ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 19 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿ-ಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟ ಅನುಮೋದನೆ; ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲಕ್ಕೆ ಸುಮಾರು 901 ಕಿ.ಮೀ ಸೇರ್ಪಡೆ

May 05th, 07:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ರೈಲ್ವೆ ಸಚಿವಾಲಯದ ಸುಮಾರು 23,437 ಕೋಟಿ ರೂ.ಗಳ ಒಟ್ಟು ವೆಚ್ಚದ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಈ ಕೆಳಗಿನವುಗಳನ್ನು ಒಳಗೊಂಡಿವೆ:

ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ

April 26th, 11:30 am

ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.

ಜೈಪುರ ಮೆಟ್ರೋ ಯೋಜನೆ ಹಂತ-2ಕ್ಕೆ ಸಂಪುಟದ ಅನುಮೋದನೆ

April 08th, 04:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಜೈಪುರ ಮೆಟ್ರೋ ಹಂತ -2 ಕ್ಕೆ ಅನುಮೋದನೆ ನೀಡಿದೆ. ಇದು ಪ್ರಹ್ಲಾದಪುರದಿಂದ ತೋಡಿ ಮೋಡ್‌ವರೆಗಿನ 41 ಕಿ.ಮೀ ಉದ್ದದ ಪರಿವರ್ತಕ ಉತ್ತರ-ದಕ್ಷಿಣ ಕಾರಿಡಾರ್‌ ಆಗಿದ್ದು, 36 ನಿಲ್ದಾಣಗಳನ್ನು ಒಳಗೊಂಡಿದ್ದು, ಒಟ್ಟು ಯೋಜನಾ ವೆಚ್ಚ 13,037.66 ಕೋಟಿ ರೂ. ಈ ಯೋಜನೆಯನ್ನು ಭಾರತ ಸರ್ಕಾರ ಮತ್ತು ರಾಜಸ್ಥಾನ ಸರ್ಕಾರದ 50:50 ಜಂಟಿ ಉದ್ಯಮವಾದ ರಾಜಸ್ಥಾನ ಮೆಟ್ರೋ ರೈಲು ನಿಗಮ ನಿಯಮಿತ (ಆರ್‌ಎಂಆರ್‌ಸಿಎಲ್‌) ಅನುಷ್ಠಾನಗೊಳಿಸಲಿದೆ.

Cabinet approves revision in cost and investment in equity for HPCL Rajasthan Refinery Limited (HRRL), Pachpadra, District - Balotra, Rajasthan

April 08th, 04:21 pm

The Cabinet Committee on Economic Affairs, chaired by PM Modi has approved the revision of HPCL Rajasthan Refinery Limited project cost from Rs.43,129 Crore to Rs.79,459 Crore and additional equity investment of Rs.8,962 Crore by Hindustan Petroleum Corporation Limited (HPCL). The project will lead to energy independence and reduce import dependence of petrochemical sector.

ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ

March 29th, 11:30 am

ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ರಾಜಸ್ಥಾನದ ಮುಖ್ಯಮಂತ್ರಿ

March 25th, 12:52 pm

ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್‌ಲಾಲ್ ಶರ್ಮಾ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಕೋಟಾ ವಿಮಾನ ನಿಲ್ದಾಣ ನಿರ್ಮಾಣದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ​​​​​​​ ವೀಡಿಯೊ ಕಾನ್ಫರೆನ್ಸ್ ಭಾಷಣ

