ಪ್ರಧಾನಮಂತ್ರಿ ಅವರು ಓಮನ್ ನ ದೊರೆ ಸುಲ್ತಾನ್ ಅವರನ್ನು ಭೇಟಿ ಮಾಡಿದರು

December 18th, 05:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಸ್ಕತ್ ನಲ್ಲಿ ಮಹಾರಾಜ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ರಾಜಭವನಕ್ಕೆ ಆಗಮಿಸಿದ ಪ್ರಧಾನಮಂತ್ರಿ ಅವರನ್ನು ದೊರೆ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಔಪಚಾರಿಕ ಸ್ವಾಗತ ನೀಡಿದರು.

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 11th, 12:30 pm

ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.

ಪಿಎಂ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ 31.12.2024ರ ನಂತರ ಸಾಲದ ಅವಧಿಯನ್ನು ಪುನರ್ ರಚಿಸಲು ಮತ್ತು ವಿಸ್ತರಿಸಲು ಸಂಪುಟದ ಅನುಮೋದನೆ

August 27th, 02:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ ಸಾಲದ ಅವಧಿಯನ್ನು 31.12.2024ರ ನಂತರವೂ ಪುನರ್ ರಚಿಸಲು ಮತ್ತು ವಿಸ್ತರಿಸಲು ತನ್ನ ಅನುಮೋದನೆ ನೀಡಿದೆ. ಸಾಲದ ಅವಧಿಯನ್ನು ಈಗ 2030 ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಯ ಒಟ್ಟು ವೆಚ್ಚ 7,332 ಕೋಟಿ ರೂ. ಪುನರ್ ರಚಿಸಿದ ಯೋಜನೆಯು 50 ಲಕ್ಷ ಹೊಸ ಫಲಾನುಭವಿಗಳು ಸೇರಿದಂತೆ 1.15 ಕೋಟಿ ಫಲಾನುಭವಿಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ.

ಮಾಲ್ಡೀವ್ಸ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

July 25th, 08:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಲೆಯಲ್ಲಿರುವ ಅಧ್ಯಕ್ಷರ ಕಚೇರಿಯಲ್ಲಿ ಮಾಲ್ಡೀವ್ಸ್ ಗಣರಾಜ್ಯದ ಘನತೆವೆತ್ತ ಅಧ್ಯಕ್ಷರಾದ ಡಾ. ಮೊಹಮ್ಮದ್ ಮುಯಿಝು ಅವರನ್ನು ಭೇಟಿಯಾದರು. ಸಭೆಗೂ ಮುನ್ನ, ಅಧ್ಯಕ್ಷ ಮುಯಿಝು ಅವರು ಪ್ರಧಾನ ಮಂತ್ರಿಯವರನ್ನು ಬರಮಾಡಿಕೊಂಡು ಗಣರಾಜ್ಯ ಚೌಕದಲ್ಲಿ ಅವರಿಗೆ ಔಪಚಾರಿಕ ಸ್ವಾಗತ ನೀಡಿದರು. ಸಭೆಯು ಆತ್ಮೀಯವಾಗಿತ್ತು ಮತ್ತು ಎರಡೂ ದೇಶಗಳ ನಡುವಿನ ಆಳವಾದ ಸ್ನೇಹವನ್ನು ದೃಢೀಕರಿಸಿತು.

ಹರಿಯಾಣದ ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 14th, 11:00 am

ನಾನು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಹೇಳುತ್ತೇನೆ, ನೀವೆಲ್ಲರೂ 2 ಬಾರಿ ಹೇಳಿ, ಅಮರ್ ರಹೇ! ಅಮರ್ ರಹೇ! (ಲಾಂಗ್ ಲಿವ್! ಲಾಂಗ್ ಲಿವ್!)

