ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 25th, 06:16 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ

December 25th, 05:23 pm

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್‌ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.

ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

November 15th, 03:15 pm

ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 15th, 03:00 pm

ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್‌ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.

ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 31st, 07:00 pm

ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.

ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಕೇಂದ್ರ ಸಚಿವರಾದ ಡಾ. ಜಿತೇಂದ್ರ ಸಿಂಗ್ ಅವರಿಂದ ಏಕತಾ ಪ್ರತಿಜ್ಞೆಯ ಬೋಧನೆ; ಈ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿಯವರ ಕಛೇರಿಯ ಅಧಿಕಾರಿಗಳು

October 31st, 02:06 pm

ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರ ಕಚೇರಿಯ ಅಧಿಕಾರಿಗಳು ಇಂದು ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತಾ ಏಕತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 31st, 09:00 am

ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಗುಜರಾತ್‌ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

October 31st, 08:44 am

ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.

ಅಕ್ಟೋಬರ್ 30-31 ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 29th, 10:58 am

ಅಕ್ಟೋಬರ್ 30-31 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಪ್ರಧಾನಮಂತ್ರಿ ಅವರು ಕೆವಾಡಿಯಾದ ಏಕ್ತಾ ನಗರಕ್ಕೆ ಪ್ರಯಾಣಿಸಲಿದ್ದು, ಅದೇ ದಿನ ಸಂಜೆ 5:15ರ ಸುಮಾರಿಗೆ ಅಲ್ಲಿ ಇ-ಬಸ್ ಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 6:30ರ ಸುಮಾರಿಗೆ, ಅವರು ಏಕ್ತಾ ನಗರದಲ್ಲಿ 1,140 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ಮಾಡಲಿದ್ದಾರೆ.

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪರಂಪರೆಯನ್ನು ಗೌರವಿಸಲು ಅಕ್ಟೋಬರ್ 31 ರಂದು ನಡೆಯುವ ಏಕತಾ ಓಟದಲ್ಲಿ ನಾಗರಿಕರು ಭಾಗವಹಿಸಲು ಪ್ರಧಾನಮಂತ್ರಿ ಮನವಿ

October 27th, 09:15 am

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಅಕ್ಟೋಬರ್ 31 ರಂದು ನಡೆಯುವ ಏಕತಾ ಓಟದಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ದೇಶಾದ್ಯಂತ ನಾಗರಿಕರಿಗೆ ಕರೆ ನೀಡಿದ್ದಾರೆ. ಈ ಕಾರ್ಯಕ್ರಮವು ರಾಷ್ಟ್ರೀಯ ಏಕತಾ ದಿನವನ್ನು ಸೂಚಿಸುತ್ತದೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಭಾರತಕ್ಕಾಗಿ ಕಲ್ಪಿಸಿಕೊಂಡ ಏಕತೆ ಮತ್ತು ಒಗ್ಗಟ್ಟಿನ ಶಾಶ್ವತ ಮನೋಭಾವವನ್ನು ಆಚರಿಸುವ ಸಂಕೇತವಾಗಿದೆ.

Maharashtra will lead the vision of a ’Viksit Bharat’, and the BJP and Mahayuti are working with this commitment: PM in Panvel

November 14th, 02:50 pm

At rally in Panvel, PM Modi highlighted the region's rich marine resources and outlined government efforts to empower the coastal economy. He mentioned initiatives such as the introduction of modern boats and navigation systems, along with the PM Matsya Sampada Yojana, which provided thousands of crores in assistance to fishermen. The government also linked fish farmers to the Kisan Credit Card and launched schemes for the Mahadev Koli and Agari communities. He added that ₹450 crore was being invested to develop three new ports in Konkan, which would further boost fishermen's incomes and support the Blue Economy.

PM Modi delivers impactful addresses in Chhatrapati Sambhajinagar, Panvel & Mumbai, Maharashtra

November 14th, 02:30 pm

In powerful speeches at public meetings in Chhatrapati Sambhajinagar, Panvel & Mumbai, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.

ಗುಜರಾತಿನ ಕಚ್‌ನಲ್ಲಿ ದೀಪಾವಳಿಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗೆ ಪ್ರಧಾನಮಂತ್ರಿಯವರ ಭಾಷಣದ ಪಠ್ಯ

October 31st, 07:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಕಚ್‌ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿಎಸ್‌ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು.

"ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ ನ ಕಚ್‌ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು "

October 31st, 07:00 pm

ಗುಜರಾತ್‌ ನ ಕಚ್‌ ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿ.ಎಸ್‌.ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೀಪಾವಳಿಯನ್ನು ಆಚರಿಸಿದರು.

