ಮುಂಬೈಯ ವೇವ್ಸ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಇಂಗ್ಲೀಷ್ ಅವತರಣಿಕೆ

May 01st, 03:35 pm

ಇಂದು ಮಹಾರಾಷ್ಟ್ರದ ಸಂಸ್ಥಾಪನಾ ದಿನ. ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಗೌರವ ನಮನ ಮತ್ತು ಮಹಾರಾಷ್ಟ್ರ ದಿನದಂದು ಈ ನೆಲದ ಎಲ್ಲಾ ಸಹೋದರ ಸಹೋದರಿಯರಿಗೆ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೇವ್ಸ್ 2025 ಅನ್ನು ಉದ್ಘಾಟಿಸಿದರು

May 01st, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ಭಾರತದ ಮೊದಲ ಜಾಗತಿಕ ಶ್ರವಣ-ದೃಶ್ಯ ಮತ್ತು ಮನರಂಜನಾ ಶೃಂಗಸಭೆ-ವೇವ್ಸ್ 2025 ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಆಚರಿಸಲಾಗುತ್ತಿರುವ ಮಹಾರಾಷ್ಟ್ರ ದಿನ ಮತ್ತು ಗುಜರಾತ್ ರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು. ಎಲ್ಲಾ ಅಂತರರಾಷ್ಟ್ರೀಯ ಗಣ್ಯರು, ರಾಯಭಾರಿಗಳು ಮತ್ತು ಸೃಜನಶೀಲ ಉದ್ಯಮದ ನಾಯಕರ ಉಪಸ್ಥಿತಿಯನ್ನು ಶ್ಲಾಘಿಸಿದ ಪ್ರಧಾನಿ, 100 ಕ್ಕೂ ಹೆಚ್ಚು ದೇಶಗಳ ಕಲಾವಿದರು, ನಾವೀನ್ಯಕಾರರು, ಹೂಡಿಕೆದಾರರು ಮತ್ತು ನೀತಿ ನಿರೂಪಕರು ಒಟ್ಟಾಗಿ ಪ್ರತಿಭೆ ಮತ್ತು ಸೃಜನಶೀಲತೆಯ ಜಾಗತಿಕ ಪೂರಕ ವ್ಯವಸ್ಥೆಗೆ ಅಡಿಪಾಯ ಹಾಕಿದ್ದಾರೆ ಎಂದು ಒತ್ತಿ ಹೇಳಿದರು. ವೇವ್ಸ್ ಕೇವಲ ಒಂದು ಸಂಕ್ಷಿಪ್ತ ರೂಪವಲ್ಲ, ಸಂಸ್ಕೃತಿ, ಸೃಜನಶೀಲತೆ ಮತ್ತು ಜಾಗತಿಕ ಸಂಪರ್ಕವನ್ನು ಪ್ರತಿನಿಧಿಸುವ ಅಲೆಯಾಗಿದೆ ಎಂದು ಅವರು ಹೇಳಿದರು, ಶೃಂಗಸಭೆಯು ಚಲನಚಿತ್ರಗಳು, ಸಂಗೀತ, ಗೇಮಿಂಗ್, ಅನಿಮೇಷನ್ ಮತ್ತು ಕಥೆ ಹೇಳುವಿಕೆಯ ವಿಸ್ತಾರವಾದ ಜಗತ್ತನ್ನು ಪ್ರದರ್ಶಿಸುತ್ತದೆ, ಕಲಾವಿದರು ಮತ್ತು ಕಂಟೆಂಟ್ ಸೃಷ್ಟಿಕರ್ತರು ಸಂಪರ್ಕ ಸಾಧಿಸಲು ಮತ್ತು ಸಹಕರಿಸಲು ಜಾಗತಿಕ ವೇದಿಕೆಯನ್ನು ಒದಗಿಸುತ್ತದೆ ಎಂದು ಅವರು ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ ಭಾಗವಹಿಸಿದ ಎಲ್ಲರನ್ನು ಪ್ರಧಾನಿ ಅಭಿನಂದಿಸಿದರು ಮತ್ತು ಭಾರತ ಮತ್ತು ವಿದೇಶಗಳಿಂದ ಬಂದ ಗಣ್ಯ ಅತಿಥಿಗಳಿಗೆ ಆತ್ಮೀಯ ಸ್ವಾಗತವನ್ನು ಕೋರಿದರು.

ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

December 29th, 11:30 am

ಮನ್ ಕಿ ಬಾತ್‌ನ ಈ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನದ 75 ನೇ ವಾರ್ಷಿಕೋತ್ಸವ ಮತ್ತು ಪ್ರಯಾಗರಾಜ್‌ನಲ್ಲಿ ಮಹಾಕುಂಭದ ಸಿದ್ಧತೆ ಸೇರಿದಂತೆ ಭಾರತದ ಸಾಧನೆಗಳನ್ನು ಪ್ರತಿಬಿಂಬಿಸಿದರು. ಅವರು ಬಸ್ತಾರ್ ಒಲಿಂಪಿಕ್ಸ್‌ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಮಲೇರಿಯಾ ನಿರ್ಮೂಲನೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಪ್ರಗತಿಯಂತಹ ಮಹತ್ವದ ಆರೋಗ್ಯ ಪ್ರಗತಿಗಳನ್ನು ಎತ್ತಿ ತೋರಿಸಿದರು. ಹೆಚ್ಚುವರಿಯಾಗಿ, ಅವರು ಒಡಿಶಾದ ಕಲಹಂಡಿಯಲ್ಲಿನ ಕೃಷಿ ರೂಪಾಂತರವನ್ನು ಶ್ಲಾಘಿಸಿದರು.

