ಉತ್ತರ ಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಂತ Iರ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 28th, 12:15 pm
ಉದ್ಘಾಟನೆ ನೆರವೇರಿದೆಯೇ? ಉದ್ಘಾಟನೆ ನೆರವೇರಿದೆಯೇ? ಇನ್ನೂ ಇಲ್ಲ, ಈಗ ಅರ್ಧ ಕೆಲಸ ಮಾತ್ರವೇ ಮುಗಿದಿದೆ. ನಾನು ಆ ಪರದೆಯನ್ನು ಮಾತ್ರ ಸರಿಸಿದ್ದೇನೆ, ಆದರೆ ಇಂದು ಈ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ಇಲ್ಲಿ ಹಾಜರಿರುವ ನೀವೆಲ್ಲರೂ ಮಾಡಬೇಕೆಂದು ನಾನು ಬಯಸುತ್ತೇನೆ. ಆದ್ದರಿಂದ, ನಿಮ್ಮ ಮೊಬೈಲ್ ಫೋನ್ಗಳನ್ನು ಹೊರತೆಗೆಯಿರಿ, ನಿಮ್ಮ ಮೊಬೈಲ್ ಫೋನ್ನ ದೀಪವನ್ನು ಆನ್ ಮಾಡಿ, ನೀವೇ ಅದನ್ನು ಉದ್ಘಾಟಿಸುತ್ತಿದ್ದೀರಿ. ದೀಪವನ್ನು ಬೆಳಗುವ ಮೂಲಕ, ಇಲ್ಲಿ ಹಾಜರಿರುವ ಪ್ರತಿಯೊಬ್ಬರೂ ಇಂದು ಈ ವಿಮಾನ ನಿಲ್ದಾಣವನ್ನು ಉದ್ಘಾಟಿಸುತ್ತಿದ್ದಾರೆ. ಇದು ನಿಮ್ಮ ಆಸ್ತಿ, ಇದು ನಿಮ್ಮ ಭವಿಷ್ಯ, ಇದು ನಿಮ್ಮ ಕಠಿಣ ಪರಿಶ್ರಮ. ಆದ್ದರಿಂದ ಇದರ ಉದ್ಘಾಟನೆಯನ್ನು ನಿಮ್ಮ ಕೈಗಳಿಂದಲೇ ಮಾಡಲಾಗುತ್ತಿದೆ. ಭಾರತ ಮಾತೆಗೆ ಜಯವಾಗಲಿ ಎಂದು ಹೇಳುವ ಮೂಲಕ, ನಿಮ್ಮ ಕೈಗಳನ್ನು ಮೇಲಕ್ಕೆತ್ತಿ, ದೀಪವನ್ನು ಸಂಪೂರ್ಣ ತೋರಿಸಿ. ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ಭಾರತ ಮಾತೆಗೆ ಜಯವಾಗಲಿ! ತುಂಬು ಧನ್ಯವಾದಗಳು. ಈಗ ಉದ್ಘಾಟನೆ ಪೂರ್ಣವಾಗಿದೆ.ಸುಮಾರು ₹11,200 ಕೋಟಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲಾದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ I ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 28th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜೇವರ್ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಮ್ಮ ಹೆಮ್ಮೆ ಮತ್ತು ಸಂತೋಷವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ , ಇಂದು ವಿಕ್ಷಿತ್ ಯುಪಿ, ವಿಕಸಿತ ಭಾರತ ಅಭಿಯಾನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ ಎಂದು ಹೇಳಿದರು. ಭಾರತದ ಅತಿದೊಡ್ಡ ರಾಜ್ಯವು ಈಗ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂಬುದರತ್ತ ಅವರು ಗಮನ ಸೆಳೆದರು. ಮೊದಲನೆಯದಾಗಿ, ಈ ವಿಮಾನ ನಿಲ್ದಾಣದ ಅಡಿಪಾಯವನ್ನು ಹಾಕಿದ್ದಕ್ಕಾಗಿ ಮತ್ತು ಈಗ ಅದನ್ನು ಉದ್ಘಾಟಿಸಿದ್ದಕ್ಕಾಗಿ ಹಾಗು ಎರಡನೆಯದಾಗಿ, ಈ ಭವ್ಯ ವಿಮಾನ ನಿಲ್ದಾಣದ ಹೆಸರು ಉತ್ತರ ಪ್ರದೇಶದೊಂದಿಗೆ ಸಂಬಂಧ ಹೊಂದಿರುವುದರಿಂದಾಗಿ ತಮಗೆ ಎರಡು ಪಟ್ಟು ಹೆಮ್ಮೆಯಾಗಿದೆ ಎಂದು ಪ್ರಧಾನಮಂತ್ರಿ ಮೋದಿ ಸಂತಸ ಹಂಚಿಕೊಂಡರು. ನನ್ನನ್ನು ತನ್ನ ಪ್ರತಿನಿಧಿಯಾಗಿ ಆಯ್ಕೆ ಮಾಡಿ ಸಂಸತ್ ಸದಸ್ಯನನ್ನಾಗಿ ಮಾಡಿದ ರಾಜ್ಯ ಇದು, ಮತ್ತು ಅದರ ಗುರುತು ಈಗ ಈ ಭವ್ಯ ವಿಮಾನ ನಿಲ್ದಾಣದೊಂದಿಗೆ ಸಂಬಂಧ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು.ಅಸ್ಸಾಂನ ಸಿಲ್ಚಾರ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 14th, 11:10 am
