ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಪಾಲ್ಗೊಂಡು ಧನ್ಯನಾದೆ : ಪ್ರಧಾನಮಂತ್ರಿ

February 05th, 12:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಯಾಗ್ ರಾಜ್ ನ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಅಲ್ಲಿನ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.

ಪ್ರಯಾಗರಾಜ್‌ ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಫೆಬ್ರವರಿ 5, 2025 ರಂದು ಭೇಟಿ ನೀಡಲಿರುವ ಪ್ರಧಾನಮಂತ್ರಿ

February 04th, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 5 , 2025 ರಂದು ಪ್ರಯಾಗರಾಜ್‌ ನಲ್ಲಿ ನಡೆಯುವ ಮಹಾ ಕುಂಭಮೇಳ 2025 ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 11 ಗಂಟೆಗೆ, ಅವರು ಸಂಗಮದಲ್ಲಿ ಪವಿತ್ರ ಸ್ನಾನವನ್ನು ಮಾಡಲಿದ್ದಾರೆ, ಮತ್ತು ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಪ್ರಯಾಗ್ ರಾಜ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

December 13th, 02:10 pm

ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜೀ ಮತ್ತು ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮಂತ್ರಿಗಳು, ಸಂಸತ್ತು ಮತ್ತು ವಿಧಾನಸಭೆಯ ಗೌರವಾನ್ವಿತ ಸದಸ್ಯರು, ಪ್ರಯಾಗ್ ರಾಜ್ ನ ಮೇಯರ್ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಹಾಗುಇತರ ಗೌರವಾನ್ವಿತ ಅತಿಥಿಗಳೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆಯನ್ನು ಪ್ರಧಾನಿ ನೆರವೇರಿಸಿದರು

December 13th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸಂಗಮದ ಪವಿತ್ರ ಭೂಮಿಯಾದ ಪ್ರಯಾಗ್‌ರಾಜ್‌ಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿದರು ಮತ್ತು ಮಹಾಕುಂಭದಲ್ಲಿ ಪಾಲ್ಗೊಂಡ ಸಂತರು ಮತ್ತು ಸಾಧುಗಳಿಗೆ ಗೌರವ ನಮನ ಸಲ್ಲಿಸಿದರು. ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಮಹಾಕುಂಭವನ್ನು ಯಶಸ್ವಿಗೊಳಿಸಿದ ನೌಕರರು, ಶ್ರಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಶ್ರೀ ಮೋದಿ ಕೃತಜ್ಞತೆ ಸಲ್ಲಿಸಿದರು. ಮಹಾಕುಂಭದ ಅಗಾಧತೆ ಮತ್ತು ಗಾತ್ರದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಇದು ವಿಶ್ವದ ಅತಿದೊಡ್ಡ ಜನಸಂಗಮಗಳಲ್ಲಿ ಒಂದಾಗಿದೆ. 45 ದಿನಗಳ ಕಾಲ ನಡೆಯುವ ʻಮಹಾಯಜ್ಞಕ್ಕಾಗಿʼ ಪ್ರತಿದಿನ ಲಕ್ಷಾಂತರ ಭಕ್ತರನ್ನು ಸ್ವಾಗತಿಸುತ್ತದೆ ಮತ್ತು ಈ ಸಂದರ್ಭಕ್ಕಾಗಿ ಸಂಪೂರ್ಣ ಹೊಸ ನಗರವನ್ನೇ ಸ್ಥಾಪಿಸಲಾಗಿದೆ ಎಂದರು. ಪ್ರಯಾಗ್‌ರಾಜ್ ಭೂಮಿಯಲ್ಲಿ ಹೊಸ ಇತಿಹಾಸ ಬರೆಯಲಾಗುತ್ತಿದೆ, ಎಂದು ಪ್ರಧಾನಿ ಉದ್ಗರಿಸಿದರು. ಮುಂದಿನ ವರ್ಷ ನಡೆಯಲಿರುವ ಮಹಾಕುಂಭ ಮೇಳದ ಕಾರ್ಯಕ್ರಮವು ರಾಷ್ಟ್ರದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಗುರುತನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಇಂತಹ ಏಕತೆಯ 'ಮಹಾಯಜ್ಞ'ದ ಬಗ್ಗೆ ವಿಶ್ವದಾದ್ಯಂತ ಚರ್ಚಿಸಲಾಗುವುದು ಎಂದು ಹೇಳಿದರು. ಮಹಾಕುಂಭ ಮೇಳದ ಯಶಸ್ವಿ ಸಂಘಟನೆಗಾಗಿ ಅವರು ಜನತೆಗೆ ಶುಭ ಕೋರಿದರು.

ಡಿಸೆಂಬರ್ 13 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

December 12th, 02:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 13ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಪ್ರಯಾಗ್‌ರಾಜ್‌ಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 12:15ರ ಸುಮಾರಿಗೆ ʻಸಂಗಮ್ ನೋಸ್ʼನಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12:40ಕ್ಕೆ ʻಅಕ್ಷಯ್ ವಟವೃಕ್ಷʼದಲ್ಲಿ ಪೂಜೆ ನೆರವೇರಿಸಲಿದ್ದು, ನಂತರ ಹನುಮಾನ್ ಮಂದಿರ ಮತ್ತು ಸರಸ್ವತಿ ಕೂಪ್‌ನಲ್ಲಿ ದರ್ಶನ ಮತ್ತು ಪೂಜೆ ಮಾಡಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಹಾಕುಂಭ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 2 ಗಂಟೆಗೆ ಅವರು ಪ್ರಯಾಗ್‌ರಾಜ್‌ನಲ್ಲಿ 5,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.