ಸ್ವದೇಶಿ ಉತ್ಪನ್ನಗಳು, ವೋಕಲ್ ಫಾರ್ ಲೋಕಲ್ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಯವರ ಹಬ್ಬದ ಕರೆ.

September 28th, 11:00 am

ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಭಗತ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು. ಭಾರತೀಯ ಸಂಸ್ಕೃತಿ, ಮಹಿಳಾ ಸಬಲೀಕರಣ, ದೇಶಾದ್ಯಂತ ಆಚರಿಸಲಾಗುವ ವಿವಿಧ ಹಬ್ಬಗಳು, ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣ, ಸ್ವಚ್ಛತೆ ಮತ್ತು ಖಾದಿ ಮಾರಾಟದಲ್ಲಿನ ಏರಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆಯೂ ಅವರು ಮಾತನಾಡಿದರು. ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುವ ಮಾರ್ಗವು ಸ್ವದೇಶಿತ್ವವನ್ನು ಅಳವಡಿಸಿಕೊಳ್ಳುವುದರಲ್ಲಿದೆ ಎಂದು ಪ್ರಧಾನಿ ಪುನರುಚ್ಚರಿಸಿದರು.

‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು

August 31st, 11:30 am

ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.

ಫಿಜಿ ಪ್ರಧಾನಮಂತ್ರಿ ಅವರ ಜತೆಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

August 25th, 12:30 pm

ಆ ಸಮಯದಲ್ಲಿ, ನಾವು ಭಾರತ-ಪೆಸಿಫಿಕ್‌ ದ್ವೀಪಗಳ ಸಹಕಾರ ವೇದಿಕೆಯನ್ನು (ಎಫ್‌ಐಪಿಐಸಿ) ಪ್ರಾರಂಭಿಸಿದ್ದೇವೆ. ಈ ಉಪಕ್ರಮವು ಭಾರತ-ಫಿಜಿ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ಇಡೀ ಪೆಸಿಫಿಕ್‌ ಪ್ರದೇಶದೊಂದಿಗಿನ ನಮ್ಮ ಸಂಬಂಧಗಳನ್ನು ಬಲಪಡಿಸಿದೆ. ಇಂದು, ಪ್ರಧಾನಮಂತ್ರಿ ರಬೂಕಾ ಅವರ ಭೇಟಿಯೊಂದಿಗೆ, ನಾವು ನಮ್ಮ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ.

ಫಿಲಿಪ್ಪೀನ್ಸ್ ಅಧ್ಯಕ್ಷರೊಂದಿಗೆ ಜಂಟಿ ಮಾಧ್ಯಮ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ

August 05th, 11:06 am

ಮೊದಲನೆಯದಾಗಿ, ನಾನು ಅಧ್ಯಕ್ಷರನ್ನು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಈ ವರ್ಷ, ಭಾರತ ಮತ್ತು ಫಿಲಿಪ್ಪೀನ್ಸ್ ರಾಜತಾಂತ್ರಿಕ ಸಂಬಂಧಗಳ 75ನೇ ವರ್ಷವನ್ನು ಆಚರಿಸುತ್ತಿವೆ. ಮತ್ತು ಈ ಸಂದರ್ಭದಲ್ಲಿ, ಈ ಭೇಟಿಯು ವಿಶೇಷ ಮಹತ್ವವನ್ನು ಪಡೆದಿದೆ. ನಮ್ಮ ರಾಜತಾಂತ್ರಿಕ ಸಂಬಂಧಗಳು ಇತ್ತೀಚಿನವಾದರೂ, ನಮ್ಮ ನಾಗರಿಕ ಸಂಪರ್ಕವು ಪ್ರಾಚೀನ ಕಾಲದಿಂದಲೂ ಇದೆ. ರಾಮಾಯಣದ ಫಿಲಿಪ್ಪೀನ್ಸ್ ಆವೃತ್ತಿ - ಮಹಾರಾಡಿಯಾ ಲಾವಾನಾ ನಮ್ಮ ಆಳವಾಗಿ ಬೇರೂರಿರುವ ಸಾಂಸ್ಕೃತಿಕ ಬಂಧಕ್ಕೆ ಜೀವಂತ ಪುರಾವೆಯಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಅಂಚೆ ಚೀಟಿಗಳು, ಎರಡೂ ದೇಶಗಳ ರಾಷ್ಟ್ರೀಯ ಹೂವುಗಳನ್ನು ಒಳಗೊಂಡಿದ್ದು, ನಮ್ಮ ಸ್ನೇಹದ ಪರಿಮಳವನ್ನು ಸುಂದರವಾಗಿ ಸಂಕೇತಿಸುತ್ತವೆ.

