2025-26 ರಿಂದ 2030-31 ರವರೆಗೆ ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತ ಅಭಿಯಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

October 01st, 03:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಬೇಳೆಕಾಳುಗಳಲ್ಲಿ ಆತ್ಮನಿರ್ಭರ ಮಿಷನ್ಗೆ ಅನುಮೋದನೆ ನೀಡಿದೆ. ಇದು ದೇಶದಲ್ಲಿ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಒಂದು ಮಹತ್ತರ ಉಪಕ್ರಮವಾಗಿದ್ದು, ಇದರ ಉದ್ದೇಶ ಬೇಳೆಕಾಳುಗಳಲ್ಲಿ ಸ್ವಾವಲಂಬನೆ (ಆತ್ಮನಿರ್ಭರತ) ಸಾಧಿಸುವುದಾಗಿದೆ. ಈ ಮಿಷನ್ ಅನ್ನು 2025-26 ರಿಂದ 2030-31 ರವರೆಗಿನ ಆರು ವರ್ಷಗಳ ಅವಧಿಯಲ್ಲಿ, ರೂ. 11,440 ಕೋಟಿ ಆರ್ಥಿಕ ವೆಚ್ಚದೊಂದಿಗೆ ಜಾರಿಗೆ ತರಲಾಗುವುದು.

2024-25 ರಿಂದ 2030-31ರವರೆಗೆ ಖಾದ್ಯ ತೈಲಗಳು-ಎಣ್ಣೆಕಾಳುಗಳ ರಾಷ್ಟ್ರೀಯ ಮಿಷನ್‌ (ಎನ್‌ಎಂಇಒ-ಎಣ್ಣೆಕಾಳುಗಳು) ಗೆ ಸಂಪುಟದ ಅನುಮೋದನೆ

October 03rd, 09:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ದೇಶೀಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಮತ್ತು ಖಾದ್ಯ ತೈಲಗಳಲ್ಲಿಸ್ವಾವಲಂಬನೆ (ಆತ್ಮನಿರ್ಭರ ಭಾರತ್‌) ಸಾಧಿಸುವ ಗುರಿಯನ್ನು ಹೊಂದಿರುವ ಹೆಗ್ಗುರುತು ಉಪಕ್ರಮವಾದ ಖಾದ್ಯ ತೈಲಗಳು - ಎಣ್ಣೆಕಾಳುಗಳ ರಾಷ್ಟ್ರೀಯ ಮಿಷನ್‌ (ಎನ್‌.ಎಂ.ಇ.ಒ-ಎಣ್ಣೆಕಾಳುಗಳು)ಗೆ ತನ್ನ ಅನುಮೋದನೆ ನೀಡಿದೆ. ಈ ಮಿಷನ್‌ ಅನ್ನು 2024-25 ರಿಂದ 2030-31 ರವರೆಗೆ ಏಳು ವರ್ಷಗಳ ಅವಧಿಯಲ್ಲಿ10,103 ಕೋಟಿ ರೂ.ಗಳ ಹಣಕಾಸು ವೆಚ್ಚದೊಂದಿಗೆ ಜಾರಿಗೆ ತರಲಾಗುವುದು.

ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನ (ಪಿಎಂ-ಆಶಾ) ಯೋಜನೆಗಳ ಮುಂದುವರಿಕೆಗೆ ಕ್ಯಾಬಿನೆಟ್ ಅನುಮೋದನೆ

September 18th, 03:16 pm

ರೈತರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸಲು ಮತ್ತು ಗ್ರಾಹಕರಿಗೆ ಅಗತ್ಯ ವಸ್ತುಗಳ ಬೆಲೆ ಏರಿಳಿತವನ್ನು ನಿಯಂತ್ರಿಸಲು ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನದ (ಪಿಎಂ-ಆಶಾ) ಯೋಜನೆಗಳ ಮುಂದುವರಿಕೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಒಟ್ಟು ಹಣಕಾಸಿನ ಹೊರಹೋಗುವಿಕೆಯು ರೂ. 2025-26 ರವರೆಗಿನ 15 ನೇ ಹಣಕಾಸು ಆಯೋಗದ ಚಕ್ರದಲ್ಲಿ 35,000 ಕೋಟಿ ರೂಪಾಯಿ.