ರಾಯಗಢ ಛತ್ರಪತಿ ಶಿವಾಜಿ ಮಹಾರಾಜರ ಹಿರಿಮೆ ಮತ್ತು ಶೌರ್ಯಕ್ಕೆ ಉದಾಹರಣೆಯಾಗಿದ್ದು, ಧೈರ್ಯ ಮತ್ತು ನಿರ್ಭಯತೆಯ ಪ್ರತೀಕವಾಗಿದೆ: ಪ್ರಧಾನಮಂತ್ರಿ

October 31st, 10:58 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಯಗಢವನ್ನು ಶಿವಾಜಿ ಮಹಾರಾಜರ ಗಮನಾರ್ಹ ಪರಂಪರೆ, ಕಾರ್ಯತಂತ್ರದ ಪ್ರತಿಭೆ ಮತ್ತು ನಾಯಕತ್ವ ಎಂದು ಶ್ಲಾಘಿಸಿದ್ದಾರೆ.

ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 31st, 07:31 am

ಸರ್ದಾರ್ ಸಾಹೇಬರ ಸ್ಫೂರ್ತಿದಾಯಕ ಮಾತುಗಳು... ಏಕತಾ ಪ್ರತಿಮೆಯ ಬಳಿ ಈ ಭವ್ಯ ಕಾರ್ಯಕ್ರಮ... ಏಕ್ತಾ ನಗರದ ಬೆರಗುಗೊಳಿಸುವ ನೋಟ, ಮತ್ತು ಇಲ್ಲಿನ ಭವ್ಯವಾದ ಪ್ರದರ್ಶನಗಳು ... ಮಿನಿ ಇಂಡಿಯಾದ ಒಂದು ನೋಟ... ಎಲ್ಲವೂ ತುಂಬಾ ನಂಬಲಾಗದು, ತುಂಬಾ ಸ್ಫೂರ್ತಿದಾಯಕವಾಗಿದೆ. ಆಗಸ್ಟ್ 15 ಮತ್ತು ಜನವರಿ 26 ರಂತೆ... ಅಕ್ಟೋಬರ್ 31 ರಂದು ನಡೆಯುವ ಈ ಕಾರ್ಯಕ್ರಮವು ಇಡೀ ರಾಷ್ಟ್ರವನ್ನು ಹೊಸ ಶಕ್ತಿಯಿಂದ ತುಂಬುತ್ತದೆ. ರಾಷ್ಟ್ರೀಯ ಏಕತಾ ದಿವಸ್ (ರಾಷ್ಟ್ರೀಯ ಏಕತಾ ದಿನ) ದಂದು ನಾನು ದೇಶದ ಎಲ್ಲ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಿದರು, ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು

October 31st, 07:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರು ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ನೆನಪಿಗಾಗಿ ಪ್ರತಿವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ್ ಸಂದರ್ಭದಲ್ಲಿ ಶ್ರೀ ನರೇಂದ್ರ ಮೋದಿ ಅವರು ಏಕತಾ ದಿವಸ್ ಪ್ರತಿಜ್ಞೆಯನ್ನು ಬೋಧಿಸಿದರು ಮತ್ತು ಏಕತಾ ದಿವಸ್ ಮೆರವಣಿಗೆಗೆ ಸಾಕ್ಷಿಯಾದರು.

ಅಕ್ಟೋಬರ್ 30-31 ರಂದು ಗುಜರಾತ್‌ಗೆ ಪ್ರಧಾನಮಂತ್ರಿ ಭೇಟಿ

October 29th, 03:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 30-31 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಅವರು ಕೆವಾಡಿಯಾದ ಏಕ್ತಾ ನಗರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 5:30ರ ಸುಮಾರಿಗೆ ಏಕತಾ ನಗರದಲ್ಲಿ 280 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ, ಸುಮಾರು 6 ಗಂಟೆಗೆ, ಅವರು ಆರಂಭ್ 6.0 ರಲ್ಲಿ 99ನೇ ಕಾಮನ್ ಫೌಂಡೇಶನ್ ಕೋರ್ಸ್‌ನ ತರಬೇತಿದಾರ ಅಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಕ್ಟೋಬರ್ 31 ರಂದು, ಬೆಳಿಗ್ಗೆ 7:15ರ ಸುಮಾರಿಗೆ, ಪ್ರಧಾನಮಂತ್ರಿಗಳು ಏಕತೆಯ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ, ನಂತರ ರಾಷ್ಟ್ರೀಯ ಏಕತಾ ದಿವಸ್ ಆಚರಣೆಗಳು ನಡೆಯಲಿವೆ.

ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

October 27th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.

The dreams of crores of women, poor and youth are Modi's resolve: PM Modi

February 18th, 01:00 pm

Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.