ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 11:47 pm
ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!ಜಕಾರ್ತದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
July 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಕಾರ್ತದಲ್ಲಿಂದು ನಡೆದ ಅನಿವಾಸಿ ಭಾರತೀಯ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅವರಿಗೆ, ಅನಿವಾಸಿ ಭಾರತೀಯರು ಮತ್ತು ಭಾರತದ ಇಂಡೋನೇಷ್ಯಾದ ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ನೀಡಿದರು. ವಿಶೇಷ ಗೌರವದ ಸಂಕೇತವಾಗಿ ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಪಾಲ್ಗೊಂಡರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 28.06.2026 ರಂದು ಮಾಡಿದ ‘ಮನ್ ಕಿ ಬಾತ್’ – 135ನೇ ಸಂಚಿಕೆಯ ಕನ್ನಡ ಅವತರಣಿಕೆ
June 28th, 11:30 am
‘ಮನದ ಮಾತು’ ಮೂಲಕ ನಿಮ್ಮೆಲ್ಲರೊಂದಿಗೆ ಮತ್ತೆ ಮಾತನಾಡಲು ಅವಕಾಶ ಸಿಕ್ಕಿರುವುದು ನನಗೆ ಅಪಾರ ಸಂತೋಷವಾಗುತ್ತಿದೆ. 2026 ನೇ ವರ್ಷದ ಅರ್ಧ ಭಾಗವು ಮುಗಿಯಲಿದೆ. ಈ ಆರು ತಿಂಗಳುಗಳಲ್ಲಿ, ಈ ಕಾರ್ಯಕ್ರಮದಲ್ಲಿ ನಮ್ಮ ದೇಶದ ನಾಗರಿಕರ ಹಲವಾರು ಸಾಧನೆಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಜೂನ್ನಲ್ಲಿಯೂ ಸಹ, ಪ್ರತಿಯೊಬ್ಬ ನಾಗರಿಕನು ಹೆಮ್ಮೆ ಪಡುವಂತಹ ಸಾಧನೆಗಳನ್ನು ರಾಷ್ಟ್ರವು ಸಾಧಿಸಿದೆ. ಈ ಯಶಸ್ಸು ದೇಶದ ಭದ್ರತೆ ಮತ್ತು ಸ್ವಾವಲಂಬನೆಗೆ ಸಂಬಂಧಿಸಿದ್ದಾಗಿವೆ. ಇತ್ತೀಚೆಗೆ ನನಗೆ ಕೋಲ್ಕತ್ತಾದಲ್ಲಿ ನೌಕಾಪಡೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತು. ಅಲ್ಲಿ, ಐಎನ್ಎಸ್ ದೂನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರಯಗಳನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು. ವಿನ್ಯಾಸದಿಂದ ಹಿಡಿದು ಈ ಹಡಗುಗಳ ತಯಾರಿಕೆಯವರೆಗೆ ಎಲ್ಲವೂ ಸ್ವದೇಶದಲ್ಲೇ ಸಿದ್ಧಪಡಿಸಲಾಗಿದೆ.ಜನ ಸುರಕ್ಷಾ ಯೋಜನೆಗಳು 11 ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಅವುಗಳ ಜನಪರ ಪರಿಣಾಮವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
May 09th, 06:10 pm
ಎನ್.ಡಿ.ಎ. ಸರ್ಕಾರ 11 ವರ್ಷಗಳ ಹಿಂದೆ ಪ್ರಾರಂಭಿಸಿದ ಪ್ರಮುಖ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳ ಪರಿಣಾಮವನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎತ್ತಿ ತೋರಿಸಿದರು, ಈ ಉಪಕ್ರಮಗಳು ಭಾರತದ ಜನರಿಗೆ ಘನತೆ, ಭರವಸೆ ಮತ್ತು ಆರ್ಥಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಹೇಳಿದರು.ತಮಿಳುನಾಡಿನ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಅವರ ಸಂವಾದ