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಸಾರ್ ವಿಮಾನ ನಿಲ್ದಾಣದ 410 ಕೋಟಿ ರೂಪಾಯಿ ಮೌಲ್ಯದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು

April 14th, 10:16 am

ವಿಮಾನ ಪ್ರಯಾಣವನ್ನು ಸುರಕ್ಷಿತ, ಕೈಗೆಟುಕುವ ಮತ್ತು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಹಿಸಾರ್ ನಲ್ಲಿ ಮಹಾರಾಜ ಅಗ್ರಸೇನ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ 410 ಕೋಟಿ ರೂಪಾಯಿ ಮೌಲ್ಯದ ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಹರಿಯಾಣದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು, ಅವರ ಶಕ್ತಿ, ಕ್ರೀಡಾ ಮನೋಭಾವ ಮತ್ತು ಸಹೋದರತ್ವವನ್ನು ರಾಜ್ಯದ ವ್ಯಾಖ್ಯಾನಿಸುವ ಗುಣಲಕ್ಷಣಗಳಾಗಿ ಒಪ್ಪಿಕೊಂಡರು. ಈ ಬಿಡುವಿಲ್ಲದ ಸುಗ್ಗಿಯ ಋತುವಿನಲ್ಲಿ ತಮ್ಮ ಆಶೀರ್ವಾದಕ್ಕಾಗಿ ಅವರು ದೊಡ್ಡ ಸಭಿಕರಿಗೆ ಕೃತಜ್ಞತೆ ಸಲ್ಲಿಸಿದರು.

ಕಡಿಮೆ ಮೌಲ್ಯದ ಭೀಮ್‌-ಯುಪಿಐ ವಹಿವಾಟುಗಳನ್ನು (ಪಿ2ಎಂ) ಉತ್ತೇಜಿಸಲು ಪ್ರೋತ್ಸಾಹಕ ಯೋಜನೆಗೆ ಸಂಪುಟದ ಅನುಮೋದನೆ

March 19th, 04:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2024-25ನೇ ಹಣಕಾಸು ವರ್ಷಕ್ಕೆ 'ವ್ಯಕ್ತಿಯಿಂದ ವ್ಯಾಪಾರಿಗೆ (ಪಿ2ಎಂ) ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳನ್ನು ಉತ್ತೇಜಿಸಲು ಪ್ರೋತ್ಸಾಹಕ ಯೋಜನೆ'ಯನ್ನು ಈ ಕೆಳಗಿನ ರೀತಿಯಲ್ಲಿ ಅನುಮೋದಿಸಿದೆ:

ಭಾರತ - ಮಾರಿಷಸ್ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆ

March 12th, 12:30 pm

140 ಕೋಟಿ ಭಾರತೀಯರ ಪರವಾಗಿ, ಮಾರಿಷಸ್ ಜನತೆಗೆ ಅವರ ರಾಷ್ಟ್ರೀಯ ದಿನದಂದು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ರಾಷ್ಟ್ರೀಯ ದಿನದ ಸಂದರ್ಭದಲ್ಲಿ ಮತ್ತೊಮ್ಮೆ ಮಾರಿಷಸ್‌ ಗೆ ಭೇಟಿ ನೀಡುತ್ತಿರುವುದು ನನಗೆ ಅತ್ಯಂತ ಗೌರವದ ವಿಷಯವಾಗಿದೆ. ಈ ಗೌರವಕ್ಕಾಗಿ ಪ್ರಧಾನಿ ನವೀನಚಂದ್ರ ರಾಮಗೂಲಮ್ ಮತ್ತು ಮಾರಿಷಸ್ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಮಾರಿಷಸ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣ

March 12th, 06:07 am

10 ವರ್ಷಗಳ ಹಿಂದೆ ಇದೇ ದಿನದಂದು ನಾನು ಮಾರಿಷಸ್‌ಗೆ ಬಂದಾಗ, ನಾನು ಆಗಮನಕ್ಕೆ ಕೇವಲ ಒಂದು ವಾರ ಮೊದಲು ನಾವು ಹೋಳಿ ಆಚರಿಸಿದೆವು. ನಾನು ಭಾರತದಿಂದ ಫಾಗುವಾದ ಉತ್ಸಾಹವನ್ನು ನನ್ನೊಂದಿಗೆ ತಂದಿದ್ದೇನೆ. ಈ ಬಾರಿ ನಾನು ಮಾರಿಷಸ್‌ನಿಂದ ಭಾರತಕ್ಕೆ ಹೋಳಿಯ ಬಣ್ಣಗಳನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ಒಂದು ದಿನದ ನಂತರ ನಾವು ಅಲ್ಲಿ ಹೋಳಿಯನ್ನು ಆಚರಿಸುತ್ತೇವೆ. 14 ರಂದು ಎಲ್ಲೆಡೆ ಬಣ್ಣ ಇರುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್‌ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು

March 11th, 07:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್‌ ಪ್ರಧಾನಮಂತ್ರಿ ಘನತೆವೆತ್ತ ನವೀನಚಂದ್ರ ರಾಮಗೂಲಮ್ ಅವರೊಂದಿಗೆ ಟ್ರಿಯಾನಾನ್ ಕನ್ವೆನ್ಷನ್ ಸೆಂಟರ್‌ ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಾರಿಷಸ್‌ ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ ಸ್ನೇಹಿತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವು ವಿದ್ಯಾರ್ಥಿಗಳು, ವೃತ್ತಿಪರರು, ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳು ಮತ್ತು ವ್ಯಾಪಾರ ಮುಖಂಡರು ಸೇರಿದಂತೆ ಭಾರತೀಯ ಸಮುದಾಯದ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಇದರಲ್ಲಿ ಮಾರಿಷಸ್‌ ನ ಹಲವಾರು ಸಚಿವರು, ಸಂಸದರು ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

ಸಹಕಾರಿ ಕ್ಷೇತ್ರದ ಪ್ರಗತಿ ಪರಿಶೀಲನೆಗೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಮಂತ್ರಿ

March 06th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7 ಎಲ್‌.ಕೆ.ಎಂ.ನಲ್ಲಿ ಸಹಕಾರಿ ಕ್ಷೇತ್ರದ ಪ್ರಗತಿ ಪರಿಶೀಲನೆಗಾಗಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವಲಯದಲ್ಲಿತಾಂತ್ರಿಕ ಪ್ರಗತಿಯ ಮೂಲಕ ಪರಿವರ್ತನೆಯನ್ನು ತರುವ ಸಹಕಾರ ಸೆ ಸಮೃದ್ಧಿಯನ್ನು ಉತ್ತೇಜಿಸುವುದು, ಸಹಕಾರಿ ಸಂಸ್ಥೆಗಳಲ್ಲಿ ಯುವಕರು ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಯೋಜನೆಗಳು ಮತ್ತು ಸಹಕಾರ ಸಚಿವಾಲಯದ ವಿವಿಧ ಉಪಕ್ರಮಗಳ ಬಗ್ಗೆ ಚರ್ಚೆಗಳು ನಡೆದವು.

ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಶೃಂಗಸಭೆ 2024 ರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