ಜಪಾನ್‌ನ ಟೋಕಿಯೊದಲ್ಲಿ ಅನಿವಾಸಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

May 23rd, 08:19 pm

ನಾನು ಪ್ರತಿ ಬಾರಿ ಜಪಾನ್‌ಗೆ ಭೇಟಿ ನೀಡಿದಾಗಲೂ, ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ಸಮಯದೊಂದಿಗೆ ಬೆಳೆಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ. ಹಲವಾರು ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವ ಅನಿವಾಸಿ ಭಆರತೀಯರು ಇದ್ದಾರೆ. ಜಪಾನ್‌ ಭಾಷೆ, ಅದರ ಉಡುಗೆ ತೊಡುಗೆ, ಸಂಸ್ಕೃತಿ, ಆಹಾರವು ಒಂದು ರೀತಿಯಲ್ಲಿ ನಿಮ್ಮ ಜೀವನದ ಒಂದು ಭಾಗವಾಗಿದೆ. ಅದು ಜೀವನ ಭಾಗವಾಗಲು ಒಂದು ಕಾರಣವೆಂದರೆ ಭಾರತೀಯ ಸಮುದಾಯದ ಸಂಸ್ಕೃತಿಯು ಯಾವಾಗಲೂ ಅಂತರ್ಗತವಾಗಿರುತ್ತದೆ. ಆದರೆ ಅದೇ ಸಮಯದಲ್ಲಿ, ಜಪಾನ್ ತನ್ನ ಸಂಪ್ರದಾಯ, ಅದರ ಮೌಲ್ಯಗಳು, ಈ ಭೂಮಿಯ ಮೇಲಿನ ತನ್ನ ಜೀವನದ ಬಗ್ಗೆ ಹೊಂದಿರುವ ಬದ್ಧತೆ ಬಹಳ ಆಳವಾದದ್ದು. ಮತ್ತೆ ಈಗ ಎರಡೂ ರಾಷ್ಟ್ರಗಳು ಭೇಟಿಯಾಗಿವೆ, ಹಾಗಾಗಿ ಆತ್ಮೀಯತೆಯ ಭಾವನೆ ಬರುವುದು ಸಹಜ.

ಜಪಾನ್ ನಲ್ಲಿನ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

May 23rd, 04:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಮೇ 23ರಂದು ಜಪಾನ್‌ನಲ್ಲಿನ 700 ಕ್ಕೂ ಅಧಿಕ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಸಂವಾದ ನಡೆಸಿದರು.

ಆಶಾ ಕಾರ್ಯಕರ್ತೆಯರ ಸಂಪೂರ್ಣ ತಂಡವು ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕರ ಗ್ಲೋಬಲ್ ಹೆಲ್ತ್ ಲೀಡರ್ಸ್ ಪ್ರಶಸ್ತಿಯನ್ನು ಪಡೆದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

May 23rd, 10:30 am

ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕರ ಗ್ಲೋಬಲ್ ಹೆಲ್ತ್ ಲೀಡರ್ಸ್ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವ ಆಶಾ ಕಾರ್ಯಕರ್ತೆಯರ ಇಡೀ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಆರೋಗ್ಯವಂತ ಭಾರತವನ್ನು ಖಾತ್ರಿಪಡಿಸುವಲ್ಲಿ ಆಶಾ ಕಾರ್ಯಕರ್ತರು ಮುಂಚೂಣಿಯಲ್ಲಿದ್ದಾರೆ ಮತ್ತು ಅವರ ಸಮರ್ಪಣೆ ಮತ್ತು ಸಂಕಲ್ಪ ಪ್ರಶಂಸನೀಯವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಕಡಿಮೆ ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೊಂದಿರುವ ಜಿಲ್ಲೆಗಳೊಂದಿಗೆ ಪರಿಶೀಲನಾ ಸಭೆಯಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಗಳು

November 03rd, 01:49 pm

ಇಟಲಿ ಮತ್ತು ಗ್ಲಾಸ್ಗೋ ಪ್ರವಾಸದಿಂದ ಹಿಂದಿರುಗಿದ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಕಡಿಮೆ ವ್ಯಾಕ್ಸಿನೇಷನ್ ವ್ಯಾಪ್ತಿಯ ಜಿಲ್ಲೆಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಂವಾದದ ಸಮಯದಲ್ಲಿ, ಈ ಜಿಲ್ಲೆಗಳಲ್ಲಿ 100% ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಖಾತ್ರಿಪಡಿಸಿಕೊಳ್ಳಲು ಕಾರ್ಯಗತಗೊಳಿಸಬಹುದಾದ ವ್ಯಾಪಕವಾದ ಆಲೋಚನೆಗಳ ಕುರಿತು ಪ್ರಧಾನಮಂತ್ರಿ ಚರ್ಚಿಸಿದರು.