March 07th, 03:15 pm

ಕಳೆದ ವಾರವಷ್ಟೇ ನನಗೆ ರಾಜಸ್ಥಾನಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿತು. ಪವಿತ್ರ ಭೂಮಿ ಅಜ್ಮೀರ್‌ನಿಂದ, ಸಾವಿರಾರು ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದ್ದೇವೆ. ಅದೇ ಕಾರ್ಯಕ್ರಮದಲ್ಲಿ, ರಾಜಸ್ಥಾನದ 21,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಯಿತು. ಅಜ್ಮೀರ್ ಭೇಟಿಯ ಕೆಲವೇ ದಿನಗಳ ನಂತರ, ಇಂದು ಕೋಟಾಗೆ ಸಂಪರ್ಕ ಹೊಂದಿದ ಈ ಪ್ರಮುಖ ವಿಮಾನ ನಿಲ್ದಾಣ ಯೋಜನೆಯನ್ನು ಪ್ರಾರಂಭಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಒಂದೇ ವಾರದೊಳಗೆ, ರಾಜಸ್ಥಾನದಲ್ಲಿನ ಈ 2 ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಬಲ ಸಂದೇಶವನ್ನು ರವಾನಿಸುತ್ತವೆ. ರಾಜಸ್ಥಾನ ಇಂದು ಎಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂಬುದನ್ನು ಅವು ತೋರಿಸುತ್ತವೆ. ಅದು ಮೂಲಸೌಕರ್ಯವಾಗಿರಲಿ, ಯುವಕರಿಗೆ ಉದ್ಯೋಗಾವಕಾಶಗಳಾಗಲಿ, ರೈತರು ಮತ್ತು ಮಹಿಳೆಯರ ಯೋಜನೆಗಳಾಗಲಿ ಅಥವಾ ಪ್ರತಿಯೊಂದು ವಲಯದ ಉಪಕ್ರಮಗಳು ರಾಜಸ್ಥಾನದಾದ್ಯಂತ ಹೆಚ್ಚಿನ ವೇಗದಲ್ಲಿ ನಡೆಯುತ್ತಿವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕೋಟಾ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ; ಪ್ರದೇಶದ ಪರಿವರ್ತನೆಗೆ ಒತ್ತು

March 07th, 02:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕೋಟಾ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನೆರವೇರಿಸಿದರು. ಇದು ಹಾಡೋತಿ ಪ್ರಾಂತ್ಯದ ಪಾಲಿಗೆ ಒಂದು ಮಹತ್ವದ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನವು ಅಭೂತಪೂರ್ವ ವೇಗದಲ್ಲಿ ಪ್ರಗತಿ ಹೊಂದುತ್ತಿದೆ. ಈ ಹೊಸ ವಿಮಾನ ನಿಲ್ದಾಣವು ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ವೇಗವರ್ಧಕವಾಗಲಿದೆ, ಎಂದು ಒತ್ತಿಹೇಳಿದರು.

ಭಾರತ-ಕೆನಡಾ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

March 02nd, 02:30 pm

ಭಾರತ - ಕೆನಡಾ ಸಿಇಒ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಸೇರಲು ನನಗೆ ಸಂತೋಷವಾಗುತ್ತಿದೆ. ತಮ್ಮ ಸಕಾರಾತ್ಮಕ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನೆ ಅವರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಅಜ್ಮೀರ್ ನಲ್ಲಿ ಅಭಿವೃದ್ಧಿ ಕಾರ್ಯಗಳು, ಎಚ್ ಪಿ ವಿ ಲಸಿಕೆಗಾಗಿ ದೇಶವ್ಯಾಪಿ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 28th, 12:00 pm

ಇಂದು, ತೀರ್ಥರಾಜ ಪುಷ್ಕರ್ ಮತ್ತು ಮಾತಾ ಸಾವಿತ್ರಿಯ ಈ ಪವಿತ್ರ ಭೂಮಿಯಲ್ಲಿ, ನಿಮ್ಮೆಲ್ಲರ ನಡುವೆ ಇದ್ದು ನಿಮ್ಮ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ಈ ವೇದಿಕೆಯಿಂದ, ನಾನು ಸುರಾಸುರನ ತೇಜಜಿ ಧಾಮ ಮತ್ತು ಪೃಥ್ವಿರಾಜ್ ಅವರ ನೆಲ ಅಜ್ಮೀರ್ ಗೆ ನಮಸ್ಕರಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿ ₹17,000 ಕೋಟಿ ಮೌಲ್ಯದ ರಾಷ್ಟ್ರವ್ಯಾಪಿ ಎಚ್‌ಪಿವಿ ಲಸಿಕೆ ಅಭಿಯಾನಕ್ಕೆ ಚಾಲನೆ ಮತ್ತು ಅಭಿವೃದ್ಧಿ ಯೋಜನೆ ಲೋಕಾರ್ಪಣೆ