November 16th, 10:15 am

100 ವರ್ಷಗಳ ಹಿಂದೆ, ಹಿಂದೂಸ್ತಾನ್ ಟೈಮ್ಸ್ ಅನ್ನು ಪೂಜ್ಯ ಬಾಪು ಉದ್ಘಾಟಿಸಿದರು ... ಅವರು ಗುಜರಾತಿ ಭಾಷಣಕಾರರಾಗಿದ್ದರು, ಮತ್ತು ನೀವು 100 ವರ್ಷಗಳ ನಂತರ ಇನ್ನೊಬ್ಬ ಗುಜರಾತಿಯನ್ನು ಆಹ್ವಾನಿಸಿದ್ದೀರಿ. ನಾನು, ಹಿಂದೂಸ್ತಾನ್ ಟೈಮ್ಸ್ ಮತ್ತು ಕಳೆದ 100 ವರ್ಷಗಳಲ್ಲಿ ಈ ಐತಿಹಾಸಿಕ ಪ್ರಯಾಣದೊಂದಿಗೆ ಸಂಬಂಧ ಹೊಂದಿರುವವರು, ಅದನ್ನು ಪೋಷಿಸಲು ಕೊಡುಗೆ ನೀಡಿದವರು, ಹೋರಾಡಿದ ಮತ್ತು ಸವಾಲುಗಳನ್ನು ಎದುರಿಸಿದ ಆದರೆ ದೃಢವಾಗಿ ನಿಂತ ಎಲ್ಲರನ್ನೂ ಅಭಿನಂದಿಸುತ್ತೇನೆ. ಅವರೆಲ್ಲರೂ ಇಂದು ಅಭಿನಂದನೆಗೆ ಅರ್ಹರು ಮತ್ತು ಗೌರವಕ್ಕೆ ಅರ್ಹರು. 100 ವರ್ಷಗಳ ಪ್ರಯಾಣವನ್ನು ಪೂರ್ಣಗೊಳಿಸುವುದು ನಿಜಕ್ಕೂ ಮಹತ್ವದ್ದಾಗಿದೆ. ನೀವೆಲ್ಲರೂ ಈ ಮನ್ನಣೆಗೆ ಅರ್ಹರು, ಮತ್ತು ಭವಿಷ್ಯಕ್ಕಾಗಿ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ನಾನು ಇಲ್ಲಿಗೆ ಬಂದಾಗ, ನಾನು ಕುಟುಂಬದ ಸದಸ್ಯರನ್ನು ಭೇಟಿಯಾದೆ ಮತ್ತು ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಪ್ರಯಾಣವನ್ನು ಪ್ರದರ್ಶಿಸುವ ಗಮನಾರ್ಹ ಪ್ರದರ್ಶನವನ್ನು ವೀಕ್ಷಿಸುವ ಅವಕಾಶ ಸಿಕ್ಕಿತು. ನಿಮಗೆ ಸಮಯವಿದ್ದರೆ ಹೊರಡುವ ಮೊದಲು ಅಲ್ಲಿಗೆ ಭೇಟಿ ನೀಡಿ ಸ್ವಲ್ಪ ಸಮಯ ಕಳೆಯಲು ನಾನು ನಿಮ್ಮೆಲ್ಲರನ್ನೂ ಪ್ರೋತ್ಸಾಹಿಸುತ್ತೇನೆ. ಇದು ಕೇವಲ ಪ್ರದರ್ಶನವಲ್ಲ, ಆದರೆ ಒಂದು ಅನುಭವ. 100 ವರ್ಷಗಳ ಇತಿಹಾಸ ನನ್ನ ಕಣ್ಣ ಮುಂದೆ ಹಾದುಹೋದಂತೆ ಭಾಸವಾಯಿತು. ದೇಶ ಸ್ವಾತಂತ್ರ್ಯ ಪಡೆದ ದಿನದಿಂದ ಮತ್ತು ಸಂವಿಧಾನವನ್ನು ಜಾರಿಗೆ ತಂದ ದಿನದಿಂದ ನಾನು ಪತ್ರಿಕೆಗಳನ್ನು ನೋಡಿದೆ. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಡಾ.ಎಂ.ಎಸ್.