Today, BJP stands for good governance and last-mile delivery: PM Modi

April 06th, 12:30 pm

PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.

PM Modi addresses Party Karyakartas on BJP Sthapana Diwas

April 06th, 12:00 pm

PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.

ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅವತರಣಿಕೆ

March 18th, 11:30 am

ಈ ವಿಶೇಷ ಸಂದರ್ಭದಲ್ಲಿ, ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ತಾವು ನೀಡಿದ ಅವಕಾಶಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ.

ನಿವೃತ್ತಿ ಹೊಂದುತ್ತಿರುವ ರಾಜ್ಯಸಭಾ ಸದಸ್ಯರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

March 18th, 11:20 am

ಇಂದು ನಿವೃತ್ತರಾಗುತ್ತಿರುವ ರಾಜ್ಯಸಭಾ ಸದಸ್ಯರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ನಿವೃತ್ತರಾಗುತ್ತಿರುವ ಸಹೋದ್ಯೋಗಿಗಳನ್ನು ಗೌರವಿಸುವ ಅವಕಾಶಕ್ಕಾಗಿ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ, ಇಂತಹ ಸಂದರ್ಭಗಳು ಸದನವು ಪಕ್ಷಗಳನ್ನು ಮೀರಿ ಬೆಳೆಯಲು ಮತ್ತು ಸಾಮಾನ್ಯ ಭಾವನೆಯನ್ನು ಹಂಚಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ಸದಸ್ಯರು ಹಿಂತಿರುಗಿದರೂ ಅಥವಾ ವಿಶಾಲವಾದ ಸಾಮಾಜಿಕ ಸೇವೆಗೆ ಹೋದರೂ, ಅವರ ಸಂಗ್ರಹಿತ ಅನುಭವವು ರಾಷ್ಟ್ರಕ್ಕೆ ಒಂದು ಆಸ್ತಿಯಾಗಿ ಉಳಿಯುತ್ತದೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು. ರಾಜಕೀಯದ ಕ್ರಿಯಾತ್ಮಕ ಕ್ಷೇತ್ರದಲ್ಲಿ, ಪ್ರಯಾಣವು ಎಂದಿಗೂ ನಿಜವಾಗಿಯೂ ಕೊನೆಗೊಳ್ಳುವುದಿಲ್ಲ ಏಕೆಂದರೆ ಭವಿಷ್ಯವು ಸದಾ ಅನುಭವಿ ನಾಯಕರಿಗೆ ಹೊಸ ಅವಕಾಶಗಳನ್ನು ನೀಡುತ್ತದೆ ಎಂದು ಅವರು ಗಮನಿಸಿದರು. ರಾಜಕೀಯದಲ್ಲಿ, ಯಾವುದೇ ಪೂರ್ಣವಿರಾಮಗಳಿಲ್ಲ; ನಿಮ್ಮ ಅನುಭವ ಮತ್ತು ಕೊಡುಗೆ ಶಾಶ್ವತವಾಗಿ ರಾಷ್ಟ್ರದ ಜೀವನದ ಒಂದು ಭಾಗವಾಗಿರುತ್ತದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 03rd, 12:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು

January 03rd, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರಧಾನಮಂತ್ರಿ ನೀಡಿದ ಹೇಳಿಕೆಯ ಕನ್ನಡ ಅವತರಣಿಕೆ

