Prime Minister holds official talks with Prime Minister of New Zealand
July 11th, 08:09 am
During official talks in Auckland, PM Modi and New Zealand Prime Minister Christopher Luxon agreed to elevate bilateral ties to a Strategic Partnership, deepen cooperation across multiple sectors and witnessed the exchange of several agreements and MoUs. They also set a target to double bilateral trade by 2030.ಭಾರತದ ಪ್ರಜಾಪ್ರಭುತ್ವದಡಿ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸುತ್ತಿರುವ ಚುನಾಯಿತ ಪ್ರಧಾನಮಂತ್ರಿಯೆಂಬ ಹೆಗ್ಗಳಿಕೆ ಗಳಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜಾಗತಿಕ ನಾಯಕರ ಅಭಿನಂದನೆ
June 09th, 07:32 pm
ಭಾರತದ ಪ್ರಜಾಪ್ರಭುತ್ವದಡಿ ಅತ್ಯಂತ ದೀರ್ಘಾವಧಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಚುನಾಯಿತ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜಾಗತಿಕ ನಾಯಕರು ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿಯವರ ಪರಿವರ್ತನಾತ್ಮಕ ಆಡಳಿತ, ಜಾಗತಿಕ ದಕ್ಷಿಣಕ್ಕಾಗಿ ಅವರ ಪ್ರತಿಪಾದನೆ ಮತ್ತು ಸಮಗ್ರ ಮತ್ತು ಆರ್ಥಿಕವಾಗಿ ಸಕ್ರಿಯ ಭಾರತದ ಅವರ ದೂರದೃಷ್ಟಿಗೆ ಜಗತ್ತಿನಾದ್ಯಂತದ ವಿಶ್ವ ನಾಯಕರು ಗೌರವ ಸಲ್ಲಿಸಿದ್ದಾರೆ.ಕೆನಡಾ ಪ್ರಧಾನಮಂತ್ರಿ ಅವರ ಭೇಟಿಯೊಂದಿಗೆ ಉಭಯ ರಾಷ್ಟ್ರಗಳ ನಡುವಿನ ನಿಜವಾದ ನವೀಕರಿಸಿದ ಪಾಲುದಾರಿಕೆಗೆ ಬಲವಾದ ಅಡಿಪಾಯವನ್ನು ನಿರ್ಮಿಸಲಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು
March 03rd, 10:16 pm
ಕೆನಡಾದ ಪ್ರಧಾನಮಂತ್ರಿ ಮಾರ್ಕ್ ಕಾರ್ನೆ ಅವರ ಭಾರತ ಭೇಟಿ ಎರಡೂ ರಾಷ್ಟ್ರಗಳ ನಡುವಿನ ನೈಜ ನವೀಕೃತ ಪಾಲುದಾರಿಕೆಗೆ ಭದ್ರ ಬುನಾದಿ ಹಾಕಿದೆ ಎಂದು ಪ್ರಧಾನಮಂತ್ರಿ ಹೇಳಿದರು.ಸಂಸತ್ತಿನ ಬಜೆಟ್ ಅಧಿವೇಶನ ಆರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 29th, 10:15 am
ನಿನ್ನೆ ಗೌರವಾನ್ವಿತ ರಾಷ್ಟ್ರಪತಿಗಳು ಮಾಡಿದ ಭಾಷಣವು 140 ಕೋಟಿ ದೇಶವಾಸಿಗಳ ಆತ್ಮವಿಶ್ವಾಸದ ಅಭಿವ್ಯಕ್ತಿಯಾಗಿತ್ತು, 140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದ ವರದಿ ಅದಾಗಿತ್ತು. 140 ಕೋಟಿ ನಾಗರಿಕರ ವಿಶೇಷವಾಗಿ ಯುವಕರ ಆಕಾಂಕ್ಷೆಗಳ ನಿಖರವಾದ ಅಭಿವ್ಯಕ್ತಿಯೂ ಅದಾಗಿತ್ತು. ಇದು ಎಲ್ಲಾ ಸಂಸತ್ ಸದಸ್ಯರಿಗೆ ಹಲವಾರು ಮಾರ್ಗದರ್ಶಿ ಆಲೋಚನೆಗಳನ್ನು ಸಹ ರೂಪಿಸಿತು. ಅಧಿವೇಶನದ ಆರಂಭದಲ್ಲಿ ಮತ್ತು 2026ರ ಆರಂಭದಲ್ಲಿ, ಗೌರವಾನ್ವಿತ ರಾಷ್ಟ್ರಪತಿಗಳು ಸದನದ ಮುಂದೆ ವ್ಯಕ್ತಪಡಿಸಿದ ನಿರೀಕ್ಷೆಗಳು, ಸರಳ ಪದಗಳಲ್ಲಿ ಮತ್ತು ರಾಷ್ಟ್ರದ ಒಬ್ಬ ಮುಖ್ಯಸ್ಥರ ಸಾಮರ್ಥ್ಯದಲ್ಲಿ ಆಳವಾದ ಭಾವನೆಗಳನ್ನು ಪ್ರತಿಬಿಂಬಿಸಿದೆ. ಸಂಸತ್ತಿನ ಎಲ್ಲಾ ಗೌರವಾನ್ವಿತ ಸದಸ್ಯರು ಅವುಗಳನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಈ ಅಧಿವೇಶನವು ಸಹ ಸ್ವತಃ ಬಹಳ ಮುಖ್ಯವಾಗಿದೆ. ಇದು ಬಜೆಟ್ ಅಧಿವೇಶನ.2026ರ ಬಜೆಟ್ ಅಧಿವೇಶನದ ಪ್ರಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಪ್ರಾಸ್ತಾವಿಕ ಭಾಷಣ