February 28th, 11:30 am

ರಾಜಸ್ಥಾನದಲ್ಲಿನ ಡಬಲ್-ಎಂಜಿನ್ ಸರ್ಕಾರ ಎರಡು ವರ್ಷಗಳ ತ್ವರಿತ ಪ್ರಗತಿಯನ್ನು ಪೂರ್ಣಗೊಳಿಸಿದೆ ಎಂದು ಪ್ರಧಾನಮಂತ್ರಿ ತೃಪ್ತಿ ವ್ಯಕ್ತಪಡಿಸಿದರು. ಜನರಿಗೆ ಸೇವೆ ಸಲ್ಲಿಸಲು ಬಂದ ಅಭಿವೃದ್ಧಿಯ ಭರವಸೆಗಳನ್ನು ಸರ್ಕಾರ ಪೂರೈಸುತ್ತಿದೆ. ಮತ್ತು ಇಂದು ಈ ಅಭಿವೃದ್ಧಿಯ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸುವ ದಿನವಾಗಿದೆ. ಎಂದು ಮೋದಿ ಅವರು ಹೇಳಿದರು. ಇಂದಿನ ಕಾರ್ಯಕ್ರಮದಲ್ಲಿ ರಸ್ತೆಗಳು, ವಿದ್ಯುತ್, ನೀರು, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹17,000 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆದಿದ್ದು, ರಾಜಸ್ಥಾನದ ಜನರ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉದ್ದೇಶಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

ಫೆಬ್ರವರಿ 28 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ

February 27th, 03:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 28, 2026 ರಂದು ರಾಜಸ್ಥಾನದ ಅಜ್ಮೀರ್‌ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ, ಪ್ರಧಾನಮಂತ್ರಿ ₹16,680 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಗರಾಭಿವೃದ್ಧಿ, ಕುಡಿಯುವ ನೀರು ಸರಬರಾಜು, ರಸ್ತೆಗಳು, ನೀರಾವರಿ, ಇಂಧನ, ಕೈಗಾರಿಕಾ ಮೂಲಸೌಕರ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಈ ಯೋಜನೆಗಳು ಒಳಗೊಂಡಿವೆ.

ರಾಜಸ್ಥಾನದ ಭಿವಾಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

February 16th, 12:00 pm

ರಾಜಸ್ಥಾನದ ಭಿವಾಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.

Cabinet approves upgradation of National Highway-56 sections in Gujarat at Rs.4583.64 Crore

February 14th, 01:02 pm

The Cabinet Committee on Economic Affairs, chaired by PM Modi, has approved the project for the construction of 4-lane sections in Gujarat with a total project length of 107.67 km, costing Rs. 4583.64 crore. The project will improve connectivity to tribal areas, thereby supporting economic growth and development of the region. It will also enhance connectivity to the Statue of Unity.

ಮೊದಲ ಮತದಾನದಿಂದ ಸ್ಟಾರ್ಟ್ಅಪ್ ಇಂಡಿಯಾದವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಭಾರತದ ಯುವಕರನ್ನು ಆಚರಿಸುತ್ತಾರೆ.

January 25th, 11:30 am

ಈ ವರ್ಷದ ರಾಷ್ಟ್ರೀಯ ಮತದಾರರ ದಿನದಂದು ನಡೆದ ಮೊದಲ ಮನ್ ಕಿ ಬಾತ್‌ನಲ್ಲಿ, ಪ್ರಧಾನಿ ಮೋದಿ ಮತದಾನದ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಶ್ಲಾಘಿಸಿದರು. ಅವರು ಸ್ಟಾರ್ಟ್‌ಅಪ್‌ಗಳು, ನೀರಿನ ಸಂರಕ್ಷಣೆ, ಗುಣಮಟ್ಟ, ಸಂಸ್ಕೃತಿ ಮತ್ತು ಹಬ್ಬಗಳು ಮತ್ತು ಸ್ವಚ್ಛತೆಯಂತಹ ಪ್ರಮುಖ ವಿಷಯಗಳನ್ನು ಸಹ ಸ್ಪರ್ಶಿಸಿದರು. ಮುಂದಿನ ತಿಂಗಳು ನಡೆಯಲಿರುವ ಭಾರತ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಪ್ರಧಾನಿ ಎತ್ತಿ ತೋರಿಸಿದರು, ಅಲ್ಲಿ ಪ್ರಪಂಚದಾದ್ಯಂತದ ತಜ್ಞರು ಭಾಗವಹಿಸುತ್ತಾರೆ.

ಪ್ರಧಾನಮಂತ್ರಿ ಅವರನ್ನು ರಾಜಸ್ಥಾನದ ಮುಖ್ಯಮಂತ್ರಿ ಭೇಟಿಯಾದರು

December 02nd, 04:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್‌ಲಾಲ್ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದರು.

ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

November 03rd, 05:15 pm

ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ರಾಜಸ್ಥಾನದ ಫಲೋಡಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

November 02nd, 10:17 pm

ರಾಜಸ್ಥಾನದ ಫಲೋಡಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ರಾಜಸ್ಥಾನ ಮುಖ್ಯಮಂತ್ರಿ

October 27th, 12:42 pm

ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

October 14th, 10:50 pm

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.