ಅಜ್ಮೀರ್ ನಲ್ಲಿ ಅಭಿವೃದ್ಧಿ ಕಾರ್ಯಗಳು, ಎಚ್ ಪಿ ವಿ ಲಸಿಕೆಗಾಗಿ ದೇಶವ್ಯಾಪಿ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 28th, 12:00 pm
ಇಂದು, ತೀರ್ಥರಾಜ ಪುಷ್ಕರ್ ಮತ್ತು ಮಾತಾ ಸಾವಿತ್ರಿಯ ಈ ಪವಿತ್ರ ಭೂಮಿಯಲ್ಲಿ, ನಿಮ್ಮೆಲ್ಲರ ನಡುವೆ ಇದ್ದು ನಿಮ್ಮ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ಈ ವೇದಿಕೆಯಿಂದ, ನಾನು ಸುರಾಸುರನ ತೇಜಜಿ ಧಾಮ ಮತ್ತು ಪೃಥ್ವಿರಾಜ್ ಅವರ ನೆಲ ಅಜ್ಮೀರ್ ಗೆ ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಅಜ್ಮೀರ್ನಲ್ಲಿ ₹17,000 ಕೋಟಿ ಮೌಲ್ಯದ ರಾಷ್ಟ್ರವ್ಯಾಪಿ ಎಚ್ಪಿವಿ ಲಸಿಕೆ ಅಭಿಯಾನಕ್ಕೆ ಚಾಲನೆ ಮತ್ತು ಅಭಿವೃದ್ಧಿ ಯೋಜನೆ ಲೋಕಾರ್ಪಣೆ
February 28th, 11:30 am
ರಾಜಸ್ಥಾನದಲ್ಲಿನ ಡಬಲ್-ಎಂಜಿನ್ ಸರ್ಕಾರ ಎರಡು ವರ್ಷಗಳ ತ್ವರಿತ ಪ್ರಗತಿಯನ್ನು ಪೂರ್ಣಗೊಳಿಸಿದೆ ಎಂದು ಪ್ರಧಾನಮಂತ್ರಿ ತೃಪ್ತಿ ವ್ಯಕ್ತಪಡಿಸಿದರು. ಜನರಿಗೆ ಸೇವೆ ಸಲ್ಲಿಸಲು ಬಂದ ಅಭಿವೃದ್ಧಿಯ ಭರವಸೆಗಳನ್ನು ಸರ್ಕಾರ ಪೂರೈಸುತ್ತಿದೆ. ಮತ್ತು ಇಂದು ಈ ಅಭಿವೃದ್ಧಿಯ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸುವ ದಿನವಾಗಿದೆ. ಎಂದು ಮೋದಿ ಅವರು ಹೇಳಿದರು. ಇಂದಿನ ಕಾರ್ಯಕ್ರಮದಲ್ಲಿ ರಸ್ತೆಗಳು, ವಿದ್ಯುತ್, ನೀರು, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹17,000 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆದಿದ್ದು, ರಾಜಸ್ಥಾನದ ಜನರ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉದ್ದೇಶಿಸಲಾಗಿದೆ ಎಂದು ಪ್ರಧಾನಿ ಹೇಳಿದರು.ಪ್ರಧಾನಿ ಅವರನ್ನು ಭೇಟಿ ಮಾಡಿದ ರಾಜಸ್ಥಾನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು
December 21st, 12:48 pm
ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಮತ್ತು ರಾಜ್ಯದ ಉಪಮುಖ್ಯಮಂತ್ರಿಗಳಾದ ದಿಯಾ ಕುಮಾರಿ ಮತ್ತು ಶ್ರೀ ಪ್ರೇಮ್ ಚಂದ್ ವೈರ್ವಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.