ಸಂಸ್ಕೃತಿ, ಧೈರ್ಯ ಮತ್ತು ಚೈತನ್ಯದಿಂದ ತುಂಬಿರುವ ಬರಾಕ್ ಕಣಿವೆಯ ಕುಟುಂಬಗಳನ್ನು ನೋಡಲು ಇಲ್ಲಿಗೆ ಬರುವುದು ನನಗೆ ಯಾವಾಗಲೂ ವಿಶೇಷ ಅನುಭವ ತರುತ್ತದೆ. ಸಿಲ್ಚಾರ್ ಅನ್ನು ಬರಾಕ್ ಕಣಿವೆಯ ಪ್ರವೇಶದ್ವಾರ ಎಂದು ಕರೆಯಲಾಗುತ್ತದೆ. ಇತಿಹಾಸ, ಭಾಷೆ, ಸಂಸ್ಕೃತಿ ಮತ್ತು ಉದ್ಯಮಗಳು ಒಟ್ಟಾಗಿ ಒಂದು ವಿಶಿಷ್ಟ ಗುರುತು ಸೃಷ್ಟಿಸಿದ ಸ್ಥಳ ಇದು. ಇಲ್ಲಿ ಬಂಗಾಳಿ ಮಾತನಾಡುತ್ತಾರೆ, ಅಸ್ಸಾಮಿಯ ಅನುರಣನ ಕೇಳುತ್ತದೆ ಮತ್ತು ಇತರೆ ಬುಡಕಟ್ಟು ಸಂಪ್ರದಾಯಗಳು ಸಹ ಪ್ರವರ್ಧಮಾನಕ್ಕೆ ಬರುತ್ತವೆ. ಈ ವೈವಿಧ್ಯತೆಯನ್ನು ಶಕ್ತಿಯಾಗಿ ಪರಿವರ್ತಿಸುವ ಮೂಲಕ, ನೀವೆಲ್ಲರೂ ಈ ಇಡೀ ಪ್ರದೇಶವನ್ನು ಸಹೋದರತ್ವ ಮತ್ತು ಸಾಮರಸ್ಯದಿಂದ ಅಭಿವೃದ್ಧಿಪಡಿಸುತ್ತಿದ್ದೀರಿ. ಇದು ಬರಾಕ್ ಕಣಿವೆಯ ದೊಡ್ಡ ಸಾಮರ್ಥ್ಯವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಿಲ್ಚಾರ್ ನಲ್ಲಿ 23,550 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 14th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಸಿಲ್ಚಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ತನ್ನ ಸಂಸ್ಕೃತಿ ಮತ್ತು ಚೈತನ್ಯದಿಂದ ವ್ಯಾಖ್ಯಾನಿಸಲ್ಪಟ್ಟ ಭೂಮಿಯಾದ ಬರಾಕ್ ಕಣಿವೆಗೆ ಭೇಟಿ ನೀಡುವುದು ಸದಾ ತಮಗೆ ಆಳವಾದ ವಿಶೇಷ ಅನುಭವವನ್ನು ತರುತ್ತದೆ ಎಂದು ಹೇಳಿದರು. ಇತಿಹಾಸ ಮತ್ತು ಭಾಷೆ ವಿಲೀನಗೊಂಡು ವಿಶಿಷ್ಟ ಪ್ರಾದೇಶಿಕ ಗುರುತನ್ನು ಸೃಷ್ಟಿಸಲು ಸಿಲ್ಚಾರ್ ಈ ಕಣಿವೆಯ ಹೆಬ್ಬಾಗಿಲಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಬಂಗಾಳಿ, ಅಸ್ಸಾಮಿ ಮತ್ತು ಬುಡಕಟ್ಟು ಸಂಪ್ರದಾಯಗಳು ಸಾಮರಸ್ಯದಿಂದ ಜೊತೆಗೆ ಬೆಳೆಯುವ ವೈವಿಧ್ಯತೆಯಲ್ಲಿ ಈ ಪ್ರದೇಶದ ಶಕ್ತಿ ಅಡಗಿದೆ ಎಂದು ಶ್ರೀ ಮೋದಿ ಹೇಳಿದರು. ಬರಾಕ್ ಕಣಿವೆಯ ವೈವಿಧ್ಯತೆಯು ಅದರ ದೊಡ್ಡ ಆಸ್ತಿಯಾಗಿದ್ದು, ಅದರ ನಾಗರಿಕರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ಅಸ್ಸಾಂನ ಗುವಾಹಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 13th, 05:30 pm
ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಜನಪ್ರತಿನಿಧಿಗಳೆ, ದೇಶಾದ್ಯಂತ ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ನಮ್ಮ ಎಲ್ಲಾ ರೈತ ಮಿತ್ರರೆ, ಚಹಾ ತೋಟಗಳಲ್ಲಿ ಕೆಲಸ ಮಾಡುವ ನನ್ನ ಸಹೋದರ ಸಹೋದರಿಯರೆ ಮತ್ತು ನಮ್ಮ ಅನೇಕ ಹಿರಿಯ ಮುಖ್ಯಮಂತ್ರಿಗಳು ಇಂದು ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಯಿಂದ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಎಲ್ಲರಿಗೂ ನನ್ನ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು; ದೇಶಾದ್ಯಂತದ ಕೋಟ್ಯಂತರ ರೈತರಿಗೆ ₹18,000 ಕೋಟಿಗೂ ಹೆಚ್ಚಿನ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು
March 13th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಸುಮಾರು ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ನಡೆದ ಭವ್ಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಗರದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ದೇಶಾದ್ಯಂತದಿಂದ ಕಾರ್ಯಕ್ರಮದಲ್ಲಿ ಸೇರಿದ್ದ ರೈತರು ಹಾಗೂ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಸಹೋದರ, ಸಹೋದರಿಯರನ್ನು ಅವರು ಸ್ವಾಗತಿಸಿದರು. ನವರಾತ್ರಿಯ ಮುನ್ನಾದಿನದಂದು ಮಾ ಕಾಮಾಖ್ಯ ಅವರ ಪವಿತ್ರ ಭೂಮಿಯಲ್ಲಿ ಇರುವ ಸೌಭಾಗ್ಯಕ್ಕಾಗಿ ಪ್ರಧಾನಮಂತ್ರಿಯವರು ಕೃತಜ್ಞತೆ ಸಲ್ಲಿಸಿದರು. ನವರಾತ್ರಿ ಪ್ರಾರಂಭವಾಗುವ ಸ್ವಲ್ಪ ಮೊದಲು ಮಾ ಕಾಮಾಖ್ಯ ಅವರ ಈ ಪವಿತ್ರ ಭೂಮಿಯಲ್ಲಿ ನಿಮ್ಮ ದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ ಎಂದು ಶ್ರೀ ಮೋದಿ ಅವರು ಹೇಳಿದರು.ಎನ್ಎಕ್ಸ್ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 12th, 10:47 pm
ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.ಎನ್ಎಕ್ಸ್ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 12th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್ವರ್ಕ್ನ ಎನ್ಎಕ್ಸ್ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.LDF and UDF have deprived Keralam of its youth power: PM Modi in Ernakulam
March 11th, 03:00 pm
Amid a massive gathering in Ernakulam today, Prime Minister Narendra Modi said the enthusiasm and confidence of the people reflected a strong aspiration for Keralam’s development and a new political direction in the state. He emphasised that the aspirations of the people clearly indicate a desire for faster growth and new opportunities.PM Modi addresses a mega public meeting in Ernakulam, Keralam
March 11th, 02:20 pm
Amid a massive gathering in Ernakulam today, Prime Minister Narendra Modi said the enthusiasm and confidence of the people reflected a strong aspiration for Keralam’s development and a new political direction in the state. He emphasised that the aspirations of the people clearly indicate a desire for faster growth and new opportunities.LDF and UDF have pushed Kerala into corruption, misgovernance and appeasement politics: PM Modi in Thiruvananthapuram