ಕಡಿಮೆ ಲಸಿಕೆ ವ್ಯಾಪ್ತಿ ಹೊಂದಿರುವ ಜಿಲ್ಲೆಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ

November 03rd, 01:30 pm

ಇಟಲಿ ಮತ್ತು ಗ್ಲ್ಯಾಸ್ಗೋ ಪ್ರವಾಸದಿಂದ ಹಿಂದಿರುಗಿದ ಕೂಡಲೇ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಿಮೆ ಲಸಿಕೆ ವ್ಯಾಪ್ತಿಯನ್ನು ಹೊಂದಿರುವ ಜಿಲ್ಲೆಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಕೋವಿಡ್‌ ಲಸಿಕೆಯ ಮೊದಲ ಡೋಸ್‌ನ ವ್ಯಾಪ್ತಿ 50% ಕ್ಕಿಂತ ಕಡಿಮೆ ಇರುವ ಹಾಗೂ ಎರಡನೇ ಡೋಸ್‌ನ ವ್ಯಾಪ್ತಿಯೂ ತೀರಾ ಕಡಿಮೆ ಇರುವ ಜಿಲ್ಲೆಗಳು ಈ ಸಭೆಯಲ್ಲಿ ಭಾಗಿಯಾದವು. ಜಾರ್ಖಂಡ್, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ಮೇಘಾಲಯ ಮತ್ತು ಇತರ ರಾಜ್ಯಗಳ 40ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿಯವರು ಸಂವಾದ ನಡೆಸಿದರು.

100 ಕೋಟಿ ಲಸಿಕೆ ಡೋಸ್ ಗಳ ನಂತರ, ಭಾರತವು ಹೊಸ ಉತ್ಸಾಹ ಮತ್ತು ಶಕ್ತಿಯೊಂದಿಗೆ ಮುಂದುವರಿಯುತ್ತಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

October 24th, 11:30 am

ಮನ್ ಕಿ ಬಾತ್ ಸಮಯದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 100 ಕೋಟಿಗೂ ಹೆಚ್ಚು ಲಸಿಕೆ ಪ್ರಮಾಣಗಳೊಂದಿಗೆ ದೇಶವು ಹೊಸ ಉತ್ಸಾಹ ಮತ್ತು ಶಕ್ತಿಯೊಂದಿಗೆ ಮುಂದುವರಿಯುತ್ತಿದೆ ಎಂದು ಹೇಳಿದರು. ಪ್ರತಿಯೊಬ್ಬ ಮುಂಚೂಣಿ ಕಾರ್ಯಕರ್ತರ ಉತ್ಸಾಹಭರಿತ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ಪ್ರಧಾನಿ ಮೋದಿ ಅವರು ಭಾರತವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ಪಟೇಲ್ ಅವರ ಕೊಡುಗೆಯ ಬಗ್ಗೆ ವಿವರವಾಗಿ ಮಾತನಾಡಿದರು, ಬಿರ್ಸಾ ಮುಂಡಾ ಅವರ ಶೌರ್ಯವನ್ನು ನೆನಪಿಸಿಕೊಂಡರು ಮತ್ತು ಇನ್ನಷ್ಟು ...

ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕಾ ಫಲಾನುಭವಿಗಳ ಜೊತೆ ಪ್ರಧಾನ ಮಂತ್ರಿಗಳ ಸಂವಾದ

