ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 08th, 08:39 am

ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್‌ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!

ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 08th, 08:15 am

ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.

Mahagathbandhan is a bundle of lies: PM Modi in Arrah, Bihar

November 02nd, 02:00 pm

Massive crowd attended PM Modi’s public rally in Arrah, Bihar, today. Addressing the gathering, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.

PM Modi addresses large public gatherings in Arrah and Nawada, Bihar

November 02nd, 01:45 pm

Massive crowd attended PM Modi’s rallies in Arrah and Nawada, Bihar, today. Addressing the gathering in Arrah, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.

ನವ ರಾಯಪುರದಲ್ಲಿ ಬ್ರಹ್ಮಕುಮಾರಿಯರ ಧ್ಯಾನ ಕೇಂದ್ರ “ಶಾಂತಿ ಶಿಖರ್” ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 01st, 11:15 am

ಛತ್ತೀಸ್‌ಗಢ ರಾಜ್ಯಪಾಲರಾದ ಶ್ರೀ ರಾಮೆನ್ ಡೇಕಾ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ, ರಾಜಯೋಗಿನಿ ಸಹೋದರಿ ಜಯಂತಿ, ರಾಜಯೋಗಿ ಮೃತ್ಯುಂಜಯ್, ಎಲ್ಲಾ ಬ್ರಹ್ಮ ಕುಮಾರಿ ಸಹೋದರಿಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಛತ್ತೀಸ್‌ ಗಢದ ನವ ರಾಯ್‌ ಪುರದಲ್ಲಿ ಶಾಂತಿ ಶಿಖರ - ಧ್ಯಾನ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ನೆರೆದಿದ್ದ ಬ್ರಹ್ಮ ಕುಮಾರಿಗಳನ್ನುದ್ದೇಶಿಸಿ ಭಾಷಣ ಮಾಡಿದರು

November 01st, 11:00 am

ಛತ್ತೀಸ್‌ ಗಢದ ನವ ರಾಯ್‌ ಪುರದಲ್ಲಿ ಇಂದು ಆಧ್ಯಾತ್ಮಿಕ ಕಲಿಕೆ, ಶಾಂತಿ ಮತ್ತು ಧ್ಯಾನಕ್ಕಾಗಿ ಆಧುನಿಕ ಕೇಂದ್ರವಾದ ಶಾಂತಿ ಶಿಖರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಹ್ಮ ಕುಮಾರಿಗಳನ್ನು ಉದ್ದೇಶಿಸಿ ಭಾಷಣ ಮಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್‌ ಗಢ ರಚನೆಯಾಗಿ 25 ವರ್ಷಗಳು ತುಂಬುತ್ತಿರುವುದರಿಂದ ಇಂದು ಅತ್ಯಂತ ವಿಶೇಷ ದಿನವಾಗಿದೆ ಎಂದು ಹೇಳಿದರು. ಛತ್ತೀಸ್‌ ಗಢ, ಜಾರ್ಖಂಡ್ ಮತ್ತು ಉತ್ತರಾಖಂಡ್‌ ಗಳ ಜೊತೆಗೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿವೆ . ದೇಶಾದ್ಯಂತ ಹಲವಾರು ಇತರ ರಾಜ್ಯಗಳು ಇಂದು ತಮ್ಮ ರಾಜ್ಯತ್ವ ದಿನವನ್ನು ಆಚರಿಸುತ್ತಿವೆ ಎಂದು ಹೇಳಿದರು. ಈ ಎಲ್ಲಾ ರಾಜ್ಯಗಳ ಜನತೆಗೆ ಅವರ ರಾಜ್ಯತ್ವ ದಿನದಂದು ಶ್ರೀ ಮೋದಿ ಅವರು ಶುಭಾಶಯಗಳನ್ನು ತಿಳಿಸಿದರು. ರಾಜ್ಯಗಳ ಅಭಿವೃದ್ಧಿಯು ರಾಷ್ಟ್ರದ ಪ್ರಗತಿಗೆ ಇಂಧನ ನೀಡುತ್ತದೆ ಎಂಬ ಮಾರ್ಗದರ್ಶಿ ತತ್ವದಿಂದ ಪ್ರೇರಿತರಾಗಿ, ನಾವು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಧ್ಯೇಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಮಂತ್ರಿಗೆ ರಾಮ ಮಂದಿರದ ಪ್ರತಿರೂಪ ಮತ್ತು ಪವಿತ್ರ ಜಲ ಉಡುಗೊರೆಯಾಗಿ ನೀಡಿದ ಪ್ರಧಾನಮಂತ್ರಿ

