ಜಪಾನ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
July 02nd, 01:30 pm
ಕಳೆದ ಹಲವು ದಶಕಗಳಿಂದೀಚೆಗೆ ಜಪಾನ್ ಭಾರತದ ಪ್ರಗತಿಗಾಥೆಯಲ್ಲಿ ಪ್ರಮುಖ ಪಾಲುದಾರನಾಗಿ ಮಾರ್ಪಟ್ಟಿದೆ. ಆಟೋಮೊಬೈಲ್ಸ್ನಿಂದ ಹಿಡಿದು ಎಲೆಕ್ಟ್ರಾನಿಕ್ಸ್ ವರೆಗೆ, ಸ್ನೇಹ ಮತ್ತು ವಿಶ್ವಾಸದ ಅಮೂಲ್ಯವಾಗಿದೆ.ಫ್ರಾನ್ಸ್ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 14th, 04:36 pm
ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 14th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್ನ ಪಲೈಸ್ ಡೆಸ್ ಎಕ್ಸ್ಪೊಸಿಷನ್ಸ್ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ರೋಜ್ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರ ಅಧಿಕೃತ ಭೇಟಿಯ ಕುರಿತು ಭಾರತ – ಫಿನ್ಲೆಂಡ್ ಜಂಟಿ ಹೇಳಿಕೆ
March 05th, 08:03 pm
ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಅಲೆಕ್ಸಾಂಡರ್ ಸ್ಟಬ್ ಅವರು ಮಾರ್ಚ್ 4-7, 2026 ರವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಪ್ರಸ್ತುತ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಅಧ್ಯಕ್ಷ ಸ್ಟಬ್ ಅವರು ನವದೆಹಲಿ ಮತ್ತು ಮುಂಬೈ ಪ್ರವಾಸ ಕೈಗೊಂಡಿದ್ದಾರೆ. ಫಿನ್ಲೆಂಡ್ನ ಹವಾಮಾನ ಮತ್ತು ಪರಿಸರ ಸಚಿವರಾದ ಶ್ರೀಮತಿ ಸಾರಿ ಮುಲ್ತಾಲಾ, ಉದ್ಯೋಗ ಸಚಿವರಾದ ಶ್ರೀ ಮಟಿಯಾಸ್ ಮಾರ್ಟಿನೆನ್ ಮತ್ತು ಅಧಿಕಾರಿಗಳು ಮತ್ತು ವ್ಯಾಪಾರ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಅವರೊಂದಿಗೆ ಇದ್ದಾರೆ. ಪ್ರಧಾನಮಂತ್ರಿ ಮೋದಿ ಮಾರ್ಚ್ 5, 2026 ರಂದು ನವದೆಹಲಿಯಲ್ಲಿ ರೈಸಿನಾ ಸಂವಾದದ 11 ನೇ ಆವೃತ್ತಿಯನ್ನು ಉದ್ಘಾಟಿಸಿದರು, ಅಧ್ಯಕ್ಷರಾದ ಸ್ಟಬ್ ಮುಖ್ಯ ಅತಿಥಿಯಾಗಿ ಉದ್ಘಾಟನಾ ಭಾಷಣ ಮಾಡಿದರು. ಫೆಬ್ರವರಿ 2026 ರಲ್ಲಿ ನಡೆಯಲಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಫಿನ್ಲೆಂಡ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ಪೆಟ್ಟೇರಿ ಓರ್ಪೊ ಭಾಗವಹಿಸಿದ್ದರು. ಆ ನಂತರ ಈಗ ಅಧ್ಯಕ್ಷ ಸ್ಟಬ್ ಭೇಟಿ ನೀಡಿದ್ದಾರೆ.ಫಲಿತಾಂಶಗಳ ಪಟ್ಟಿ: ಫಿನ್ಲೆಂಡ್ ಅಧ್ಯಕ್ಷರ ಭೇಟಿ
March 05th, 04:36 pm
ಫಿನ್ಲೆಂಡ್ ಭಾರತೀಯ ವೃತ್ತಿಪರರಿಗೆ, ವಿಶೇಷವಾಗಿ ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿಪ್ರಮುಖ ತಾಣವಾಗಿ ಹೊರಹೊಮ್ಮಿದೆ. ವಲಸೆ ಮತ್ತು ಚಲನಶೀಲತೆ ಪಾಲುದಾರಿಕೆ ಕುರಿತ ತಿಳಿವಳಿಕೆ ಒಪ್ಪಂದವು ಪ್ರತಿಭೆಗಳ ಚಲನಶೀಲತೆಯನ್ನು ಸುಗಮಗೊಳಿಸುತ್ತದೆ.ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 25th, 08:20 pm
ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್) ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 25th, 08:00 pm
