ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿಯವರ ಭೇಟಿ (ಮೇ 15 - 20, 2026)
May 11th, 09:00 pm
ಮೇ 15 ರಿಂದ ಮೇ 20, 2026 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ನೆದರ್ಲ್ಯಾಂಡ್ಸ್ನಲ್ಲಿ, ಪ್ರಧಾನಿ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿ ಮಾಡಿ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸ್ವೀಡನ್ನಲ್ಲಿ, ಅವರು ಪ್ರಧಾನಿ ಕ್ರಿಸ್ಟರ್ಸನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾರ್ವೆಯಲ್ಲಿ, ಅವರು ಕಿಂಗ್ ಹೆರಾಲ್ಡ್ V ಅವರನ್ನು ಭೇಟಿ ಮಾಡಿ ಪ್ರಧಾನಿ ಜೋನಾಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ನಂತರ, ಅವರು ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಲು ಇಟಲಿಗೆ ಭೇಟಿ ನೀಡಲಿದ್ದಾರೆ.PM Modi’s special address at a public meeting in Jamnagar, Gujarat
May 10th, 09:35 pm
PM Modi addressed a public meeting in Jamnagar, Gujarat. Reflecting on Gujarat’s remarkable development journey, he said the state has transformed from being known only for salt production to becoming a hub for semiconductors, metro coaches, railway engines, renewable energy and emerging aviation manufacturing. He credited the people of Gujarat and BJP workers for the state’s continued growth and progress.ಗುಜರಾತ್ನ ವಾವ್-ಥರಡ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
March 31st, 05:00 pm
ಕೆಲವೇ ದಿನಗಳ ಹಿಂದೆ, ನವರಾತ್ರಿಯ ಪವಿತ್ರ ಹಬ್ಬವು ಮುಕ್ತಾಯಗೊಂಡಿತು. ಮಾತೆ ಅಂಬಾಜಿಯವರ ಕೃಪೆಯಿಂದ ಇಂದು ಅವರ ಪಾದಗಳಿರುವಲ್ಲಿಗೆ ಬರುವ ಭಾಗ್ಯ ನನಗೆ ಸಿಕ್ಕಿತು. ಅವರ ಕೃಪೆಯಿಂದ ಇಂದು, ನನ್ನ ಕುಟುಂಬದ ಸದಸ್ಯರೆಲ್ಲರನ್ನೂ ನೋಡುವ ಭಾಗ್ಯ ನನಗೆ ಸಿಕ್ಕಿತು. ನಾನು ತಾಯಿ ಅಂಬಾಜಿಯವರ ಪಾದಗಳಿಗೆ ನಮಸ್ಕರಿಸುತ್ತೇನೆ. ನಮ್ಮ ವರಾಹ ರೂಪಿ ಶ್ರೀ ಧರ್ಣಿಧರ್ಜಿ, ಮುಖದ ಕೃಷ್ಣ, ನಾನು ಇಂದು ಅವರಿಗೆ ನನ್ನ ಗೌರವಯುತ ನಮನ ಸಲ್ಲಿಸುತ್ತೇನೆ. ಇಂದು ನಾವು ಭಗವಾನ್ ಮಹಾವೀರ ಜಯಂತಿಯನ್ನು ಸಹ ಆಚರಿಸುತ್ತಿದ್ದೇವೆ ಎಂಬುದು ಆಹ್ಲಾದಕರ ಕಾಕತಾಳೀಯ ಸಂದರ್ಭ. ನಮ್ಮ ಈ ಪ್ರದೇಶವು ಅನೇಕ ಜೈನ ತೀರ್ಥಕ್ಷೇತ್ರಗಳ ಭೂಮಿಯಾಗಿದೆ. ನಾನು ಭಗವಾನ್ ಮಹಾವೀರರಿಗೆ ನಮಸ್ಕರಿಸುತ್ತೇನೆ ಮತ್ತು ಪವಿತ್ರ ಮಹಾವೀರ ಜನ್ಮ ಕಲ್ಯಾಣಕ್ ದಿನ, ಮಹಾವೀರ ಜಯಂತಿಯಂದು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ.ಗುಜರಾತ್ನ ವಾವ್-ಥರಡ್ನಲ್ಲಿ ₹20,000 ಕೋಟಿಗೂ ಹೆಚ್ಚು ಮೌಲ್ಯದ ರಾಷ್ಟ್ರ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು
March 31st, 04:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬನಸ್ಕಾಂತ ಜಿಲ್ಲೆಯ ವಾವ್-ಥರಡ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ಉತ್ತರ ಗುಜರಾತ್ಗೆ ಸುಮಾರು ₹20,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಅಡಿಪಾಯ ಹಾಕಿದರು. ಪವಿತ್ರ ನವರಾತ್ರಿ ಉತ್ಸವವು ಇತ್ತೀಚೆಗೆ ಮುಕ್ತಾಯಗೊಂಡಿದೆ ಮತ್ತು ಆ ದಿನ ಭಗವಾನ್ ಮಹಾವೀರ ಜಯಂತಿಯೂ ಆಗಿದೆ ಎಂದು ಹೇಳಿದ ಪ್ರಧಾನಮಂತ್ರಿ, ಮಾ ಅಂಬಾಜಿ ಮತ್ತು ಭಗವಾನ್ ಶ್ರೀ ಧರಣಿಧರ್ಜಿ ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದರು.ಅಸ್ಸಾಂನ ಗುವಾಹಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 13th, 05:30 pm
ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಜನಪ್ರತಿನಿಧಿಗಳೆ, ದೇಶಾದ್ಯಂತ ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ನಮ್ಮ ಎಲ್ಲಾ ರೈತ ಮಿತ್ರರೆ, ಚಹಾ ತೋಟಗಳಲ್ಲಿ ಕೆಲಸ ಮಾಡುವ ನನ್ನ ಸಹೋದರ ಸಹೋದರಿಯರೆ ಮತ್ತು ನಮ್ಮ ಅನೇಕ ಹಿರಿಯ ಮುಖ್ಯಮಂತ್ರಿಗಳು ಇಂದು ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಯಿಂದ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಎಲ್ಲರಿಗೂ ನನ್ನ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು; ದೇಶಾದ್ಯಂತದ ಕೋಟ್ಯಂತರ ರೈತರಿಗೆ ₹18,000 ಕೋಟಿಗೂ ಹೆಚ್ಚಿನ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು
March 13th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಸುಮಾರು ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ನಡೆದ ಭವ್ಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಗರದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ದೇಶಾದ್ಯಂತದಿಂದ ಕಾರ್ಯಕ್ರಮದಲ್ಲಿ ಸೇರಿದ್ದ ರೈತರು ಹಾಗೂ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಸಹೋದರ, ಸಹೋದರಿಯರನ್ನು ಅವರು ಸ್ವಾಗತಿಸಿದರು. ನವರಾತ್ರಿಯ ಮುನ್ನಾದಿನದಂದು ಮಾ ಕಾಮಾಖ್ಯ ಅವರ ಪವಿತ್ರ ಭೂಮಿಯಲ್ಲಿ ಇರುವ ಸೌಭಾಗ್ಯಕ್ಕಾಗಿ ಪ್ರಧಾನಮಂತ್ರಿಯವರು ಕೃತಜ್ಞತೆ ಸಲ್ಲಿಸಿದರು. ನವರಾತ್ರಿ ಪ್ರಾರಂಭವಾಗುವ ಸ್ವಲ್ಪ ಮೊದಲು ಮಾ ಕಾಮಾಖ್ಯ ಅವರ ಈ ಪವಿತ್ರ ಭೂಮಿಯಲ್ಲಿ ನಿಮ್ಮ ದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ ಎಂದು ಶ್ರೀ ಮೋದಿ ಅವರು ಹೇಳಿದರು.ಎನ್ಎಕ್ಸ್ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 12th, 10:47 pm
ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.ಎನ್ಎಕ್ಸ್ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 12th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್ವರ್ಕ್ನ ಎನ್ಎಕ್ಸ್ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.ಫಲಿತಾಂಶಗಳ ಪಟ್ಟಿ: ಫಿನ್ಲೆಂಡ್ ಅಧ್ಯಕ್ಷರ ಭೇಟಿ