ಸ್ವಾಮಿನಾಥನ್ ಅವರಂತಹ ಪ್ರಸಿದ್ಧ ಮತ್ತು ಪ್ರಖ್ಯಾತ ವ್ಯಕ್ತಿಗಳು ಹಿಂದೂಸ್ತಾನ್ ಟೈಮ್ಸ್ ಗೆ ಬರೆಯುತ್ತಿದ್ದರು. ಅವರ ಬರಹಗಳು ಪತ್ರಿಕೆಯನ್ನು ಅಪಾರವಾಗಿ ಶ್ರೀಮಂತಗೊಳಿಸಿದವು. ನಿಜವಾಗಿಯೂ, ನಾವು ಬಹಳ ದೂರ ಸಾಗಿದ್ದೇವೆ. ಸ್ವಾತಂತ್ರ್ಯಕ್ಕಾಗಿ ಹೋರಾಡುವುದರಿಂದ ಹಿಡಿದು ಸ್ವಾತಂತ್ರ್ಯದ ನಂತರ ಮಿತಿಯಿಲ್ಲದ ಭರವಸೆಯ ಅಲೆಗಳ ಮೇಲೆ ಸವಾರಿ ಮಾಡುವವರೆಗೆ, ಈ ಪ್ರಯಾಣವು ಅಸಾಧಾರಣ ಮತ್ತು ನಂಬಲಾಗದಂತಹದ್ದಾಗಿದೆ. ನಿಮ್ಮ ಪತ್ರಿಕೆಯಲ್ಲಿ, 1947 ರ ಅಕ್ಟೋಬರ್ ನಲ್ಲಿ ಕಾಶ್ಮೀರದ ಸೇರ್ಪಡೆಯ ನಂತರ ಇದ್ದ ಉತ್ಸಾಹವನ್ನು ನಾನು ಗ್ರಹಿಸಿದೆ, ಅದನ್ನು ಪ್ರತಿಯೊಬ್ಬ ನಾಗರಿಕರೂ ಅನುಭವಿಸಿದ್ದಾರೆ. ಆ ಕ್ಷಣದಲ್ಲಿ, ನಿರ್ಧಾರ ತೆಗೆದುಕೊಳ್ಳದಿರುವಿಕೆಯು ಕಾಶ್ಮೀರವನ್ನು ಏಳು ದಶಕಗಳ ಕಾಲ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನು ನಾನು ಅರಿತುಕೊಂಡೆ. ಇಂದು, ನಿಮ್ಮ ಪತ್ರಿಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆಯ ಮತದಾನದ ಸುದ್ದಿಗಳನ್ನು ವರದಿ ಮಾಡುತ್ತದೆ, ಇದು ಹಿಂದಿನದಕ್ಕೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ಮತ್ತೊಂದು ಪತ್ರಿಕೆಯ ಪುಟವು ಗಮನ ಸೆಳೆಯುತ್ತದೆ ಮತ್ತು ಓದುಗರನ್ನು ಆಕರ್ಷಿಸುತ್ತದೆ. ಒಂದು ವಿಭಾಗವು ಅಸ್ಸಾಂ ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂದು ವರದಿ ಮಾಡಿದರೆ, ಇನ್ನೊಂದು ವಿಭಾಗವು ಅಟಲ್ ಜಿ ಬಿಜೆಪಿಗೆ ಅಡಿಪಾಯ ಹಾಕಿದ ಬಗ್ಗೆ ಮಾತನಾಡಿತು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸುತ್ತಿರುವುದು ಆಹ್ಲಾದಕರ ಕಾಕತಾಳೀಯವಾದ ಸಂಗತಿಯಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು

November 16th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಹಿಂದೂಸ್ತಾನ್ ಟೈಮ್ಸ್ ಅನ್ನು 100 ವರ್ಷಗಳ ಹಿಂದೆ ಮಹಾತ್ಮ ಗಾಂಧಿಯವರು ಉದ್ಘಾಟಿಸಿದರು ಎಂದು ಹೇಳಿದರು. ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಐತಿಹಾಸಿಕ ಪ್ರಯಾಣಕ್ಕಾಗಿ ಮತ್ತು ಅದರ ಉದ್ಘಾಟನೆಯಿಂದ ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು. ಸ್ಥಳದಲ್ಲಿ ಹಿಂದೂಸ್ತಾನ್ ಟೈಮ್ಸ್ ಪ್ರದರ್ಶನಕ್ಕೆ ಭೇಟಿ ನೀಡಿದ ಶ್ರೀ ಮೋದಿ, ಇದೊಂದು ಅಪೂರ್ವ ಅನುಭವವಾಗಿದೆ ಎಂದು ಹೇಳಿದರು ಮತ್ತು ಎಲ್ಲಾ ಪ್ರತಿನಿಧಿಗಳು ಇಲ್ಲಿಗೆ ಭೇಟಿ ನೀಡುವಂತೆ ಒತ್ತಾಯಿಸಿದರು. ಭಾರತಕ್ಕೆ ಸ್ವಾತಂತ್ರ್ಯ ದೊರೆತು ಸಂವಿಧಾನ ಜಾರಿಯಾದ ಕಾಲದ ಹಳೆಯ ದಿನಪತ್ರಿಕೆಗಳನ್ನು ಕಣ್ಣಾರೆ ಕಂಡಿದ್ದೇನೆ ಎಂದರು. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷಚಂದ್ರ ಬೋಸ್, ಡಾ.ಶ್ಯಾಮಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಎಂ.ಎಸ್. ಸ್ವಾಮಿನಾಥನ್ ಅವರಂತಹ ಅನೇಕ ದಿಗ್ಗಜರು ಹಿಂದೂಸ್ತಾನ್ ಟೈಮ್ಸ್ ಗಾಗಿ ಲೇಖನಗಳನ್ನು ಬರೆದಿದ್ದಾರೆ ಎಂದು ಶ್ರೀ ಮೋದಿ ಹೇಳಿರು. ಸ್ವಾತಂತ್ರ್ಯದ ನಂತರದ ಅವಧಿಯಲ್ಲಿ ಭರವಸೆಯೊಂದಿಗೆ ಮುನ್ನಡೆಯುವ ಜೊತೆಗೆ ಸ್ವಾತಂತ್ರ್ಯ ಹೋರಾಟಕ್ಕೆ ಸಾಕ್ಷಿಯಾದ ಸುದೀರ್ಘ ಪ್ರಯಾಣವು ಅಸಾಧಾರಣ ಮತ್ತು ಅದ್ಭುತವಾಗಿದೆ ಎಂದು ಅವರು ಹೇಳಿದರು. 1947ರ ಅಕ್ಟೋಬರ್‌ನಲ್ಲಿ ಕಾಶ್ಮೀರವನ್ನು ಭಾರತದೊಂದಿಗೆ ವಿಲೀನದ ಸುದ್ದಿಯನ್ನು ಓದಿದ ನಂತರ ಪ್ರತಿಯೊಬ್ಬ ಪ್ರಜೆಯಂತೆ ನಾನು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಹೇಳಿದರು. ಆದಾಗ್ಯೂ, ಏಳು ದಶಕಗಳ ಕಾಲ ಅನಿರ್ದಿಷ್ಟತೆಯು ಕಾಶ್ಮೀರವನ್ನು ಹೇಗೆ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನೂ ಆ ಕ್ಷಣದಲ್ಲಿ ತಾನು ಅರಿತುಕೊಂಡೆನು ಎಂದು ಅವರು ಹೇಳಿದರು. ಆದರೆ ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನದ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ಶ್ರೀ ಮೋದಿ ಅವರು ಪತ್ರಿಕೆಯಲ್ಲಿ ಅದರ ಒಂದು ಬದಿಯಲ್ಲಿ ಅಸ್ಸಾಂ ಅನ್ನು ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂಬ ಸುದ್ದಿ ಇದೆ, ಇನ್ನೊಂದು ಬದಿಯಲ್ಲಿ ಅಟಲ್ ಜಿ ಅವರು ಭಾರತೀಯ ಜನತಾ ಪಕ್ಷದ ಅಡಿಪಾಯವನ್ನು ಹಾಕಿದರು ಎಂಬ ಸುದ್ದಿಯು ಪ್ರಕಟವಾಗಿರುವುದನ್ನು ಗಮನಿಸಿದರು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ದೊಡ್ಡ ಪಾತ್ರವನ್ನು ವಹಿಸುತ್ತಿರುವುದು ಕಾಕತಾಳೀಯವಾಗಿದೆ ಎಂದು ಅವರು ಹೇಳಿದರು.

ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಡಾ. ಮೊಹಮದ್ ಮುಯಿಜ್ಜು ಅವರ ಭಾರತ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 06 - ಅಕ್ಟೋಬರ್ 10, 2024)

October 07th, 03:40 pm

ಭಾರತ-ಮಾಲ್ಡೀವ್ಸ್ ಸಹಯೋಗ: ಸಮಗ್ರ ಆರ್ಥಿಕ ಮತ್ತು ಕಡಲ ಭದ್ರತಾ ಪಾಲುದಾರಿಕೆಗಾಗಿ ಒಂದು ದೃಷ್ಟಿಕೋನ.

ಭಾರತ ಮತ್ತು ಮಾಲ್ಡೀವ್ಸ್: ಸಮಗ್ರ ಆರ್ಥಿಕ ಮತ್ತು ಕಡಲ ತೀರದ ಸುರಕ್ಷತೆಯಲ್ಲಿ ಪಾಲುದಾರಿಕೆಗಾಗಿ ಒಂದು ದೂರದರ್ಶಿತ್ವ

October 07th, 02:39 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮದ್ ಮುಯಿಝು ಅವರು 7ನೇ ಅಕ್ಟೋಬರ್ 2024ರಂದು ಭೇಟಿಯಾಗಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿಚಾರವಾಗಿ ವಿಸ್ತೃತವಾಗಿ ಸಮಗ್ರವಾಗಿ ಪರಿಶೀಲಿಸಿದ ಉಭಯ ನಾಯಕರು ಎರಡೂ ದೇಶಗಳ ಜನರ ಒಳಿತಿಗಾಗಿ ಐತಿಹಾಸಿಕವೆನಿಸುವ ಇನ್ನಷ್ಟು ನಿಕಟ ಮತ್ತು ವಿಶೇಷ ಸಂಬಂಧವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಈವರೆಗೆ ಸಾಧಿಸಿದ ಪ್ರಗತಿಯ ಪರಿಶೀಲನೆ ನಡೆಸಿದರು.

ಮಾಲ್ಡೀವ್ಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅವತರಣಿಕೆ (ಅಕ್ಟೋಬರ್ 7, 2024)

October 07th, 12:25 pm

ಮೊದಲನೆಯದಾಗಿ, ನಾನು ಅಧ್ಯಕ್ಷ ಮುಯಿಝು ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ನೀಡಲು ಬಯಸುತ್ತೇನೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರು ಫೆಬ್ರವರಿ 29 ರಂದು ಮಾರಿಷಸ್ ನ ಅಗಲೆಗಾ ದ್ವೀಪದಲ್ಲಿ ಹೊಸ ಏರ್ ಸ್ಟ್ರಿಪ್ ಮತ್ತು ಜೆಟ್ಟಿಯನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ

February 27th, 06:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಗೌರವಾನ್ವಿತ ಶ್ರೀ ಪ್ರವಿಂದ್ ಜುಗ್ನೌತ್ ಅವರು 2024 ರ ಫೆಬ್ರವರಿ 29 ರಂದು ಮಧ್ಯಾಹ್ನ 1 ಗಂಟೆಗೆ ಮಾರಿಷಸ್ ನ ಅಗಲೇಗಾ ದ್ವೀಪದಲ್ಲಿ ಹೊಸ ಏರ್ ಸ್ಟ್ರಿಪ್ ಮತ್ತು ಸೇಂಟ್ ಜೇಮ್ಸ್ ಜೆಟ್ಟಿ ಮತ್ತು ಆರು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ.