ಮಹಾನ್ ದಿಗ್ಗಜ ರಾಜ್ ಕಪೂರ್ ಅವರ 100ನೇ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿಯವರು ಅವರಿಗೆ ಗೌರವ ನಮನ ಸಲ್ಲಿಸಿದರು

December 14th, 11:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಲನಚಿತ್ರ ಲೋಕದ ಮಹಾನ್ ದಿಗ್ಗಜ ಶ್ರೀ ರಾಜ್ ಕಪೂರ್ ಅವರ 100 ನೇ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಅವರನ್ನು ದೂರದೃಷ್ಟಿಯ ಚಲನಚಿತ್ರ ನಿರ್ಮಾಪಕ, ನಟ ಮತ್ತು ಚಿರ ನಿರಂತರ ಶೋಮ್ಯಾನ್ ಎಂದು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು. ಶ್ರೀ ರಾಜ್ ಕಪೂರ್ ಅವರು ಕೇವಲ ಚಲನಚಿತ್ರ ನಿರ್ಮಾಪಕರಲ್ಲ ಬದಲಾಗಿ ಭಾರತೀಯ ಸಿನಿಮಾವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ದ ಸಾಂಸ್ಕೃತಿಕ ರಾಯಭಾರಿಯಾಗಿದ್ದಾರು, ಚಲನಚಿತ್ರ ನಿರ್ಮಾಪಕರು ಮತ್ತು ನಟರ ಹಲವು ತಲೆಮಾರುಗಳು ಅವರಿಂದ ಬಹಳಷ್ಟು ಕಲಿಯಬಹುದಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದರು.

ಚಿತ್ರರಂಗದ ದಂತಕಥೆ ರಾಜ್ ಕಪೂರ್ ಅವರ 100 ವರ್ಷಗಳ ವೃತ್ತಿ-ಬದುಕು ಕುರಿತು ಕಪೂರ್ ಕುಟುಂಬದ ಜತೆ ಪ್ರಧಾನಮಂತ್ರಿ ಸಂಭಾಷಣೆ

December 11th, 09:00 pm

ಕಳೆದ ವಾರದಿಂದ, ನಮ್ಮ ವಾಟ್ಸ್ಆಪ್ ಫ್ಯಾಮಿಲಿ ಗ್ರೂಪ್, ನಿಮ್ಮನ್ನು ಹೇಗೆ ಸಂಬೋಧಿಸಬೇಕೆಂದು ಸಕ್ರಿಯವಾಗಿ ಚರ್ಚಿಸುತ್ತಿದೆ - ಪ್ರಧಾನಿ ಜೀ ಅಥವಾ ಪ್ರಧಾನ ಮಂತ್ರಿ ಜೀ! ರೀಮಾ ಬುವಾ(ರಾಜ್ ಕಪೂರ್ ಪುತ್ರಿ) ಪ್ರತಿದಿನ ನನಗೆ ಕರೆ ಮಾಡುತ್ತಾರೆ, ಏನು ಹೇಳಬೇಕು ಮತ್ತು ಹೇಗೆ ಮಾತನಾಡಿಸಬೇಕು ಎಂದು ಕೇಳುತ್ತಿದ್ದರು..

ದಂತಕಥೆ ರಾಜ್ ಕಪೂರ್ ಅವರ ಶತಮಾನೋತ್ಸವದ ಹಿನ್ನೆಲೆಯಲ್ಲಿ ಕಪೂರ್ ಕುಟುಂಬದೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 11th, 08:47 pm

ನಾವು ದಂತಕಥೆ ರಾಜ್ ಕಪೂರ್ ಅವರ 100ನೇ ವರ್ಷವನ್ನು ಆಚರಿಸುತ್ತಿರುವಾಗ, ಕಪೂರ್ ಕುಟುಂಬವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರೊಂದಿಗೆ ಹೃದಯಸ್ಪರ್ಶಿ ಸಂವಾದವನ್ನು ನಡೆಸಿತು. ಈ ವಿಶೇಷ ಸಭೆಯು ಭಾರತೀಯ ಚಿತ್ರರಂಗಕ್ಕೆ ರಾಜ್ ಕಪೂರ್ ಅವರ ಅಪ್ರತಿಮ ಕೊಡುಗೆ ಮತ್ತು ಅವರ ಶಾಶ್ವತ ಪರಂಪರೆಯನ್ನು ಗೌರವಿಸಿತು. ಪ್ರಧಾನಮಂತ್ರಿಯವರು ಕಪೂರ್ ಕುಟುಂಬದೊಂದಿಗೆ ಮುಕ್ತವಾಗಿ ಮಾತುಕತೆ ನಡೆಸಿದರು.