ಕನೆಸೆಟ್ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 19th, 10:00 am
ಗೌರವಾನ್ವಿತ ಗಣ್ಯರೆ, ಸಚಿವರೆ, ಉದ್ಯಮ ನಾಯಕರೆ, ನಾವೀನ್ಯಕಾರರೆ, ಉದ್ಯಮಿಗಳೆ, ಸಂಶೋಧಕರೆ, ಪ್ರತಿನಿಧಿಗಳೆ, ಗಣ್ಯ ಅತಿಥಿಗಳೆ, ಮಹಿಳೆಯರು ಮತ್ತು ಮಹನೀಯರೆ - ನಮಸ್ತೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಉದ್ಘಾಟನೆ
February 19th, 09:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಮಾನವಕುಲದ ಆರನೇ ಒಂದು ಭಾಗವನ್ನು ಪ್ರತಿನಿಧಿಸುವ ಭಾರತದಲ್ಲಿ ವಿಶ್ವದ ಅತಿದೊಡ್ಡ ಮತ್ತು ಐತಿಹಾಸಿಕ 'ಎಐ ಇಂಪ್ಯಾಕ್ಟ್ ಶೃಂಗಸಭೆ' ನಡೆಯುತ್ತಿದೆ ಎಂದು ಹೇಳಿದರು. ಭಾರತವು ವಿಶ್ವದ ಅತಿದೊಡ್ಡ ಯುವ ಜನಸಂಖ್ಯೆ, ಅತಿದೊಡ್ಡ ತಾಂತ್ರಿಕ ಪ್ರತಿಭಾನ್ವಿತರ ಬಳಗ ಮತ್ತು ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಆಧಾರಿತ ಪರಿಸರ ವ್ಯವಸ್ಥೆಗೆ ನೆಲೆಯಾಗಿದೆ ಎಂದು ಅವರು ಒತ್ತಿಹೇಳಿದರು. ಭಾರತವು ಕೇವಲ ಹೊಸ ತಂತ್ರಜ್ಞಾನಗಳನ್ನು ಸೃಷ್ಟಿಸುವುದು ಮಾತ್ರವಲ್ಲದೆ, ಅವುಗಳನ್ನು ಅಭೂತಪೂರ್ವ ವೇಗದಲ್ಲಿ ಅಳವಡಿಸಿಕೊಳ್ಳುತ್ತದೆ ಎಂದು ಅವರು ಪ್ರತಿಪಾದಿಸಿದರು. 140 ಕೋಟಿ ಭಾರತೀಯರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಉತ್ಸುಕರಾಗಿದ್ದಾರೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ವಿವಿಧ ರಾಷ್ಟ್ರಗಳ ಮುಖ್ಯಸ್ಥರಿಗೆ, ಜಾಗತಿಕ ಎಐ ವ್ಯವಸ್ಥೆಯ ನಾಯಕರಿಗೆ ಮತ್ತು ನಾವೀನ್ಯಕಾರರಿಗೆ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಕೋರಿದರು. ಅವರ ಉಪಸ್ಥಿತಿಗಾಗಿ ಕೃತಜ್ಞತೆ ಸಲ್ಲಿಸಿದ ಅವರು, ಈ ಶೃಂಗಸಭೆಯನ್ನು ಭಾರತದಲ್ಲಿ ಆಯೋಜಿಸಿರುವುದು ಕೇವಲ ದೇಶಕ್ಕೆ ಮಾತ್ರವಲ್ಲದೆ ಇಡೀ ಜಾಗತಿಕ ದಕ್ಷಿಣದ ರಾಷ್ಟ್ರಗಳಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.ನವೆಂಬರ್ 3 ರಂದು ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ 2025 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
November 02nd, 09:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 3 ರಂದು ಬೆಳಗ್ಗೆ 9:30ರ ಸುಮಾರಿಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ಇ.ಎಸ್.ಟಿ.ಐ.ಸಿ) 2025 ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 8ರಂದು 9ನೇ ಆವೃತ್ತಿಯ ಇಂಡಿಯನ್ ಮೊಬೈಲ್ ಕಾಂಗ್ರೆಸ್ ಉದ್ಘಾಟನೆ
October 07th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯ ಯಶೋಭೂಮಿಯಲ್ಲಿ 2025ರ ಅಕ್ಟೋಬರ್ 8ರಂದು ಏಷ್ಯಾದ ಅತಿದೊಡ್ಡ ದೂರಸಂಪರ್ಕ, ಮಾಧ್ಯಮ ಮತ್ತು ತಂತ್ರಜ್ಞಾನ ಕಾರ್ಯಕ್ರಮ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ)ಯ 9ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.ಭಾರತ ಸಿಂಗಾಪುರ ಜಂಟಿ ಹೇಳಿಕೆ