ಥಾಯ್ ಸರ್ಕಾರದಿಂದ ರಾಮಕಿಯನ್ ಭಿತ್ತಿಚಿತ್ರಗಳನ್ನು ಬಿಂಬಿಸುವ ಐಸ್ಟ್ಯಾಂಪ್ ಬಿಡುಗಡೆ ಕುರಿತು ಪ್ರಧಾನಮಂತ್ರಿ ವಿವರಣೆ

April 03rd, 09:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥಾಯ್ ಸರ್ಕಾರದಿಂದ ರಾಮಕಿಯನ್ ಭಿತ್ತಿಚಿತ್ರಗಳನ್ನು ಬಿಂಬಿಸಿರುವ ಐಸ್ಟ್ಯಾಂಪ್ ಬಿಡುಗಡೆ ಕುರಿತು ತಿಳಿಸಿದ್ದಾರೆ.

ಥಾಯ್ಲೆಂಡ್‌ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

April 03rd, 03:01 pm

ನನಗೆ ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಧಾನಿ ಶಿನವಾತ್ರಾ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.

ಪ್ರಧಾನಮಂತ್ರಿಗಳಿಂದ ಥಾಯ್ ರಾಮಾಯಣ, ರಾಮಕಿಯೆನ್‌ನ ಆಕರ್ಷಕ ಪ್ರದರ್ಶನ ವೀಕ್ಷಣೆ

April 03rd, 01:02 pm

ಭಾರತ ಮತ್ತು ಥಾಯ್ಲೆಂಡ್ ನಡುವಿನ ಗಾಢ ಸಾಂಸ್ಕೃತಿಕ ಮತ್ತು ನಾಗರಿಕ ಸಂಬಂಧಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ಥಾಯ್ ರಾಮಾಯಣ, ರಾಮಕಿಯೆನ್‌ನ ಅತ್ಯದ್ಭುತ ಪ್ರದರ್ಶನವನ್ನು ವೀಕ್ಷಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.03.2025 ರಂದು ಮಾಡಿದ ‘ಮನ್ ಕಿ ಬಾತ್’ – 120ನೇ ಸಂಚಿಕೆಯ ಕನ್ನಡ ಅವತರಣಿಕೆ

March 30th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಈ ಶುಭ ದಿನದಂದು, ನಿಮ್ಮೊಂದಿಗೆ 'ಮನದ ಮಾತು' ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿದೆ. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿ. ಇಂದಿನಿಂದ ಚೈತ್ರ ನವರಾತ್ರಿ ಪ್ರಾರಂಭವಾಗಲಿದೆ. ಇಂದಿನಿಂದ ಭಾರತೀಯ ನವ ವರ್ಷವೂ ಆರಂಭವಾಗುತ್ತದೆ. ಈ ಬಾರಿ ವಿಕ್ರಮ ಸಂವತ್ಸರ ಅಂದರೆ ೨೦೮೨ (ಎರಡು ಸಾವಿರದ ಎಂಬತ್ತೆರಡು) ಶುರುವಾಗಲಿದೆ. ನನ್ನ ಮುಂದೆ ನೀವು ಬರೆದ ಬಹಳಷ್ಟು ಪತ್ರಗಳಿವೆ. ಬಿಹಾರದವರು, ಬಂಗಾಳದವರು, ಕೆಲವರು ತಮಿಳುನಾಡಿನವರು, ಕೆಲವರು ಗುಜರಾತ್‌ನವರು ಪತ್ರ ಬರೆದಿದ್ದಾರೆ. ಬಹಳ ಆಸಕ್ತಿಕರವಾಗಿ ಜನರು ತಮ್ಮ ಮನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಪತ್ರಗಳು ಶುಭ ಹಾರೈಕೆಗಳು ಮತ್ತು ಅಭಿನಂದನಾ ಸಂದೇಶಗಳನ್ನು ಹೊತ್ತು ತಂದಿವೆ. ಆದರೆ ಇಂದು ನಿಮ್ಮೊಂದಿಗೆ ಕೆಲವು ಸಂದೇಶಗಳನ್ನು ಹಂಚಿಕೊಳ್ಳಬಯಸುತ್ತೇನೆ -

