ವಿಕಸಿತ ಭಾರತದ ಗುರಿಗಳತ್ತ ಗ್ರಾಮೀಣಾಭಿವೃದ್ಧಿ, ಕೃಷಿ, ಸಮಾಜ ಕಲ್ಯಾಣ ಮತ್ತು ಸಂಬಂಧಿತ ವಲಯಗಳ ಪ್ರಗತಿಯನ್ನು ಪರಿಶೀಲಿಸಲು ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಅವರು ವಹಿಸಿದರು

July 22nd, 07:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಅಧಿಕೃತ ನಿವಾಸವಾದ 7, ಲೋಕ ಕಲ್ಯಾಣ ಮಾರ್ಗದಲ್ಲಿ, ವಿಕಸಿತ ಭಾರತದ ಗುರಿಗಳತ್ತ ಗ್ರಾಮೀಣಾಭಿವೃದ್ಧಿ, ಕೃಷಿ, ಸಮಾಜ ಕಲ್ಯಾಣ ಮತ್ತು ಸಂಬಂಧಿತ ವಲಯಗಳ ಪ್ರಗತಿಯನ್ನು ಪರಿಶೀಲಿಸಲು ಕಾರ್ಯದರ್ಶಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 11th, 01:15 pm

ನ್ಯೂಜಿಲೆಂಡ್‌ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.

ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ

July 11th, 12:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದ 'ಪಶ್ಚಿಮ ಬಂಗಾ ದಿವಸ' ಆಚರಣೆಯಲ್ಲಿ ಭಾಗವಹಿಸಿದರು

June 19th, 11:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳ ದಿವಸ (ಪಶ್ಚಿಮ ಬಂಗಾಳ ದಿನ) ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ನಂಟು ಹೊಂದಿರುವ ಐತಿಹಾಸಿಕ ಮಹತ್ವದ ಸ್ಥಳವಾದ ಹೂಗ್ಲಿಯ ತಾರಕೇಶ್ವರದಲ್ಲಿ ರಾಜ್ಯ ಮಟ್ಟದ ಆಚರಣೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಪಶ್ಚಿಮ ಬಂಗಾಳ ದಿನಾಚರಣೆಯ ವಿಷಯವಾದ ಪಶ್ಚಿಮ ಬಂಗಾಳ: ಪರಂಪರೆ, ಸಾಮರಸ್ಯ ಮತ್ತು ಅಭಿವೃದ್ಧಿ ಎಂಬುದು ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆ, ಸಾಮಾಜಿಕ ಸಾಮರಸ್ಯ ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ.

ಬೇಸಿಗೆಯ ಬಿಸಿಲನ್ನು ನಿವಾರಿಸಲು ಪ್ರಧಾನಿ ಮೋದಿ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ, ಮನ್ ಕಿ ಬಾತ್‌ನಲ್ಲಿ ನಾಗರಿಕರಿಗೆ ನೀರಿನಂಶ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ

May 31st, 11:30 am

ನನ್ನ ಪ್ರಿಯ ದೇಶ ಬಾಂಧವರೆ, ನಮಸ್ಕಾರ. ‘ಮನದ ಮಾತಿನ’ ಮೂಲಕ ಮತ್ತೊಮ್ಮೆ ನಿಮ್ಮನ್ನು ಸಂಪರ್ಕಿಸುತ್ತಿರುವುದು ನನಗೆ ಬಹಳ ಸಂತೋಷವೆನಿಸಿದೆ. ದೇಶದ ವಿವಿಧ ಭಾಗಗಳಲ್ಲಿ, ನಮ್ಮ ಜನರು ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಸಾಕಷ್ಟು ಗಮನಾರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಮತ್ತು ಅವರ ಪ್ರಯತ್ನಗಳ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೊಸ ಸ್ಫೂರ್ತಿಯ ಸೆಲೆ ಹುಟ್ಟುತ್ತದೆ. ಇಂದು, ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅಂತಹ ಒಂದು ರಾಷ್ಟ್ರೀಯ ಸಾಧನೆಯ ಕುರಿತು ಪ್ರಸ್ತಾಪಿಸುವ ಮೂಲಕ ನಾನು ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಬಯಸುತ್ತೇನೆ. ಕೆಲವೇ ದಿನಗಳ ಹಿಂದೆ, ಜಾರ್ಖಂಡ್‌ನ ರಾಂಚಿಯಲ್ಲಿ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ದೇಶದ ಮೂಲೆ ಮೂಲೆಗಳಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ನಾಲ್ಕು ರಾಷ್ಟ್ರೀಯ ದಾಖಲೆಗಳನ್ನು ಮುರಿಯಲಾಯಿತು. ಗುರಿಂದರ್‌ವೀರ್ ಸಿಂಗ್, ವಿಶಾಲ್ ಟಿ.ಕೆ., ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ - ಈ ಕ್ರೀಡಾಪಟುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸ್ಥಾಪಿಸಿದರು. ಮೊದಲನೆಯದಾಗಿ, ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ

May 09th, 11:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನ ಮಂತ್ರಿ ಬೆಳಿಗ್ಗೆ ಸುಮಾರು 11 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್ಟ್ ಆಫ್ ಲಿವಿಂಗ್‌ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ, ಅಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಪ್ರಧಾನಮಂತ್ರಿ ಹೈದರಾಬಾದ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆಗೆ ಸುಮಾರು 9,400 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 3:45 ರ ಸುಮಾರಿಗೆ ಪ್ರಧಾನಮಂತ್ರಿ ಹೈದರಾಬಾದ್‌ನಲ್ಲಿರುವ ಸಿಂಧು ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಗುಜರಾತ್‌ನ ವಾವ್-ಥರಡ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

March 31st, 05:00 pm

ಕೆಲವೇ ದಿನಗಳ ಹಿಂದೆ, ನವರಾತ್ರಿಯ ಪವಿತ್ರ ಹಬ್ಬವು ಮುಕ್ತಾಯಗೊಂಡಿತು. ಮಾತೆ ಅಂಬಾಜಿಯವರ ಕೃಪೆಯಿಂದ ಇಂದು ಅವರ ಪಾದಗಳಿರುವಲ್ಲಿಗೆ ಬರುವ ಭಾಗ್ಯ ನನಗೆ ಸಿಕ್ಕಿತು. ಅವರ ಕೃಪೆಯಿಂದ ಇಂದು, ನನ್ನ ಕುಟುಂಬದ ಸದಸ್ಯರೆಲ್ಲರನ್ನೂ ನೋಡುವ ಭಾಗ್ಯ ನನಗೆ ಸಿಕ್ಕಿತು. ನಾನು ತಾಯಿ ಅಂಬಾಜಿಯವರ ಪಾದಗಳಿಗೆ ನಮಸ್ಕರಿಸುತ್ತೇನೆ. ನಮ್ಮ ವರಾಹ ರೂಪಿ ಶ್ರೀ ಧರ್ಣಿಧರ್ಜಿ, ಮುಖದ ಕೃಷ್ಣ, ನಾನು ಇಂದು ಅವರಿಗೆ ನನ್ನ ಗೌರವಯುತ ನಮನ ಸಲ್ಲಿಸುತ್ತೇನೆ. ಇಂದು ನಾವು ಭಗವಾನ್ ಮಹಾವೀರ ಜಯಂತಿಯನ್ನು ಸಹ ಆಚರಿಸುತ್ತಿದ್ದೇವೆ ಎಂಬುದು ಆಹ್ಲಾದಕರ ಕಾಕತಾಳೀಯ ಸಂದರ್ಭ. ನಮ್ಮ ಈ ಪ್ರದೇಶವು ಅನೇಕ ಜೈನ ತೀರ್ಥಕ್ಷೇತ್ರಗಳ ಭೂಮಿಯಾಗಿದೆ. ನಾನು ಭಗವಾನ್ ಮಹಾವೀರರಿಗೆ ನಮಸ್ಕರಿಸುತ್ತೇನೆ ಮತ್ತು ಪವಿತ್ರ ಮಹಾವೀರ ಜನ್ಮ ಕಲ್ಯಾಣಕ್ ದಿನ, ಮಹಾವೀರ ಜಯಂತಿಯಂದು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ.