March 05th, 04:36 pm
ಫಿನ್ಲೆಂಡ್ ಭಾರತೀಯ ವೃತ್ತಿಪರರಿಗೆ, ವಿಶೇಷವಾಗಿ ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿಪ್ರಮುಖ ತಾಣವಾಗಿ ಹೊರಹೊಮ್ಮಿದೆ. ವಲಸೆ ಮತ್ತು ಚಲನಶೀಲತೆ ಪಾಲುದಾರಿಕೆ ಕುರಿತ ತಿಳಿವಳಿಕೆ ಒಪ್ಪಂದವು ಪ್ರತಿಭೆಗಳ ಚಲನಶೀಲತೆಯನ್ನು ಸುಗಮಗೊಳಿಸುತ್ತದೆ.ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ
March 02nd, 05:05 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ
March 02nd, 05:04 pm
ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರಫೆಬ್ರವರಿ 28 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ
February 27th, 03:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 28, 2026 ರಂದು ರಾಜಸ್ಥಾನದ ಅಜ್ಮೀರ್ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ, ಪ್ರಧಾನಮಂತ್ರಿ ₹16,680 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಗರಾಭಿವೃದ್ಧಿ, ಕುಡಿಯುವ ನೀರು ಸರಬರಾಜು, ರಸ್ತೆಗಳು, ನೀರಾವರಿ, ಇಂಧನ, ಕೈಗಾರಿಕಾ ಮೂಲಸೌಕರ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಈ ಯೋಜನೆಗಳು ಒಳಗೊಂಡಿವೆ.Cabinet clears higher equity limit for POWERGRID
February 24th, 04:25 pm
The Cabinet Committee on Economic Affairs, chaired by PM Modi, has approved enhanced delegation to POWERGRID, raising its equity investment limit from Rs. 5,000 crore to Rs. 7,500 crore per subsidiary. This will enable greater participation in capital-intensive transmission projects, strengthen renewable energy evacuation and ensure affordable, clean power for consumers.ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
February 21st, 12:30 pm
ಭಾರತ-ಬ್ರೆಜಿಲ್ ಸಂಬಂಧಗಳು ಅಧ್ಯಕ್ಷ ಲೂಲಾ ಅವರ ದೃಷ್ಟಿಕೋನ ಮತ್ತು ಸ್ಪೂರ್ತಿದಾಯಕ ನಾಯಕತ್ವದಿಂದ ದೀರ್ಘಕಾಲದಿಂದ ಪ್ರಯೋಜನ ಪಡೆದಿವೆ. ಕಳೆದ ಕೆಲವು ವರ್ಷಗಳಿಂದ, ನಾನು ಅವರನ್ನು ಹಲವಾರು ಸಂದರ್ಭಗಳಲ್ಲಿ ಭೇಟಿಯಾಗುವ ಸೌಭಾಗ್ಯವನ್ನು ಪಡೆದಿದ್ದೇನೆ. ಅಂತಹ ಪ್ರತಿಯೊಂದು ಸಂವಾದದಲ್ಲೂ, ಭಾರತದ ಬಗ್ಗೆ ಅವರ ಆತ್ಮೀಯ ಸ್ನೇಹ ಮತ್ತು ಶಾಶ್ವತ ನಂಬಿಕೆಯನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ.ಭಾರತ-AI ಇಂಪ್ಯಾಕ್ಟ್ ಶೃಂಗಸಭೆ 2026: ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರೊಂದಿಗೆ ಪ್ರಧಾನಮಂತ್ರಿ ದ್ವಿಪಕ್ಷೀಯ ಸಭೆ
February 20th, 09:37 pm