December 01st, 10:15 am

(ಸಂಸತ್ತಿನ) ಈ ಚಳಿಗಾಲದ ಅಧಿವೇಶನವು ಕೇವಲ ಒಂದು ಸಂಪ್ರದಾಯ ಆಚರಣೆಯಲ್ಲ. ಈ ಚಳಿಗಾಲದ ಅಧಿವೇಶನವು ರಾಷ್ಟ್ರವನ್ನು ಪ್ರಗತಿಯತ್ತ ವೇಗವಾಗಿ ಕೊಂಡೊಯ್ಯಲು ನಡೆಯುತ್ತಿರುವ ಪ್ರಯತ್ನಗಳಿಗೆ ಶಕ್ತಿ ತುಂಬುತ್ತದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಭಾರತವು ನಿಜವಾಗಿಯೂ ಪ್ರಜಾಪ್ರಭುತ್ವವನ್ನು ಜೀವಂತಗೊಳಿಸಿದೆ. ಪ್ರಜಾಪ್ರಭುತ್ವದ ಮೇಲಿನ ಜನರ ನಂಬಿಕೆ ಬಲಗೊಳ್ಳುವ ರೀತಿಯಲ್ಲಿ ಪ್ರಜಾಪ್ರಭುತ್ವದ ಉತ್ಸಾಹ ಮತ್ತು ಚೈತನ್ಯ ಪದೇ ಪದೇ ವ್ಯಕ್ತಗೊಳ್ಳುತ್ತಿದೆ. ಇತ್ತೀಚೆಗೆ, ಬಿಹಾರದಲ್ಲಿ ನಡೆದ ಚುನಾವಣೆಗಳು ಮತ್ತು ಅಲ್ಲಿ ದಾಖಲೆಯ ಮತದಾನವು ಪ್ರಜಾಪ್ರಭುತ್ವದ ದೊಡ್ಡ ಶಕ್ತಿಯಾಗಿದೆ. ತಾಯಂದಿರು ಮತ್ತು ಸಹೋದರಿಯರ ಹೆಚ್ಚುತ್ತಿರುವ ಭಾಗವಹಿಸುವಿಕೆಯು ಸ್ವತಃ ಹೊಸ ಭರವಸೆ ಮತ್ತು ವಿಶ್ವಾಸವನ್ನು ಸೃಷ್ಟಿಸುತ್ತದೆ. ಒಂದೆಡೆ, ಪ್ರಜಾಪ್ರಭುತ್ವವು ಬಲಗೊಳ್ಳುತ್ತಿದೆ, ಮತ್ತು ಮತ್ತೊಂದೆಡೆ, ಈ ಪ್ರಜಾಪ್ರಭುತ್ವ ಚೌಕಟ್ಟಿನೊಳಗೆ, ನಮ್ಮ ಆರ್ಥಿಕತೆಯ ಬಲವರ್ಧನೆಯು ಜಗತ್ತು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿರುವ ವಿಷಯವಾಗಿದೆ. ಪ್ರಜಾಪ್ರಭುತ್ವವು ತಲುಪಿಸಬಲ್ಲದು ಎಂಬುದನ್ನು ಭಾರತ ಸಾಬೀತುಪಡಿಸಿದೆ. ಭಾರತದ ಆರ್ಥಿಕ ಸ್ಥಿತಿ ಇಂದು ಹೊಸ ಎತ್ತರವನ್ನು ತಲುಪುತ್ತಿರುವ ವೇಗವು ನಮ್ಮಲ್ಲಿ ಹೊಸ ವಿಶ್ವಾಸವನ್ನು ತುಂಬುತ್ತದೆ ಮತ್ತು 'ವಿಕ್ಷಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ) ಗುರಿಯತ್ತ ಸಾಗಲು ನಮಗೆ ಹೊಸ ಶಕ್ತಿಯನ್ನು ನೀಡುತ್ತದೆ.

2025ರ ಸಂಸತ್‌ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ

December 01st, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಆವರಣದಲ್ಲಿ 2025ರ ಚಳಿಗಾಲದ ಸಂಸತ್‌ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನವು ಕೇವಲ ಒಂದು ಆಚರಣೆಯಲ್ಲ, ಬದಲಿಗೆ, ತ್ವರಿತ ಪ್ರಗತಿಯತ್ತ ರಾಷ್ಟ್ರದ ಪಯಣಕ್ಕೆ ಹೊಸ ಶಕ್ತಿಯ ಮೂಲವಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ರಾಷ್ಟ್ರದ ಪ್ರಗತಿಯನ್ನು ವೇಗಗೊಳಿಸಲು ಪ್ರಸ್ತುತ ನಡೆಯುತ್ತಿರುವ ಪ್ರಯತ್ನಗಳಿಗೆ ಈ ಅಧಿವೇಶನವು ಹೊಸ ಶಕ್ತಿಯನ್ನು ತುಂಬಲಿದೆ ಎಂಬುದು ನನ್ನ ದೃಢವಾದ ನಂಬಿಕೆ, ಎಂದು ಶ್ರೀ ಮೋದಿ ಹೇಳಿದರು.

