India – France Joint Statement
February 18th, 08:10 am
At the invitation of Hon’ble Prime Minister of India, Shri Narendra Modi, President of the French Republic H.E. Mr. Emmanuel Macron paid an official visit to India from 17 to 19 February 2026 and participated in the Artificial Intelligence Impact Summit 2026. During the visit, the two leaders held bilateral talks and jointly inaugurated the 2026 India-France Year of Innovation in Mumbai on 17 February. This is President Macron’s 4th visit to India and it follows Prime Minister Modi’s visit to France in February 2025.ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ವಿಸಿ ಮೂಲಕ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 27th, 11:01 am
ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜಿ. ಕಿಶನ್ ರೆಡ್ಡಿ ಜೀ; ಆಂಧ್ರಪ್ರದೇಶದ ಕೈಗಾರಿಕಾ ಸಚಿವರಾದ ಶ್ರೀ ಟಿ. ಜಿ. ಭರತ್ ಜೀ; ಇನ್ ಸ್ಪೇಸ್ ಅಧ್ಯಕ್ಷರಾದ ಶ್ರೀ ಪವನ್ ಗೋಯೆಂಕಾ ಜೀ; ಸ್ಕೈರೂಟ್ ತಂಡ; ಇತರ ಗಣ್ಯರು; ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೈದರಾಬಾದ್ನ ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನೆ
November 27th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತೆಲಂಗಾಣದ ಹೈದರಾಬಾದ್ನಲ್ಲಿರುವ ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವನ್ನು ಕಾಣುತ್ತಿದೆ ಎಂದು ಹೇಳಿದರು. ಮತ್ತು ಖಾಸಗಿ ವಲಯವು ಎತ್ತರಕ್ಕೆ ಹಾರಾಡುತ್ತಿರುವುದರಿಂದ ಭಾರತದ ಬಾಹ್ಯಾಕಾಶ ಪೂರಕ ವ್ಯವಸ್ಥೆಯು ಭಾರಿ ಏರಿಕೆಯನ್ನು ಕಂಡಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದರು. ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶದ ಯುವಕರ ನಾವೀನ್ಯತೆ, ಅಪಾಯ ಎದುರಿಸುವ ಸಾಮರ್ಥ್ಯ ಮತ್ತು ಉದ್ಯಮಶೀಲತೆ ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಅವರು ಒತ್ತಿ ಹೇಳಿದರು.2277.397 ಕೋಟಿ ರೂ. ವೆಚ್ಚದ ಡಿ ಎಸ್ ಐ ಆರ್ ನ "ಸಾಮರ್ಥ್ಯ ನಿರ್ಮಾಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ" ಯೋಜನೆಗೆ ಸಂಪುಟದ ಅನುಮೋದನೆ
