ ಕಲಾತ್ಮಕ ಅರ್ಪಣಾ ಭಾವಕ್ಕಾಗಿ/ಭಕ್ತಿಗಾಗಿ, ನಾನು ನಿಮ್ಮೆಲ್ಲರಿಗೂ ಋಣಿ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು

July 17th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ನಲ್ಲಿ ಸುಮಾರು 14,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸ್ಥಳಕ್ಕೆ ಆಗಮಿಸಿದ ಬಳಿಕ ಅಪಾರ ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಶಕ್ತಿ ಪೀಠ ಮಾತಾ ಜಯಂತಿಯವರಿಂದ ಅನನ್ಯವಾಗಿ ಆಶೀರ್ವದಿಸಲ್ಪಟ್ಟ ಪ್ರದೇಶದ ಶ್ರೀಮಂತ ಐತಿಹಾಸಿಕ, ಸಮರ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉಲ್ಲೇಖಿಸಿದರು. ಸಂಘಟನೆಯ ಕರ್ತವ್ಯಗಳಿಗಾಗಿ ದಶಕಗಳ ಹಿಂದೆ ನಗರಕ್ಕೆ ತಮ್ಮ ಆರಂಭಿಕ ಭೇಟಿಗಳನ್ನು ನೆನಪಿಸಿಕೊಂಡ ಅವರು, ಮುರ್ರಾ ಎಮ್ಮೆ ಡೈರಿ, ದೇಸಿ ಬುರಾ ಮತ್ತು ಘೇವರ್ ನಂತಹ ಸ್ಥಳೀಯ ಪಾಕಶಾಲೆಯ ಪ್ರಮುಖ ಆಹಾರಗಳೊಂದಿಗೆ ಅಂತರ್ಗತವಾಗಿ ಸಂಬಂಧ ಹೊಂದಿರುವ ತಾವು ಪಡೆದ ಮರೆಯಲಾಗದ ವಾತ್ಸಲ್ಯವನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಇದು ಸಾಮಾನ್ಯ ಭೂಮಿಯಲ್ಲ. ಇದು ಇತಿಹಾಸ, ಶೌರ್ಯ, ಧರ್ಮ ಮತ್ತು ಅಪಾರ ಹೆಮ್ಮೆಯ ಭೂಮಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.

ಇಂಧನ ಚೇತರಿಕೆಯ ಕುರಿತು ಭಾರತ ಗಣರಾಜ್ಯದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹಾಗೂ ಜಪಾನ್ ನ ಆರ್ಥಿಕತೆ, ವ್ಯಾಪಾರ ಮತ್ತು ಕೈಗಾರಿಕಾ ಸಚಿವಾಲಯದ ನಡುವಿನ ಜಂಟಿ ಹೇಳಿಕೆ

July 02nd, 10:04 pm

ಜುಲೈ 2, 2026 ರಂದು, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಜಪಾನ್ ದೇಶದ ಗೌರವಾನ್ವಿತ ಪ್ರಧಾನಮಂತ್ರಿ ಟಕೈಚಿ ಸನಾಯೆ ಅವರು ಭಾರತದ ನವದೆಹಲಿಯಲ್ಲಿ ಭೇಟಿಯಾದರು. ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಏಷ್ಯಾದ ಜವಾಬ್ದಾರಿಯುತ ಶಕ್ತಿಗಳು ಮತ್ತು ಪ್ರಮುಖ ಇಂಧನ ಬಳಕೆಯ ದೇಶಗಳಾಗಿ ಜಂಟಿಯಾಗಿ ಇಂಧನ ಚೇತರಿಕೆಯನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವ ತಮ್ಮ ಜಂಟಿ ಸಂಕಲ್ಪದ ಆಶಯವನ್ನು ವ್ಯಕ್ತಪಡಿಸಿದರು.

ಜೂನ್ 5 ರಂದು ಸೂರತ್ ಮತ್ತು ದಮನ್ ಗೆ ಪ್ರಧಾನಮಂತ್ರಿ ಅವರ ಭೇಟಿ

June 04th, 10:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 5 ರಂದು ಗುಜರಾತ್ ಮತ್ತು ದಮನ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಸುಮಾರು 2:30 ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ಜಿಲ್ಲೆಯ ಹಜಿರಾಗೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕೈಗಾರಿಕಾ ಕಾರ್ಯಗಳು ಮತ್ತು ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ ಸುಮಾರು 4:15ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ನಲ್ಲಿ ಸುಮಾರು ₹18,800 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಹೈದರಾಬಾದ್‌ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