September 06th, 11:01 am

ಹಿಮಾಚಲ ಪ್ರದೇಶವು ಇಂದು ಪ್ರಧಾನ ಸೇವಕನಾಗಿ ಮಾತ್ರವಲ್ಲ ಕುಟುಂಬದ ಸದಸ್ಯನಾಗಿ ನನಗೆ ಹೆಮ್ಮೆಯ ಅವಕಾಶವನ್ನು ಒದಗಿಸಿಕೊಟ್ಟಿದೆ. ಹಿಮಾಚಲವು ಸಣ್ಣ ಸೌಲಭ್ಯಗಳಿಗಾಗಿ, ಅವಕಾಶಗಳಿಗಾಗಿ ಹೋರಾಟ ಮಾಡುತ್ತಿದ್ದುದನ್ನು ನಾನು ನೋಡಿದ್ದೆ, ಮತ್ತು ಇಂದು ಹಿಮಾಚಲ ಪ್ರದೇಶವು ಅಭಿವೃದ್ಧಿಯ ಕಥೆ ಬರೆಯುತ್ತಿರುವುದನ್ನೂ ನೋಡುತ್ತಿದ್ದೇನೆ. ಇದೆಲ್ಲ ಸಾಧ್ಯವಾಗಿರುವುದು ದೇವತೆಗಳ ಆಶೀರ್ವಾದದಿಂದ, ಹಿಮಾಚಲ ಪ್ರದೇಶ ಸರಕಾರದ ಪರಿಶ್ರಮದಿಂದ ಮತ್ತು ಹಿಮಾಚಲದ ಜನತೆಯ ಜಾಗೃತಿಯಿಂದ. ನನಗೆ ಸಂವಹನ ನಡೆಸಲು ಅವಕಾಶ ಮಾಡಿಕೊಟ್ಟಂತಹ ಎಲ್ಲರಿಗೂ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಿಮ್ಮೆಲ್ಲರಿಗೂ ಶುಭವಾಗಲಿ!!

ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ

September 06th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಜೆ.ಪಿ. ನಡ್ಡಾ, ಶ್ರೀ ಅನುರಾಗ್ ಸಿಂಗ್ ಠಾಕೂರ್; ಸಂಸದರು, ಶಾಸಕರು, ಪಂಚಾಯತ್ ನಾಯಕರು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಸೆಪ್ಟೆಂಬರ್ 6ರಂದು ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ

September 04th, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟೆಂಬರ್ 6ರಂದು ಬೆಳಗ್ಗೆ 11 ಗಂಟೆಗೆ ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಲಿದ್ದಾರೆ.

ಕೊರೋನ ಅವಧಿಯು ಕೌಶಲ್ಯ, ಮರು ಕೌಶಲ್ಯ ಮತ್ತು ಕೌಶಲ್ಯದ ಮಹತ್ವವನ್ನು ಸಾಬೀತುಪಡಿಸಿದೆ: ಪ್ರಧಾನಿ

June 18th, 09:45 am

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಕೋವಿಡ್ 19 ಮುಂಚೂಣಿ ಕಾರ್ಯಕರ್ತರ ಸಮಗ್ರ ತರಬೇತಿ ಕಾರ್ಯಕ್ರಮವನ್ನು’ ಇಂದು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ನಾವು ದೇಶದಲ್ಲಿ 1 ಲಕ್ಷ ಮುಂಚೂಣಿ ಕಾರ್ಮಿಕರನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಪ್ರಾರಂಭದೊಂದಿಗೆ, ಇದು 26 ರಾಜ್ಯಗಳಲ್ಲಿ ವ್ಯಾಪಿಸಿರುವ 111 ತರಬೇತಿ ಕೇಂದ್ರಗಳಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ.

ಕೋವಿಡ್‌-19 ಮುಂಚೂಣಿ ಕಾರ್ಯಕರ್ತರಿಗಾಗಿ “ವೈಯಕ್ತೀಕರಿಸಿದ ಕ್ರಾಶ್‌ ಕೋರ್ಸ್‌ʼʼ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನಿ

June 18th, 09:43 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಕೋವಿಡ್-19 ಮುಂಚೂಣಿ ಕಾರ್ಮಿಕರಿಗಾಗಿ `ವೈಯಕ್ತೀಕರಿಸಿದ ಕ್ರ್ಯಾಶ್ ಕೋರ್ಸ್’ ಕಾರ್ಯಕ್ರಮಕ್ಕೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ತರಬೇತಿ ಕಾರ್ಯಕ್ರಮವನ್ನು 26 ರಾಜ್ಯಗಳಲ್ಲಿರುವ 111 ತರಬೇತಿ ಕೇಂದ್ರಗಳಲ್ಲಿ ನಡೆಸಲಾಗುವುದು. ಈ ಉಪಕ್ರಮದಲ್ಲಿ ಸುಮಾರು ಒಂದು ಲಕ್ಷ ಮುಂಚೂಣಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು. ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ ಸೇರಿದಂತೆ ಅನೇಕ ಕೇಂದ್ರ ಸಚಿವರು, ರಾಜ್ಯಗಳ ಸಚಿವರು, ತಜ್ಞರು ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ಕೋವಿಡ್ ಮತ್ತು ಲಸಿಕೆ ಸಂಬಂಧಿತ ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಮಂತ್ರಿ