January 29th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಆವರಣದಲ್ಲಿ 2026 ರ ಬಜೆಟ್ ಅಧಿವೇಶನ ಪ್ರಾರಂಭವಾಗುವ ಮೊದಲು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ರಾಷ್ಟ್ರಪತಿಯವರ ಭಾಷಣವು 140 ಕೋಟಿ ನಾಗರಿಕರ ವಿಶ್ವಾಸದ ಅಭಿವ್ಯಕ್ತಿಯಾಗಿದೆ, ಅವರ ಕಠಿಣ ಪರಿಶ್ರಮದ ಖಾತೆ ಮತ್ತು ಯುವಕರ ಆಕಾಂಕ್ಷೆಗಳ ನಿಖರವಾದ ಪ್ರತಿಬಿಂಬವಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. 2026 ರ ಅಧಿವೇಶನದ ಆರಂಭದಲ್ಲಿ ಮತ್ತು ಅದರ ಆರಂಭದಲ್ಲಿ ರಾಷ್ಟ್ರಪತಿಯವರು ಎಲ್ಲಾ ಸಂಸತ್ ಸದಸ್ಯರ ಮುಂದೆ ಹಲವಾರು ಮಾರ್ಗದರ್ಶಿ ಅಂಶಗಳನ್ನು ಇಟ್ಟಿದ್ದಾರೆ ಎಂದು ಅವರು ಹೇಳಿದರು. ರಾಷ್ಟ್ರದ ಮುಖ್ಯಸ್ಥರಾಗಿ ರಾಷ್ಟ್ರಪತಿಯವರು ಸರಳ ಪದಗಳಲ್ಲಿ ವ್ಯಕ್ತಪಡಿಸಿದ ನಿರೀಕ್ಷೆಗಳನ್ನು ಎಲ್ಲಾ ಸಂಸದರು ಖಂಡಿತವಾಗಿಯೂ ಗಂಭೀರವಾಗಿ ಪರಿಗಣಿಸುತ್ತಿದ್ದಾರೆ, ಹಾಗೂ ಈ ಅಧಿವೇಶನವು ಬಹಳ ಮಹತ್ವದ್ದಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. 21 ನೇ ಶತಮಾನದ ಮೊದಲ ತ್ರೈಮಾಸಿಕದ ಪೂರ್ಣಗೊಳಿಸುವಿಕೆ ಮತ್ತು ಎರಡನೇ ತ್ರೈಮಾಸಿಕದ ಆರಂಭವನ್ನು ಗುರುತಿಸುವ ಬಜೆಟ್ ಅಧಿವೇಶನ ಇದಾಗಿದೆ ಎಂದು ಅವರು ಹೇಳಿದರು. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲು ನಮಗೆ ಮುಂದಿನ 25 ವರ್ಷಗಳು ನಿರ್ಣಾಯಕವಾಗಿವೆ ಮತ್ತು ಈ ಬಜೆಟ್, ಈ ಶತಮಾನದ ಎರಡನೇ ತ್ರೈಮಾಸಿಕ ಅವಧಿಯಲ್ಲಿನ ಮೊದಲನೆಯ ಬಜೆಟ್ ಆಗಿದೆ ಎಂದು ಅವರು ಹೇಳಿದರು. ದೇಶದ ಮೊದಲ ಮಹಿಳಾ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ನಮ್ಮ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಸತತ ಒಂಬತ್ತನೇ ಬಾರಿಗೆ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ, ಇದು ಭಾರತದ ಸಂಸದೀಯ ಇತಿಹಾಸದಲ್ಲಿ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು.ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 23rd, 09:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅವರು ಸಮಾಜದ ವಂಚಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಕೃಷಿಯ ಪ್ರಗತಿ ಮತ್ತು ರೈತರ ಸಮೃದ್ಧಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಕೃತಜ್ಞ ರಾಷ್ಟ್ರವು ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಇಸ್ರೇಲ್ ಪ್ರಧಾನಮಂತ್ರಿಯವರಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ
December 10th, 07:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಿ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಪ್ರಧಾನಮಂತ್ರಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಮತ್ತು ಶ್ರೀಮತಿ ಜೊಡಿ ಹೇಡನ್ ಅವರ ವಿವಾಹ ನಿಮಿತ್ತ ಅವರುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ
November 29th, 09:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಆತ್ಮೀಯ ಸ್ನೇಹಿತ, ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಮತ್ತು ಶ್ರೀಮತಿ ಜೊಡಿ ಹೇಡನ್ ಅವರ ವಿವಾಹಕ್ಕಾಗಿ ಅವರುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಜೋಹಾನ್ಸ್ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಜಪಾನ್ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ
November 23rd, 09:46 pm
ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿ ಘನತೆವೆತ್ತ ಸಾನೇ ತಕೈಚಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಅಕ್ಟೋಬರ್ 29, 2025 ರಂದು ದೂರವಾಣಿ ಕರೆ ಮಾಡಿದ ನಂತರ ಪ್ರಧಾನಮಂತ್ರಿ ತಕೈಚಿ ಅವರೊಂದಿಗಿನ ಪ್ರಧಾನಮಂತ್ರಿ ಅವರ ಮೊದಲ ಮುಖಾಮುಖಿ ಸಭೆ ಇದಾಗಿದೆ.2025ರ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಇಟಲಿಯ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ
November 23rd, 09:44 pm
ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಾಲಿಯನ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾದರು. ಈ ವರ್ಷದ ಜೂನ್ ನಲ್ಲಿ ಕೆನಡಾದ ಕನನಾಸ್ಕಿಸ್ ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಈ ಇಬ್ಬರೂ ನಾಯಕರು ಸಂಕ್ಷಿಪ್ತವಾಗಿ ಪರಸ್ಪರ ಸಂವಹನ ನಡೆಸಿದ್ದರು.ಜೋಹಾನ್ಸ್ಬರ್ಗ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 23rd, 09:41 pm
ಭಾರತ-ಕೆನಡಾ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೋಹಾನ್ಸ್ಬರ್ಗ್ ನಲ್ಲಿ ನಡೆದ ಜಿ20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಮಾರ್ಕ್ ಕಾರ್ನೆ ಅವರನ್ನು ಭೇಟಿ ಮಾಡಿದರು.ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
November 19th, 07:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಸನೇ ತಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ; ಭಾರತ-ಜಪಾನ್ ವಿಶೇಷ ಕಾರ್ಯತಾಂತ್ರಿಕ ಮತ್ತು ಜಾಗತಿಕ ಸಹಭಾಗಿತ್ವ ಮತ್ತಷ್ಟು ಮುಂದುವರಿಸುವ ಬಗ್ಗೆ ಚರ್ಚೆ
October 29th, 01:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಸನೇ ತಕೈಚಿ ಅವರೊಂದಿಗೆ ಆತ್ಮೀಯ ಮಾತುಕತೆ ನಡೆಸಿದರು.ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಘನತೆವೆತ್ತ ಶ್ರೀಮತಿ ಸನೈ ಟಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 21st, 11:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಘನತೆವೆತ್ತ ಶ್ರೀಮತಿ ಸನೆ ತಕೈಚಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂದೇಶದಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ.ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 17th, 11:09 pm
ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
October 17th, 08:00 pm
ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.ಕೀನ್ಯಾದ ಮಾಜಿ ಪ್ರಧಾನಮಂತ್ರಿ ಶ್ರೀ ರೈಲಾ ಒಡಿಂಗಾ ಅವರ ನಿಧನಕ್ಕೆ ಅತೀವ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
October 15th, 02:41 pm
ಕೀನ್ಯಾದ ಮಾಜಿ ಪ್ರಧಾನಮಂತ್ರಿ ಶ್ರೀ ರೈಲಾ ಒಡಿಂಗಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಆತ್ಮೀಯ ಸ್ನೇಹಿತ ಮತ್ತು ಕೀನ್ಯಾದ ಮಾಜಿ ಪ್ರಧಾನಮಂತ್ರಿ ಶ್ರೀ ರೈಲಾ ಒಡಿಂಗಾ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಒಬ್ಬ ಉನ್ನತ ರಾಜನೀತಿಜ್ಞ ಮತ್ತು ಭಾರತದ ಪ್ರೀತಿಯ ಸ್ನೇಹಿತರಾಗಿದ್ದರು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ದಿನಗಳಿಂದ ಅವರನ್ನು ಹತ್ತಿರದಿಂದ ತಿಳಿದುಕೊಳ್ಳುವ ಸೌಭಾಗ್ಯ ನನಗೆ ಸಿಕ್ಕಿತು ಮತ್ತು ನಮ್ಮ ಒಡನಾಟವು ವರ್ಷಗಳಿಂದ ಮುಂದುವರೆದಿದೆ ಎಂದು ಶ್ರೀ ಮೋದಿ ಅವರು ಹೇಳಿದರು. ಶ್ರೀ ರೈಲಾ ಒಡಿಂಗಾ ಅವರು ಭಾರತದ ಸಂಸ್ಕೃತಿ, ಮೌಲ್ಯಗಳು ಮತ್ತು ಪ್ರಾಚೀನ ಜ್ಞಾನದ ಬಗ್ಗೆ ವಿಶೇಷ ಪ್ರೀತಿಯನ್ನು ಹೊಂದಿದ್ದರು, ಇದು ಭಾರತ-ಕೀನ್ಯಾ ಸಂಬಂಧಗಳನ್ನು ಬಲಪಡಿಸುವ ಅವರ ಪ್ರಯತ್ನಗಳಲ್ಲಿ ಪ್ರತಿಫಲಿಸುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದರು.ಅಧ್ಯಕ್ಷರಾದ ಶ್ರೀ ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯಡಿಯಲ್ಲಿ ಆಗಿರುವ ಪ್ರಗತಿಗೆ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು ಅವರನ್ನು ಪ್ರಧಾನಮಂತ್ರಿ ಅಭಿನಂದನೆ
October 09th, 10:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದರು ಮತ್ತು ಅಧ್ಯಕ್ಷರಾದ ಶ್ರೀ ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯಡಿಯಲ್ಲಿ ಆಗಿರುವ ಪ್ರಗತಿಗೆ ಅವರನ್ನು ಅಭಿನಂದಿಸಿದರು.ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಗೌರವ ನಮನ
September 26th, 08:51 am
ಮಾಜಿ ಪ್ರಧಾನಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀಮತಿ ಸುಶೀಲಾ ಕರ್ಕಿ ಅವರಿಗೆ ಶುಭಕೋರಿದ ಪ್ರಧಾನಮಂತ್ರಿ
September 13th, 08:57 am
ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀಮತಿ ಸುಶೀಲಾ ಕರ್ಕಿಯವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಇಂದು ಶುಭಾಶಯಗಳನ್ನು ಕೋರಿದ್ದಾರೆ. ನೇಪಾಳದ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ದೃಢವಾಗಿ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.