​​​​​​​ಅರಬ್‌ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿ ನಡೆದ ʻಅಹ್ಲನ್ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

February 13th, 11:19 pm

ಇಂದು, ನೀವು ಅಬುಧಾಬಿಯಲ್ಲಿ ಇತಿಹಾಸ ನಿರ್ಮಿಸಿದ್ದೀರಿ. ಅರಬ್‌ ಸಂಯುಕ್ತ ಸಂಸ್ಥಾನದ(ಯುಎಇ) ವಿವಿಧ ಮೂಲೆಗಳಿಂದ ಮತ್ತು ಭಾರತದ ವಿವಿಧ ರಾಜ್ಯಗಳಿಂದ ನೀವು ಬಂದಿದ್ದೀರಿ, ಆದರೆ ಎಲ್ಲರ ಹೃದಯಗಳು ಪರಸ್ಪರ ಬೆಸೆದುಕೊಂಡಿವೆ. ಈ ಐತಿಹಾಸಿಕ ಕ್ರೀಡಾಂಗಣದಲ್ಲಿ ಪ್ರತಿ ಹೃದಯ ಮಿಡಿತವು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿʼ! ಪ್ರತಿ ಉಸಿರು ಹೇಳುತ್ತಿದೆ - ʻಭಾರತ-ಯುಎಇ ಸ್ನೇಹ ಚಿರಾಯುವಾಗಲಿ! ಪ್ರತಿಯೊಂದು ಧ್ವನಿಯೂ ಹೇಳುತ್ತಿದೆ - ʻಭಾರತ-ಯುಎಇ ಸ್ನೇಹವು ಚಿರಾಯುವಾಗಲಿ! ನಾವು ಈ ಕ್ಷಣವನ್ನು ಪೂರ್ಣವಾಗಿ ಬದುಕಬೇಕು. ಇಂದು, ನಾವು ಜೀವಮಾನವಿಡೀ ನಮ್ಮೊಂದಿಗೆ ಉಳಿಯುವ ನೆನಪುಗಳನ್ನು ಸಂಗ್ರಹಿಸಬೇಕಾಗಿದೆ - ಜೀವಮಾನವಿಡೀ ನನ್ನೊಂದಿಗೆ ಉಳಿಯುವ ನೆನಪುಗಳು...

ಯು.ಎ.ಇ.ಯಲ್ಲಿ ನಡೆದ ಭಾರತೀಯ ಸಮುದಾಯದ -''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಸಂವಾದ

February 13th, 08:30 pm

ಯು.ಎ.ಇ.ಯಲ್ಲಿನ ಭಾರತೀಯ ಸಮುದಾಯವು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಗೌರವಾರ್ಥವಾಗಿ ಆಯೋಜಿಸಿದ ''ಅಹ್ಲಾನ್ ಮೋದಿ'' ಕಾರ್ಯಕ್ರಮದಲ್ಲಿ ಯು.ಎ.ಇ.ಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು. ಯು.ಎ.ಇ.ಯ 7 ಎಮಿರೇಟ್ಸ್ ನಾದ್ಯಂತ ಭಾರತೀಯ ಅನಿವಾಸಿ ಸಮುದಾಯ (ಡಯಾಸ್ಪೊರಾ) ಬೃಹತ್ ಪ್ರಮಾಣದಲ್ಲಿ ಭಾಗವಹಿಸುವಿಕೆ ಮತ್ತು ಎಲ್ಲಾ ಸಮುದಾಯಗಳ ಭಾರತೀಯರನ್ನು ''ಅಹ್ಲಾನ್ ಮೋದಿ'' ಕಾರ್ಯಕ್ರಮ ಒಳಗೊಂಡಿತ್ತು. ಯು.ಎ.ಇ.ಯ ಪ್ರಜೆಗಳಾದ ಅರಬಿ(ಎಮಿರಾಟಿ)ಗಳು ಸಹ ಪ್ರೇಕ್ಷಕರಾಗಿ ಒಳಗೊಂಡಿದ್ದರು.

Prime Minister’s meeting with President of the UAE

February 13th, 05:33 pm

Prime Minister Narendra Modi arrived in Abu Dhabi on an official visit to the UAE. In a special and warm gesture, he was received at the airport by the President of the UAE His Highness Sheikh Mohamed bin Zayed Al Nahyan, and thereafter, accorded a ceremonial welcome. The two leaders held one-on-one and delegation level talks. They reviewed the bilateral partnership and discussed new areas of cooperation.