ಥೈಲ್ಯಾಂಡ್ ನ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ

February 14th, 08:30 am

ಥೈಲ್ಯಾಂಡ್‌ನಲ್ಲಿ ಸಂವಾದ ಆವೃತ್ತಿಯಲ್ಲಿ ನಿಮ್ಮೆಲ್ಲರೊಂದಿಗೆ ಭಾಗಿಯಾಗುತ್ತಿರುವುದು ನನಗೆ ಗೌರವ ತಂದಿದೆ. ಭಾರತ, ಜಪಾನ್ ಮತ್ತು ಥೈಲ್ಯಾಂಡ್‌ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಾರೆ, ಆ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ ಹಾಗೂ ಭಾಗವಹಿಸಿದ ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಥೈಲ್ಯಾಂಡ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆ

February 14th, 08:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಲ್ಯಾಂಡ್‌ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ತಮ್ಮ ಹೇಳಿಕೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಥೈಲ್ಯಾಂಡ್‌ನಲ್ಲಿ ಸಂವಾದ ಆವೃತ್ತಿಯಲ್ಲಿ ಭಾಗಿಯಾಗುತ್ತಿರುವುದು ತಮಗೆ ಗೌರವ ತಂದಿದೆ, ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಕ್ಕಾಗಿ ಭಾರತ, ಜಪಾನ್ ಮತ್ತು ಥೈಲ್ಯಾಂಡ್‌ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಶ್ಲಾಘಿಸಿದರು. ಹಾಗೂ ಭಾಗವಹಿಸಿದ ಎಲ್ಲರಿಗೂ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.

The relationship between India and Indonesia is rooted in thousands of years of shared culture and history: PM

February 02nd, 02:45 pm

PM Modi delivered his remarks during Maha Kumbabhishegam of Shri Sanathana Dharma Aalayam in Jakarta, Indonesia. Noting that the Murugan Temple in Jakarta houses not only Lord Murugan but also various other deities, Shri Modi emphasized that this persity and plurality form the foundation of our culture. In Indonesia, this tradition of persity is called Bhinneka Tunggal Ika, while in India, it is known as Unity in Diversity, he said.

ಇಂಡೋನೇಷ್ಯಾದ ಜಕಾರ್ತಾದಲ್ಲಿ ಶ್ರೀ ಸನಾತನ ಧರ್ಮ ಆಲಯದ ಮಹಾ ಕುಂಭಾಭಿಷೇಕದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಗಳು

February 02nd, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆದ ಶ್ರೀ ಸನಾತನ ಧರ್ಮ ಆಲಯಂನ ಮಹಾ ಕುಂಭಾಭಿಷೇಕದ ಸಂದರ್ಭದಲ್ಲಿ ವೀಡಿಯೊ ಸಂದೇಶದ ಮೂಲಕ ತಮ್ಮ ಹೇಳಿಕೆಗಳನ್ನು ನೀಡಿದರು. ಗೌರವಾನ್ವಿತ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ, ಮುರುಗನ್‌ ದೇವಾಲಯ ಟ್ರಸ್ಟ್‌ ಅಧ್ಯಕ್ಷ ಪಾ ಹಾಶಿಮ್, ವ್ಯವಸ್ಥಾಪಕ ಟ್ರಸ್ಟಿ ಡಾ.ಕೋಬಾಲನ್‌, ತಮಿಳುನಾಡು ಮತ್ತು ಇಂಡೋನೇಷ್ಯಾದ ಗಣ್ಯರು, ಪುರೋಹಿತರು ಮತ್ತು ಆಚಾರ್ಯರು, ಭಾರತೀಯ ವಲಸಿಗರು, ಇಂಡೋನೇಷ್ಯಾ ಮತ್ತು ಇತರ ರಾಷ್ಟ್ರಗಳ ಎಲ್ಲಾ ನಾಗರಿಕರು ಮತ್ತು ಈ ದೈವಿಕ ಮತ್ತು ಭವ್ಯವಾದ ದೇವಾಲಯವನ್ನು ವಾಸ್ತವವಾಗಿ ಪರಿವರ್ತಿಸಿದ ಎಲ್ಲಾ ಪ್ರತಿಭಾವಂತ ಕಲಾವಿದರಿಗೆ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.

ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಇಂಗ್ಲಿಷ್ ಅವತರಣಿಕೆ

January 25th, 01:00 pm

ಭಾರತದ ಮೊದಲ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ನಮ್ಮ ಮುಖ್ಯ ಅತಿಥಿಯಾಗಿತ್ತು. ಮತ್ತು ನಾವು ನಮ್ಮ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಮತ್ತೊಮ್ಮೆ, ಇಂಡೋನೇಷ್ಯಾ ಈ ಮಹತ್ವದ ಸಂದರ್ಭದ ಭಾಗವಾಗಲು ಗೌರವಯುತವಾಗಿ ಒಪ್ಪಿಕೊಂಡಿದೆ ಎಂಬುದು ನಮಗೆ ಬಹಳ ಹೆಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ ನಾನು ಅಧ್ಯಕ್ಷ ಪ್ರಬೋವೊ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ.

ಲಾವೋಸ್ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್‌‌ ನ ವಿಯೆಂಟಿಯಾನ್ ಗೆ ಪ್ರಧಾನಮಂತ್ರಿಯವರ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 10-11, 2024)

October 11th, 12:39 pm

ರಕ್ಷಣಾ ಸಹಕಾರಕ್ಕೆ ಸಂಬಂಧಿಸಿದಂತೆ ಭಾರತ ಗಣರಾಜ್ಯದ ರಕ್ಷಣಾ ಸಚಿವಾಲಯ ಮತ್ತು ಲಾವೋಸ್ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್‌‌ ನ ರಾಷ್ಟ್ರೀಯ ರಕ್ಷಣಾ ಸಚಿವಾಲಯದ ನಡುವಿನ ತಿಳುವಳಿಕೆ ಒಪ್ಪಂದ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

January 22nd, 05:12 pm

ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂತರು ಮತ್ತು ಸಾಧುಗಳಿಗೆ, ಇಲ್ಲಿ ಉಪಸ್ಥಿತರಿರುವ ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಸಂಪರ್ಕ ಹೊಂದಿರುವ ಎಲ್ಲಾ ರಾಮ ಭಕ್ತರಿಗೆ ನನ್ನ ಶುಭಾಶಯಗಳು. ಎಲ್ಲರಿಗೂ ರಾಮ್ ರಾಮ್!

ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

January 22nd, 01:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದರು. ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಾಣಕ್ಕೆ ಕೊಡುಗೆ ನೀಡಿದ ಶ್ರಮಜೀವಿಗಳೊಂದಿಗೆ ಶ್ರೀ ಮೋದಿ ಸಂವಾದ ನಡೆಸಿದರು.

ಶ್ರೀ ರಾಮ ಮಂದಿರ ಕುರಿತ ವಿಶೇಷ ಅಂಚೆ ಚೀಟಿ ಮತ್ತು ಪುಸ್ತಕ ಬಿಡುಗಡೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಮಂತ್ರಿ ಅವರ ವಿಡಿಯೋ ಸಂದೇಶದ ಕನ್ನಡ ಅನುವಾದ

January 18th, 02:10 pm

ಇಂದು, ಶ್ರೀ ರಾಮ ಮಂದಿರದ ಪ್ರತಿಷ್ಠಾಪನೆ (ಪ್ರಾಣ-ಪ್ರತಿಷ್ಠಾ) ಸಮಾರಂಭಕ್ಕೆ ಸಂಬಂಧಿಸಿದ ಮತ್ತೊಂದು ಗಮನಾರ್ಹ ಕಾರ್ಯಕ್ರಮದ ಭಾಗವಾಗಲು ನನಗೆ ಲಭಿಸಿದ ಗೌರವವಾಗಿದೆ. ಶ್ರೀ ರಾಮ್ ಜನ್ಮಭೂಮಿ ದೇವಸ್ಥಾನಕ್ಕೆ ಸಮರ್ಪಿತವಾದ ಆರು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲಾಗಿದೆ, ಜೊತೆಗೆ ವಿಶ್ವದಾದ್ಯಂತದ ಭಗವಾನ್ ಶ್ರೀ ರಾಮನಿಗೆ ಸಮರ್ಪಿತವಾದ ಅಂಚೆ ಚೀಟಿಗಳ ಆಲ್ಬಂ ಅನ್ನು ಬಿಡುಗಡೆ ಮಾಡಲಾಗಿದೆ. ದೇಶ ಮತ್ತು ವಿದೇಶಗಳಲ್ಲಿರುವ ಭಗವಾನ್ ರಾಮನ ಎಲ್ಲಾ ಭಕ್ತರನ್ನು ಮತ್ತು ಎಲ್ಲಾ ನಾಗರಿಕರನ್ನು ನಾನು ಅಭಿನಂದಿಸುತ್ತೇನೆ.

