ರೋಜ್ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಹೈದರಾಬಾದ್ನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
May 10th, 03:45 pm
ಸೈಬರಾಬಾದ್ನ ಶಕ್ತಿ ರಾಷ್ಟ್ರೀಯ ಮತ್ತು ಜಾಗತಿಕವಾಗಿದೆ. ಇದು ತೆಲಂಗಾಣದ ಮತ್ತು ದೇಶದ ತ್ವರಿತ ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದೆ. ಆದ್ದರಿಂದ, ಇಂದು ಸೈಬರಾಬಾದ್ನಿಂದ, ತೆಲಂಗಾಣವನ್ನು ರಾಷ್ಟ್ರದ ದೊಡ್ಡ ಉತ್ಪಾದನಾ ಶಕ್ತಿ ಕೇಂದ್ರವನ್ನಾಗಿ ಮಾಡಲು ಅನೇಕ ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಇಂದು ಅಡಿಪಾಯ ಮತ್ತು ಉದ್ಘಾಟನೆಗಳು ನಡೆದ ಯೋಜನೆಗಳು ಇಲ್ಲಿ ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಮತ್ತು ತೆಲಂಗಾಣದ ಸಂಪರ್ಕವು ಸಹ ಬಲಗೊಳ್ಳುತ್ತದೆ. ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ತೆಲಂಗಾಣದ ಹೈದರಾಬಾದ್ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 10th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಹೈದರಾಬಾದ್ನಲ್ಲಿ ಸುಮಾರು ₹9,400 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಯ ಕೇಂದ್ರವಾಗಿ ಹೈದರಾಬಾದ್ನ ಪರಿವರ್ತನಾ ಮಹತ್ವವನ್ನು ಉಲ್ಲೇಖಿಸಿದರು. ತೆಲಂಗಾಣ ಮತ್ತು ಇಡೀ ರಾಷ್ಟ್ರಕ್ಕೆ ತ್ವರಿತ ಅಭಿವೃದ್ಧಿಯನ್ನು ನೀಡುವಲ್ಲಿ ಈ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಅವರು, ಇಂದು ಪ್ರಾರಂಭಿಸಲಾದ ಬಹು ದೊಡ್ಡ ಪ್ರಮಾಣದ ಯೋಜನೆಗಳು ತೆಲಂಗಾಣವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಹೇಗೆ ರೂಪಿಸುತ್ತವೆ/ಸ್ಥಾಪಿಸುತ್ತವೆ ಎಂಬುದನ್ನು ವಿವರಿಸಿದರು. ಈ ಯೋಜನೆಗಳ ಉದ್ಘಾಟನೆಗಳು ಪ್ರಾದೇಶಿಕ ಸಂಪರ್ಕವನ್ನು ಬಲಪಡಿಸುವುದರ ಜೊತೆಗೆ ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದ ಪ್ರಧಾನಮಂತ್ರಿ, ಈ ಯೋಜನೆಗಳಿಗಾಗಿ ತೆಲಂಗಾಣದ ಜನರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಚೌಕಟ್ಟಿನ ಸಮಾವೇಶಕ್ಕೆ (ಯು ಎನ್ ಎಫ್ ಸಿ ಸಿ ಸಿ) ಸಲ್ಲಿಸಲಿರುವ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಗೆ (2031-2035) ಕೇಂದ್ರ ಸಂಪುಟದ ಅನುಮೋದನೆ
March 25th, 05:35 pm
ಭಾರತದ ಕ್ರಮಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2031 ರಿಂದ 2035ರ ಅವಧಿಯ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಯನ್ನು (ಎನ್ ಡಿ ಸಿ) ಅನುಮೋದಿಸಿದೆ. ಇದು ಯು ಎನ್ ಎಫ್ ಸಿ ಸಿ ಸಿ ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ದೇಶದ ಮಹತ್ವಾಕಾಂಕ್ಷೆಯನ್ನು ಹೆಚ್ಚಿಸುವುದಲ್ಲದೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ನ್ಯಾಯದ ಬಗೆಗಿನ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ.ನವದೆಹಲಿಯ ಭಾರತ್ ಮಂಟಪದಲ್ಲಿ ವಿಶ್ವ ಆಹಾರ ಭಾರತ - 2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 06:16 pm
