2026ರ ಹಂಗಾಮಿನಲ್ಲಿ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

December 12th, 04:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು 2026ರ ಹಂಗಾಮಿನಲ್ಲಿ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ತೆಂಗು ಬೆಳೆಗಾರರಿಗೆ ಲಾಭದಾಯಕ ಬೆಲೆ ಒದಗಿಸುವ ಸಲುವಾಗಿ, ಸರ್ಕಾರವು 2018-19ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಆದೇಶಿತ (ಮ್ಯಾಂಡೇಟೆಡ್) ಬೆಳೆಗಳ ಎಂ.ಎಸ್.ಪಿ.ಯನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಹೆಚ್ಚಿನ ಮಟ್ಟದಲ್ಲಿ ನಿಗದಿಪಡಿಸುವುದಾಗಿ ಘೋಷಿಸಿತ್ತು. 2026ರ ಹಂಗಾಮಿನಲ್ಲಿ ನ್ಯಾಯಸಮ್ಮತ ಸರಾಸರಿ ಗುಣಮಟ್ಟದ ಸೀಳು ಕೊಬ್ಬರಿ ಪ್ರತಿ ಕ್ವಿಂಟಾಲ್‌ಗೆ 12,027 ರೂ. ಎಂ.ಎಸ್.ಪಿ. ಮತ್ತು ಉಂಡೆ (ಬಾಲ್) ಕೊಬ್ಬರಿಗೆ 12,500 ರೂ. ಎಂ.ಎಸ್.ಪಿ. ನಿಗದಿಪಡಿಸಲಾಗಿದೆ.

2025-26 ರಿಂದ 2030-31 ರವರೆಗೆ ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತ ಅಭಿಯಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

October 01st, 03:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಬೇಳೆಕಾಳುಗಳಲ್ಲಿ ಆತ್ಮನಿರ್ಭರ ಮಿಷನ್ಗೆ ಅನುಮೋದನೆ ನೀಡಿದೆ. ಇದು ದೇಶದಲ್ಲಿ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಒಂದು ಮಹತ್ತರ ಉಪಕ್ರಮವಾಗಿದ್ದು, ಇದರ ಉದ್ದೇಶ ಬೇಳೆಕಾಳುಗಳಲ್ಲಿ ಸ್ವಾವಲಂಬನೆ (ಆತ್ಮನಿರ್ಭರತ) ಸಾಧಿಸುವುದಾಗಿದೆ. ಈ ಮಿಷನ್ ಅನ್ನು 2025-26 ರಿಂದ 2030-31 ರವರೆಗಿನ ಆರು ವರ್ಷಗಳ ಅವಧಿಯಲ್ಲಿ, ರೂ. 11,440 ಕೋಟಿ ಆರ್ಥಿಕ ವೆಚ್ಚದೊಂದಿಗೆ ಜಾರಿಗೆ ತರಲಾಗುವುದು.

ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನ (ಪಿಎಂ-ಆಶಾ) ಯೋಜನೆಗಳ ಮುಂದುವರಿಕೆಗೆ ಕ್ಯಾಬಿನೆಟ್ ಅನುಮೋದನೆ

September 18th, 03:16 pm

ರೈತರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸಲು ಮತ್ತು ಗ್ರಾಹಕರಿಗೆ ಅಗತ್ಯ ವಸ್ತುಗಳ ಬೆಲೆ ಏರಿಳಿತವನ್ನು ನಿಯಂತ್ರಿಸಲು ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನದ (ಪಿಎಂ-ಆಶಾ) ಯೋಜನೆಗಳ ಮುಂದುವರಿಕೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಒಟ್ಟು ಹಣಕಾಸಿನ ಹೊರಹೋಗುವಿಕೆಯು ರೂ. 2025-26 ರವರೆಗಿನ 15 ನೇ ಹಣಕಾಸು ಆಯೋಗದ ಚಕ್ರದಲ್ಲಿ 35,000 ಕೋಟಿ ರೂಪಾಯಿ.

