'Vande Mataram' rekindled an idea deeply rooted in India for thousands of years: PM Modi in Lok Sabha

December 08th, 12:30 pm

During the special discussion on 150 years of Vande Mataram in the Lok Sabha, PM Modi said that the discussion serves as a source of education for future generations. He called upon all to move forward together to fulfil the dreams envisioned by the freedom fighters, making Vande Mataram at 150 the source of inspiration and energy for all. The PM reaffirmed the resolve to build a self-reliant nation and achieve the vision of a developed India by 2047.

PM Modi addresses the special discussion on 150 years of the National Song, Vande Mataram in Lok Sabha

December 08th, 12:00 pm

During the special discussion on 150 years of Vande Mataram in the Lok Sabha, PM Modi said that the discussion serves as a source of education for future generations. He called upon all to move forward together to fulfil the dreams envisioned by the freedom fighters, making Vande Mataram at 150 the source of inspiration and energy for all. The PM reaffirmed the resolve to build a self-reliant nation and achieve the vision of a developed India by 2047.

ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 17th, 08:30 pm

ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್‌ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.

ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 17th, 08:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

November 15th, 03:15 pm

ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 15th, 03:00 pm

ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್‌ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.

ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 31st, 07:00 pm

ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

October 31st, 06:08 pm

ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.

ಭಾರತದಾದ್ಯಂತ ಜನರನ್ನು ಸಂಪರ್ಕಿಸುವ ಸಾಮೂಹಿಕ ಚಳುವಳಿಯ ಮೂಲಕ ನಿರ್ಮಿಸಲಾದ ಏಕತೆಯ ಪ್ರತಿಮೆಯು ಸರ್ದಾರ್ ಪಟೇಲ್ ಅವರಿಗೆ ನೀಡುವ ಗೌರವವಾಗಿದೆ: ಪ್ರಧಾನಮಂತ್ರಿ

October 31st, 12:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ‘ಏಕತೆಯ ಪ್ರತಿಮೆ’ಯು ಸರ್ದಾರ್ ವಲ್ಲಭಭಾಯಿ ಪಟೇಲ್ ಗೆ ನೀಡುವ ಗೌರವವಾಗಿದೆ ಮತ್ತು ಭಾರತದಾದ್ಯಂತದ ನಾಗರಿಕರು, ವಿಶೇಷವಾಗಿ, ಈ ಪ್ರದೇಶದ ಹಳ್ಳಿಗಳ ನಾಗರಿಕರು ಈ ಪ್ರತಿಮೆಯ ಪ್ರತಿಮೆಯೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿರುವ ಜನರ ಚಳವಳಿಯ ಗಮನಾರ್ಹ ಉದಾಹರಣೆಯಾಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

Prime Minister pays tributes to Sardar Vallabhbhai Patel at the Statue of Unity in Kevadia

October 31st, 12:41 pm

The Prime Minister, Shri Narendra Modi has paid tributes to Sardar Vallabhbhai Patel at the ‘Statue of Unity’ in Kevadia.

ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 31st, 09:00 am

ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಗುಜರಾತ್‌ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

October 31st, 08:44 am

ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಂದು ಭಾರತ ಅವರಿಗೆ ಗೌರವ ನಮನ ಸಲ್ಲಿಸುತ್ತದೆ: ಪ್ರಧಾನಮಂತ್ರಿ

October 31st, 08:05 am

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಂದು ಭಾರತ ಅವರಿಗೆ ಗೌರವ ನಮನ ಸಲ್ಲಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪರಂಪರೆಯನ್ನು ಗೌರವಿಸಲು ಅಕ್ಟೋಬರ್ 31 ರಂದು ನಡೆಯುವ ಏಕತಾ ಓಟದಲ್ಲಿ ನಾಗರಿಕರು ಭಾಗವಹಿಸಲು ಪ್ರಧಾನಮಂತ್ರಿ ಮನವಿ