January 23rd, 11:47 am
Prime Minister Narendra Modi today addressed a massive public rally in Thiruvananthapuram, Kerala, where he expressed gratitude for the warm reception and overwhelming public enthusiasm. He said that every visit to Kerala fills him with affection and energy and noted that the atmosphere in Thiruvananthapuram reflected a renewed sense of hope and confidence for change in the state.Huge crowd turns up as PM Modi addresses rally in Thiruvananthapuram, Kerala
January 23rd, 11:43 am
Prime Minister Narendra Modi today addressed a massive public rally in Thiruvananthapuram, Kerala, where he expressed gratitude for the warm reception and overwhelming public enthusiasm. He said that every visit to Kerala fills him with affection and energy and noted that the atmosphere in Thiruvananthapuram reflected a renewed sense of hope and confidence for change in the state.ಅಸ್ಸಾಂನಲ್ಲಿ ಕಾಜಿರಂಗಾ ಎಲಿವೇಟೆಡ್ ಕಾರಿಡಾರ್ ಯೋಜನೆಯ ಭೂಮಿ ಪೂಜೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 18th, 11:30 am
ಇಂದು, ನನಗೆ ಮತ್ತೆ ಕಾಜಿರಂಗಕ್ಕೆ ಬರುವ ಸೌಭಾಗ್ಯ ಸಿಕ್ಕಿದೆ. ನನ್ನ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುವುದು ಸ್ವಾಭಾವಿಕವಾಗಿದೆ. ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ನನ್ನ ಜೀವನದ ವಿಶೇಷ ಅನುಭವಗಳಲ್ಲಿ ಒಂದಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ತಂಗುವ ಅವಕಾಶ ನನಗೆ ಸಿಕ್ಕಿತು ಮತ್ತು ಮರುದಿನ ಬೆಳಿಗ್ಗೆ ಆನೆ ಸಫಾರಿ ಸಮಯದಲ್ಲಿ, ನಾನು ಈ ಪ್ರದೇಶದ ಸೌಂದರ್ಯವನ್ನು ಬಹಳ ಹತ್ತಿರದಿಂದ ಅನುಭವಿಸಿದೆ.ಅಸ್ಸಾಂನ ಕಲಿಯಾಬೋರ್ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಭೂಮಿ ಪೂಜೆ