ರಷ್ಯಾದ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ಪತ್ರುಶೇವ್ ಅವರೆ, ನನ್ನ ಸಂಪುಟ ಸಹೋದ್ಯೋಗಿಗಳಾದ ಚಿರಾಗ್ ಪಾಸ್ವಾನ್ ಮತ್ತು ಶ್ರೀ ರವನೀತ್, ಶ್ರೀ ಪ್ರತಾಪರಾವ್ ಜಾಧವ್, ವಿವಿಧ ದೇಶಗಳಿಂದ ಇಲ್ಲಿಗೆ ಬಂದಿರುವ ಸಚಿವರೆ ಮತ್ತು ಪ್ರತಿನಿಧಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ವಿಶ್ವ ಆಹಾರ ಭಾರತ 2025 ನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 06:15 pm
ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು ನಡೆದ ವರ್ಲ್ಡ್ ಫುಡ್ ಇಂಡಿಯಾ 2025 ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ರೈತರು, ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯಕಾರರು ಮತ್ತು ಗ್ರಾಹಕರು ಎಲ್ಲರೂ ಒಟ್ಟಾಗಿ ಈ ಕಾರ್ಯಕ್ರಮದಲ್ಲಿ ಹಾಜರಿರುವುದನ್ನು ಗುರುತಿಸಿದರು, ಇದು ವರ್ಲ್ಡ್ ಫುಡ್ ಇಂಡಿಯಾವನ್ನು ಹೊಸ ಪರಿಚಯಗಳು, ಹೊಸ ಸಂಪರ್ಕ ಮತ್ತು ಸೃಜನಶೀಲತೆಯ ವೇದಿಕೆಯನ್ನಾಗಿ ಮಾಡಿವೆ ಎಂದು ಹೇಳಿದರು. ತಾವು ಈಗಷ್ಟೇ ಪ್ರದರ್ಶನಗಳಿಗೆ ಭೇಟಿ ನೀಡಿದ್ದನ್ನು ಹಂಚಿಕೊಂಡ ಅವರು, ಪ್ರಾಥಮಿಕ ಗಮನವು ಪೌಷ್ಟಿಕಾಂಶ, ತೈಲ ಬಳಕೆ ಕಡಿಮೆ ಮಾಡುವುದು ಮತ್ತು ಪ್ಯಾಕೇಜ್ ಮಾಡಿದ ಉತ್ಪನ್ನಗಳಲ್ಲಿ ಆರೋಗ್ಯಕರ ಅಂಶಗಳನ್ನು ಹೆಚ್ಚಿಸುವುದರ ಬಗ್ಗೆ ಇರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿಯವರು ಅಭಿನಂದನೆಗಳು ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು.ಯಶೋಭೂಮಿ, ದೆಹಲಿಯಲ್ಲಿ ನಡೆದ ಸೆಮಿಕಾನ್ ಇಂಡಿಯಾ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
September 02nd, 10:40 am
ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಅಶ್ವಿನಿ ವೈಷ್ಣವ್ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಜೀ, ಕೇಂದ್ರ ರಾಜ್ಯ ಸಚಿವ ಜಿತಿನ್ ಪ್ರಸಾದ್ ಜೀ, SEMI ಸಂಸ್ಥೆಯ ಅಧ್ಯಕ್ಷ ಅಜಿತ್ ಮನೋಚಾ ಜೀ, ಭಾರತ ಮತ್ತು ವಿದೇಶಗಳಿಂದ ಆಗಮಿಸಿರುವ ಸೆಮಿಕಂಡಕ್ಟರ್ ಉದ್ಯಮದ ಸಿಇಒಗಳು ಮತ್ತು ಅವರ ಸಹವರ್ತಿಗಳೇ, ವಿವಿಧ ದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೇ, ಸ್ಟಾರ್ಟಪ್ ಗಳೊಂದಿಗೆ ಸಂಬಂಧ ಹೊಂದಿರುವ ಉದ್ಯಮಿಗಳೇ, ವಿವಿಧ ರಾಜ್ಯಗಳ ನನ್ನ ಯುವ ವಿದ್ಯಾರ್ಥಿ ಮಿತ್ರರೇ, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಸೆಮಿಕಾನ್ ಇಂಡಿಯಾ - 2025 ಉದ್ಘಾಟಿಸಿದರು