October 27th, 09:15 am

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಅಕ್ಟೋಬರ್ 31 ರಂದು ನಡೆಯುವ ಏಕತಾ ಓಟದಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ದೇಶಾದ್ಯಂತ ನಾಗರಿಕರಿಗೆ ಕರೆ ನೀಡಿದ್ದಾರೆ. ಈ ಕಾರ್ಯಕ್ರಮವು ರಾಷ್ಟ್ರೀಯ ಏಕತಾ ದಿನವನ್ನು ಸೂಚಿಸುತ್ತದೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಭಾರತಕ್ಕಾಗಿ ಕಲ್ಪಿಸಿಕೊಂಡ ಏಕತೆ ಮತ್ತು ಒಗ್ಗಟ್ಟಿನ ಶಾಶ್ವತ ಮನೋಭಾವವನ್ನು ಆಚರಿಸುವ ಸಂಕೇತವಾಗಿದೆ.

ಮಧ್ಯಪ್ರದೇಶದ ಧಾರ್ ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

September 17th, 11:20 am

ಮಧ್ಯಪ್ರದೇಶದ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಮೋಹನ್ ಯಾದವ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿಗಳಾದ ಸಹೋದರಿ ಸಾವಿತ್ರಿ ಠಾಕೂರ್ ಜೀ, ದೇಶದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕೇಂದ್ರ ಸಚಿವರೇ, ರಾಜ್ಯಗಳ ರಾಜ್ಯಪಾಲರೇ, ರಾಜ್ಯಗಳ ಮುಖ್ಯಮಂತ್ರಿಗಳೇ, ವೇದಿಕೆಯ ಮೇಲೆ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ ಮತ್ತು ದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

ಮಧ್ಯಪ್ರದೇಶದ ಧಾರ್‌ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಿಲಾನ್ಯಾಸ ಮತ್ತುಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

September 17th, 11:19 am

ಮಧ್ಯಪ್ರದೇಶದ ಧಾರ್‌ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಧಾರ್ ಭೋಜಶಾಲಾದ ಪೂಜ್ಯ ಮಾತೆ ಜ್ಞಾನ ದೇವತೆ ವಾಗ್ದೇವಿಯ ಪಾದಗಳಿಗೆ ನಮಸ್ಕರಿಸಿದರು. ಇಂದು ದೈವಿಕ ವಾಸ್ತುಶಿಲ್ಪಿ ಮತ್ತು ಕೌಶಲ್ಯ ಹಾಗು ಸೃಷ್ಟಿಯ ದೇವತೆಯಾದ ಭಗವಾನ್ ವಿಶ್ವಕರ್ಮರ ಜನ್ಮ ದಿನವಾಗಿದೆ ಎಂದು ಹೇಳಿದ ಶ್ರೀ ಮೋದಿ, ಭಗವಾನ್ ವಿಶ್ವಕರ್ಮರಿಗೆ ನಮನ ಸಲ್ಲಿಸಿದರು. ತಮ್ಮ ಕರಕುಶಲತೆ ಮತ್ತು ಸಮರ್ಪಣೆಯ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿರುವ ಕೋಟ್ಯಂತರ ಸಹೋದರ ಸಹೋದರಿಯರಿಗೆ ಅವರು ಗೌರವ ಸಲ್ಲಿಸಿದರು.

79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು

August 15th, 03:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.

79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 15th, 07:00 am

ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.

India celebrates 79th Independence Day

August 15th, 06:45 am

PM Modi, in his address to the nation on the 79th Independence day paid tribute to the Constituent Assembly, freedom fighters, and Constitution makers. He reiterated that India will always protect the interests of its farmers, livestock keepers and fishermen. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047. Special guests like Panchayat members and “Drone Didis” graced the Red Fort celebrations.

17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿಯವರ ಭಾಷಣ

April 21st, 11:30 am

ನನ್ನ ಸಂಪುಟ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಶಕ್ತಿಕಾಂತ ದಾಸ್ ಜಿ, ಡಾ. ಸೋಮನಾಥನ್ ಜಿ, ಇತರ ಹಿರಿಯ ಅಧಿಕಾರಿಗಳು, ದೇಶಾದ್ಯಂತ ನಾಗರಿಕ ಸೇವೆಗಳ ಎಲ್ಲಾ ಸಹೋದ್ಯೋಗಿಗಳು, ಮಹಿಳೆಯರೇ ಮತ್ತು ಮಹನೀಯರೇ!