ಗುಜರಾತ್‌ನ ವಾವ್-ಥರಡ್‌ನಲ್ಲಿ ₹20,000 ಕೋಟಿಗೂ ಹೆಚ್ಚು ಮೌಲ್ಯದ ರಾಷ್ಟ್ರ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು

March 31st, 04:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬನಸ್ಕಾಂತ ಜಿಲ್ಲೆಯ ವಾವ್-ಥರಡ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ಉತ್ತರ ಗುಜರಾತ್‌ಗೆ ಸುಮಾರು ₹20,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಅಡಿಪಾಯ ಹಾಕಿದರು. ಪವಿತ್ರ ನವರಾತ್ರಿ ಉತ್ಸವವು ಇತ್ತೀಚೆಗೆ ಮುಕ್ತಾಯಗೊಂಡಿದೆ ಮತ್ತು ಆ ದಿನ ಭಗವಾನ್ ಮಹಾವೀರ ಜಯಂತಿಯೂ ಆಗಿದೆ ಎಂದು ಹೇಳಿದ ಪ್ರಧಾನಮಂತ್ರಿ, ಮಾ ಅಂಬಾಜಿ ಮತ್ತು ಭಗವಾನ್ ಶ್ರೀ ಧರಣಿಧರ್ಜಿ ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದರು.

ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 30th, 11:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಗಾಂಧಿನಗರದಲ್ಲಿ ʻಸಾಮ್ರಾಟ್ ಸಂಪ್ರತಿʼ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಪ್ರಧಾನಮಂತ್ರಿಯವರು ಅಹಮದಾಬಾದ್‌ನ ಸನಂದ್‌ನಲ್ಲಿ ʻಕೇನ್ಸ್ ಸೆಮಿಕಾನ್ʼ ಘಟಕವನ್ನು ಉದ್ಘಾಟಿಸಲಿದ್ದಾರೆ. ಅಲ್ಲಿಯೂ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ವಾವ್-ಥರಾಡ್‌ಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಅವರು ಸಂಜೆ 4 ಗಂಟೆಗೆ 20,000 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

Cabinet approves scheme on ‘Small Hydro Power (SHP) Development Scheme for the period FY 2026-27 to FY 2030-31’

March 18th, 04:12 pm

The Union Cabinet, chaired by PM Narendra Modi, has approved the ‘Small Hydro Power (SHP) Development Scheme for the period FY 2026–27 to FY 2030–31’ with an outlay of Rs. 2,584.60 crore. The scheme will particularly benefit hilly and North Eastern states and also incentivise states to prepare detailed project reports for about 200 projects, creating a pipeline of small hydro projects in the future.

ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 11th, 05:45 pm

ಈ ಅದ್ಭುತ ನಗರ ತಿರುಚಿಯಲ್ಲಿ ಇರುವುದು ನನಗೆ ತುಂಬಾ ಸಂತೋಷ ನೀಡುತ್ತಿದೆ. ಇಂದಿನ ಕಾರ್ಯಕ್ರಮವು ತಮಿಳುನಾಡಿನ ಭವಿಷ್ಯಕ್ಕೆ ಮಹತ್ವದ್ದಾಗಿದೆ. ಇದು 5 ಸಾವಿರದ 600 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಸಂಬಂಧಿಸಿದೆ. ಈ ಯೋಜನೆಗಳು: ಸ್ವಚ್ಛ ಇಂಧನಕ್ಕಾಗಿ ಮೂಲಸೌಕರ್ಯ, ಪೆಟ್ರೋಲಿಯಂ ಸಂಬಂಧಿತ ಉತ್ಪಾದನೆ, ಹೆದ್ದಾರಿಗಳು, ರೈಲ್ವೆಗಳು ಮತ್ತು ಗ್ರಾಮೀಣ ರಸ್ತೆ ಯೋಜನೆಗಳಾಗಿವೆ. ಅವು ಇಂಧನ ಪ್ರವೇಶ, ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ತಮಿಳುನಾಡಿನ ಯುವಕರಿಗೆ ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸುತ್ತವೆ.

ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸುಮಾರು ₹5,650 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ಮಾಡಿ, ಹಸಿರು ನಿಶಾನೆ ತೋರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 11th, 05:30 pm

ತಮಿಳುನಾಡಿನ ಮೂಲಸೌಕರ್ಯ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಪರಿವರ್ತನಾತ್ಮಕ ಅಭಿವೃದ್ಧಿ ಯೋಜನೆಗಳ ಸರಣಿಯನ್ನು ಉದ್ಘಾಟಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಐತಿಹಾಸಿಕ ನಗರವಾದ ತಿರುಚ್ಚಿಗೆ ಭೇಟಿ ನೀಡಿದರು. ಒಟ್ಟು ಐದು ಸಾವಿರದ ಆರುನೂರು ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ, ಈ ಉಪಕ್ರಮಗಳು ಶುದ್ಧ ಇಂಧನ, ಪೆಟ್ರೋಲಿಯಂ ಸಂಬಂಧಿತ ಉತ್ಪಾದನೆ ಮತ್ತು ಹೆದ್ದಾರಿಗಳು, ರೈಲ್ವೆಗಳು ಮತ್ತು ಗ್ರಾಮೀಣ ರಸ್ತೆಗಳ ಮೂಲಕ ವರ್ಧಿತ ಬಹು-ಮಾದರಿ ಸಂಪರ್ಕ ವಿಸ್ತರಣೆಯ ಉದ್ದೇಶಗಳನ್ನು ಒಳಗೊಂಡಿವೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಈ ಯೋಜನೆಗಳು ಇಂಧನ ಲಭ್ಯತೆ ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ತಮಿಳುನಾಡಿನ ಯುವಜನರಿಗೆ ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು.

ಮಾರ್ಚ್ 6, 2026 ರಂದು “ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಭಾಷಣ ಮಾಡಲಿದ್ದಾರೆ

March 05th, 06:04 pm

ಮಾರ್ಚ್ 6, 2026 ರಂದು ಬೆಳಿಗ್ಗೆ 11:15ಕ್ಕೆ “ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ಎಂಬ ವಿಷಯದ ಕುರಿತು ಬಜೆಟ್ ನಂತರದ ಮೌಲ್ಯವರ್ಧಿತ ವಿಶ್ಲೇಷಣೆ ಸಂವಾದಗಳ ವಿಶೇಷ ವೆಬಿನಾರ್ ಸರಣಿಕೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ ಮೂಲಕ ಭಾಷಣ ಮಾಡಲಿದ್ದಾರೆ.

