ಆಸ್ಟ್ರೇಲಿಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮವೊಂದರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
July 09th, 03:22 pm
ನಾವು ಭೇಟಿಯಾಗುವ ಭೂಮಿಯ ಸಾಂಪ್ರದಾಯಿಕ ಮಾಲೀಕರನ್ನು ಗುರುತಿಸುವ ಮೂಲಕ ನಾನು ಇಂದು ಮಾತು ಆರಂಭಿಸಲು ಬಯಸುತ್ತೇನೆ ಮತ್ತು ಅವರ ಹಿಂದಿನ, ವರ್ತಮಾನ ಮತ್ತು ಉದಯೋನ್ಮುಖ ಹಿರಿಯರಿಗೆ ನನ್ನ ಗೌರವವನ್ನು ಸಲ್ಲಿಸುತ್ತೇನೆ.ಆಸ್ಟ್ರೇಲಿಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 09th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಲ್ಬೋರ್ನ್ ನ ಮಾರ್ವೆಲ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ವಿಶೇಷ ಸದ್ಭಾವನೆಯ ಸಂಕೇತವಾಗಿ, ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೂ ಸಹ ಈ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.India-Indonesia Joint Statement on the State Visit by Prime Minister of India to Indonesia
July 07th, 05:15 pm
At the invitation of Indonesian President Prabowo Subianto, PM Modi is on a State Visit to Indonesia from 6-8 July 2026. PM Modi's visit reflects the shared commitment of the two leaders to achieve a substantial upward trajectory in the India-Indonesia Comprehensive Strategic Partnership. The two leaders held discussions at Istana Merdeka in Jakarta, covering the full spectrum of bilateral relations.ಇಂಡೋನೇಷ್ಯಾದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಅಧಿಕೃತ ಮಾತುಕತೆ
July 07th, 02:51 pm
ಇಂಡೋನೇಷ್ಯಾ ದೇಶಕ್ಕೆ ತಮ್ಮ ಅಧಿಕೃತ ಪ್ರವಾಸದ ಭಾಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೊವೊ ಸುಬಿಯಾಂತೊ ಅವರು ಇಸ್ತಾನಾ ಮೆರ್ಡೆಕಾ (ಅಧ್ಯಕ್ಷರ ಭವನ) ದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಔಪಚಾರಿಕ ಸ್ವಾಗತವನ್ನು ನೀಡಿದರು. ಜನವರಿ 2025 ರಲ್ಲಿ ಭಾರತದ 76ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಪ್ರಬೊವೊ ಅವರು ಭಾರತಕ್ಕೆ ಭೇಟಿ ನೀಡಿದ ನಂತರ, ಉಭಯ ನಾಯಕರ ನಡುವೆ ನಡೆದ ಮೊದಲ ಭೇಟಿ ಇದಾಗಿದೆ.ಜುಲೈ 4 ರಂದು ಪ್ರಧಾನಮಂತ್ರಿ ಅವರಿಂದ ರಾಜಸ್ಥಾನ ಮತ್ತು ಗುಜರಾತ್ ಭೇಟಿ