July 04th, 08:57 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಗೌರವಾರ್ಥವಾಗಿ ಆಯೋಜಿಸಲಾದ ಭೋಜನಕೂಟದಲ್ಲಿ ಪ್ರಧಾನಮಂತ್ರಿ ಕಮಲ ಪ್ರಸಾದ್-ಬಿಸ್ಸೆಸ್ಸರ್ ಅವರಿಗೆ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರತಿರೂಪವನ್ನು ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ, ಅವರು ಸರಯು ನದಿಯಿಂದ ಮತ್ತು ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭದ ಪವಿತ್ರ ನೀರನ್ನು ಸಮರ್ಪಿಸಿದರು.

ಮಹಾರಾಷ್ಟ್ರದ ನಾಗಪುರದಲ್ಲಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರದ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

March 30th, 11:53 am

ಗುಡಿ ಪಾಡ್ವ ಮತ್ತು ಹೊಸ ವರ್ಷಕ್ಕೆ ನಾನು ನಿಮಗೆಲ್ಲರಿಗೂ ಹೃತ್ಪೂರ್ವಕವಾಗಿ ಶುಭಾಶಯಗಳನ್ನು ಕೋರುತ್ತೇನೆ! ಅತ್ಯಂತ ಗೌರವಾನ್ವಿತ ಸರ್ಸಂಘಚಾಲಕ್ ಜಿ, ಡಾ. ಮೋಹನ್ ಭಾಗವತ್ ಜಿ, ಸ್ವಾಮಿ ಗೋವಿಂದ್ ಗಿರಿ ಜಿ ಮಹಾರಾಜ್, ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜಿ, ಡಾ. ಅವಿನಾಶ್ ಚಂದ್ರ ಅಗ್ನಿಹೋತ್ರಿ ಜಿ, ಇತರ ಗಣ್ಯರೇ ಹಾಗು ಇಲ್ಲಿ ಉಪಸ್ಥಿತರಿರುವ ಎಲ್ಲಾ ಹಿರಿಯ ಸಹೋದ್ಯೋಗಿಗಳೇ, ಇಂದು ರಾಷ್ಟ್ರ ಯಜ್ಞದ ಈ ಪವಿತ್ರ ಆಚರಣೆಯಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಇಂದು, ಚೈತ್ರ ಶುಕ್ಲ ಪ್ರತಿಪದದ ಈ ದಿನವು ತುಂಬಾ ವಿಶೇಷವಾಗಿದೆ. ನವರಾತ್ರಿಯ ಪವಿತ್ರ ಹಬ್ಬ ಇಂದಿನಿಂದ ಆರಂಭವಾಗುತ್ತಿದೆ. ಇಂದು ದೇಶದ ವಿವಿಧ ಭಾಗಗಳಲ್ಲಿ ಗುಡಿ-ಪಾಡ್ವ, ಯುಗಾದಿ ಮತ್ತು ನವರೆಹ್ ಹಬ್ಬಗಳನ್ನು ಆಚರಿಸಲಾಗುತ್ತಿದೆ. ಇಂದು ಭಗವಾನ್ ಜುಲೇಲಾಲ್ ಜಿ ಮತ್ತು ಗುರು ಅಂಗದ್ ದೇವ್ ಜಿ ಅವರ ಜನ್ಮ ದಿನಾಚರಣೆಯೂ ಆಗಿದೆ. ಇದು ನಮ್ಮ ಸ್ಫೂರ್ತಿ, ಅತ್ಯಂತ ಗೌರವಾನ್ವಿತ ಡಾಕ್ಟರ್ ಸಾಹೇಬ್ ಅವರ ಜನ್ಮ ದಿನಾಚರಣೆಯೂ ಆಗಿದೆ. ಮತ್ತು ಈ ವರ್ಷ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅದ್ಭುತ ಪ್ರಯಾಣದ 100 ವರ್ಷಗಳು ಪೂರ್ಣಗೊಂಡಿವೆ. ಇಂದು ಈ ಸಂದರ್ಭದಲ್ಲಿ, ಸ್ಮೃತಿ ಮಂದಿರಕ್ಕೆ ಭೇಟಿ ನೀಡುವ ಮತ್ತು ಗೌರವಾನ್ವಿತ ಡಾಕ್ಟರ್ ಸಾಹೇಬ್ ಮತ್ತು ಗೌರವಾನ್ವಿತ ಗುರೂಜಿ ಅವರಿಗೆ ಗೌರವ ಸಲ್ಲಿಸುವ ಸೌಭಾಗ್ಯ ನನಗೆ ಸಿಕ್ಕಿದೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು

March 30th, 11:52 am

ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ಪ್ರಧಾನಮಂತ್ರಿಯವರು ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪವಿತ್ರ ನವರಾತ್ರಿ ಉತ್ಸವದ ಆರಂಭವನ್ನು ಸೂಚಿಸುವ ಚೈತ್ರ ಶುಕ್ಲ ಪ್ರತಿಪದದ ಮಹತ್ವದ ಬಗ್ಗೆ ತಿಳಿಸಿದರು. ದೇಶಾದ್ಯಂತ ಇಂದು ಗುಡಿ ಪಡ್ವಾ, ಯುಗಾದಿ ಮತ್ತು ನವರೇಹ್‌ನಂತಹ ಹಬ್ಬಗಳನ್ನು ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು. ಭಗವಾನ್ ಜುಲೇಲಾಲ್ ಮತ್ತು ಗುರು ಅಂಗದ್ ದೇವ್ ಅವರ ಜನ್ಮ ದಿನಾಚರಣೆಯೊಂದಿಗೆ ಈ ದಿನವು ಹೊಂದಿಕೆಯಾಗುವುದರಿಂದ ಈ ದಿನದ ಮಹತ್ವವನ್ನು ಅವರು ವಿವರಿಸಿದರು. ಈ ಸಂದರ್ಭವನ್ನು ಸ್ಪೂರ್ತಿದಾಯಕ ಡಾ. ಕೆ. ಬಿ. ಹೆಡ್ಗೆವಾರ್ ಅವರ ಜನ್ಮ ವಾರ್ಷಿಕೋತ್ಸವ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶ್ರೇಷ್ಠ ಪ್ರಯಾಣದ ಶತಮಾನೋತ್ಸವ ವರ್ಷವೆಂದು ತಿಳಿಸಿದರು. ಈ ಮಹತ್ವದ ದಿನದಂದು ಡಾ. ಹೆಡ್ಗೆವಾರ್ ಮತ್ತು ಶ್ರೀ ಗೋಲ್ವಾಲ್ಕರ್ ಗುರೂಜಿ ಅವರಿಗೆ ಗೌರವ ಸಲ್ಲಿಸಲು ಸ್ಮೃತಿ ಮಂದಿರಕ್ಕೆ ಭೇಟಿ ನೀಡಿರುವುದು ನನಗೆ ಸಿಕ್ಕ ಗೌರವ ಎಂದು ಸಂತಸ ವ್ಯಕ್ತಪಡಿಸಿದರು.