May 10th, 03:45 pm

ಸೈಬರಾಬಾದ್‌ನ ಶಕ್ತಿ ರಾಷ್ಟ್ರೀಯ ಮತ್ತು ಜಾಗತಿಕವಾಗಿದೆ. ಇದು ತೆಲಂಗಾಣದ ಮತ್ತು ದೇಶದ ತ್ವರಿತ ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದೆ. ಆದ್ದರಿಂದ, ಇಂದು ಸೈಬರಾಬಾದ್‌ನಿಂದ, ತೆಲಂಗಾಣವನ್ನು ರಾಷ್ಟ್ರದ ದೊಡ್ಡ ಉತ್ಪಾದನಾ ಶಕ್ತಿ ಕೇಂದ್ರವನ್ನಾಗಿ ಮಾಡಲು ಅನೇಕ ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಇಂದು ಅಡಿಪಾಯ ಮತ್ತು ಉದ್ಘಾಟನೆಗಳು ನಡೆದ ಯೋಜನೆಗಳು ಇಲ್ಲಿ ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಮತ್ತು ತೆಲಂಗಾಣದ ಸಂಪರ್ಕವು ಸಹ ಬಲಗೊಳ್ಳುತ್ತದೆ. ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 10th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಹೈದರಾಬಾದ್‌ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಯ ಕೇಂದ್ರವಾಗಿ ಹೈದರಾಬಾದ್‌ನ ಪರಿವರ್ತನಾ ಮಹತ್ವವನ್ನು ಉಲ್ಲೇಖಿಸಿದರು. ತೆಲಂಗಾಣ ಮತ್ತು ಇಡೀ ರಾಷ್ಟ್ರಕ್ಕೆ ತ್ವರಿತ ಅಭಿವೃದ್ಧಿಯನ್ನು ನೀಡುವಲ್ಲಿ ಈ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಅವರು, ಇಂದು ಪ್ರಾರಂಭಿಸಲಾದ ಬಹು ದೊಡ್ಡ ಪ್ರಮಾಣದ ಯೋಜನೆಗಳು ತೆಲಂಗಾಣವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಹೇಗೆ ರೂಪಿಸುತ್ತವೆ/ಸ್ಥಾಪಿಸುತ್ತವೆ ಎಂಬುದನ್ನು ವಿವರಿಸಿದರು. ಈ ಯೋಜನೆಗಳ ಉದ್ಘಾಟನೆಗಳು ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸುವುದರ ಜೊತೆಗೆ ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದ ಪ್ರಧಾನಮಂತ್ರಿ, ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಭಾರತ-ಕೊರಿಯಾ ಗಣರಾಜ್ಯ ಇಂಧನ ಸಂಪನ್ಮೂಲ ಭದ್ರತೆ ಕುರಿತು ಜಂಟಿ ಹೇಳಿಕೆ

April 20th, 10:56 pm

1. ಭಾರತ ಮತ್ತು ಕೊರಿಯಾ ಗಣರಾಜ್ಯಗಳು ಮುಕ್ತ, ಎಲ್ಲರನ್ನೂ ಒಳಗೊಂಡ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ಸಮಾನ ದೃಷ್ಟಿಕೋನವನ್ನು ಹೊಂದಿರುವ ವಿಶೇಷ ಕಾರ್ಯತಂತ್ರದ ಪಾಲುದಾರರು.

Congress has always compromised the interests of Assam: PM Modi in Biswanath

April 01st, 11:45 am

PM Modi addressed a massive public rally in Biswanath, Assam. In his speech, the PM launched a sharp attack on Congress, accusing it of being ‘anti-development’ and the ‘root of corruption in independent India.’ Highlighting the BJP-NDA government’s actions, PM Modi said thousands of bighas of land have been freed from illegal encroachment, restoring Assam’s heritage and ecology. Reaffirming BJP’s commitment to Sabka Saath, Sabka Vikas, he urged voters to ensure a record turnout.

PM Modi sets the tone for Assam polls with high-energy rallies in Gogamukh and Biswanath

April 01st, 11:00 am

Campaigning for the upcoming Assembly elections, Prime Minister Narendra Modi addressed massive public gatherings in Gogamukh and Biswanath, marking his first rallies in Assam after the announcement of polls. The events witnessed an overwhelming turnout, with enthusiastic participation from youth, women and local communities, signaling strong momentum for the BJP-led NDA.

ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ

March 29th, 11:30 am

ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉದ್ಭವಿಸಿರುವ ಪರಿಸ್ಥಿತಿಯ ಸಿದ್ಧತೆಗಳ ಪರಿಶೀಲನೆಗಾಗಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಭೆ ನಡೆಸಿದರು

March 27th, 09:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳಿಂದ ಉದ್ಭವಿಸಿರುವ ಪರಿಸ್ಥಿತಿ ಮತ್ತು ಭಾರತದ ಮೇಲೆ ಅದರ ಸಂಭವನೀಯ ಪರಿಣಾಮಗಳ ಕುರಿತು ಸಿದ್ಧತೆಗಳನ್ನು ಪರಿಶೀಲಿಸಲು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ ಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದರು.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷ ಕುರಿತು ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

March 24th, 02:05 pm

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಅದರಿಂದ ಉಂಟಾಗುವ ಸನ್ನಿವೇಶಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ. ಇಂದು ನಾನು ಈ ಗಂಭೀರ ಪರಿಸ್ಥಿತಿಗಳ ಕುರಿತು ಸರ್ಕಾರದ ನಿಲುವು ಹಂಚಿಕೊಳ್ಳಲು ಸಂಸತ್ತಿನ ಮೇಲ್ಮನೆಯ ಮುಂದೆ ಮತ್ತು ನನ್ನ ಸಹ ನಾಗರಿಕರ ಮುಂದೆ ನಿಂತಿದ್ದೇನೆ. ಈ ಯುದ್ಧವು ಈಗ 3 ವಾರಗಳಿಗೂ ಹೆಚ್ಚು ಕಾಲದಿಂದ ಮುಂದುವರೆದಿದೆ. ಇದು ವಿಶ್ವಾದ್ಯಂತ ತೀವ್ರ ಇಂಧನ ಬಿಕ್ಕಟ್ಟು ಸೃಷ್ಟಿಸಿದೆ. ಭಾರತಕ್ಕೂ ಈ ಪರಿಸ್ಥಿತಿ ಚಿಂತಾಜನಕವಾಗಿದೆ. ನಮ್ಮ ವ್ಯಾಪಾರ ಮಾರ್ಗಗಳ ಮೇಲೆ ಪರಿಣಾಮ ಬೀರುತ್ತಿವೆ. ಪೆಟ್ರೋಲ್, ಡೀಸೆಲ್, ಅನಿಲ ಮತ್ತು ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಗಳು ಅಸ್ತವ್ಯಸ್ತಗೊಂಡಿವೆ. ಸುಮಾರು 1 ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆ ಮತ್ತು ಜೀವನೋಪಾಯ ಖಚಿತಪಡಿಸಿಕೊಳ್ಳುವುದು ಭಾರತಕ್ಕೆ ಒಂದು ಪ್ರಮುಖ ಕಾಳಜಿಯಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಅನೇಕ ಹಡಗುಗಳು ಸಿಲುಕಿಕೊಂಡಿವೆ, ಅದರಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ಸಿಬ್ಬಂದಿ ಇದ್ದಾರೆ. ಇದು ಭಾರತಕ್ಕೂ ಗಂಭೀರ ಕಳವಳದ ವಿಷಯವಾಗಿದೆ. ಇಂತಹ ಭೀಕರ ಸಂದರ್ಭಗಳಲ್ಲಿ ಸಂಸತ್ತಿನ ಈ ಮೇಲ್ಮನೆಯಿಂದ ಶಾಂತಿ ಮತ್ತು ಸಂವಾದಕ್ಕಾಗಿ ಒಗ್ಗಟ್ಟಿನ ಧ್ವನಿ ಇಡೀ ಜಗತ್ತನ್ನು ತಲುಪುವುದು ಅತ್ಯಗತ್ಯವಾಗಿದೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡಿದರು

March 24th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉದ್ಭವಿಸಿದ ಪರಿಸ್ಥಿತಿಯ ಕುರಿತು ಸರ್ಕಾರದ ನಿಲುವನ್ನು ಮಂಡಿಸಿದರು. ಮೂರು ವಾರಗಳಿಗೂ ಹೆಚ್ಚು ಕಾಲದಿಂದ ಭುಗಿಲೆದ್ದಿರುವ ಈ ಯುದ್ಧವು ಭಾರತದ ಮೇಲೆ ತೀವ್ರ ಆತಂಕಕಾರಿ ಪರಿಣಾಮಗಳನ್ನು ಬೀರುವ ಸೂಚನೆಗಳೊಂದಿಗೆ ತೀವ್ರ ಜಾಗತಿಕ ಇಂಧನ ಬಿಕ್ಕಟ್ಟನ್ನು ಉಂಟುಮಾಡಿದೆ ಎಂಬುದನ್ನು ತಿಳಿಸಿದ ಪ್ರಧಾನಮಂತ್ರಿ ಮೋದಿ ಅವರು, ಈ ಸಂಘರ್ಷವು ಭಾರತದ ವ್ಯಾಪಾರ ಮಾರ್ಗಗಳನ್ನು ಅಡ್ಡಿಪಡಿಸುತ್ತಿದೆ ಮತ್ತು ಪೆಟ್ರೋಲ್, ಡೀಸೆಲ್, ಅನಿಲ ಹಾಗೂ ರಸಗೊಬ್ಬರಗಳಂತಹ ಅಗತ್ಯ ವಸ್ತುಗಳ ನಿಯಮಿತ ಪೂರೈಕೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದರು. ಸುಮಾರು ಒಂದು ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದು, ಕೆಲಸ ಮಾಡುತ್ತಿರುವುದರಿಂದ, ಅವರ ಸುರಕ್ಷತೆ ಮತ್ತು ಜೀವನೋಪಾಯವು ತೀವ್ರ ಕಳವಳದ ವಿಷಯವಾಗಿ ಮೂಡಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು, ಜೊತೆಗೆ ಹಾರ್ಮುಜ್ ಜಲಸಂಧಿಯಲ್ಲಿ, ಹಡಗುಗಳಲ್ಲಿ ಸಿಲುಕಿಕೊಂಡಿರುವ ಹೆಚ್ಚಿನ ಸಂಖ್ಯೆಯ ಭಾರತೀಯ ಸದಸ್ಯರ ಬಗ್ಗೆಯೂ ಗಮನ ಸೆಳೆದರು. ಇಂತಹ ಗಂಭೀರ ಸಂದರ್ಭದಲ್ಲಿ, ಭಾರತ ಸಂಸತ್ತಿನ ಈ ಘನ ಮೇಲ್ಮನೆಯಿಂದ ಇಡೀ ಜಗತ್ತಿಗೆ ಶಾಂತಿ ಮತ್ತು ಸಂವಾದದ ಏಕೀಕೃತ ಧ್ವನಿ ಹೊರಹೊಮ್ಮುವುದು ಅತ್ಯಗತ್ಯ ಎಂದು ಪ್ರಧಾನಮಂತ್ರಿ ಶ್ರೀ. ಮೋದಿ ಅವರು ದೃಢಪಡಿಸಿದರು.

ಟಿವಿ9 ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 23rd, 08:30 pm

ಇತ್ತೀಚಿನ ದಿನಗಳಲ್ಲಿ ಟಿವಿ9 ಭಾರತ ವರ್ಷವನ್ನು ಒಮ್ಮೆ ಅಥವಾ 2 ಬಾರಿ ನೋಡುವ ಅವಕಾಶ ನನಗೆ ಸಿಕ್ಕಿದೆ. ಸಾಮಾನ್ಯವಾಗಿ, ನಿಮ್ಮ ಗಮನವು ಯುದ್ಧಗಳು ಮತ್ತು ಕ್ಷಿಪಣಿಗಳ ಮೇಲೆ ಹೆಚ್ಚು ಇದೆ, ಇತ್ತೀಚಿನ ದಿನಗಳಲ್ಲಿ ನಿಮಗೆ ಈ ವಿಷಯಗಳೇ ಅತಿಯಾಗಿ ತುಂಬಿ ಹೋಗುತ್ತಿವೆ. ದೊಡ್ಡ ದೇಶಗಳು ಟಿವಿ9ಗೆ ಹಲವು ಸುದ್ದಿ ಸಾಮಗ್ರಿಗಳನ್ನು ಒದಗಿಸಲು ದೃಢನಿಶ್ಚಯ ಮಾಡುವಂತೆ ತೋರುತ್ತಿದೆ. ಆದರೆ ಗಂಭೀರವಾಗಿ ಹೇಳುವುದಾದರೆ, ಇಂದು ಜಗತ್ತು ಎದುರಿಸುತ್ತಿರುವ ಪ್ರತಿಕೂಲ ಪರಿಸ್ಥಿತಿಗಳು ಹಿಂದೆಂದೂ ಕಾಣದ ಅತ್ಯಂತ ಗಂಭೀರ ಸ್ವರೂಪದ್ದಾಗಿವೆ. ಈ ಪರಿಸ್ಥಿತಿಗಳ ನಡುವೆ, ಟಿವಿ9 ನೆಟ್‌ವರ್ಕ್ ವಿಚಾರಗಳಿಗೆ ಬಹಳ ಮುಖ್ಯವಾದ ವೇದಿಕೆ ಸೃಷ್ಟಿಸಿದೆ. ಈ ಶೃಂಗಸಭೆಯಲ್ಲಿ, ನೀವೆಲ್ಲರೂ ಭಾರತ ಮತ್ತು ವಿಶ್ವ ಎಂಬ ವಿಷಯವನ್ನು ಚರ್ಚಿಸುತ್ತಿದ್ದೀರಿ. ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ಈ ಶೃಂಗಸಭೆಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ಎಲ್ಲಾ ಅತಿಥಿಗಳನ್ನು ಸ್ವಾಗತಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಟಿವಿ9 ನೆಟ್‌ವರ್ಕ್ ಶೃಂಗಸಭೆ ಉದ್ದೇಶಿಸಿ ಭಾಷಣ