April 13th, 04:00 pm
‘ಮೇರಾ ಬೂತ್, ಸಬ್ಸೆ ಮಜ್ಬೂತ್ ಸಂವಾದ’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ತಮಿಳುನಾಡಿನ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು, ರಾಜ್ಯಾದ್ಯಂತ ಎನ್ಡಿಎಯ ಪ್ರಭಾವವನ್ನು ಬಲಪಡಿಸುವಲ್ಲಿ ಅವರ ಅವಿರತ ತಳಮಟ್ಟದ ಪ್ರಯತ್ನಗಳನ್ನು ಶ್ಲಾಘಿಸಿದರು.ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 25th, 06:16 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ
December 25th, 05:23 pm
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.ಅಸ್ಸಾಂನ ದರ್ರಾಂಗ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 14th, 11:30 am
ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.ಅಸ್ಸಾಂನ ದರ್ರಾಂಗ್ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 14th, 11:00 am
ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
September 04th, 05:35 pm
ನಮ್ಮ ಸಂಪ್ರದಾಯದಲ್ಲಿ ಶಿಕ್ಷಕರ ಬಗ್ಗೆ ವಿಶೇಷ ಗೌರವವಿದೆ, ಮತ್ತು ಅವರು ಸಮಾಜದ ದೊಡ್ಡ ಶಕ್ತಿಯೂ ಹೌದು. ಶಿಕ್ಷಕರು ಆಶೀರ್ವಾದಕ್ಕಾಗಿ ಎದ್ದು ನಿಲ್ಲುವಂತೆ ಮಾಡುವುದು ತಪ್ಪು. ನಾನು ಅಂತಹ ಪಾಪವನ್ನು ಮಾಡಲು ಬಯಸುವುದಿಲ್ಲ. ಆದರೆ ನಾನು ಖಂಡಿತವಾಗಿಯೂ ನಿಮ್ಮೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ. ನನಗೆ, ನಿಮ್ಮೆಲ್ಲರನ್ನು ಭೇಟಿಯಾಗುವ ಅವಕಾಶ ಸಿಕ್ಕಿರುವುದು ಅದ್ಭುತ ಅನುಭವವಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮದೇ ಆದ ಕಥೆಯನ್ನು ಹೊಂದಿರಬೇಕು, ಏಕೆಂದರೆ ಅದು ಇಲ್ಲದೇ, ನೀವು ಈ ಹಂತವನ್ನು ತಲುಪುತ್ತಿರಲಿಲ್ಲ. ಆ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಸಾಕಷ್ಟು ಸಮಯವನ್ನು ಒದಗಿಸುವುದು ಕಷ್ಟ, ಆದರೆ ನಾನು ನಿಮ್ಮಿಂದ ಕಲಿಯಬಹುದಾದ ಸ್ವಲ್ಪವಾದರೂ ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು ಮತ್ತು ಅದಕ್ಕಾಗಿ, ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಕೊನೆಯಲ್ಲ. ಈಗ, ಈ ಪ್ರಶಸ್ತಿಯ ನಂತರ ಎಲ್ಲರ ಗಮನವು ನಿಮ್ಮ ಮೇಲಿದೆ. ಇದರರ್ಥ ನಿಮ್ಮ ವ್ಯಾಪ್ತಿಯು ಗಮನಾರ್ಹವಾಗಿ ವಿಸ್ತರಿಸಿದೆ. ಹಿಂದೆ, ನಿಮ್ಮ ಪ್ರಭಾವ ಅಥವಾ ಆದೇಶದ ವ್ಯಾಪ್ತಿಯು ಸೀಮಿತವಾಗಿತ್ತು, ಆದರೆ ಈಗ ಈ ಮನ್ನಣೆಯ ನಂತರ, ಅದು ಹೆಚ್ಚು ವಿಸ್ತಾರವಾಗಿ ಬೆಳೆಯಬಹುದು. ಇದು ಆರಂಭ ಎಂದು ನಾನು ನಂಬುತ್ತೇನೆ ಮತ್ತು ಈ ಅವಕಾಶವನ್ನು ಬಳಸಿಕೊಳ್ಳಬೇಕು. ನಿಮ್ಮೊಳಗೆ ಏನೇ ಇರಲಿ, ಅದನ್ನು ನೀವು ಸಾಧ್ಯವಾದಷ್ಟು ಹಂಚಿಕೊಳ್ಳಬೇಕು. ನೀವು ಹಾಗೆ ಮಾಡಿದಾಗ, ನಿಮ್ಮ ತೃಪ್ತಿಯ ಭಾವನೆ ಬೆಳೆಯುತ್ತದೆ ಮತ್ತು ನೀವು ಆ ದಿಕ್ಕಿನಲ್ಲಿ ಶ್ರಮಿಸುವುದನ್ನು ಮುಂದುವರಿಸಬೇಕು. ಈ ಪ್ರಶಸ್ತಿಗೆ ನಿಮ್ಮ ಆಯ್ಕೆಯು ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅದಕ್ಕಾಗಿಯೇ ಇದು ಸಾಧ್ಯವಾಗಿದೆ. ಒಬ್ಬ ಶಿಕ್ಷಕ ಕೇವಲ ವರ್ತಮಾನದ ಬಗ್ಗೆ ಅಲ್ಲ, ರಾಷ್ಟ್ರದ ಭವಿಷ್ಯದ ಪೀಳಿಗೆಯನ್ನು ರೂಪಿಸುತ್ತಾನೆ, ಭವಿಷ್ಯವನ್ನು ಮೆರುಗುಗೊಳಿಸುತ್ತಾನೆ ಮತ್ತು ಇದು ಇತರರಿಗಿಂತ ಕಡಿಮೆಯಿಲ್ಲದ ರಾಷ್ಟ್ರ ಸೇವೆಯಾಗಿದೆ ಎಂದು ನಾನು ನಂಬುತ್ತೇನೆ. ಇಂದು, ನಿಮ್ಮಂತಹ ಕೋಟ್ಯಂತರ ಶಿಕ್ಷಕರು ಅದೇ ಭಕ್ತಿ, ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲರಿಗೂ ಇಲ್ಲಿಗೆ ಬರುವ ಅವಕಾಶ ಸಿಗುವುದಿಲ್ಲ. ಬಹುಶಃ ಅನೇಕರು ಪ್ರಯತ್ನಿಸಿಲ್ಲ, ಅಥವಾ ಕೆಲವರು ಗಮನಿಸಿಲ್ಲ. ಅಂತಹ ಸಾಮರ್ಥ್ಯಗಳನ್ನು ಹೊಂದಿರುವ ಅಸಂಖ್ಯಾತ ಜನರಿದ್ದಾರೆ. ಅವರೆಲ್ಲರ ಸಾಮೂಹಿಕ ಪ್ರಯತ್ನಗಳಿಂದ ರಾಷ್ಟ್ರವು ಮುಂದುವರಿಯುವುದು, ಹೊಸ ಪೀಳಿಗೆಗಳನ್ನು ಪೋಷಿಸುವುದನ್ನು, ರಾಷ್ಟ್ರಕ್ಕಾಗಿ ಬದುಕುವುದನ್ನು ಖಚಿತಪಡಿಸುತ್ತವೆ ಮತ್ತು ಅದರಲ್ಲಿ ಪ್ರತಿಯೊಬ್ಬರ ಕೊಡುಗೆಯೂ ಇದೆ.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
September 04th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನುದ್ದೇಶಿಸಿ ಭಾಷಣ ಮಾಡಿದರು. ಭಾರತೀಯ ಸಮಾಜವು ಶಿಕ್ಷಕರ ಬಗ್ಗೆ ಹೊಂದಿರುವ ಸ್ವಾಭಾವಿಕ ಗೌರವವನ್ನು ಶ್ಲಾಘಿಸಿದ ಶ್ರೀ ನರೇಂದ್ರ ಮೋದಿ, ಅವರು ರಾಷ್ಟ್ರ ನಿರ್ಮಾಣದಲ್ಲಿ ಪ್ರಬಲ ಶಕ್ತಿ ಎಂದು ಬಣ್ಣಿಸಿದರು. ಶಿಕ್ಷಕರನ್ನು ಗೌರವಿಸುವುದು ಕೇವಲ ಆಚರಣೆಯಲ್ಲ, ಆದರೆ ಅವರ ಜೀವಮಾನದ ಸಮರ್ಪಣೆ ಮತ್ತು ಪ್ರಭಾವದ ಮನ್ನಣೆಯಾಗಿದೆ ಎಂದು ಅವರು ಒತ್ತಿ ಹೇಳಿದರು.ಬಿಹಾರ ರಾಜ್ಯ ಜೀವಿಕಾ ನಿಧಿ ಸಖ್ ಸಹಕಾರಿ ಸಂಘ ನಿಯಮಿತದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸಿಂಗ್ ಭಾಷಣ
September 02nd, 01:00 pm
ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜಿ, ಇತರೆ ಗಣ್ಯ ಅತಿಥಿಗಳೆ ಮತ್ತು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಬಿಹಾರದ ನನ್ನ ಲಕ್ಷಾಂತರ ಸಹೋದರಿಯರೆ - ನಿಮ್ಮೆಲ್ಲರಿಗೂ ನನ್ನ ಗೌರವಯುತ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಬಿಹಾರ ರಾಜ್ಯ ಜೀವಿಕಾ ನಿಧಿ ಸಖ್ ಸಹಕಾರಿ ಸಂಘ ಲಿಮಿಟೆಡ್ ಉದ್ಘಾಟನೆ