May 15th, 02:42 pm

ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕೋವಿಡ್, ಪರೀಕ್ಷೆ, ಆಮ್ಲಜನಕ ಲಭ್ಯತೆ, ಆರೋಗ್ಯ ಆರೈಕೆ ಮೂಲಸೌಕರ್ಯ, ಲಸಿಕೆ ಮಾರ್ಗಸೂಚಿಯ ಪರಿಸ್ಥಿತಿ ಕುರಿತಂತೆ ಅಧಿಕಾರಿಗಳು ಸವಿವರವಾದ ಪ್ರಾತ್ಯಕ್ಷಿಕೆ ನೀಡಿದರು. ಪ್ರಧಾನಮಂತ್ರಿಯವರು ಸ್ಥಳೀಯ ಕಂಟೈನ್ಮೆಂಟ್ ಕಾರ್ಯತಂತ್ರಗಳು ಅದರಲ್ಲೂ ಜಿಲ್ಲೆಗಳಲ್ಲಿ ಟಿಪಿಆರ್ ಹೆಚ್ಚಿರುವ ರಾಜ್ಯಗಳಲ್ಲಿ ಈ ಹೊತ್ತಿನ ಅಗತ್ಯವಾಗಿದೆ ಎಂದು ಪ್ರಧಾನಮಂತ್ರಿ ಪ್ರತಿಪಾದಿಸಿದರು.

ಕೊರೋನಾ ಸೇನಾನಿಗಳಿಗೆ ಲಸಿಕೆ ಹಾಕುವ ಮೂಲಕ ವಾರಿಯರ್ ಗಳಿಗೆ ದೇಶ ಕೃತಜ್ಞತೆ ವ್ಯಕ್ತಪಡಿಸುತ್ತದೆ : ಪ್ರಧಾನಮಂತ್ರಿ

January 16th, 03:22 pm

ಕೊರೋನಾ ಸೋಂಕಿನ ವಿರುದ್ದದ ಹೋರಾಟದ ಸಂದರ್ಭದಲ್ಲಿ ದೇಶದ ಜನತೆ ಪೂರ್ಣ ಪ್ರಮಾಣದಲ್ಲಿ ಪ್ರದರ್ಶಿಸಿದ ಬಲಿಷ್ಠ ನಿಸ್ವಾರ್ಥ ಸ್ಫೂರ್ತಿಯನ್ನು ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ವೇಳೆ ಪ್ರಧಾನಿ ಭಾಷಣ

January 16th, 10:31 am

ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಇದು ದೇಶದ ಉದ್ದಗಲಕ್ಕೂ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮವಾಗಿದೆ. ಅಭಿಯಾನ ಚಾಲನೆಯ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 3006 ಲಸಿಕೆ ನೀಡುವ ಸ್ಥಳಗಳನ್ನು ವರ್ಚುವಲ್ ಆಗಿ ಸಂಪರ್ಕಿಸಲಾಯಿತು.

ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

January 16th, 10:30 am

ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಇದು ದೇಶದ ಉದ್ದಗಲಕ್ಕೂ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮವಾಗಿದೆ. ಅಭಿಯಾನ ಚಾಲನೆಯ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 3006 ಲಸಿಕೆ ನೀಡುವ ಸ್ಥಳಗಳನ್ನು ವರ್ಚುವಲ್ ಆಗಿ ಸಂಪರ್ಕಿಸಲಾಯಿತು.

Development of Jammu and Kashmir is one of the biggest priorities of our Government: PM

December 26th, 12:01 pm

PM Modi launched Ayushman Bharat PM-JAY SEHAT to extend coverage to all residents of Jammu & Kashmir. The PM congratulated the people of Jammu and Kashmir for strengthening democracy. He said the election of the District Development Council has written a new chapter. He complimented the people for reaching the voting booth despite the cold and corona.

PM Modi launches SEHAT healthcare scheme for Jammu and Kashmir

December 26th, 11:59 am

PM Modi launched Ayushman Bharat PM-JAY SEHAT to extend coverage to all residents of Jammu & Kashmir. The PM congratulated the people of Jammu and Kashmir for strengthening democracy. He said the election of the District Development Council has written a new chapter. He complimented the people for reaching the voting booth despite the cold and corona.