The Congress has now turned into ‘MMC’ - the Muslim League Maowadi Congress: PM Modi at Surat Airport

November 15th, 06:00 pm

Addressing a large gathering at Surat Airport following the NDA’s landslide victory in the Bihar Assembly Elections, Prime Minister Narendra Modi said, “Bihar has achieved a historic victory and if we were to leave Surat without meeting the people of Bihar, our journey would feel incomplete. My Bihari brothers and sisters living in Gujarat, especially in Surat, have the right to this moment and it is my natural responsibility to be part of this celebration with you.”

PM Modi greets and addresses a gathering at Surat Airport

November 15th, 05:49 pm

Addressing a large gathering at Surat Airport following the NDA’s landslide victory in the Bihar Assembly Elections, Prime Minister Narendra Modi said, “Bihar has achieved a historic victory and if we were to leave Surat without meeting the people of Bihar, our journey would feel incomplete. My Bihari brothers and sisters living in Gujarat, especially in Surat, have the right to this moment and it is my natural responsibility to be part of this celebration with you.”

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.

ರಿಪಬ್ಲಿಕ್ ಸರ್ವಸದಸ್ಯರ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 06th, 08:05 pm

ನೀವೆಲ್ಲರೂ ದಣಿದಿರಬೇಕು, ಅರ್ನಬ್ ಅವರ ಗಟ್ಟಿಯಾದ ಧ್ವನಿಯಿಂದ ನಿಮ್ಮ ಕಿವಿಗಳು ದಣಿದಿರಬೇಕು, ಅರ್ನಬ್ ಕುಳಿತುಕೊಳ್ಳಿ, ಇದು ಚುನಾವಣಾ ಸಮಯವಲ್ಲ. ಮೊದಲನೆಯದಾಗಿ, ಈ ನವೀನ ಪ್ರಯೋಗಕ್ಕಾಗಿ ನಾನು ರಿಪಬ್ಲಿಕ್ ಟಿವಿಯನ್ನು ಅಭಿನಂದಿಸುತ್ತೇನೆ. ನೀವು ಯುವಕರನ್ನು ತಳಮಟ್ಟದಲ್ಲಿ ತೊಡಗಿಸಿಕೊಳ್ಳುವ ಮೂಲಕ, ಇಷ್ಟು ದೊಡ್ಡ ಸ್ಪರ್ಧೆ ಆಯೋಜಿಸಿ ಇಲ್ಲಿಗೆ ಕರೆತಂದಿದ್ದೀರಿ. ದೇಶದ ಯುವಕರು ರಾಷ್ಟ್ರೀಯ ಚರ್ಚೆಯಲ್ಲಿ ತೊಡಗಿಸಿಕೊಂಡಾಗ, ಆಲೋಚನೆಗಳಲ್ಲಿ ಹೊಸತನ ಇರುತ್ತದೆ, ಅದು ಇಡೀ ಪರಿಸರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ, ಈ ಸಮಯದಲ್ಲಿ ನಾವು ಈ ಹೊಸ ಶಕ್ತಿಯನ್ನು ಅನುಭವಿಸುತ್ತಿದ್ದೇವೆ. ಒಂದು ರೀತಿಯಲ್ಲಿ, ಯುವಕರ ಒಳಗೊಳ್ಳುವಿಕೆಯಿಂದ, ನಾವು ಪ್ರತಿಯೊಂದು ಬಂಧವನ್ನು ಮುರಿಯಲು, ಮಿತಿಗಳನ್ನು ಮೀರಿ ಹೋಗಲು ಸಾಧ್ಯವಾಗುತ್ತದೆ, ಆದರೆ ಸಾಧಿಸಲಾಗದ ಗುರಿ ಇಲ್ಲ. ತಲುಪಲಾಗದ ಯಾವುದೇ ಗಮ್ಯಸ್ಥಾನವಿಲ್ಲ. ಈ ಸಮಾವೇಶ(ಶೃಂಗಸಭೆ)ಕ್ಕಾಗಿ ರಿಪಬ್ಲಿಕ್ ಟಿವಿ ಹೊಸ ಪರಿಕಲ್ಪನೆಯ ಮೇಲೆ ಕೆಲಸ ಮಾಡಿದೆ. ಈ ಶೃಂಗಸಭೆಯ ಯಶಸ್ಸಿಗೆ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಸರಿ, ಇದರಲ್ಲಿ ನನ್ನದೂ ಸ್ವಲ್ಪ ಸ್ವಾರ್ಥವಿದೆ, ಒಂದು, ಕಳೆದ ಕೆಲವು ದಿನಗಳಿಂದ ನಾನು 1 ಲಕ್ಷ ಯುವಕರನ್ನು ರಾಜಕೀಯಕ್ಕೆ ತರಬೇಕು, 1 ಲಕ್ಷ ಜನರು ತಮ್ಮ ಕುಟುಂಬಗಳಲ್ಲಿ ಮೊದಲ ಬಾರಿಗೆ ರಾಜಕೀಯಕ್ಕೆ ಬರುವವರು ಎಂದು ಯೋಚಿಸುತ್ತಿದ್ದೇನೆ, ಆದ್ದರಿಂದ ಒಂದು ರೀತಿಯಲ್ಲಿ, ಇಂತಹ ಘಟನೆಗಳು ನನ್ನ ಈ ಗುರಿಗೆ ವೇದಿಕೆಯನ್ನು ಸಿದ್ಧಪಡಿಸುತ್ತಿವೆ. ಎರಡನೆಯದಾಗಿ, ನನ್ನ ವೈಯಕ್ತಿಕ ಲಾಭವಿದೆ, ವೈಯಕ್ತಿಕ ಲಾಭವೆಂದರೆ 2029ರಲ್ಲಿ ಮತ ಚಲಾಯಿಸಲು ಹೋಗುವವರಿಗೆ 2014ಕ್ಕಿಂತ ಮೊದಲು ಪತ್ರಿಕೆಗಳ ಮುಖ್ಯಾಂಶಗಳು ಏನೆಂದು ತಿಳಿದಿರುವುದಿಲ್ಲ, ಅವರಿಗೆ ತಿಳಿದಿಲ್ಲ, 10-10, 12-12 ಲಕ್ಷ ಕೋಟಿ ಹಗರಣಗಳು ಇದ್ದವು, ಅದು ಅವರಿಗೆ ತಿಳಿದಿಲ್ಲ. ಆದರೆ ಅವರು 2029ರಲ್ಲಿ ಮತ ಚಲಾಯಿಸಲು ಹೋಗುವಾಗ, ಹೋಲಿಕೆ ಮಾಡಲು ಅವರ ಮುಂದೆ ಏನೂ ಇರುವುದಿಲ್ಲ. ಆದ್ದರಿಂದ, ನಾನು ಆ ಪರೀಕ್ಷೆಯಲ್ಲಿ ಉತ್ತೀರ್ಣನಾಗಬೇಕು ಮತ್ತು ಈ ವೇದಿಕೆಯು ಆ ಕೆಲಸವನ್ನು ಬಲಪಡಿಸುತ್ತದೆ ಎಂದು ನನಗೆ ಪೂರ್ಣ ನಂಬಿಕೆಯಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಸಮಗ್ರ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು

March 06th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಡಪಂನಲ್ಲಿ ನಡೆದ ರಿಪಬ್ಲಿಕ್ ಪ್ಲೀನರಿ ಶೃಂಗಸಭೆ 2025ರಲ್ಲಿ ಭಾಗವಹಿಸಿದ್ದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ತಳಮಟ್ಟದಲ್ಲಿ ಯುವಕರನ್ನು ತೊಡಗಿಸಿಕೊಳ್ಳುವ ಮತ್ತು ಮಹತ್ವದ ಹ್ಯಾಕಥಾನ್ ಸ್ಪರ್ಧೆಯನ್ನು ಆಯೋಜಿಸುವ ನವೀನ ವಿಧಾನಕ್ಕಾಗಿ ರಿಪಬ್ಲಿಕ್ ಟಿವಿಯನ್ನು ಅಭಿನಂದಿಸಿದರು. ರಾಷ್ಟ್ರದ ಯುವಕರು ರಾಷ್ಟ್ರೀಯ ಸಂವಾದದಲ್ಲಿ ತೊಡಗಿಸಿಕೊಂಡಾಗ, ಅದು ಆಲೋಚನೆಗಳಿಗೆ ಹೊಸತನವನ್ನು ತರುತ್ತದೆ ಮತ್ತು ಅವರ ಶಕ್ತಿಯಿಂದ ಇಡೀ ಪರಿಸರವನ್ನು ತುಂಬುತ್ತದೆ ಎಂದು ಅವರು ಹೇಳಿದರು. ಈ ಶಕ್ತಿಯನ್ನು ಶೃಂಗಸಭೆಯಲ್ಲಿ ಅನುಭವಿಸಲಾಗುತ್ತಿದೆ ಎಂದು ಅವರು ಒತ್ತಿ ಹೇಳಿದರು. ಯುವಕರ ಪಾಲ್ಗೊಳ್ಳುವಿಕೆಯು ಎಲ್ಲಾ ಅಡೆತಡೆಗಳನ್ನು ಮುರಿಯಲು ಮತ್ತು ಗಡಿಗಳನ್ನು ಮೀರಿ ಹೋಗಲು ಸಹಾಯ ಮಾಡುತ್ತದೆ, ಪ್ರತಿ ಗುರಿಯನ್ನು ಸಾಧಿಸಬಹುದು ಮತ್ತು ಪ್ರತಿ ಗಮ್ಯಸ್ಥಾನವನ್ನು ತಲುಪಬಹುದು ಎಂದು ಅವರು ಹೇಳಿದರು. ಈ ಶೃಂಗಸಭೆಗಾಗಿ ಹೊಸ ಪರಿಕಲ್ಪನೆಯ ಮೇಲೆ ಕೆಲಸ ಮಾಡಿದ್ದಕ್ಕಾಗಿ ರಿಪಬ್ಲಿಕ್ ಟಿವಿಯನ್ನು ಅವರು ಶ್ಲಾಘಿಸಿದರು ಮತ್ತು ಅದರ ಯಶಸ್ಸಿಗೆ ಶುಭ ಹಾರೈಸಿದರು. ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರನ್ನು ಭಾರತದ ರಾಜಕೀಯಕ್ಕೆ ಕರೆತರುವ ತಮ್ಮ ಕಲ್ಪನೆಯನ್ನು ಶ್ರೀ ಮೋದಿ ಪುನರುಚ್ಚರಿಸಿದರು.

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

February 20th, 01:38 pm

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ರೇಖಾ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆಯ ಆಡಳಿತ ಮತ್ತು ಇತ್ತೀಚಿನ ಶಾಸಕ ಸ್ಥಾನದಲ್ಲಿ ಸಕ್ರಿಯರಾಗಿದ್ದು ಮುಖ್ಯಮಂತ್ರಿ ಸ್ಥಾನದವರೆಗೆ ತಳಮಟ್ಟದಿಂದ ಬೆಳೆದು ಬಂದಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

“ಪರೀಕ್ಷಾ ಪೇ ಚರ್ಚಾ 2025” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

February 10th, 11:30 am

ಈ ಕಾರ್ಯಕ್ರಮಕ್ಕೆ ಇಷ್ಟೊಂದು ಮಕ್ಕಳು ನೋಂದಾಯಿಸಿಕೊಂಡಿರುವುದು ಒಂದು ದೊಡ್ಡ ಸೌಭಾಗ್ಯ, ಮತ್ತು ನಾವು ಅವರಲ್ಲಿ ಒಬ್ಬರಾಗಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2025ರ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು

February 10th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸುಂದರ್ ನರ್ಸರಿಯಲ್ಲಿ 8ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (ಪಿಪಿಸಿ) ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿಯವರು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ತಮ್ಮ ಅನೌಪಚಾರಿಕ ಸಂವಾದದಲ್ಲಿ ವ್ಯಾಪಕ ವಿಷಯಗಳ ಬಗ್ಗೆ ಚರ್ಚಿಸಿದರು. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಸಾಂಪ್ರದಾಯಿಕವಾಗಿ ನೀಡಲಾಗುವ ಎಳ್ಳಿನಿಂದ ತಯಾರಿಸಿದ ಸಿಹಿತಿಂಡಿಗಳನ್ನು ಅವರು ವಿತರಿಸಿದರು.