ನವದೆಹಲಿಯ ಕಾರಿಯಪ್ಪ ಮೈದಾನದಲ್ಲಿ ನಡೆದ ಎನ್ ಸಿಸಿ ರ‍್ಯಾಲಿ (Rally) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 28th, 04:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜಿ, ವೇದಿಕೆಯಲ್ಲಿರುವ ಇತರೆ ಎಲ್ಲ ಗಣ್ಯರೆ, ದೇಶಾದ್ಯಂತ ಬಂದಿರುವ ಎನ್ ಸಿ ಸಿ ಮತ್ತು ಎನ್‌ ಎಸ್‌ ಎಸ್ ಕೆಡೆಟ್ ‌ಗಳೆ, ಟ್ಯಾಬ್ಲೊ ಕಲಾವಿದರೆ, ರಾಷ್ಟ್ರೀಯ ರಂಗಶಾಲೆಯ ಸಹೋದ್ಯೋಗಿಗಳೆ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ. ನಿಮ್ಮೆಲ್ಲರ ಕಠಿಣ ಪರಿಶ್ರಮ ಇಲ್ಲಿ ಗೋಚರಿಸುತ್ತಿದೆ. ನೀವು ಉತ್ತಮ ಸಮನ್ವಯದಿಂದ ನಿಮ್ಮ ಪ್ರದರ್ಶನವನ್ನು ತೋರಿದ್ದೀರಿ.

ದೆಹಲಿಯಲ್ಲಿ ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡ್ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 28th, 03:30 pm

ದೆಹಲಿಯಲ್ಲಿ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಇಂದು ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡನ್ನು (ರ‍್ಯಾಲಿಯನ್ನು) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಎನ್‌ಸಿಸಿ ದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎನ್‌ಸಿಸಿ, ಎನ್‌ಎಸ್‌ಎಸ್ ಕೆಡೆಟ್‌ಗಳು, ಟ್ಯಾಬ್ಲೋ ಕಲಾವಿದರು, ರಾಷ್ಟ್ರೀಯ ರಂಗಶಾಲೆಯ ಸಹಚರರು ಮತ್ತು ದೇಶಾದ್ಯಂತದ ಯುವ ಪಾಲ್ಗೊಳ್ಳುವಿಕೆಯ ಪ್ರಯತ್ನಗಳು ಅವರ ಸಂಘಟಿತ ಪ್ರದರ್ಶನಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಹೇಳಿದರು. ಇಂದು ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಿಂದಾಗಿ ಈ ದಿನವು ತೀವ್ರ ದುಃಖವನ್ನುಂಟುಮಾಡಿದೆ ಎಂದು ಶ್ರೀ ಮೋದಿ ದುಃಖದಿಂದ ನುಡಿದರು, ಇದರಲ್ಲಿ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಮತ್ತು ಕೆಲವು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆ. ಅಜಿತ್ ದಾದಾ ಅವರು ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಗ್ರಾಮೀಣ ಜೀವನವನ್ನು ಸುಧಾರಿಸಲು ಕೆಲಸ ಮಾಡುವ ಮೂಲಕ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ಎತ್ತಿ ತೋರಿಸಿದರು ಮತ್ತು ಶ್ರೀ ಅಜಿತ್ ಪವಾರ್ ಜೀ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಈ ನೋವಿನ ಕ್ಷಣದಲ್ಲಿ, ಅಪಘಾತದಲ್ಲಿ ಮಡಿದವರ ಕುಟುಂಬಗಳೊಂದಿಗೆ ರಾಷ್ಟ್ರವು ನಿಂತಿದೆ ಎಂದು ಅವರು ಹೇಳಿದರು. ದುಃಖ ಮತ್ತು ಸಂತಾಪದ ಈ ಕ್ಷಣಗಳ ನಡುವೆ ಪ್ರಧಾನಿ, ಸ್ನೇಹಪರ ರಾಷ್ಟ್ರಗಳವರು ಸೇರಿದಂತೆ ಹಾಜರಿದ್ದ ಎಲ್ಲಾ ಕೆಡೆಟ್‌ಗಳಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಈ ವರ್ಷ ಬಾಲಕಿಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಗುರುತಿಸಿದರು.

The greatest pride of my life is that I am a karyakarta of the Bharatiya Janata Party: PM Modi at BJP HQ

January 20th, 11:16 am

Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”

PM Modi addresses BJP karyakartas at felicitation of New Party President

January 20th, 11:15 am

Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 19th, 07:01 pm

ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಎಲ್. ಮುರುಗನ್ ಜಿ, ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ರಾಮಸಾಮಿ ಜಿ, ವಿವಿಧ ಕೃಷಿ ಸಂಸ್ಥೆಗಳ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ರೈತ ಸಹೋದರ ಸಹೋದರಿಯರೆ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರಿಕೊಂಡಿರುವ ದೇಶಾದ್ಯಂತದ ಲಕ್ಷಾಂತರ ರೈತರೆ! ನಾನು ನಿಮ್ಮೆಲ್ಲರಿಗೂ ವಣಕ್ಕಂ ಮತ್ತು ನಮಸ್ಕಾರದೊಂದಿಗೆ ಶುಭಾಶಯ ಕೋರುತ್ತೇನೆ. ಮೊದಲನೆಯದಾಗಿ, ಇಲ್ಲಿರುವ ನಿಮ್ಮೆಲ್ಲರಿಗೂ ಮತ್ತು ದೇಶಾದ್ಯಂತದ ನನ್ನ ಎಲ್ಲಾ ರೈತ ಸಹೋದರ ಸಹೋದರಿಯರಿಗೂ ಕ್ಷಮೆ ಯಾಚಿಸಲು ಬಯಸುತ್ತೇನೆ. ಇಂದು ಬೆಳಗ್ಗೆ ನಾನು ಸತ್ಯಸಾಯಿ ಬಾಬಾ ಅವರಿಗೆ ಮೀಸಲಾದ ಪುಟ್ಟಪರ್ತಿ ಕಾರ್ಯಕ್ರಮದಲ್ಲಿದ್ದೆ, ಅಲ್ಲಿ ನಡೆದ ಕಾರ್ಯಕ್ರಮ ನಿರೀಕ್ಷೆಗಿಂತ ಹೆಚ್ಚು ಸಮಯ ನಡೆದ ಕಾರಣ ನಾನು ಇಲ್ಲಿಗೆ ತಲುಪಲು ಸುಮಾರು 1 ತಾಸು ತಡವಾಯಿತು. ಅದರಿಂದ ನಾನಿಲ್ಲಿಗೆ ಬರುವುದು ತಡವಾಯಿತು. ಇದರಿಂದ ನಿಮಗೆ ಉಂಟಾಗಿರಬಹುದಾದ ಯಾವುದೇ ಅನನುಕೂಲತೆಗಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ. ದೇಶಾದ್ಯಂತ ಅನೇಕ ಜನರು ಕಾಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ, ಆದ್ದರಿಂದ ನಾನು ನಿಮ್ಮ ಕ್ಷಮೆ ಕೋರುತ್ತೇನೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

November 19th, 02:30 pm

ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಕೊಯಮತ್ತೂರಿನ ಪವಿತ್ರ ನೆಲದಲ್ಲಿ ಮರುಧಮಲೈ ಮುರುಗನ್ ದೇವರಿಗೆ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕೊಯಮತ್ತೂರು ಸಂಸ್ಕೃತಿ, ಸಹಾನುಭೂತಿ ಮತ್ತು ಸೃಜನಶೀಲತೆಯ ಭೂಮಿ ಎಂದು ಅವರು ಬಣ್ಣಿಸಿದರು ಮತ್ತು ಅದು ದಕ್ಷಿಣ ಭಾರತದ ಉದ್ಯಮಶೀಲ ಶಕ್ತಿಯ ಕೇಂದ್ರವಾಗಿದೆ ಎಂದು ಹೇಳಿದರು. ನಗರದ ಜವಳಿ ವಲಯವು ರಾಷ್ಟ್ರೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಕೊಯಮತ್ತೂರಿನ ಮಾಜಿ ಸಂಸದರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಈಗ ಉಪರಾಷ್ಟ್ರಪತಿಯಾಗಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿರುವುದರಿಂದ ಕೊಯಮತ್ತೂರು ಈಗ ಮತ್ತಷ್ಟು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ

November 19th, 11:00 am

ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!