July 03rd, 11:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 4, 2026 ರಂದು ರಾಜಸ್ಥಾನ ಮತ್ತು ಗುಜರಾತಿಗೆ ಭೇಟಿ ನೀಡಲಿದ್ದಾರೆ. ಸುಮಾರು ಬೆಳಿಗ್ಗೆ 10:45ಕ್ಕೆ, ಪ್ರಧಾನಮಂತ್ರಿ ಅವರು ಜೋಧ್ ಪುರ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಮತ್ತು ಜೋಧ್ಪುರದಲ್ಲಿ ಮಾರ್ಪಡಿಸಿದ ಉಡಾನ್ ('ಮೋಡಿಫೈಡ್ ಉಡಾನ್') ಯೋಜನೆಗೆ ಚಾಲನೆ ನೀಡಲಿದ್ದಾರೆ. ತದನಂತರ, ಮಧ್ಯಾಹ್ನ ಸುಮಾರು 12:15ಕ್ಕೆ ಅವರು ಬಲೋತ್ರಾಕ್ಕೆ ಪ್ರಯಾಣಿಸಲಿದ್ದು, ಅಲ್ಲಿ ಸುಮಾರು ₹1.06 ಲಕ್ಷ ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಸಮರ್ಪಿಸಲಿದ್ದಾರೆ, ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಫಲಿತಾಂಶಗಳ ಪಟ್ಟಿ: 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಗಾಗಿ ಜಪಾನ್ ಪ್ರಧಾನಮಂತ್ರಿಯವರ ಭಾರತ ಭೇಟಿ
July 02nd, 10:39 pm
ಸೆಮಿಕಂಡಕ್ಟರ್ಗಳು, ನಿರ್ಣಾಯಕ ಖನಿಜಗಳು, ಕೃತಕ ಬುದ್ಧಿಮತ್ತೆ, ಶುದ್ಧ ಇಂಧನ ಮತ್ತು ಔಷಧಗಳು ಸೇರಿದಂತೆ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಜಂಟಿ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸಲು ಯೋಜನೆ ಆಧಾರಿತ ಸಹಯೋಗವನ್ನು ಉತ್ತೇಜಿಸುತ್ತದೆ. ಭಾರತ-ಜಪಾನ್ ಫ್ಯಾಕ್ಟ್ ಶೀಟ್ 2.0 ಈ ನಿರ್ಣಾಯಕ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಭಾರತ-ಜಪಾನ್ ಜಿ2ಜಿ ಮತ್ತು ಬಿ 2 ಬಿ ಕಾರ್ಯಕ್ರಮಗಳನ್ನು ಸೆರೆಹಿಡಿಯುತ್ತದೆ.ಭಾರತ-ಜಪಾನ್ ಉದ್ಯಮ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
July 02nd, 03:35 pm
ಭಾರತ-ಜಪಾನ್ ಸಂಬಂಧ ನಿಜಕ್ಕೂ ವಿಶೇಷವಾದದ್ದು.ಭಾರತ-ಇಟಲಿ ಜಂಟಿ ಘೋಷಣೆ
May 20th, 10:28 pm
ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು 19-20 ಮೇ 2026 ರಂದು ಇಟಲಿಗೆ ಅಧಿಕೃತ ಭೇಟಿ ನೀಡಿದರು. ಜಿ7 ಶೃಂಗಸಭೆಗಾಗಿ ಜೂನ್ 2024ರಲ್ಲಿ ಪ್ರಧಾನಮಂತ್ರಿ ಮೋದಿ ಅವರು ಇಟಲಿಗೆ ನೀಡಿದ್ದ ಭೇಟಿ ಮತ್ತು 2023ರಲ್ಲಿ ಜಿ20 ಶೃಂಗಸಭೆಗಾಗಿ ಪ್ರಧಾನಮಂತ್ರಿ ಮೆಲೋನಿ ಅವರು ಭಾರತಕ್ಕೆ ನೀಡಿದ್ದ ಭೇಟಿಯ ಮುಂದುವರಿಕೆಯಾಗಿ ನಡೆದ ಈ ಭೇಟಿಯು, ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಉತ್ತೇಜನವನ್ನು ನೀಡಿತು. ಉಭಯ ನಾಯಕರು ಭಾರತ-ಇಟಲಿ ಸಂಬಂಧಗಳನ್ನು 'ವಿಶೇಷ ಕಾರ್ಯತಂತ್ರದ ಪಾಲುದಾರಿಕೆ'ಯ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು.ಭಾರತದ ಪ್ರಧಾನಮಂತ್ರಿ ಅವರ ನೆದರ್ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್ಲ್ಯಾಂಡ್ಸ್ ಜಂಟಿ ಹೇಳಿಕೆ
May 17th, 03:45 am
ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)
May 17th, 03:15 am
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.ಫಲಿತಾಂಶಗಳ ಪಟ್ಟಿ: ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ
May 06th, 03:44 pm