ನವದೆಹಲಿಯ ಭಾರತ್‌ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 12th, 02:15 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಮನ್ಸುಖ್‌ ಮಾಂಡವಿಯಾ ಜೀ, ಧರ್ಮೇಂದ್ರ ಪ್ರಧಾನ್‌ ಜೀ, ಜಯಂತ್‌ ಚೌಧರಿ ಜೀ, ರಕ್ಷಾ ಖಾಡ್ಸೆ ಜೀ, ಸಂಸತ್‌ ಸದಸ್ಯರು, ಇತರ ಗಣ್ಯರು ಮತ್ತು ದೇಶದ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಯುವ ಸ್ನೇಹಿತರೇ! ಈ ಭಾರತ ಮಂಟಪವು ಭಾರತದ ಯುವಜನರಿಂದ ಶಕ್ತಿ ಮತ್ತು ಶಕ್ತಿಯಿಂದ ತುಂಬಿದೆ. ಇಂದು, ಇಡೀ ದೇಶವು ಸ್ವಾಮಿ ವಿವೇಕಾನಂದರನ್ನು ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. ಸ್ವಾಮಿ ವಿವೇಕಾನಂದರು ದೇಶದ ಯುವಕರ ಮೇಲೆ ಅಪಾರ ನಂಬಿಕೆ ಹೊಂದಿದ್ದರು. ಸ್ವಾಮೀಜಿ ಹೇಳುತ್ತಿದ್ದರು - ನನಗೆ ಯುವ ಪೀಳಿಗೆಯ ಮೇಲೆ, ಹೊಸ ಪೀಳಿಗೆಯ ಮೇಲೆ ನಂಬಿಕೆ ಇದೆ. ನನ್ನ ಕಾರ್ಯಕರ್ತರು ಯುವ ಪೀಳಿಗೆಯಿಂದ ಬರುತ್ತಾರೆ, ಸಿಂಹಗಳಂತೆ, ಅವರು ಪ್ರತಿಯೊಂದು ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುತ್ತಾರೆ ಎಂದು ಸ್ವಾಮೀಜಿ ಹೇಳುತ್ತಿದ್ದರು. ವಿವೇಕಾನಂದರಿಗೆ ನಿಮ್ಮ ಮೇಲೆ ನಂಬಿಕೆ ಇದ್ದಂತೆ, ನನಗೆ ವಿವೇಕಾನಂದರ ಮೇಲೆ ನಂಬಿಕೆ ಇದೆ, ಅವರು ಹೇಳಿದ ಎಲ್ಲದರಲ್ಲೂ ನನಗೆ ನಂಬಿಕೆ ಇದೆ. ಭಾರತದ ಯುವಕರಿಗಾಗಿ ಅವರು ಏನು ಯೋಚಿಸಿದ್ದಾರೆ ಮತ್ತು ಏನು ಹೇಳಿದ್ದಾರೆ, ಅದರಲ್ಲಿ ನನಗೆ ಕುರುಡು ನಂಬಿಕೆ ಇದೆ. ವಾಸ್ತವವಾಗಿ, ಸ್ವಾಮಿ ವಿವೇಕಾನಂದರು ಇಂದು ವೈಯಕ್ತಿಕವಾಗಿ ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಕರ ಈ ಜಾಗೃತ ಶಕ್ತಿಯನ್ನು ನೋಡಿ, ನಿಮ್ಮ ಸಕ್ರಿಯ ಪ್ರಯತ್ನಗಳನ್ನು ನೋಡಿ, ಅವರು ಭಾರತವನ್ನು ಹೊಸ ನಂಬಿಕೆ, ಹೊಸ ಶಕ್ತಿಯಿಂದ ತುಂಬುತ್ತಿದ್ದರು ಮತ್ತು ಹೊಸ ಕನಸುಗಳ ಬೀಜಗಳನ್ನು ಬಿತ್ತುತ್ತಿದ್ದರು.

ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 12th, 02:00 pm

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸ್ಮರಣಾರ್ಥ, ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದರು. ಅವರು ಭಾರತದಾದ್ಯಂತ 3,000 ಕ್ರಿಯಾತ್ಮಕ ಯುವ ನಾಯಕರೊಂದಿಗೆ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಮಂಟಪಕ್ಕೆ ಜೀವ ಮತ್ತು ಶಕ್ತಿಯನ್ನು ತಂದ ಭಾರತದ ಯುವಜನರ ರೋಮಾಂಚಕ ಶಕ್ತಿಯನ್ನು ಎತ್ತಿ ತೋರಿಸಿದರು. ದೇಶದ ಯುವಜನರ ಮೇಲೆ ಅಪಾರ ನಂಬಿಕೆ ಹೊಂದಿದ್ದ ಸ್ವಾಮಿ ವಿವೇಕಾನಂದರನ್ನು ಇಡೀ ದೇಶ ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ ಎಂದು ಅವರು ಹೇಳಿದರು. ಸ್ವಾಮಿ ವಿವೇಕಾನಂದರು ತಮ್ಮ ಶಿಷ್ಯರು ಯುವ ಪೀಳಿಗೆಯಿಂದ ಬರುತ್ತಾರೆ ಎಂದು ನಂಬಿದ್ದರು, ಅವರು ಸಿಂಹಗಳಂತೆ ಪ್ರತಿಯೊಂದು ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ಅವರು ಭಾವಿಸಿದ್ದರು. ಸ್ವಾಮೀಜಿ ಯುವಜನರನ್ನು ನಂಬಿದ್ದಂತೆ ಸ್ವಾಮೀಜಿ ಮತ್ತು ಅವರ ನಂಬಿಕೆಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಪ್ರಧಾನ ಮಂತ್ರಿ ಹೇಳಿದರು. ವಿಶೇಷವಾಗಿ ಯುವಜನರ ಬಗ್ಗೆ ಅವರ ದೃಷ್ಟಿಕೋನದ ಬಗ್ಗೆ ತಾವು ಅವರನ್ನು ಸಂಪೂರ್ಣವಾಗಿ ನಂಬುವುದಾಗಿ ಹೇಳಿದರು. ಸ್ವಾಮಿ ವಿವೇಕಾನಂದರು ಇಂದು ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಜನರ ಜಾಗೃತ ಶಕ್ತಿ ಮತ್ತು ಸಕ್ರಿಯ ಪ್ರಯತ್ನಗಳನ್ನು ನೋಡಿ ಅವರಲ್ಲಿ ಹೊಸ ಆತ್ಮವಿಶ್ವಾಸ ತುಂಬುತ್ತಿತ್ತು ಎಂದು ಪ್ರಧಾನಿ ಒತ್ತಿ ಹೇಳಿದರು.

ಭಾರತದಲ್ಲಿ ಕಾಂಗ್ರೆಸ್ ಅತ್ಯಂತ ಅಪ್ರಾಮಾಣಿಕ ಮತ್ತು ಮೋಸದ ಪಕ್ಷವಾಗಿದೆ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಪ್ರಧಾನಿ ಮೋದಿ

September 14th, 01:00 pm

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸುರಕ್ಷಿತ, ಸಮೃದ್ಧ ಮತ್ತು ಭಯೋತ್ಪಾದನೆ ಮುಕ್ತ ಪ್ರದೇಶವನ್ನು ರಚಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. ಮೂಲಸೌಕರ್ಯ ಅಭಿವೃದ್ಧಿ ಮತ್ತು ಯುವ ಸಬಲೀಕರಣಕ್ಕೆ ಒತ್ತು ನೀಡಿದ ಅವರು ಬಿಜೆಪಿಯ ಆಡಳಿತದಲ್ಲಿ ಪರಿವರ್ತನೆಯನ್ನು ಎತ್ತಿ ತೋರಿಸಿದರು. ಕಾಂಗ್ರೆಸ್ ತನ್ನ ರಾಜವಂಶದ ರಾಜಕೀಯ ಮತ್ತು ವಿಭಜಕ ತಂತ್ರಗಳನ್ನು ಟೀಕಿಸಿದ ಪ್ರಧಾನಿ ಮೋದಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿರಂತರ ಪ್ರಗತಿ ಮತ್ತು ಒಳಗೊಳ್ಳುವಿಕೆಗಾಗಿ ಬಿಜೆಪಿಯನ್ನು ಬೆಂಬಲಿಸುವಂತೆ ಮತದಾರರನ್ನು ಒತ್ತಾಯಿಸಿದರು.