September 02nd, 10:15 am
ಭಾರತದ ಸೆಮಿಕಂಡಕ್ಟರ್ ಪೂರಕ ವ್ಯವಸ್ಥೆಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ 'ಸೆಮಿಕಾನ್ ಇಂಡಿಯಾ-2025' ಕಾರ್ಯಕ್ರಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಭಾರತ ಮತ್ತು ವಿದೇಶಗಳ ಸೆಮಿಕಂಡಕ್ಟರ್ ಉದ್ಯಮದ ಸಿ.ಇ.ಒಗಳು ಮತ್ತು ಸಹವರ್ತಿಗಳ ಉಪಸ್ಥಿತಿಗೆ ಧನ್ಯವಾದ ತಿಳಿಸಿದರು. ವಿವಿಧ ದೇಶಗಳ ಗಣ್ಯ ಅತಿಥಿಗಳು, ನವೋದ್ಯಮಗಳ ಉದ್ಯಮಿಗಳು ಮತ್ತು ದೇಶಾದ್ಯಂತದ ವಿವಿಧ ರಾಜ್ಯಗಳ ಯುವ ವಿದ್ಯಾರ್ಥಿಗಳನ್ನು ಅವರು ಸ್ವಾಗತಿಸಿದರು.ರೋಜ್ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ
July 12th, 11:30 am
ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
July 12th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.ಇಂಡಿಯಾ ಸ್ಟೀಲ್-2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 02:00 pm
ಇಂದು ಮತ್ತು ಮುಂದಿನ 2 ದಿನಗಳಲ್ಲಿ ಭಾರತದ ಉದಯೋನ್ಮುಖ ವಲಯ ಉಕ್ಕಿನ ಕ್ಷೇತ್ರದ ಸಾಮರ್ಥ್ಯಗಳು ಮತ್ತು ಸಂಭಾವ್ಯ ಸಾಮರ್ಥ್ಯದ ಬಗ್ಗೆ ನಾವು ವ್ಯಾಪಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲಿದ್ದೇವೆ. ಇದು ಭಾರತದ ಪ್ರಗತಿಯ ಬೆನ್ನೆಲುಬಾಗಿ ರೂಪುಗೊಳ್ಳುವ ವಲಯವಾಗಿದೆ, 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ)ಕ್ಕೆ ಬಲವಾದ ಅಡಿಪಾಯವಾಗಿದ್ದು, ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯ ಬರೆಯುತ್ತಿದೆ. ಇಂಡಿಯಾ ಸ್ಟೀಲ್-2025 ಕಾರ್ಯಕ್ರಮಕ್ಕೆ ನಿಮ್ಮೆಲ್ಲರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವು ಹೊಸ ವಿಚಾರ, ಆಲೋಚನೆಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಹೊಸ ಅನಾವರಣ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ. ಇದು ಉಕ್ಕಿನ ವಲಯದಲ್ಲಿ ಹೊಸ ಅಧ್ಯಾಯಕ್ಕೆ ಭದ್ರ ಬುನಾದಿ ಹಾಕುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
April 24th, 01:30 pm
ಮುಂಬೈನಲ್ಲಿ ಇಂದು ನಡೆದ ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ತಮ್ಮ ಭಾಷಣ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಉದಯೋನ್ಮುಖ ವಲಯವಾದ ಉಕ್ಕು ಉದ್ಯಮದ ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಮುಂದಿನ ಎರಡು ದಿನಗಳು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ಈ ವಲಯವು ಭಾರತದ ಪ್ರಗತಿಯ ಅಡಿಪಾಯವಾಗಿದೆ, ಅಭಿವೃದ್ಧಿ ಹೊಂದಿದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ ಮತ್ತು ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ಅವರು ಹೇಳಿದರು. ಇಂಡಿಯಾ ಸ್ಟೀಲ್ 2025ಕ್ಕೆ ಎಲ್ಲರನ್ನು ಸ್ವಾಗತಿಸಿದ ಪ್ರಧಾನಿ, ಹೊಸ ವಿಚಾರಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಈ ಕಾರ್ಯಕ್ರಮವು ಒಂದು ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಉಕ್ಕು ವಲಯದಲ್ಲಿ ಹೊಸ ಅಧ್ಯಾಯಕ್ಕೆ ಅಡಿಪಾಯ ಹಾಕಲಿದೆ ಎಂದು ಅವರು ಒತ್ತಿ ಹೇಳಿದರು.ಬಜೆಟ್ ನಂತರದ ಎಂ ಎಸ್ ಎಂ ಇ ವಲಯದ ವೆಬಿನಾರ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಮಂತ್ರಿ ಭಾಷಣ
March 04th, 01:00 pm
ಉತ್ಪಾದನೆ ಮತ್ತು ರಫ್ತು ಕುರಿತ ಈ ಬಜೆಟ್ ವೆಬಿನಾರ್ ಪ್ರತಿಯೊಂದು ಅಂಶದಿಂದಲೂ ಬಹಳ ಮುಖ್ಯವಾಗಿದೆ. ನಿಮಗೆ ತಿಳಿದಿರುವಂತೆ , ಈ ಬಜೆಟ್ ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಆಗಿತ್ತು. ಈ ಬಜೆಟ್ನ ಅತ್ಯಂತ ವಿಶೇಷವಾದ ವಿಷಯವೆಂದರೆ ಅದು ನಿರೀಕ್ಷೆಗಿಂತ ಹೆಚ್ಚಿನದನ್ನು ನೀಡಿದೆ. ಸರ್ಕಾರವು ತಜ್ಞರು ನಿರೀಕ್ಷಿಸಿದ್ದಕ್ಕಿಂತ ದೊಡ್ಡ ಕ್ರಮಗಳನ್ನು ತೆಗೆದುಕೊಂಡಿರುವ ಹಲವು ಕ್ಷೇತ್ರಗಳಿವೆ ಮತ್ತು ನೀವು ಅದನ್ನು ಬಜೆಟ್ನಲ್ಲಿ ನೋಡಿದ್ದೀರಿ. ಉತ್ಪಾದನೆ ಮತ್ತು ರಫ್ತಿಗೆ ಸಂಬಂಧಿಸಿದಂತೆ ಬಜೆಟ್ನಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
March 04th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ನಂತರದ ವೆಬಿನಾರ್ ಗಳನ್ನುದ್ದೇಶಿಸಿ ಭಾಷಣ ಮಾಡಿದರು. ಬೆಳವಣಿಗೆಯ ಎಂಜಿನ್ ಆಗಿ ಎಂಎಸ್ಎಂಇ ಕುರಿತು ವೆಬಿನಾರ್ಗಳು ನಡೆದವು; ಉತ್ಪಾದನೆ, ರಫ್ತು ಮತ್ತು ಪರಮಾಣು ಶಕ್ತಿ ಕಾರ್ಯಾಚರಣೆಗಳು; ನಿಯಂತ್ರಣ, ಹೂಡಿಕೆ ಮತ್ತು ಸುಗಮ ವ್ಯಾಪಾರ ಸುಧಾರಣೆಗಳು ಇದರಲ್ಲಿ ಸೇರಿದ್ದವು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಉತ್ಪಾದನೆ ಮತ್ತು ರಫ್ತು ಕುರಿತ ಬಜೆಟ್ ನಂತರದ ವೆಬಿನಾರ್ ಗಳು ಬಹಳ ಮಹತ್ವದ್ದಾಗಿವೆ ಎಂದರು. ಈ ಬಜೆಟ್ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಎಂದು ಉಲ್ಲೇಖಿಸಿದ ಅವರು, ಈ ಬಜೆಟ್ ನ ಅತ್ಯಂತ ಗಮನಾರ್ಹ ಅಂಶವೆಂದರೆ ಅದರ ವಿತರಣೆ, ಇದು ನಿರೀಕ್ಷೆಗಳನ್ನು ಮೀರಿದೆ ಎಂದು ಒತ್ತಿ ಹೇಳಿದರು. ಹಲವಾರು ವಲಯಗಳಲ್ಲಿ, ತಜ್ಞರು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂಬುದರತ್ತ ಶ್ರೀ ಮೋದಿ ಗಮನಸೆಳೆದರು. ಈ ಬಜೆಟ್ ನಲ್ಲಿ ಉತ್ಪಾದನೆ ಮತ್ತು ರಫ್ತಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.