ಐ.ಆರ್.ಇ.ಎಲ್. (ಇಂಡಿಯಾ) ಲಿಮಿಟೆಡ್ ಮತ್ತು ವಿಯಟ್ನಾಂನ ಇನ್ ಸ್ಟಿಟ್ಯೂಟ್ ಫಾರ್ ಟೆಕ್ನಾಲಜಿ ಆಫ್ ರೇಡಿಯೋಆಕ್ಟಿವ್ ಅಂಡ್ ರೇರ್ ಎಲಿಮೆಂಟ್ಸ್ (ಐ.ಟಿ.ಆರ್.ಆರ್.ಇ.) ನಡುವೆ ಪರಸ್ಪರ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತು ಪರಿಹಾರ ಕ್ರಮಗಳ ಪರಾಮರ್ಶೆಗಾಗಿ ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯಿತು
March 22nd, 09:06 pm
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಹಾಗೂ ಪ್ರಸ್ತುತ ಮತ್ತು ಪ್ರಸ್ತಾವಿತ ಪರಿಹಾರ ಕ್ರಮಗಳನ್ನು ಪರಾಮರ್ಶಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಿದ್ದರು.ಭಾರತ-ಓಮನ್ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 18th, 04:08 pm
ಈ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರ ಆತ್ಮೀಯ ಸ್ವಾಗತ ನನ್ನ ಉತ್ಸಾಹವನ್ನು ಮತ್ತಷ್ಟು ಬಲಪಡಿಸಿದೆ. ಇಂದಿನ ಶೃಂಗಸಭೆಯು ಭಾರತ-ಓಮನ್ ಪಾಲುದಾರಿಕೆಗೆ ಹೊಸ ನಿರ್ದೇಶನ ಮತ್ತು ಆವೇಗವನ್ನು ನೀಡುತ್ತದೆ, ಅದನ್ನು ಹೊಸ ಎತ್ತರಕ್ಕೆ ಏರಿಸಲು ಸಹಾಯ ಮಾಡುತ್ತದೆ. ಈ ಪ್ರಯತ್ನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪ್ರಮುಖ ಪಾತ್ರ ವಹಿಸಬೇಕು.ಭಾರತ-ಓಮನ್ ಉದ್ಯಮ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
December 18th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಸ್ಕತ್ ನಲ್ಲಿ ನಡೆದ ಭಾರತ-ಓಮನ್ ಉದ್ಯಮ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಓಮನ್ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಉತ್ತೇಜನ ಸಚಿವರಾದ ಘನತೆವೆತ್ತ ಖೈಸ್ ಅಲ್ ಯೂಸೆಫ್; ಓಮನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಘನತೆವೆತ್ತ ಶೇಖ್ ಫೈಸಲ್ ಅಲ್ ರಾವಾಸ್; ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್; ಮತ್ತು ಸಿಐಐ ಅಧ್ಯಕ್ಷ ಶ್ರೀ ರಾಜೀವ್ ಮೆಮಾನಿ ಸಭೆಯಲ್ಲಿ ಭಾಗವಹಿಸಿದ್ದರು. ಇಂಧನ, ಕೃಷಿ, ಲಾಜಿಸ್ಟಿಕ್ಸ್, ಮೂಲಸೌಕರ್ಯ, ತಯಾರಿಕೆ, ಆರೋಗ್ಯ, ಹಣಕಾಸು ಸೇವೆಗಳು, ಹಸಿರು ಅಭಿವೃದ್ಧಿ, ಶಿಕ್ಷಣ ಮತ್ತು ಸಂಪರ್ಕ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಪ್ರಮುಖ ಉದ್ಯಮ ಪ್ರತಿನಿಧಿಗಳು ವೇದಿಕೆಯಲ್ಲಿ ಭಾಗವಹಿಸಿದ್ದರು.ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:25 pm
ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:12 pm
ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 28th, 03:35 pm