January 18th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಕಲಿಯಾಬೋರ್ ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ (NH-715 ರ ಕಲಿಯಾಬೋರ್-ನುಮಾಲಿಗಢ ವಿಭಾಗದ 4-ಲೇನ್ ರಸ್ತೆ) ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಂದು ತಮ್ಮನ್ನು ಆಶೀರ್ವದಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಕಾಜಿರಂಗಕ್ಕೆ ಮತ್ತೊಮ್ಮೆ ಭೇಟಿ ನೀಡಿದ್ದರಿಂದ ತಮ್ಮ ಹಳೆಯ ನೆನಪುಗಳು ಮರುಕಳಿಸಿವೆ ಎಂದು ಸ್ಮರಿಸಿದ ಅವರು, ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ತಮ್ಮ ಜೀವನದ ಅತ್ಯಂತ ವಿಶೇಷ ಅನುಭವಗಳಲ್ಲಿ ಒಂದಾಗಿವೆ ಎಂದು ಹೇಳಿದರು. ಪ್ರಧಾನಮಂತ್ರಿ ಶ್ರೀ ಮೋದಿಯವರು ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಕಳೆಯುವ ಅವಕಾಶ ಸಿಕ್ಕಿದ್ದನ್ನು ಮತ್ತು ಮರುದಿನ ಬೆಳಿಗ್ಗೆ ಆನೆ ಸವಾರಿಯ ಮೂಲಕ ಈ ಪ್ರದೇಶದ ಸೌಂದರ್ಯವನ್ನು ಹತ್ತಿರದಿಂದ ಅನುಭವಿಸಿದ್ದನ್ನು ವಿಶೇಷವಾಗಿ ಉಲ್ಲೇಖಿಸಿದರುಪಶ್ಚಿಮ ಬಂಗಾಳದ ಮಾಲ್ಡಾದಿಂದ ಬಹು ರೈಲು ಮತ್ತು ರಸ್ತೆ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 17th, 02:00 pm
ಇಂದು, ಮಾಲ್ಡಾದಿಂದ ಪಶ್ಚಿಮ ಬಂಗಾಳದ ಪ್ರಗತಿಯನ್ನು ವೇಗಗೊಳಿಸುವ ಅಭಿಯಾನವು ಇನ್ನೂ ಹೆಚ್ಚಿನ ವೇಗವನ್ನು ಪಡೆದುಕೊಂಡಿದೆ. ಸ್ವಲ್ಪ ಸಮಯದ ಹಿಂದೆ, ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಉದ್ಘಾಟಿಸಲಾಯಿತು ಅಥವಾ ಅವುಗಳಿಗೆ ಶಂಕುಸ್ಥಾಪನೆ ಮಾಡಲಾಯಿತು. ಪಶ್ಚಿಮ ಬಂಗಾಳಕ್ಕೆ ಹೊಸ ರೈಲು ಸೇವೆಗಳನ್ನು ಉಡುಗೊರೆಯಾಗಿ ನೀಡಲಾಗಿದೆ. ಈ ಯೋಜನೆಗಳು ಇಲ್ಲಿನ ಜನರಿಗೆ ಪ್ರಯಾಣವನ್ನು ಸುಲಭಗೊಳಿಸುತ್ತವೆ ಮತ್ತು ವ್ಯಾಪಾರ ಮತ್ತು ವ್ಯವಹಾರವನ್ನು ಸರಳಗೊಳಿಸುತ್ತವೆ. ರೈಲು ನಿರ್ವಹಣೆಗಾಗಿ ಇಲ್ಲಿ ರಚಿಸಲಾದ ಸೌಲಭ್ಯಗಳು ಬಂಗಾಳದ ಯುವಕರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮಾಲ್ದಾದಲ್ಲಿ ₹3,250 ಕೋಟಿಗೂ ಅಧಿಕ ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
January 17th, 01:45 pm
ಪಶ್ಚಿಮ ಬಂಗಾಳ ಮತ್ತು ಈಶಾನ್ಯ ವಲಯದಲ್ಲಿ ಸಂಪರ್ಕವನ್ನು ಬಲಪಡಿಸುವ ಮತ್ತು ಅಭಿವೃದ್ಧಿಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ₹3,250 ಕೋಟಿ ಮೌಲ್ಯದ ವಿವಿಧ ರೈಲ್ವೆ ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮಾಲ್ದಾದಲ್ಲಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಇಂದು ಮಾಲ್ದಾದಿಂದ ಪಶ್ಚಿಮ ಬಂಗಾಳದ ಪ್ರಗತಿಯನ್ನು ವೇಗಗೊಳಿಸುವ ಅಭಿಯಾನವು ಮತ್ತಷ್ಟು ವೇಗವನ್ನು ಪಡೆದುಕೊಂಡಿದೆ ಎಂದು ತಿಳಿಸಿದರು. ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಇದೀಗ ಉದ್ಘಾಟಿಸಲಾಗಿದೆ ಮತ್ತು ದೇಶಕ್ಕೆ ಸಮರ್ಪಿಸಲಾಗಿದೆ ಎಂದು ಅವರು ಹೇಳಿದರು. ಪಶ್ಚಿಮ ಬಂಗಾಳಕ್ಕೆ ಹೊಸ ರೈಲು ಸೇವೆಗಳನ್ನು ಪರಿಚಯಿಸಲಾಗಿದೆ ಎಂದು ಹೇಳಿದ ಪ್ರಧಾನಿಯವರು, ಈ ಯೋಜನೆಗಳು ಜನರ ಪ್ರಯಾಣವನ್ನು ಸುಲಭಗೊಳಿಸುವುದಲ್ಲದೆ ವ್ಯಾಪಾರ ಮತ್ತು ವಾಣಿಜ್ಯಕ್ಕೂ ಅನುಕೂಲ ಮಾಡಿಕೊಡುತ್ತವೆ ಎಂದು ತಿಳಿಸಿದರು. ಇಲ್ಲಿ ಸ್ಥಾಪಿಸಲಾದ ಹೊಸ ರೈಲು ನಿರ್ವಹಣಾ ಸೌಲಭ್ಯಗಳು ಬಂಗಾಳದ ಯುವಕರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತವೆ ಎಂದು ಅವರು ಉಲ್ಲೇಖಿಸಿದರು.ಆಂಧ್ರಪ್ರದೇಶದ ಕರ್ನೂಲ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 16th, 03:00 pm
ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್ ನಲ್ಲಿ 13,430 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದರು
October 16th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಸುಮಾರು ₹13,430 ಕೋಟಿ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾಪರ್ಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಹೋಬಿಲಂನ ಭಗವಾನ್ ನರಸಿಂಹ ಸ್ವಾಮಿ ಮತ್ತು ಮಹಾನಂದಿಯ ಶ್ರೀ ಮಹಾನಂದೀಶ್ವರ ಸ್ವಾಮಿಗೆ ನಮನ ಸಲ್ಲಿಸಿದರು. ಎಲ್ಲರ ಯೋಗಕ್ಷೇಮಕ್ಕಾಗಿ ಅವರು ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಕೋರಿದರು.ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 22nd, 05:15 pm
ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ.ವಿ. ಆನಂದ್ ಬೋಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಶಾಂತನು ಠಾಕೂರ್ ಜಿ, ರವನೀತ್ ಸಿಂಗ್ ಜಿ, ಸುಕಾಂತ ಮಜುಂದಾರ್ ಜಿ, ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಶುವೇಂದು ಅಧಿಕಾರಿ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಶೋಮಿಕ್ ಭಟ್ಟಾಚಾರ್ಯ ಜಿ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ,ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಂಕುಸ್ಥಾಪನೆ ಮತ್ತು ಉದ್ಘಾಟನೆ
August 22nd, 05:00 pm
ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹5,200 ಕೋಟಿಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಮತ್ತೊಮ್ಮೆ ವೇಗ ನೀಡುವ ಅವಕಾಶ ದೊರೆತಿದೆ ಎಂದು ಹೇಳಿದರು. ನೋವಾಪಾರಾದಿಂದ ಜೈ ಹಿಂದ್ ವಿಮಾನ ನಿಲ್ದಾಣದವರೆಗಿನ ಕೋಲ್ಕತ್ತಾ ಮೆಟ್ರೋ ಪ್ರಯಾಣದ ತಮ್ಮ ಅನುಭವವನ್ನು ಹಂಚಿಕೊಂಡ ಶ್ರೀ ಮೋದಿ ಅವರು, ಈ ಭೇಟಿಯ ಸಮಯದಲ್ಲಿ ಅನೇಕ ಜನರೊಂದಿಗೆ ಸಂವಾದ ನಡೆಸಿದ್ದಾಗಿ ಮತ್ತು ಕೋಲ್ಕತ್ತಾದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಆಧುನೀಕರಣದ ಬಗ್ಗೆ ಪ್ರತಿಯೊಬ್ಬರೂ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಪ್ರಧಾನಮಂತ್ರಿ ಅವರು ಆರು-ಪಥಗಳ ಕಮರಿ ಕೋನಾ ಎಕ್ಸ್ಪ್ರೆಸ್ವೇಗೆ ಶಂಕುಸ್ಥಾಪನೆಯನ್ನು ಸಹ ನೆರವೇರಿಸಿದರು. ಈ ಬಹು-ಸಾವಿರ ಕೋಟಿ ರೂಪಾಯಿಗಳ ಯೋಜನೆಗಳಿಗಾಗಿ ಅವರು ಕೋಲ್ಕತ್ತಾದ ಜನರಿಗೆ ಮತ್ತು ಪಶ್ಚಿಮ ಬಂಗಾಳದ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.