March 23rd, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಭಾರತ ಮತ್ತು ವಿಶ್ವ' (India and the World) ಎಂಬ ವಿಷಯದ ಮೇಲೆ ನಡೆದ ಟಿವಿ9 ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಭೂತಪೂರ್ವ ಮತ್ತು ಗಂಭೀರವಾದ ಜಾಗತಿಕ ಸಂದರ್ಭಗಳನ್ನು ಒಪ್ಪಿಕೊಂಡ ಪ್ರಧಾನಮಂತ್ರಿಯವರು, ಈ ನಿರ್ಣಾಯಕ ಸಮಯದಲ್ಲಿ ವಿಚಾರ ವಿನಿಮಯಕ್ಕಾಗಿ ಪ್ರಮುಖ ವೇದಿಕೆಯನ್ನು ಸೃಷ್ಟಿಸಿದ್ದಕ್ಕಾಗಿ ಟಿವಿ9 ನೆಟ್‌ ವರ್ಕ್ ಅನ್ನು ಶ್ಲಾಘಿಸಿದರು. ಇಂದು ವಿಶ್ವವು ಸಾಗುತ್ತಿರುವ ಗಂಭೀರ ಪರಿಸ್ಥಿತಿಗಳು ಅಭೂತಪೂರ್ವ ಮತ್ತು ಅತ್ಯಂತ ಗಂಭೀರವಾಗಿವೆ ಮತ್ತು ಇವುಗಳ ನಡುವೆ, ಟಿವಿ9 ನೆಟ್‌ವರ್ಕ್ ವಿಚಾರಗಳಿಗಾಗಿ ಅತ್ಯಂತ ಪ್ರಮುಖವಾದ ವೇದಿಕೆಯನ್ನು ಸೃಷ್ಟಿಸಿದೆ, ಎಂದು ಶ್ರೀ ಮೋದಿ ತಿಳಿಸಿದರು.

ಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತು ಪರಿಹಾರ ಕ್ರಮಗಳ ಪರಾಮರ್ಶೆಗಾಗಿ ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯಿತು

March 22nd, 09:06 pm

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಹಾಗೂ ಪ್ರಸ್ತುತ ಮತ್ತು ಪ್ರಸ್ತಾವಿತ ಪರಿಹಾರ ಕ್ರಮಗಳನ್ನು ಪರಾಮರ್ಶಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 12th, 10:47 pm

ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.

ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

March 12th, 08:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್‌ವರ್ಕ್‌ನ ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.

ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 11th, 05:45 pm

ಈ ಅದ್ಭುತ ನಗರ ತಿರುಚಿಯಲ್ಲಿ ಇರುವುದು ನನಗೆ ತುಂಬಾ ಸಂತೋಷ ನೀಡುತ್ತಿದೆ. ಇಂದಿನ ಕಾರ್ಯಕ್ರಮವು ತಮಿಳುನಾಡಿನ ಭವಿಷ್ಯಕ್ಕೆ ಮಹತ್ವದ್ದಾಗಿದೆ. ಇದು 5 ಸಾವಿರದ 600 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಸಂಬಂಧಿಸಿದೆ. ಈ ಯೋಜನೆಗಳು: ಸ್ವಚ್ಛ ಇಂಧನಕ್ಕಾಗಿ ಮೂಲಸೌಕರ್ಯ, ಪೆಟ್ರೋಲಿಯಂ ಸಂಬಂಧಿತ ಉತ್ಪಾದನೆ, ಹೆದ್ದಾರಿಗಳು, ರೈಲ್ವೆಗಳು ಮತ್ತು ಗ್ರಾಮೀಣ ರಸ್ತೆ ಯೋಜನೆಗಳಾಗಿವೆ. ಅವು ಇಂಧನ ಪ್ರವೇಶ, ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ತಮಿಳುನಾಡಿನ ಯುವಕರಿಗೆ ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸುತ್ತವೆ.