ಪ್ರಸ್ತುತ ನವದೆಹಲಿಯಲ್ಲಿ ಫೆಬ್ರವರಿ ನಡೆಯುತ್ತಿರುವ ಭಾರತ-AI ಇಂಪ್ಯಾಕ್ಟ್ ಶೃಂಗಸಭೆ 2026ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರನ್ನು ಭೇಟಿ ಮಾಡಿ ಸಭೆ ನಡೆಸಿದರು. ಇದು ಇಬ್ಬರು ನಾಯಕರ ನಡುವಿನ ಮೊದಲ ಸಭೆಯಾಗಿದೆ.Visit of H.E. Mr. Dick Schoof, Prime Minister of the Netherlands, to India
February 19th, 08:47 pm
PM Modi held a bilateral meeting with H.E. Mr. Dick Schoof, Prime Minister of the Netherlands. Prime Minister Schoof underscored the importance of the Summit and expressed confidence that the Summit Declaration will steer future policy discussions. Reviewing the bilateral relationship, both leaders welcomed the steady progress in the India-Netherlands partnership.ಸ್ಪೇನ್ ರಾಷ್ಟ್ರಾಧ್ಯಕ್ಷರಾದ ಗೌರವಾನ್ವಿತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರ ಭಾರತದ ಭೇಟಿ
February 18th, 05:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಫೆಬ್ರವರಿ 18 ಮತ್ತು 19, 2026ರಂದು AI ಇಂಪ್ಯಾಕ್ಟ್ ಶೃಂಗಸಭೆ 2026 ರಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. 2024 ರ ಅಕ್ಟೋಬರ್ 27 ರಿಂದ 29 ರ ನಡುವೆ ನಡೆದ ದ್ವಿಪಕ್ಷೀಯ ಭೇಟಿಯ ನಂತರ ಇದು ಅವರ ಭಾರತದ ಎರಡನೇ ಅಧಿಕೃತ ಭೇಟಿಯಾಗಿದೆ. ಅವರೊಂದಿಗೆ ಡಿಜಿಟಲ್ ರೂಪಾಂತರ ಮತ್ತು ನಾಗರಿಕ ಸೇವಾ ಸಚಿವರಾದ ಶ್ರೀ ಆಸ್ಕರ್ ಲೋಪೆಜ್ ಅಗುಡಾ ಮತ್ತು ಸ್ಪೇನ್ನ ಕೃಷಿ, ಮೀನುಗಾರಿಕೆ ಮತ್ತು ಆಹಾರ ಸಚಿವರಾದ ಶ್ರೀ ಲೂಯಿಸ್ ಪ್ಲಾನಾಸ್ ಪುಚಾಡೆಸ್ ಕೂಡಾ ಭಾರತಕ್ಕೆ ಭೇಟಿ ನೀಡಿದ್ದರು.ಭಾರತ-ಫ್ರಾನ್ಸ್ ಜಂಟಿ ಹೇಳಿಕೆ
February 18th, 08:10 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.ಫ್ರೆಂಚ್ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿಯ ಫಲಶ್ರುತಿಯ ವಿವರಗಳು ಹೀಗಿವೆ
February 17th, 07:00 pm
ಭಾರತ-ಫ್ರಾನ್ಸ್ ಸಂಬಂಧವನ್ನು ವಿಶೇಷ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಗೆ ಮೇಲ್ದರ್ಜೆಗೇರಿಸುವುದುಮಲೇಷ್ಯಾದಲ್ಲಿ ವ್ಯಾಪಾರೋದ್ಯಮಿಗಳ ನಾಯಕರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
February 08th, 02:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಲೇಷ್ಯಾದ ನಾಲ್ವರು ಉದ್ಯಮದ ನಾಯಕರೊಂದಿಗೆ ಸಂವಾದ ನಡೆಸಿದರು. ಅವರು ಪೆಟ್ರೋನಾಸ್ನ ಅಧ್ಯಕ್ಷ ಮತ್ತು ಗ್ರೂಪ್ ಸಿಇಒ ತಾನ್ ಶ್ರೀ ಟೆಂಕು ಮುಹಮ್ಮದ್ ತೌಫಿಕ್; ಟಾನ್ ಶ್ರೀ ಡಾಟೊ ಸೆರಿ ವಿನ್ಸೆಂಟ್ ಟಾನ್ ಚೀ ಯಿಯೋನ್, ಬೆರ್ಜಯಾ ಕಾರ್ಪೊರೇಷನ್ ಬರ್ಹಾದ್ನ ಸಂಸ್ಥಾಪಕ; ಡಾಟೊ ಅಮಿರುಲ್ ಫೈಸಲ್ ವಾನ್ ಜಹೀರ್, ಖಜಾನಾ ನ್ಯಾಷನಲ್ ಬೆರ್ಹಾದ್ನ ವ್ಯವಸ್ಥಾಪಕ ನಿರ್ದೇಶಕ; ಮತ್ತು ಫಿಸನ್ ಎಲೆಕ್ಟ್ರಾನಿಕ್ಸ್ನ ಸಂಸ್ಥಾಪಕ ಡಾಟೊ ಪುವಾ ಖೈನ್ ಸೆಂಗ್ ಅವರನ್ನು ಭೇಟಿಯಾದರು.