September 24th, 05:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ, ಹದಿನೈದನೇ ಹಣಕಾಸು ಆಯೋಗದ 2021-22 ರಿಂದ 2025-26 ರವರೆಗಿನ ಆವರ್ತನ ಅವಧಿಗೆ ಒಟ್ಟು 2277.397 ಕೋಟಿ ರೂ.ಗಳ ಸಾಮರ್ಥ್ಯ ನಿರ್ಮಾಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಕುರಿತ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಇಲಾಖೆ/ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (ಡಿ ಎಸ್ ಐ ಆರ್ / ಸಿ ಎಸ್ ಐ ಆರ್ ) ಯೋಜನೆಗೆ ಅನುಮೋದನೆ ನೀಡಿದೆ.ಭಾರತ ಸಿಂಗಾಪುರ ಜಂಟಿ ಹೇಳಿಕೆ
September 04th, 08:04 pm
ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 04th, 12:45 pm
ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 23rd, 10:10 pm
ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 23rd, 05:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ವೈಯುಜಿಎಂ ಸಮಾವೇಶದಲ್ಲಿ ಪ್ರಧಾನಮಂತ್ರಿ ಭಾಷಣ
April 29th, 11:01 am
ಇಂದು, ಸರ್ಕಾರ, ಶೈಕ್ಷಣಿಕ ವಲಯ, ವಿಜ್ಞಾನ ಮತ್ತು ಸಂಶೋಧನೆಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಉಪಸ್ಥಿತರಿದ್ದಾರೆ. ಈ ಏಕತೆ, ಈ ಸಂಗಮವನ್ನೇ ನಾವು ವೈಯುಜಿಎಂ ಎಂದು ಕರೆಯುತ್ತೇವೆ. ವಿಕಸಿತ ಭಾರತದ ಭವಿಷ್ಯದ ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಪಾಲುದಾರರು ಒಟ್ಟಿಗೆ ಸೇರಿ ತೊಡಗಿಸಿಕೊಂಡಿರುವ ಒಂದು ವೈಯುಜಿಎಂ. ಭಾರತದ ಇನೋವೇಶನ್ ಸಾಮರ್ಥ್ಯವನ್ನು ಮತ್ತು ಡೀಪ್-ಟೆಕ್ನಲ್ಲಿ ಅದರ ಪಾತ್ರವನ್ನು ಹೆಚ್ಚಿಸಲು ನಾವು ಮಾಡುತ್ತಿರುವ ಪ್ರಯತ್ನಗಳನ್ನು ಈ ಕಾರ್ಯಕ್ರಮವು ಮತ್ತಷ್ಟು ಬಲಪಡಿಸುತ್ತದೆ ಎಂದು ನಾನು ನಂಬುತ್ತೇನೆ. ಇಂದು ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ AI, ಇಂಟೆಲಿಜೆಂಟ್ ಸಿಸ್ಟಮ್ಸ್, ಹಾಗೂ ಬಯೋಸೈನ್ಸಸ್, ಬಯೋಟೆಕ್ನಾಲಜಿ, ಆರೋಗ್ಯ ಮತ್ತು ವೈದ್ಯಕೀಯ ವಿಭಾಗಗಳಲ್ಲಿ ಸೂಪರ್ ಹಬ್ಗಳ ಆರಂಭಕ್ಕೆ ಚಾಲನೆ ದೊರೆತಿದೆ. ಇಂದು ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್ ನ ಉದ್ಘಾಟನೆಯೂ ಆಗಿದೆ. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸಲು ಪ್ರತಿಜ್ಞೆಯನ್ನು ಸಹ ತೆಗೆದುಕೊಳ್ಳಲಾಗಿದೆ. ಈ ಉಪಕ್ರಮಕ್ಕಾಗಿ ವಾಧ್ವಾನಿ ಫೌಂಡೇಶನ್, ನಮ್ಮ ಐಐಟಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ವಿಶೇಷವಾಗಿ, ನನ್ನ ಸ್ನೇಹಿತರಾದ ರೊಮೇಶ್ ವಾಧ್ವಾನಿ ಜಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಿಮ್ಮ ಸಮರ್ಪಣೆ ಮತ್ತು ಪೂರ್ವಭಾವಿ ಪ್ರಯತ್ನಗಳಿಂದಾಗಿ ಖಾಸಗಿ ಮತ್ತು ಸಾರ್ವಜನಿಕ ವಲಯಗಳು ಒಟ್ಟಾಗಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ತಂದಿವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು
April 29th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ (YUGM Innovation Conclave) ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಸರ್ಕಾರಿ ಅಧಿಕಾರಿಗಳು, ಶೈಕ್ಷಣಿಕ ವಲಯದವರು ಹಾಗೂ ವಿಜ್ಞಾನ ಮತ್ತು ಸಂಶೋಧನಾ ವೃತ್ತಿಪರರ ಈ ಮಹತ್ವದ ಸಮಾಗಮವನ್ನು ವಿಶೇಷವಾಗಿ ಪ್ರಸ್ತಾಪಿಸಿದರು. ಎಲ್ಲಾ ಪಾಲುದಾರರ ಈ ಸಂಗಮವೇ YUGM ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇದು ವಿಕಸಿತ ಭಾರತಕ್ಕಾಗಿ ಭವಿಷ್ಯದ ತಂತ್ರಜ್ಞಾನಗಳನ್ನು ಮುನ್ನಡೆಸುವ ಗುರಿ ಹೊಂದಿರುವ ಸಹಯೋಗವಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ಮೂಲಕ, ಭಾರತದ ನಾವೀನ್ಯತಾ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಡೀಪ್-ಟೆಕ್ನಲ್ಲಿ (Deep-tech) ಅದರ ಪಾತ್ರವನ್ನು ಬಲಪಡಿಸುವ ಪ್ರಯತ್ನಗಳು ಇನ್ನಷ್ಟು ವೇಗವನ್ನು ಪಡೆದುಕೊಳ್ಳಲಿವೆ ಎಂದು ಪ್ರಧಾನಮಂತ್ರಿಯವರು ವಿಶ್ವಾಸ ವ್ಯಕ್ತಪಡಿಸಿದರು. ಅವರು AI, ಇಂಟೆಲಿಜೆಂಟ್ ಸಿಸ್ಟಮ್ ಹಾಗೂ ಜೈವಿಕ ವಿಜ್ಞಾನ (Biosciences), ಜೈವಿಕ ತಂತ್ರಜ್ಞಾನ (Biotechnology), ಆರೋಗ್ಯ (Health) ಮತ್ತು ವೈದ್ಯಕೀಯ (Medicine) ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸುವ ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ ಸೂಪರ್ ಹಬ್ಗಳ (Super hubs) ಉದ್ಘಾಟನೆಯನ್ನು ಪ್ರಸ್ತಾಪಿಸಿದರು. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ (National Research Foundation) ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸುವ ಬದ್ಧತೆಯನ್ನು ಪುನರುಚ್ಚರಿಸುವ 'ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್' (Wadhwani Innovation Network) ನ ಪ್ರಾರಂಭದ ಬಗ್ಗೆಯೂ ಅವರು ಉಲ್ಲೇಖಿಸಿದರು. ಪ್ರಧಾನಿಯವರು ವಾಧ್ವಾನಿ ಫೌಂಡೇಶನ್, ಐಐಟಿಗಳು ಮತ್ತು ಈ ಉಪಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು. 1 ಖಾಸಗಿ ಮತ್ತು ಸಾರ್ವಜನಿಕ ವಲಯಗಳ ಸಹಯೋಗದ ಮೂಲಕ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಶ್ರೀ ರೊಮೇಶ್ ವಾಧ್ವಾನಿಯವರ ಸಮರ್ಪಣೆ ಮತ್ತು ಸಕ್ರಿಯ ಪಾತ್ರಕ್ಕಾಗಿ ಅವರು ವಿಶೇಷ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಭುವನೇಶ್ವರದಲ್ಲಿ ನಡೆದ 'ಉತ್ಕರ್ಷ್ ಒಡಿಶಾ' - ಮೇಕ್ ಇನ್ ಒಡಿಶಾ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 28th, 11:30 am
ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಅವರು, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ ಮಾಝಿ ಜೀ ಅವರು, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿಗಳು, ಒಡಿಶಾ ಸರ್ಕಾರದ ಸಚಿವರು, ಸಂಸದರು, ಶಾಸಕರು, ಕೈಗಾರಿಕಾ ಮತ್ತು ವಾಣಿಜ್ಯ ಜಗತ್ತಿನ ಪ್ರಮುಖ ಉದ್ಯಮಿಗಳು, ದೇಶ ಮತ್ತು ವಿದೇಶಗಳಿಂದ ಆಗಮಿಸಿರುವ ಹೂಡಿಕೆದಾರರು ಮತ್ತು ನನ್ನ ಪ್ರೀತಿಯ ಒಡಿಶಾದ ಸಹೋದರ ಮತ್ತು ಸಹೋದರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದೀರಿ!ಭುವನೇಶ್ವರದಲ್ಲಿ 'ಉತ್ಕರ್ಷ್ ಒಡಿಶಾ- ಮೇಕ್ ಇನ್ ಒಡಿಶಾ ಸಮಾವೇಶ- 2025' ಅನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
January 28th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ ಉತ್ಕರ್ಷ್ ಒಡಿಶಾ - ಮೇಕ್ ಇನ್ ಒಡಿಶಾ ಸಮಾವೇಶ- 2025 ಹಾಗೂ ಮೇಕ್ ಇನ್ ಒಡಿಶಾ ಪ್ರದರ್ಶನ ಮೇಳವನ್ನು ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, 2025ರ ಜನವರಿ ತಿಂಗಳಲ್ಲೇ ಒಡಿಶಾಗೆ ಇದು ತಮ್ಮ ಎರಡನೇ ಭೇಟಿಯಾಗಿದೆʼʼ ಎಂದು ಹೇಳುವ ಮೂಲಕ ʼಪ್ರವಾಸಿ ಭಾರತೀಯ ದಿವಸ್ 2025ʼ ಕಾರ್ಯಕ್ರಮವನ್ನು ಉದ್ಘಾಟಿಸಲು ತಾವು ಇದೇ ತಿಂಗಳು ಭೇಟಿ ನೀಡಿದ್ದನ್ನು ನೆನಪಿಸಿಕೊಂಡರು. ಇದು ಒಡಿಶಾದಲ್ಲಿ ಈವರೆಗಿನ ಅತಿದೊಡ್ಡ ವ್ಯಾಪಾರ ಶೃಂಗಸಭೆಯಾಗಿದೆ ಎಂದು ಬಣ್ಣಿಸಿದ ಶ್ರೀ ಮೋದಿ ಅವರು, ಮೇಕ್ ಇನ್ ಒಡಿಶಾ ಸಮಾವೇಶ- 2025ರಲ್ಲಿ ಸುಮಾರು 5-6 ಪಟ್ಟು ಹೆಚ್ಚು ಹೂಡಿಕೆದಾರರು ಭಾಗವಹಿಸಿದ್ದಾರೆ ಎಂದು ಹೇಳಿದರು. ಹಾಗೆಯೇ ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ಒಡಿಶಾ ಜನತೆ ಹಾಗೂ ಸರ್ಕಾರವನ್ನು ಅಭಿನಂದಿಸಿದರು.Cabinet approves continuation of the Atal Innovation Mission
November 25th, 08:45 pm
The Union Cabinet chaired by PM Modi approved the continuation of its flagship initiative, the Atal Innovation Mission (AIM), under the aegis of NITI Aayog, with an enhanced scope of work and an allocated budget of Rs.2,750 crore for the period till March 31, 2028. AIM 2.0 is a step towards Viksit Bharat that aims to expand, strengthen and deepen India’s already vibrant innovation and entrepreneurship ecosystem.ಯುಕೆ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 05:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್ಡಂನ ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೀರ್ ಸ್ಟಾರ್ಮರ್ ಅವರನ್ನು ಭೇಟಿ ಮಾಡಿದ್ದರು. ಉಭಯ ಪ್ರಧಾನಿಗಳ ನಡುವಿನ ಮೊದಲ ಭೇಟಿ ಇದಾಗಿದೆ. ಪ್ರಧಾನಮಂತ್ರಿಯಾಗಿ ಸ್ಟಾರ್ಮರ್ ಅಧಿಕಾರ ಸ್ವೀಕರಿಸುವುದಕ್ಕೆ ಪ್ರಧಾನಿ ಅಭಿನಂದಿಸಿದರು. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಐತಿಹಾಸಿಕ ಮೂರನೇ ಅವಧಿಯ ಅಧಿಕಾರ ವಹಿಸಿಕೊಂಡಿರುವುದಕ್ಕೆ ಪ್ರಧಾನಮಂತ್ರಿ ಸ್ಟಾರ್ಮರ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು.7ನೇ ಅಂತರ-ಸರ್ಕಾರಿ ಸಮಾಲೋಚನೆಗಾಗಿ ಜರ್ಮನಿ ಚಾನ್ಸೆಲರ್ ಅವರ ಭಾರತ ಭೇಟಿಯ ಫಲಿತಾಂಶಗಳು
October 25th, 04:50 pm
ಕ್ರಿಮಿನಲ್ ವಿಷಯಗಳಲ್ಲಿ ಪರಸ್ಪರ ಕಾನೂನು ಸಹಾಯ ಒಪ್ಪಂದ (ಎಂ ಎಲ್ ಎ ಟಿ).ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ
September 22nd, 12:00 pm
21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ಸೆಮಿಕಾನ್ ಇಂಡಿಯಾ-2024 ಸಮ್ಮೇಳನದಲ್ಲಿ ಭಾರತ ಮತ್ತು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಉನ್ನತ ಸೆಮಿಕಂಡಕ್ಟರ್ ಕಂಪನಿಗಳ ಸಿಇಒಗಳು
September 11th, 04:28 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿಂದು ಇಂಡಿಯಾ ಎಕ್ಸ್ಪೋ ಮಾರ್ಟ್ನಲ್ಲಿ ಆಯೋಜಿಸಿದ್ದ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದರು. ಸೆಮಿಕಾನ್ ಇಂಡಿಯಾ-2024 ಸೆಪ್ಟೆಂಬರ್ 11ರಿಂದ 13ರ ವರೆಗೆ 'ಸೆಮಿಕಂಡಕ್ಟರ್ ಭವಿಷ್ಯವನ್ನು ರೂಪಿಸುವುದು' ಎಂಬ ವಸ್ತು ವಿಷಯದೊಂದಿಗೆ ಆಯೋಜಿಸಲಾಗಿದೆ. 3 ದಿನಗಳ ಈ ಸಮ್ಮೇಳನವು ಭಾರತದ ಸೆಮಿಕಂಡಕ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರದರ್ಶಿಸುತ್ತದೆ, ಇದು ಭಾರತವನ್ನು ಸೆಮಿಕಂಡಕ್ಟರ್ ವಲಯದ ಜಾಗತಿಕ ತಾಣವಾಗಿ ರೂಪಿಸುತ್ತದೆ. ಜಾಗತಿಕ ಸೆಮಿಕಂಡಕ್ಟರ್ ವಲಯದ ಉನ್ನತ ನಾಯಕತ್ವವು ಸಮ್ಮೇಳನದಲ್ಲಿ ಭಾಗವಹಿಸುತ್ತಿದೆ. ಇದು ಜಾಗತಿಕ ನಾಯಕರು, ಕಂಪನಿಗಳು ಮತ್ತು ಸೆಮಿಕಂಡಕ್ಟರ್ ಉದ್ಯಮದ ತಜ್ಞರನ್ನು ಒಟ್ಟುಗೂಡಿಸುತ್ತದೆ. ಸಮ್ಮೇಳನದಲ್ಲಿ 250ಕ್ಕೂ ಹೆಚ್ಚು ಪ್ರದರ್ಶಕರು ಮತ್ತು 150 ಭಾಷಣಕಾರರು ಭಾಗವಹಿಸುತ್ತಿದ್ದಾರೆ.ದೇಶದ ವೈಜ್ಞಾನಿಕ ಸಮುದಾಯವು ಅವರ ಪ್ರಯತ್ನಗಳಿಗೆ ಸಂಪನ್ಮೂಲಗಳ ಕೊರತೆಯಾಗುವುದಿಲ್ಲ ಎಂಬ ನಂಬಿಕೆಯನ್ನು ಹೊಂದಿರಬೇಕು: ಪ್ರಧಾನಮಂತ್ರಿ
September 10th, 04:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಲೋಕ ಕಲ್ಯಾಣ ಮಾರ್ಗದ, 7ರಲ್ಲಿರುವ ತಮ್ಮ ನಿವಾಸದಲ್ಲಿ ಅನುಸಂಧಾನ್ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಆಡಳಿತ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಭೂದೃಶ್ಯ ಮತ್ತು ಸಂಶೋಧನೆ ಹಾಗು ಅಭಿವೃದ್ಧಿ ಕಾರ್ಯಕ್ರಮಗಳ ಮರುವಿನ್ಯಾಸದ ಬಗ್ಗೆ ಚರ್ಚೆ ನಡೆಯಿತು.