"2023 ರ ಋತುವಿನ ಒಣಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕ್ಯಾಬಿನೆಟ್ (ಸಚಿವ ಸಂಪುಟ) ಅನುಮೋದಿಸಿದೆ. "

December 23rd, 10:58 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿನ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ (ಸಚಿವ ಸಂಪುಟ) ಸಮಿತಿಯು 2023 ರ ಋತುವಿನ ಒಣಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (ಎಂ‌ಎಸ್‌ಪಿ) ಅನುಮೋದಿಸಿದೆ. ಕೃಷಿ ವೆಚ್ಚಗಳು ಮತ್ತು ಬೆಲೆಗಳು ಮತ್ತು ಪ್ರಮುಖ ತೆಂಗು ಬೆಳೆಯುವ ರಾಜ್ಯಗಳ ಅಭಿಪ್ರಾಯಗಳ ಆಯೋಗದ ಶಿಫಾರಸುಗಳನ್ನು ಆಧರಿಸಿ ಸಂಪುಟ ಸಮಿತಿಯು ಈ ಅನುಮೋದನೆಯನ್ನು ನೀಡಿದೆ.

ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆಗೆ ಸಂಪುಟ ಅನುಮೋದನೆ

April 08th, 03:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ (ICDS), ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ-PM POSHAN [ಹಿಂದಿನ ಮಧ್ಯಾಹ್ನದ ಬಿಸಿಊಟದ ಯೋಜನೆ (MDM)] ಮತ್ತು ಭಾರತ ಸರ್ಕಾರದ ಇತರ ಕಲ್ಯಾಣ ಯೋಜನೆಗಳ (OWS) ಮೂಲಕ 2024 ರ ವೇಳೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ಹಂತ ಹಂತವಾಗಿ 'ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆ' (ಟಿಪಿಡಿಎಸ್) ವ್ಯಾಪ್ತಿಯುದ್ದಕ್ಕೂ ಸಾರವರ್ಧಿತ ಅಕ್ಕಿಯನ್ನು ಪೂರೈಸಲು ತನ್ನ ಅನುಮೋದನೆಯನ್ನು ನೀಡಿದೆ.

"2022-23 ರ ಮಾರುಕಟ್ಟೆ ಹಂಗಾಮಿಗೆ ಹಿಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಳಕ್ಕೆ ಸಂಪುಟದ ಅನುಮೋದನೆ "

September 08th, 02:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2022-23 ರ ಹಿಂಗಾರು ಮಾರುಕಟ್ಟೆ ಹಂಗಾಮಿಗೆ ಎಲ್ಲಾ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳ (ಎಂಎಸ್‌ಪಿ) ಹೆಚ್ಚಳವನ್ನು ಅನುಮೋದಿಸಿದೆ.

“ಪ್ರಧಾನ್ ಮಂತ್ರಿ ಅನ್ನದಾತಾ ಆಯ್ ಸಂರಕ್ಷಣ ಅಭಿಯಾನ” (ಪಿಎಂ-ಆಶಾ) ನೂತನ ಸುರಕ್ಷಾ (ಅಂಬ್ರೆಲಾ) ಯೋಜನೆಗೆ ಸಂಪುಟದ ಅನುಮೋದನೆ

September 12th, 04:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅನ್ನದಾತರ ಪರ ತನ್ನ ಬದ್ಧತೆ ಮತ್ತು ಸಮರ್ಪಣೆಗೆ ಅನುಗುಣವಾಗಿ, ಹೊಸ ಸುರಕ್ಷಾ (ಅಂಬ್ರೆಲಾ) ಯೋಜನೆ ಪ್ರಧಾನ ಮಂತ್ರಿ ಅನ್ನದಾತಾ ಆಯ್ ಸಂರಕ್ಷಣ ಅಭಿಯಾನ (ಪಿ.ಎಂ. ಆಶಾ)ಕ್ಕೆ ಅನುಮೋದನೆ ನೀಡುವ ಮೂಲಕ ಕೃಷಿಕರ ಪರವಾದ ಉಪಕ್ರಮಗಳಿಗೆ ಮಹತ್ವದ ಇಂಬು ನೀಡಿದೆ. 2018ರ ಬಜೆಟ್ ನಲ್ಲಿ ಘೋಷಿಸಿರುವಂತೆ ರೈತರಿಗೆ ತಮ್ಮ ಉತ್ಪನ್ನಗಳಿಗೆ ಲಾಭದಾಯಕ ದರದ ಖಾತ್ರಿ ಪಡಿಸುವ ಗುರಿಯನ್ನು ಯೋಜನೆ ಹೊಂದಿದೆ.