The words of the Gita not only guide individuals but also shape the direction of the nation's policies: PM Modi in Udupi, Karnataka
November 28th, 11:45 am
During his address at the Laksha Kantha Gita Parayana programme at Sri Krishna Matha in Udupi, PM Modi highlighted the special connection between Gujarat and Udupi. He remarked that Jagadguru Shri Madhvacharya, the pioneer of India’s Dvaita philosophy, is a shining light of Vedanta. The PM said that the entire life of Bhagwan Shri Krishna and every chapter of the Gita conveys the message of action, duty and welfare and announced nine resolutions for every citizen to adopt.PM Modi addresses the Laksha Kantha Gita Parayana programme at Sri Krishna Matha in Udupi, Karnataka
November 28th, 11:30 am
During his address at the Laksha Kantha Gita Parayana programme at Sri Krishna Matha in Udupi, PM Modi highlighted the special connection between Gujarat and Udupi. He remarked that Jagadguru Shri Madhvacharya, the pioneer of India’s Dvaita philosophy, is a shining light of Vedanta. The PM said that the entire life of Bhagwan Shri Krishna and every chapter of the Gita conveys the message of action, duty and welfare and announced nine resolutions for every citizen to adopt.ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟ ಕುರಿತು ಸಂಪುಟ ನಿರ್ಣಯ ಅಂಗೀಕರಿಸಿತು
November 12th, 08:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2025ರ ನವೆಂಬರ್ 10ರ ಸಂಜೆ ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಕಾರು ಸ್ಫೋಟದ ಭಯೋತ್ಪಾದಕ ಘಟನೆಯಲ್ಲಿ ಜೀವಹಾನಿಯಾದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿತು. ಘಟನೆಯಲ್ಲಿ ಬಲಿಯಾದ ಅಮಾಯಕ ಜೀವಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಸಚಿವ ಸಂಪುಟ ಎರಡು ನಿಮಿಷಗಳ ಮೌನ ಆಚರಿಸಿತು.ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 07:00 pm
ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:00 am
ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
October 31st, 08:44 am
ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 17th, 11:09 pm
ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
October 17th, 08:00 pm
ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯ ಉದ್ಘಾಟನೆ ಮತ್ತು ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಯೋಜನೆಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅವತರಣಿಕೆ
October 11th, 12:30 pm