September 04th, 08:04 pm
ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 04th, 12:45 pm
ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 29th, 11:20 am
ನಿಮ್ಮಲ್ಲಿ ಅನೇಕರನ್ನು ನಾನು ವೈಯಕ್ತಿಕವಾಗಿ ಬಲ್ಲೆ. ನಾನು ಗುಜರಾತ್ನಲ್ಲಿದ್ದಾಗ ಆಗಿರಬಹುದು, ಅಥವಾ ದೆಹಲಿಗೆ ಬಂದ ನಂತರವೇ ಆಗಿರಬಹುದು, ನಿಮ್ಮಲ್ಲಿ ಅನೇಕರೊಂದಿಗೆ ನನಗೆ ನಿಕಟವಾದ ಸಂಪರ್ಕವಿದೆ. ಇಂದು ನಿಮ್ಮೆಲ್ಲರನ್ನೂ ಭೇಟಿಯಾಗುವ ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ನಿಜಕ್ಕೂ ಬಹಳ ಸಂತೋಷವಾಗಿದೆ.ʻಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
August 29th, 11:02 am
ಈ ವೇಳೆ ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ ಹೂಡಿಕೆ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗದ ಯಶಸ್ಸನ್ನು ಒತ್ತಿ ಹೇಳಿದರು. ಭಾರತದಲ್ಲಿ ತಮ್ಮ ಹೆಜ್ಜೆಗುರುತನ್ನು ಮತ್ತಷ್ಟು ಹೆಚ್ಚಿಸಲು ಜಪಾನಿನ ಕಂಪನಿಗಳನ್ನು ಆಹ್ವಾನಿಸಿದ ಅವರು, ಭಾರತದ ಬೆಳವಣಿಗೆಯ ಯಶೋಗಾಥೆಯು ಆ ಕಂಪನಿಗಳಿಗೆ ಅತ್ಯಾಕರ್ಷಕ ಅವಕಾಶಗಳನ್ನು ಒದಗಿಸುತ್ತದೆ ಎಂದರು. ಪ್ರಸ್ತುತ ಪ್ರಕ್ಷುಬ್ಧ ಜಾಗತಿಕ ಆರ್ಥಿಕ ಸನ್ನಿವೇಶದ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಸ್ನೇಹಿತರ ನಡುವಿನ ಆಳವಾದ ಆರ್ಥಿಕ ಸಹಭಾಗಿತ್ವವು ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಸ್ಥಿರತೆ, ನೀತಿ ಮುಂಗಾಣಿಕೆ, ಸುಧಾರಣೆಗಳಿಗೆ ಬದ್ಧತೆ ಮತ್ತು ಸುಗಮ ವ್ಯಾಪಾರ ಪ್ರಯತ್ನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹೊಸ ವಿಶ್ವಾಸವನ್ನು ನೀಡಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ಸಂಸ್ಥೆಗಳು ಇತ್ತೀಚೆಗೆ ಭಾರತದ ಕ್ರೆಡಿಟ್ ರೇಟಿಂಗ್ ಅನ್ನು ಮೇಲ್ದರ್ಜೆಗೆ ಏರಿಸಿರುವುದು ಈ ವಿಶ್ವಾಸವನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.3 ಪರಮ್ ರುದ್ರ ಸೂಪರ್ಕಂಪ್ಯೂಟರ್ಗಳು ಮತ್ತು ಉನ್ನತ-ಕಾರ್ಯಕ್ಷಮತೆಯ ಕಂಪ್ಯೂಟಿಂಗ್ ವ್ಯವಸ್ಥೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿ, ಪ್ರಧಾನ ಮಂತ್ರಿ ಭಾಷಣ
September 26th, 05:15 pm
ಸನ್ಮಾನ್ಯ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರೆ, ರಾಷ್ಟ್ರದಾದ್ಯಂತ ವಿವಿಧ ಸಂಶೋಧನಾ ಸಂಸ್ಥೆಗಳ ಗೌರವಾನ್ವಿತ ನಿರ್ದೇಶಕರೆ, ಗಣ್ಯ ಹಿರಿಯ ವಿಜ್ಞಾನಿಗಳೆ, ಎಂಜಿನಿಯರ್ ಗಳೆ, ಸಂಶೋಧಕರೆ, ವಿದ್ಯಾರ್ಥಿಗಳೆ, ಇತರೆ ಗಣ್ಯರೆ, ಮತ್ತು ಮಹಿಳೆಯರು ಮತ್ತು ಮಹನೀಯರೆ!