ಮಹಾಕುಂಭ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

March 18th, 01:05 pm

ಪ್ರಯಾಗ್ರಾಜ್ ನಲ್ಲಿ ನಡೆದ ಭವ್ಯ ಮಹಾಕುಂಭದ ಬಗ್ಗೆ ಹೇಳಿಕೆ ನೀಡಲು ನಾನು ಇಲ್ಲಿದ್ದೇನೆ. ಈ ಗೌರವಾನ್ವಿತ ಸದನದ ಮೂಲಕ, ಮಹಾಕುಂಭವನ್ನು ಯಶಸ್ವಿಗೊಳಿಸಿದ ಲಕ್ಷಾಂತರ ದೇಶವಾಸಿಗಳಿಗೆ ನನ್ನ ವಂದನೆಗಳನ್ನು ಸಲ್ಲಿಸುತ್ತೇನೆ. ಮಹಾಕುಂಭದ ಯಶಸ್ಸನ್ನು ಖಚಿತಪಡಿಸಿಕೊಳ್ಳುವಲ್ಲಿ ಅನೇಕ ವ್ಯಕ್ತಿಗಳು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ನಾನು ಸರ್ಕಾರ, ಸಮಾಜ ಮತ್ತು ಎಲ್ಲಾ ಸಮರ್ಪಿತ ಕಾರ್ಮಿಕರನ್ನು ಅಭಿನಂದಿಸುತ್ತೇನೆ. ದೇಶದಾದ್ಯಂತದ ಭಕ್ತರಿಗೆ, ಉತ್ತರ ಪ್ರದೇಶದ ಜನರಿಗೆ ಮತ್ತು ವಿಶೇಷವಾಗಿ ಪ್ರಯಾಗ್ ರಾಜ್ ನಾಗರಿಕರಿಗೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ.

ಮಹಾ ಕುಂಭ ಮೇಳ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 18th, 12:10 pm

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಯಶಸ್ವಿಯಾಗಿ ಸಮಾರೋಪಗೊಂಡ ಹಿನ್ನೆಲೆಯಲ್ಲಿ ಇಂದು ಲೋಕಸಭೆಯನ್ನುದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಮಹಾಕುಂಭದ ಅದ್ಧೂರಿ ಯಶಸ್ಸಿಗೆ ಕಾರಣರಾದ ದೇಶದ ಅಸಂಖ್ಯಾತ ನಾಗರಿಕರಿಗೆ ಪ್ರಧಾನಿ ತಮ್ಮ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸಿದರು. ಮಹಾಕುಂಭವನ್ನು ಯಶಸ್ವಿಗೊಳಿಸುವಲ್ಲಿ ವಿವಿಧ ವ್ಯಕ್ತಿಗಳು ಮತ್ತು ಗುಂಪುಗಳ ಸಾಮೂಹಿಕ ಕೊಡುಗೆಗಳು ಮಹತ್ತರವಾಗಿವೆ. ಸರ್ಕಾರ, ಸಮಾಜ ಮತ್ತು ಎಲ್ಲಾ ಸಮರ್ಪಿತ ಕಾರ್ಮಿಕರ ಪ್ರಯತ್ನಗಳನ್ನು ಅವರು ಗುರುತಿಸಿದರು ಮತ್ತು ಶ್ಲಾಘಿಸಿದರು. ದೇಶಾದ್ಯಂತದ ಭಕ್ತರಿಗೆ, ಉತ್ತರ ಪ್ರದೇಶದ ಜನರು ಮತ್ತು ವಿಶೇಷವಾಗಿ ಪ್ರಯಾಗ್‌ರಾಜ್ ನಾಗರಿಕರ ಅಮೂಲ್ಯ ಬೆಂಬಲ ಮತ್ತು ಪರಿಶ್ರಮಕ್ಕಾಗಿ ಶ್ರೀ ಮೋದಿ ಅವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ಮಹಾಕುಂಭ ಮೇಳ ಮುಕ್ತಾಯದ ಬಳಿಕ ಗುಜರಾತ್‌ನ ಸೋಮನಾಥ ಮಂದಿರಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ

March 02nd, 08:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್‌ ರಾಜ್‌ನಲ್ಲಿ ಮಹಾಕುಂಭ ಮುಕ್ತಾಯದ ನಂತರ ಗುಜರಾತ್‌ನ ಸೋಮನಾಥ ಮಂದಿರಕ್ಕೆ ಭೇಟಿ ನೀಡಿದರು. ದೇವಾಲಯವು ನಮ್ಮ ಸಂಸ್ಕೃತಿಯ ಕಾಲಾತೀತ ಪರಂಪರೆ ಮತ್ತು ಧೈರ್ಯವನ್ನು ವ್ಯಕ್ತಪಡಿಸುತ್ತದೆ ಎಂದು ಅವರು ಹೇಳಿದರು.

ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 01st, 11:00 am

ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.

ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 01st, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಬಿಹಾರದ ಭಾಗಲ್ಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 24th, 02:35 pm

ವೇದಿಕೆಯಲ್ಲಿರುವ ನಮ್ಮ ಪ್ರೀತಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ ಅವರೊಂದಿಗೆ ಗೌರವಾನ್ವಿತ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಜಿ ಇದ್ದಾರೆ, ಅವರು ಬಿಹಾರದ ಅಭಿವೃದ್ಧಿಗೆ ತಮ್ಮ ಸಮರ್ಪಣೆ ಮೂಲಕ ವ್ಯಾಪಕ ಮೆಚ್ಚುಗೆ ಪಡೆದಿದ್ದಾರೆ. ನನ್ನ ಗೌರವಾನ್ವಿತ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಜಿ, ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ - ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಜಿ, ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಜಿ, ವಿಜಯ್ ಸಿನ್ಹಾ ಜಿ, ರಾಜ್ಯದ ಇತರೆ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಗಣ್ಯರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,

ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಿಹಾರದ ಭಾಗಲ್ ಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

February 24th, 02:30 pm

ರೈತರ ಕಲ್ಯಾಣವನ್ನು ಖಾತ್ರಿಪಡಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಭಾಗಲ್ ಪುರದಲ್ಲಿ ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಭಾಗವಹಿಸಿದ ಎಲ್ಲ ಗಣ್ಯರು ಮತ್ತು ಜನರನ್ನು ಶ್ರೀ ಮೋದಿ ಸ್ವಾಗತಿಸಿದರು. ಮಹಾಕುಂಭದ ಪವಿತ್ರ ಅವಧಿಯಲ್ಲಿ ಮಂದಾರಾಚಲದ ಭೂಮಿಯಲ್ಲಿ ಹೆಜ್ಜೆ ಹಾಕುವುದು ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ಈ ಸ್ಥಳವು ಆಧ್ಯಾತ್ಮಿಕತೆ, ಪರಂಪರೆ ಮತ್ತು ವಿಕ್ಷಿತ್ ಭಾರತದ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಇದು ಹುತಾತ್ಮ ತಿಲ್ಕಾ ಮಾಂಝಿ ಅವರ ಭೂಮಿ ಮತ್ತು ಸಿಲ್ಕ್ ಸಿಟಿ ಎಂದು ಕೂಡಾ ಪ್ರಸಿದ್ಧವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಬಾಬಾ ಅಜ್ಜೈಬಿನಾಥ್ ಅವರ ಪವಿತ್ರ ಭೂಮಿಯಲ್ಲಿ ಮುಂಬರುವ ಮಹಾ ಶಿವರಾತ್ರಿಗೆ ಸಿದ್ಧತೆಗಳು ನಡೆದಿವೆ ಎಂದು ಅವರು ಉಲ್ಲೇಖಿಸಿದರು. ಇಂತಹ ಪವಿತ್ರ ಸಮಯದಲ್ಲಿ ಪಿಎಂ ಕಿಸಾನ್ ನ 19 ನೇ ಕಂತನ್ನು ಬಿಡುಗಡೆ ಮಾಡುವ ಅದೃಷ್ಟ ನನ್ನದಾಗಿದೆ ಮತ್ತು ಸುಮಾರು 22,000 ಕೋಟಿ ರೂ.ಗಳನ್ನು ನೇರ ಲಾಭ/ನಗದು ವರ್ಗಾವಣೆಯ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಅವರು ಹೇಳಿದರು.

ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 23rd, 06:11 pm

ಸಹೋದರ ಸಹೋದರಿಯರೆ, ನೀವೆಲ್ಲಾ ದಯಮಾಡಿ ಮಾತಂಗೇಶ್ವರನಿಗೆ ಜೈ, ಬಾಗೇಶ್ವರ ಧಾಮಕ್ಕೆ ಜೈ, ಜಟಾಶಂಕರ ಧಾಮಕ್ಕೆ ಜೈ ಎಂದು ಹೇಳಿ, ನಾನು ನನ್ನ ಎರಡೂ ಕೈಗಳನ್ನು ಎತ್ತಿ ಹಿಡಿದು ನಿಮ್ಮ ಪರವಾಗಿ ನಮಿಸುತ್ತಿದ್ದೇನೆ, ಜೋರಾಗಿ ರಾಮ್-ರಾಮ್ ಎಂದು ಹೇಳಿ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಿದರು

February 23rd, 04:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಗರ್ಹಾ ಗ್ರಾಮದಲ್ಲಿ ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಪಾವಧಿಯಲ್ಲಿಯೇ ಎರಡನೇ ಬಾರಿಗೆ ಬುಂದೇಲಖಂಡಕ್ಕೆ ಮತ್ತೆ ಬಂದಿರುವುದು ತಮ್ಮ ಅದೃಷ್ಟ ಎಂದು ಹೇಳಿದ ಶ್ರೀ ಮೋದಿ, ಆಧ್ಯಾತ್ಮಿಕ ಕೇಂದ್ರ ಬಾಗೇಶ್ವರ ಧಾಮ ಶೀಘ್ರದಲ್ಲೇ ಆರೋಗ್ಯ ಕೇಂದ್ರವಾಗಲಿದೆ ಎಂದು ಹೇಳಿದರು. ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು 10 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು ಮತ್ತು ಮೊದಲ ಹಂತದಲ್ಲಿ 100 ಹಾಸಿಗೆಗಳ ಸೌಲಭ್ಯ ಸಿದ್ಧವಾಗಲಿದೆ ಎಂದು ಅವರು ಹೇಳಿದರು. ಶ್ರೀ ಧೀರೇಂದ್ರ ಶಾಸ್ತ್ರಿ ಅವರ ಉದಾತ್ತ ಕಾರ್ಯಕ್ಕಾಗಿ ಅವರು ಅವರನ್ನು ಅಭಿನಂದಿಸಿದರು ಮತ್ತು ಬುಂದೇಲಖಂಡದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಪಾಲ್ಗೊಂಡು ಧನ್ಯನಾದೆ : ಪ್ರಧಾನಮಂತ್ರಿ

February 05th, 12:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್ ನ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಅಲ್ಲಿನ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.

ಪ್ರಯಾಗರಾಜ್‌ ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಫೆಬ್ರವರಿ 5, 2025 ರಂದು ಭೇಟಿ ನೀಡಲಿರುವ ಪ್ರಧಾನಮಂತ್ರಿ

February 04th, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 5 , 2025 ರಂದು ಪ್ರಯಾಗರಾಜ್‌ ನಲ್ಲಿ ನಡೆಯುವ ಮಹಾ ಕುಂಭಮೇಳ 2025 ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 11 ಗಂಟೆಗೆ, ಅವರು ಸಂಗಮದಲ್ಲಿ ಪವಿತ್ರ ಸ್ನಾನವನ್ನು ಮಾಡಲಿದ್ದಾರೆ, ಮತ್ತು ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.