ಇಂದು, ಅಕ್ಟೋಬರ್ 11, ಒಂದು ಐತಿಹಾಸಿಕ ದಿನ. ಇಂದು ಹೊಸ ಇತಿಹಾಸವನ್ನು ಸೃಷ್ಟಿಸಿದ ಭಾರತ ಮಾತೆಯ ಇಬ್ಬರು ಮಹಾನ್ ರತ್ನಗಳಾದ ಭಾರತ ರತ್ನ ಶ್ರೀ ಜಯಪ್ರಕಾಶ್ ನಾರಾಯಣ್ ಜೀ ಮತ್ತು ಭಾರತ ರತ್ನ ಶ್ರೀ ನಾನಾ ಜಿ ದೇಶಮುಖ್ ಅವರ ಜನ್ಮ ದಿನಾಚರಣೆ. ಈ ಇಬ್ಬರೂ ಮಹಾನ್ ಪುತ್ರರು ಗ್ರಾಮೀಣ ಭಾರತದ ಧ್ವನಿಯಾಗಿದ್ದರು, ಪ್ರಜಾಪ್ರಭುತ್ವ ಕ್ರಾಂತಿಯ ನಾಯಕರಾಗಿದ್ದರು ಮತ್ತು ರೈತರು ಹಾಗು ಬಡವರ ಕಲ್ಯಾಣಕ್ಕೆ ಸಮರ್ಪಿಸಿಕೊಂಡಿದ್ದರು. ಇಂದು, ಈ ಐತಿಹಾಸಿಕ ದಿನದಂದು, ದೇಶದ ಸ್ವಾವಲಂಬನೆಗಾಗಿ ಮತ್ತು ರೈತರ ಕಲ್ಯಾಣಕ್ಕಾಗಿ ಎರಡು ಪ್ರಮುಖ ಹೊಸ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಮೊದಲನೆಯದು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ಎರಡನೆಯದು ಪಲ್ಸ್ ಸ್ವಾವಲಂಬನೆ ಮಿಷನ್ (ದಲ್ಹನ್ ಆತ್ಮ ನಿರ್ಭರತಾ ಮಿಷನ್). ಈ ಎರಡು ಯೋಜನೆಗಳು ಭಾರತದ ಲಕ್ಷಾಂತರ ರೈತರ ಭವಿಷ್ಯವನ್ನು ಪರಿವರ್ತಿಸುತ್ತವೆ. ಈ ಯೋಜನೆಗಳಿಗೆ ಭಾರತ ಸರ್ಕಾರ 35,000 ಕೋಟಿ ರೂಪಾಯಿಗಳಿಗೂ ಹೆಚ್ಚು ಖರ್ಚು ಮಾಡಲಿದೆ. ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ಪಲ್ಸ್ ಸ್ವಾವಲಂಬನೆ ಮಿಷನ್ಗಾಗಿ ನನ್ನ ಎಲ್ಲಾ ರೈತ ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.PM Modi launches two major schemes in the agriculture sector with an outlay of Rs 35,440 crore
October 11th, 12:00 pm
At a programme in Delhi, PM Modi launched projects and schemes worth over Rs 35,400 crore in the Agriculture and Allied Sectors. The PM Dhan Dhaanya Krishi Yojana aims to enhance agricultural productivity, promote crop persification and sustainable practices in selected districts. He also launched the Dalhan Aatmanirbharta Mission, focused on boosting productivity and expanding the cultivation of pulses. PM Modi emphasised, “On one hand, we must be self-reliant; on the other, we must produce for the global market as well.”ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 08th, 10:15 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 08th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ಸಮಾವೇಶವಾದ 'ಇಂಡಿಯಾ ಮೊಬೈಲ್ ಕಾಂಗ್ರೆಸ್' (IMC) 2025ರ 9ನೇ ಆವೃತ್ತಿಯನ್ನು ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ನ ಈ ವಿಶೇಷ ಆವೃತ್ತಿಗೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಹಣಕಾಸು ವಂಚನೆ ತಡೆಗಟ್ಟುವಿಕೆ, ಕ್ವಾಂಟಮ್ ಸಂವಹನ, 6G, ಆಪ್ಟಿಕಲ್ ಸಂವಹನ ಮತ್ತು ಸೆಮಿಕಂಡಕ್ಟರ್ಗಳಂತಹ ನಿರ್ಣಾಯಕ ವಿಷಯಗಳ ಕುರಿತು ಹಲವಾರು ಸ್ಟಾರ್ಟ್ಅಪ್ಗಳು ತಮ್ಮ ಯೋಜನೆಗಳನ್ನು ಪ್ರಸ್ತುತಪಡಿಸಿವೆ ಎಂದು ತಿಳಿಸಿದರು. ಇಂತಹ ಪ್ರಮುಖ ವಿಷಯಗಳ ಕುರಿತಾದ ಪ್ರಸ್ತುತಿಗಳನ್ನು ನೋಡುವುದು, ಭಾರತದ ತಾಂತ್ರಿಕ ಭವಿಷ್ಯವು ಸಮರ್ಥ ಕೈಗಳಲ್ಲಿದೆ ಎಂಬ ನಂಬಿಕೆಯನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದರು. ಅವರು ಈ ಸಮಾವೇಶಕ್ಕೆ ಮತ್ತು ಎಲ್ಲಾ ಹೊಸ ಉಪಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ಕೋರಿದರು.ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 01st, 10:45 am
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
October 01st, 10:30 am
ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.ನವದೆಹಲಿಯ ಭಾರತ್ ಮಂಟಪದಲ್ಲಿ ವಿಶ್ವ ಆಹಾರ ಭಾರತ - 2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 06:16 pm
ರಷ್ಯಾದ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ಪತ್ರುಶೇವ್ ಅವರೆ, ನನ್ನ ಸಂಪುಟ ಸಹೋದ್ಯೋಗಿಗಳಾದ ಚಿರಾಗ್ ಪಾಸ್ವಾನ್ ಮತ್ತು ಶ್ರೀ ರವನೀತ್, ಶ್ರೀ ಪ್ರತಾಪರಾವ್ ಜಾಧವ್, ವಿವಿಧ ದೇಶಗಳಿಂದ ಇಲ್ಲಿಗೆ ಬಂದಿರುವ ಸಚಿವರೆ ಮತ್ತು ಪ್ರತಿನಿಧಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ವಿಶ್ವ ಆಹಾರ ಭಾರತ 2025 ನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 06:15 pm
ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು ನಡೆದ ವರ್ಲ್ಡ್ ಫುಡ್ ಇಂಡಿಯಾ 2025 ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ರೈತರು, ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯಕಾರರು ಮತ್ತು ಗ್ರಾಹಕರು ಎಲ್ಲರೂ ಒಟ್ಟಾಗಿ ಈ ಕಾರ್ಯಕ್ರಮದಲ್ಲಿ ಹಾಜರಿರುವುದನ್ನು ಗುರುತಿಸಿದರು, ಇದು ವರ್ಲ್ಡ್ ಫುಡ್ ಇಂಡಿಯಾವನ್ನು ಹೊಸ ಪರಿಚಯಗಳು, ಹೊಸ ಸಂಪರ್ಕ ಮತ್ತು ಸೃಜನಶೀಲತೆಯ ವೇದಿಕೆಯನ್ನಾಗಿ ಮಾಡಿವೆ ಎಂದು ಹೇಳಿದರು. ತಾವು ಈಗಷ್ಟೇ ಪ್ರದರ್ಶನಗಳಿಗೆ ಭೇಟಿ ನೀಡಿದ್ದನ್ನು ಹಂಚಿಕೊಂಡ ಅವರು, ಪ್ರಾಥಮಿಕ ಗಮನವು ಪೌಷ್ಟಿಕಾಂಶ, ತೈಲ ಬಳಕೆ ಕಡಿಮೆ ಮಾಡುವುದು ಮತ್ತು ಪ್ಯಾಕೇಜ್ ಮಾಡಿದ ಉತ್ಪನ್ನಗಳಲ್ಲಿ ಆರೋಗ್ಯಕರ ಅಂಶಗಳನ್ನು ಹೆಚ್ಚಿಸುವುದರ ಬಗ್ಗೆ ಇರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿಯವರು ಅಭಿನಂದನೆಗಳು ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು.ಬಿಹಾರದ ಪುರ್ನಿಯಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 15th, 04:30 pm
ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಬಿಹಾರದ ಪೂರ್ಣಿಯಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ
September 15th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಪೂರ್ಣಿಯಾದಲ್ಲಿ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ, ಹಲವು ಯೋಜನೆಗಳನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರಿಗೂ ಗೌರವಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಪೂರ್ಣಿಯಾವು ಮಾ ಪುರನ್ ದೇವಿ, ಭಕ್ತ ಪ್ರಹ್ಲಾದ, ಮತ್ತು ಮಹರ್ಷಿ ಮೇಹಿ ಬಾಬಾ ಅವರ ಪುಣ್ಯಭೂಮಿಯಾಗಿದೆ ಎಂದು ಅವರು ಬಣ್ಣಿಸಿದರು. ಈ ಮಣ್ಣು ಫಣೀಶ್ವರ್ ನಾಥ್ ರೇಣು ಮತ್ತು ಸತೀನಾಥ್ ಭಾದುರಿ ಅವರಂತಹ ಸಾಹಿತ್ಯ ದಿಗ್ಗಜರಿಗೆ ಜನ್ಮ ನೀಡಿದೆ ಎಂದು ಶ್ರೀ ಮೋದಿಯವರು ಸ್ಮರಿಸಿದರು. ಇದಲ್ಲದೆ, ಈ ಪ್ರದೇಶವು ವಿನೋಬಾ ಭಾವೆ ಅವರಂತಹ ನಿಷ್ಠಾವಂತ ಕರ್ಮಯೋಗಿಗಳ ಕರ್ಮಭೂಮಿಯಾಗಿದೆ ಎಂದು ಹೇಳಿದ ಅವರು, ಈ ಪವಿತ್ರ ಭೂಮಿಯ ಬಗ್ಗೆ ತನಗೆ ಅಗಾಧವಾದ ಗೌರವವಿದೆ ಎಂದು ಹೇಳಿದರು.ಅಸ್ಸಾಂನ ಗೋಲಾಘಾಟ್ ನಲ್ಲಿ ಪಾಲಿಪ್ರೊಪಿಲೀನ್ ಸ್ಥಾವರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
September 14th, 03:30 pm
ಭಾರತ್ ಮಾತಾ ಕೀ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಜೀ, ಹರ್ದೀಪ್ ಸಿಂಗ್ ಪುರಿ ಜೀ, ಅಸ್ಸಾಂ ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿರುವ ನನ್ನ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಅಸ್ಸಾಂನ ಗೋಲಾಘಾಟ್ ನಲ್ಲಿ ಬಯೋಇಥೆನಾಲ್ ಸ್ಥಾವರವನ್ನು ಉದ್ಘಾಟನೆ, ಪಾಲಿಪ್ರೊಪಿಲೀನ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
September 14th, 03:00 pm
ಕಳೆದ ಎರಡು ದಿನಗಳಿಂದ ತಾವು ಈಶಾನ್ಯದಲ್ಲಿದ್ದು, ಪ್ರತಿ ಬಾರಿ ಈ ಪ್ರದೇಶಕ್ಕೆ ಭೇಟಿ ನೀಡಿದಾಗಲೂ ಅಸಾಧಾರಣ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆಯುವುದಾಗಿ ಪ್ರಧಾನಮಂತ್ರಿಯವರು ಹೇಳಿದರು. ಅಸ್ಸಾಂನ ಈ ಭಾಗದಲ್ಲಿ ತಾವು ಅನುಭವಿಸುವ ವಿಶಿಷ್ಟವಾದ ಆತ್ಮೀಯತೆ ಮತ್ತು ಬಂಧುತ್ವದ ಭಾವನೆಯನ್ನು ಅವರು ಎತ್ತಿ ತೋರಿಸಿದರು ಮತ್ತು ಜನರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.