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಮಹಾಂತರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಅಶೋಕ್ ಗಜಪತಿ ರಾಜು ಜಿ, ಜನಪ್ರಿಯ ಮುಖ್ಯಮಂತ್ರಿ ಮತ್ತು ಸಹೋದರ ಪ್ರಮೋದ್ ಸಾವಂತ್ ಜಿ, ಮಠ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಡೆಂಪೊ ಜಿ, ಉಪಾಧ್ಯಕ್ಷರಾದ ಶ್ರೀ ಆರ್.ಆರ್. ಕಾಮತ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಶ್ರೀಪಾದ ನಾಯಕ್ ಜಿ ಮತ್ತು ದಿಗಂಬರ್ ಕಾಮತ್ ಜಿ ಮತ್ತು ಇಲ್ಲಿರುವ ಇತರೆ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,ಗೋವಾದಲ್ಲಿ ನಡೆದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ 'ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠ'ದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಈ ಪವಿತ್ರ ಸಂದರ್ಭದಲ್ಲಿ ತಮ್ಮ ಮನಸ್ಸು ಅತೀವ ಶಾಂತಿಯಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಸಂತರ ಸಾನ್ನಿಧ್ಯದಲ್ಲಿ ಇರುವುದೇ ಒಂದು ಆಧ್ಯಾತ್ಮಿಕ ಅನುಭವ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲಿ ನೆರೆದಿರುವ ಅಪಾರ ಸಂಖ್ಯೆಯ ಭಕ್ತರು, ಈ ಮಠದ ಶತಮಾನಗಳಷ್ಟು ಹಳೆಯದಾದ ಚೈತನ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ ಶ್ರೀ ಮೋದಿ, ಇಂದು ಈ ಸಮಾರಂಭದಲ್ಲಿ ಜನರ ನಡುವೆ ಉಪಸ್ಥಿತರಿರುವುದಕ್ಕೆ ತಾವು ಅತ್ಯಂತ ಭಾಗ್ಯಶಾಲಿ ಎಂದು ಭಾವಿಸುವುದಾಗಿ ತಿಳಿಸಿದರು. ಇಲ್ಲಿಗೆ ಬರುವ ಮುನ್ನ ರಾಮ ಮಂದಿರ ಮತ್ತು ವೀರ ವಿಠಲ ಮಂದಿರಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ದೊರೆಯಿತು ಎಂದು ಅವರು ಸ್ಮರಿಸಿದರು. ಅಲ್ಲಿನ ಶಾಂತಿಯುತ ವಾತಾವರಣವು ಈ ಸಮಾರಂಭದ ಆಧ್ಯಾತ್ಮಿಕತೆಯನ್ನು ಇನ್ನಷ್ಟು ಗಾಢವಾಗಿಸಿದೆ ಎಂದು ಅವರು ಹೇಳಿದರು.ಮುಂದಿನ ದಶಕದ ಭಾರತ - ಜಪಾನ್ ಜಂಟಿ ಮುನ್ನೋಟ: ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮುನ್ನಡೆಸಲು ಎಂಟು ಮಾರ್ಗಗಳು
August 29th, 07:11 pm
ಕಾನೂನುಬದ್ಧ ಆಳ್ವಿಕೆಯ ಆಧಾರದ ಮೇಲೆ ಮುಕ್ತ, ತೆರೆದ, ಶಾಂತಿಯುತ, ಸಮೃದ್ಧ ಮತ್ತು ಸಂಘರ್ಷ-ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿರುವ ಎರಡು ದೇಶಗಳಾಗಿ, ಪೂರಕ ಸಂಪನ್ಮೂಲ ದತ್ತಿ, ತಾಂತ್ರಿಕ ಸಾಮರ್ಥ್ಯಗಳು ಮತ್ತು ವೆಚ್ಚ ಸ್ಪರ್ಧಾತ್ಮಕತೆಯನ್ನು ಹೊಂದಿರುವ ಎರಡು ಆರ್ಥಿಕತೆಗಳು ಮತ್ತು ಸ್ನೇಹ ಮತ್ತು ಪರಸ್ಪರ ಸದ್ಭಾವನೆಯ ದೀರ್ಘ ಸಂಪ್ರದಾಯವನ್ನು ಹೊಂದಿರುವ ಎರಡು ರಾಷ್ಟ್ರಗಳಾಗಿ, ಮುಂದಿನ ದಶಕದಲ್ಲಿ ನಮ್ಮ ದೇಶಗಳಲ್ಲಿ ಮತ್ತು ಪ್ರಪಂಚದಲ್ಲಿ ಒಟ್ಟಾರೆಯಾಗಿ ಬದಲಾವಣೆಗಳು ಮತ್ತು ಅವಕಾಶಗಳನ್ನು ಜಂಟಿಯಾಗಿ ನಿಭಾಯಿಸುವ ಉದ್ದೇಶವನ್ನು ಭಾರತ ಮತ್ತು ಜಪಾನ್ ವ್ಯಕ್ತಪಡಿಸುತ್ತವೆ, ನಮ್ಮ ಆಯಾ ದೇಶೀಯ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತವೆ ಮತ್ತು ನಮ್ಮ ದೇಶಗಳು ಹಾಗು ಮುಂದಿನ ಪೀಳಿಗೆಯ ಜನರನ್ನು ಹಿಂದೆಂದಿಗಿಂತಲೂ ಹೆಚ್ಚು ನಿಕಟವಾಗಿಸುತ್ತವೆ.