ಸಿಕ್ಕಿಂ@50 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 29th, 10:00 am

ಸಿಕ್ಕಿಂ ರಾಜ್ಯಪಾಲರಾದ ಶ್ರೀ ಒ.ಪಿ. ಪ್ರಕಾಶ್ ಮಾಥುರ್ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ದೋರ್ಜಿ ತ್ಸೆರಿಂಗ್ ಲೆಪ್ಚಾ ಜಿ ಮತ್ತು ಡಾ. ಇಂದ್ರಾ ಹ್ಯಾಂಗ್ ಸುಬ್ಬಾ ಜಿ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

‘ಸಿಕ್ಕಿಂ@50’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

May 29th, 09:45 am

ಗ್ಯಾಂಗ್ಟಾಕ್‌ ನಲ್ಲಿ ಇಂದು ನಡೆದ 'ಸಿಕ್ಕಿಂ@50' ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. 'ಪ್ರಗತಿಯು ಉದ್ದೇಶವನ್ನು ಸಂಧಿಸುವ ಮತ್ತು ಪ್ರಕೃತಿಯು ಬೆಳವಣಿಗೆಯನ್ನು ಪೋಷಿಸುವ ಸ್ಥಳ' ಎಂಬುದು ಈ ಕಾರ್ಯಕ್ರಮದ ವಿಷಯವಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಸಿಕ್ಕಿಂ ರಾಜ್ಯ ಸ್ಥಾಪನೆಯ 50 ನೇ ವಾರ್ಷಿಕೋತ್ಸವದ ಈ ವಿಶೇಷ ದಿನದಂದು ಸಿಕ್ಕಿಂ ಜನತೆಗೆ ಶುಭಾಶಯ ಕೋರಿದರು. ಜನರ ಉತ್ಸಾಹ, ಶಕ್ತಿ ಮತ್ತು ಉತ್ಸಾಹವನ್ನು ಖುದ್ದಾಗಿ ವೀಕ್ಷಿಸಲು ಬಯಸಿದ್ದೆ, ಆದರೆ ಪ್ರತಿಕೂಲ ಹವಾಮಾನದಿಂದಾಗಿ ತಾವು ಹಾಜರಿರಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲಿ ಸಿಕ್ಕಿಂಗೆ ಭೇಟಿ ನೀಡಿ ಅವರ ಸಾಧನೆಗಳು ಮತ್ತು ಆಚರಣೆಗಳಲ್ಲಿ ಭಾಗಿಯಾಗುವುದಾಗಿ ಭರವಸೆ ನೀಡಿದರು. ಕಳೆದ 50 ವರ್ಷಗಳ ಅವರ ಸಾಧನೆಗಳನ್ನು ಆಚರಿಸುವ ದಿನ ಇದು ಎಂದು ಪ್ರಧಾನಿ ಹೇಳಿದರು, ಈ ಭವ್ಯ ಕಾರ್ಯಕ್ರಮವನ್ನು ಸ್ಮರಣೀಯವಾಗಿಸುವಲ್ಲಿ ಶ್ರಮಿಸಿದ ಸಿಕ್ಕಿಂ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಸಿಕ್ಕಿಂ ರಾಜ್ಯದ ಸುವರ್ಣ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ ಅವರು ಮತ್ತೊಮ್ಮೆ ಸಿಕ್ಕಿಂ ಜನತೆಗೆ ಶುಭಾಶಯ ಕೋರಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ

May 25th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.

ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 23rd, 11:00 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್‌ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

May 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಉದಯೋನ್ಮುಖ(ರೈಸಿಂಗ್) ಈಶಾನ್ಯ ಹೂಡಿಕೆದಾರರ ಶೃಂಗಸಭೆ; ನವದೆಹಲಿಯಲ್ಲಿ ಮೇ 23ರಂದು ಪ್ರಧಾನಮಂತ್ರಿ ಉದ್ಘಾಟನೆ

May 22nd, 04:13 pm

ದೇಶದ ಈಶಾನ್ಯ ಪ್ರದೇಶವನ್ನು ಅವಕಾಶಗಳ ತಾಣವಾಗಿ ಎತ್ತಿ ತೋರಿಸುವ, ಜಾಗತಿಕ ಮತ್ತು ದೇಶೀಯ ಹೂಡಿಕೆ ಆಕರ್ಷಿಸುವ ಮತ್ತು ಪ್ರಮುಖ ಪಾಲುದಾರರು, ಹೂಡಿಕೆದಾರರು ಮತ್ತು ನೀತಿ ನಿರೂಪಕರನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುವ ಗುರಿ ಹೊಂದಿರುವ “ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ”ಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 23ರಂದು ಬೆಳಗ್ಗೆ 10:30ರ ಸುಮಾರಿಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸಲಿದ್ದಾರೆ.