September 02nd, 12:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಬಿಹಾರ ರಾಜ್ಯ ಜೀವಿಕ ನಿಧಿ ಸಖ್ ಸಹಕಾರಿ ಸಂಘ ಲಿಮಿಟೆಡ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಈ ಶುಭ ಮಂಗಳವಾರದಂದು, ಹೆಚ್ಚು ಭರವಸೆಯ ಉಪಕ್ರಮವನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು. ಬಿಹಾರದ ತಾಯಂದಿರು ಮತ್ತು ಸಹೋದರಿಯರಿಗೆ ಜೀವಿಕ ನಿಧಿ ಸಖ್ ಸಹಕಾರಿ ಸಂಘದ ಮೂಲಕ ಹೊಸ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ಅವರು ಪ್ರಕಟಿಸಿದರು. ಈ ಉಪಕ್ರಮವು ಜೀವಿಕ ನಿಧಿಯೊಂದಿಗೆ ಸಂಬಂಧ ಹೊಂದಿರುವ ಮಹಿಳೆಯರು ಹಳ್ಳಿಗಳಾದ್ಯಂತ ಆರ್ಥಿಕ ಸಹಾಯವನ್ನು ಸುಲಭವಾಗಿ ಪಡೆಯಲು ಅನುವು ಮಾಡಿಕೊಡುತ್ತದೆ, ಮತ್ತು ಅವರ ಕೆಲಸ ಹಾಗೂ ವ್ಯವಹಾರಗಳನ್ನು ಮುನ್ನಡೆಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಜೀವಿಕ ನಿಧಿ ವ್ಯವಸ್ಥೆಯು ಸಂಪೂರ್ಣವಾಗಿ ಡಿಜಿಟಲ್ ಆಗಿದ್ದು, ದೈಹಿಕ ಭೇಟಿಯ ಅಗತ್ಯತೆ ನಿವಾರಿಸುತ್ತದೆ - ಈಗ ಎಲ್ಲ ಕೆಲಸಗಳನ್ನು ಮೊಬೈಲ್ ಫೋನ್ ಮೂಲಕ ಮಾಡಬಹುದು ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಜೀವಿಕ ನಿಧಿ ಸಖ್ ಸಹಕಾರಿ ಸಂಘದ ಆರಂಭಕ್ಕಾಗಿ ಅವರು ಬಿಹಾರದ ತಾಯಂದಿರು ಮತ್ತು ಸಹೋದರಿಯರನ್ನು ಅಭಿನಂದಿಸಿದರು ಮತ್ತು ಈ ಮಹತ್ವದ ಉಪಕ್ರಮಕ್ಕಾಗಿ ಶ್ರೀ ನಿತೀಶ್ ಕುಮಾರ್ ಮತ್ತು ಬಿಹಾರ ಸರ್ಕಾರವನ್ನು ಅವರು ಶ್ಲಾಘಿಸಿದರು.ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 02nd, 11:30 am
ನಮಃ ಪಾರ್ವತಿ ಪತಯೇ, ಹರ್ ಹರ್ ಮಹಾದೇವ, ಪವಿತ್ರ ಶ್ರಾವಣ ಮಾಸದ ಇಂದು, ಕಾಶಿಯ ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿದೆ. ಕಾಶಿಯ ಪ್ರತಿಯೊಬ್ಬ ಕುಟುಂಬ ಸದಸ್ಯರಿಗೂ ನಾನು ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು
August 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ ಶುಭಾಶಯಗಳನ್ನು ತಿಳಿಸಿದರು. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ್ದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು.ಸಿಲ್ವಾಸ್ಸಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಭಾಷಣ
March 07th, 03:00 pm
ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಆಡಳಿತಾಧಿಕಾರಿ ಶ್ರೀ ಪ್ರಫುಲ್ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀಮತಿ ಕಲ್ಬೆನ್ ಡೆಲ್ಕರ್, ಎಲ್ಲಾ ಗಣ್ಯರೇ, ಸಹೋದರ ಸಹೋದರಿಯರೇ, ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು
March 07th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅವರು ಸಿಲ್ವಾಸ್ಸಾದಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಪ್ರದೇಶದೊಂದಿಗೆ ಸಂಪರ್ಕ ಸಾಧಿಸಲು ಮತ್ತು ತೊಡಗಿಸಿಕೊಳ್ಳಲು ಅವಕಾಶ ನೀಡಿದ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಮರ್ಪಿತ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಜನರೊಂದಿಗೆ ತಾವು ಹೊಂದಿರುವ ಆತ್ಮೀಯತೆ ಮತ್ತು ದೀರ್ಘಕಾಲದ ಸಂಪರ್ಕವನ್ನು ಅವರು ನೆನಪಿಸಿಕೊಂಡರು, ಈ ಪ್ರದೇಶದೊಂದಿಗಿನ ತಮ್ಮ ಬಂಧವು ದಶಕಗಳಷ್ಟು ಹಳೆಯದು ಎಂಬುದನ್ನವರು ಹಂಚಿಕೊಂಡರು. 