ಶ್ರೀ ರಾಮ ಜನ್ಮಭೂಮಿ ದೇವಸ್ಥಾನಕ್ಕೆ ಸಮರ್ಪಿತವಾದ ಆರು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

January 18th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ರಾಮ ಜನ್ಮಭೂಮಿ ದೇವಸ್ಥಾನಕ್ಕೆ ಸಮರ್ಪಿತವಾದ ಆರು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು ಮತ್ತು ವಿಶ್ವದ ವಿವಿಧ ದೇಶಗಳಲ್ಲಿ ಬಿಡುಗಡೆ ಮಾಡಲಾದ ಭಗವಾನ್ ರಾಮನಿಗೆ ಸಂಬಂಧಿಸಿದ ಇದೇ ರೀತಿಯ ಅಂಚೆಚೀಟಿಗಳನ್ನು ಹೊಂದಿರುವ ಆಲ್ಬಂ ಅನ್ನು ಸಹ ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಭಾರತ ಮತ್ತು ವಿದೇಶದಲ್ಲಿರುವ ಶ್ರೀರಾಮನ ಎಲ್ಲಾ ಭಕ್ತರನ್ನು ಅವರು ಅಭಿನಂದಿಸಿದರು.

ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆಗಳು ಮತ್ತು ಮಾದಕವಸ್ತುಗಳ - ಎನ್ಎಸಿಐಎನ್ ಅಕಾಡೆಮಿಯನ್ನು ಉದ್ಘಾಟಿಸುವ ವೇಳೆ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 16th, 04:00 pm

ಆಂಧ್ರಪ್ರದೇಶದ ರಾಜ್ಯಪಾಲರಾದ ಶ್ರೀ ಎಸ್. ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳು, ನಿರ್ಮಲಾ ಸೀತಾರಾಮನ್ ಜೀ, ಪಂಕಜ್ ಚೌಧರಿ ಜೀ ಮತ್ತು ಭಗವತ್ ಕಿಶನ್ ರಾವ್ ಕರದ್ ಜೀ, ಇತರ ಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೇ.

ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಪಾಲಸಮುದ್ರಂನಲ್ಲಿ ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆ ಮತ್ತು ಮಾದಕವಸ್ತುಗಳ ಅಕಾಡೆಮಿಯ ಹೊಸ ಕ್ಯಾಂಪಸ್ಸನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

January 16th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಪಾಲಸಮುದ್ರಂನಲ್ಲಿ ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆ ಮತ್ತು ಮಾದಕವಸ್ತುಗಳ ಅಕಾಡೆಮಿಯ ಹೊಸ ಕ್ಯಾಂಪಸ್ಸನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನೂ ಅವರು ವೀಕ್ಷಿಸಿದರು. ಪ್ರಧಾನಮಂತ್ರಿಯವರು ಭಾರತೀಯ ಕಂದಾಯ ಸೇವೆಯ (ಕಸ್ಟಮ್ ಮತ್ತು ಪರೋಕ್ಷ ತೆರಿಗೆ) 74 ಮತ್ತು 75ನೇ ಬ್ಯಾಚ್ ಗಳ ತರಬೇತಿ ನಿರತ ಅಧಿಕಾರಿಗಳು ಮತ್ತು ಭೂತಾನ್ ನ ರಾಯಲ್ ಸಿವಿಲ್ ಸರ್ವಿಸ್ ನ ತರಬೇತಿ ನಿರತ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.