2014 ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಪ್ರದೇಶವು ಸಾಧಿಸಿದ ಪ್ರಗತಿಯನ್ನು ಅವರು ಎತ್ತಿ ತೋರಿಸಿದರು, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಾಮರ್ಥ್ಯವನ್ನು ಆಧುನಿಕತೆ ಮತ್ತು ಪ್ರಗತಿಯ ಗುರುತಾಗಿ ಪರಿವರ್ತಿಸಿರುವುದನ್ನು ಅವರು ಪ್ರಸ್ತಾಪಿಸಿದರು.ಹರಿಯಾಣದ ಪಾಣಿಪತ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 09th, 05:54 pm
ಹರಿಯ ವಾಸಸ್ಥಾನ ಹರಿಯಾಣ, ಮತ್ತು ಇಲ್ಲಿ ಎಲ್ಲರೂ ಹೃತ್ಪೂರ್ವಕವಾಗಿ 'ರಾಮ್ ರಾಮ್' ಎಂದು ಪರಸ್ಪರ ಶುಭಾಶಯ ಕೋರುತ್ತಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ ಐ ಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು
December 09th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಪಾಣಿಪತ್ ನಲ್ಲಿ ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಒಳಗೊಳ್ಳುವಿಕೆಯ ತಮ್ಮ ಬದ್ಧತೆಗೆ ಅನುಗುಣವಾಗಿ ಭಾರತೀಯ ಜೀವ ವಿಮಾ ನಿಗಮದ ‘ಬಿಮಾ ಸಖಿ ಯೋಜನೆʼಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಲ್ ನಲ್ಲಿರುವ ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ ಗೆ ಶಂಕುಸ್ಥಾಪನೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಭಾರತವು ಮಹಿಳಾ ಸಬಲೀಕರಣದತ್ತ ಮತ್ತೊಂದು ಬಲವಾದ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ಇಂದು ತಿಂಗಳ 9ನೇ ದಿನವಾಗಿರುವುದು ವಿಶೇಷವಾಗಿದೆ ಏಕೆಂದರೆ ನಮ್ಮ ಧರ್ಮಗ್ರಂಥಗಳಲ್ಲಿ 9 ನೇ ಸಂಖ್ಯೆಯನ್ನು ಮಂಗಳಕರವೆಂದು ಪರಿಗಣಿಸಲಾಗಿದೆ ಮತ್ತು ಇದು ನವರಾತ್ರಿಯಲ್ಲಿ ಪೂಜಿಸುವ ನವದುರ್ಗೆಯ ಒಂಬತ್ತು ರೂಪಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಹೇಳಿದರು. ಇಂದು ಸ್ತ್ರೀಶಕ್ತಿಯನ್ನು ಆರಾಧಿಸುವ ದಿನವೂ ಆಗಿದೆ ಎಂದರು.TMC is running a mobocracy, not a republic: PM Modi in Bolpur
May 03rd, 10:45 am
Tapping into the vivacious energy of Lok Sabha Elections, 2024, Prime Minister Narendra Modi graced public meeting in Bolpur. Addressing the crowd, he outlined his vision for a Viksit Bharat while alerting the audience to the opposition's agenda of looting and piding the nation. Promising accountability, he assured the people that those responsible for looting the nation would be held to account.