ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
April 27th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಕಾರ್ಯಕ್ರಮ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 12:00 pm
ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ಕ್ಷಣ ಕುಳಿತು, ಮೌನ ಆಚರಿಸುವ ಮೂಲಕ ಮತ್ತು ನಮ್ಮ ದೇವತೆಗಳನ್ನು ಸ್ಮರಿಸುವ ಮೂಲಕ, ನಾವು ಅವರೆಲ್ಲರಿಗೂ ಗೌರವ ಸಲ್ಲಿಸೋಣ. ಅದಾದ ನಂತರ ನಾನು ಇಂದು ನನ್ನ ಭಾಷಣ ಆರಂಭಿಸುತ್ತೇನೆ.ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಬಿಹಾರದ ಮಧುಬನಿಯಲ್ಲಿ 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು
April 24th, 11:50 am
ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಇಂದು ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. 2025 ರ ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಆಚರಿಸಿ ಪ್ರಾರ್ಥಿಸುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಪ್ರಧಾನಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್ ರಾಜ್ ದಿನದ ಅಂಗವಾಗಿ ಇಡೀ ರಾಷ್ಟ್ರವು ಮಿಥಿಲಾ ಮತ್ತು ಬಿಹಾರದೊಂದಿಗೆ ಸಂಪರ್ಕ ಹೊಂದಿದೆ ಎಂದು ಹೇಳಿದರು. ಬಿಹಾರದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು, ವಿದ್ಯುತ್, ರೈಲ್ವೆ ಮತ್ತು ಮೂಲಸೌಕರ್ಯದಲ್ಲಿನ ಈ ಉಪಕ್ರಮಗಳು ಬಿಹಾರದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಒತ್ತಿ ಹೇಳಿದರು. ಮಹಾನ್ ಕವಿ ಮತ್ತು ರಾಷ್ಟ್ರೀಯ ಐಕಾನ್ ರಾಮಧಾರಿ ಸಿಂಗ್ ದಿನಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು.ಮಾರಿಷಸ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣ
March 12th, 06:07 am
10 ವರ್ಷಗಳ ಹಿಂದೆ ಇದೇ ದಿನದಂದು ನಾನು ಮಾರಿಷಸ್ಗೆ ಬಂದಾಗ, ನಾನು ಆಗಮನಕ್ಕೆ ಕೇವಲ ಒಂದು ವಾರ ಮೊದಲು ನಾವು ಹೋಳಿ ಆಚರಿಸಿದೆವು. ನಾನು ಭಾರತದಿಂದ ಫಾಗುವಾದ ಉತ್ಸಾಹವನ್ನು ನನ್ನೊಂದಿಗೆ ತಂದಿದ್ದೇನೆ. ಈ ಬಾರಿ ನಾನು ಮಾರಿಷಸ್ನಿಂದ ಭಾರತಕ್ಕೆ ಹೋಳಿಯ ಬಣ್ಣಗಳನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ಒಂದು ದಿನದ ನಂತರ ನಾವು ಅಲ್ಲಿ ಹೋಳಿಯನ್ನು ಆಚರಿಸುತ್ತೇವೆ. 14 ರಂದು ಎಲ್ಲೆಡೆ ಬಣ್ಣ ಇರುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು
March 11th, 07:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಪ್ರಧಾನಮಂತ್ರಿ ಘನತೆವೆತ್ತ ನವೀನಚಂದ್ರ ರಾಮಗೂಲಮ್ ಅವರೊಂದಿಗೆ ಟ್ರಿಯಾನಾನ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಾರಿಷಸ್ ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ ಸ್ನೇಹಿತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವು ವಿದ್ಯಾರ್ಥಿಗಳು, ವೃತ್ತಿಪರರು, ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳು ಮತ್ತು ವ್ಯಾಪಾರ ಮುಖಂಡರು ಸೇರಿದಂತೆ ಭಾರತೀಯ ಸಮುದಾಯದ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಇದರಲ್ಲಿ ಮಾರಿಷಸ್ ನ ಹಲವಾರು ಸಚಿವರು, ಸಂಸದರು ಮತ್ತು ಇತರ ಗಣ್ಯರು ಭಾಗವಹಿಸಿದ್ದರು.ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದೇಶದ 60 ವರ್ಷಗಳನ್ನು ವ್ಯರ್ಥ ಮಾಡಿದವು: ಬಿಹಾರದ ಚಂಪಾರಣ್ನಲ್ಲಿ ಪ್ರಧಾನಿ ಮೋದಿ
May 21st, 11:30 am
ಬಿಹಾರದ ಚಂಪಾರಣ್ನಲ್ಲಿ ನಡೆದ ಉತ್ಸಾಹಭರಿತ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ ನಾಯಕತ್ವದಲ್ಲಿ ಭಾರತ ಕೈಗೊಂಡಿರುವ ಪರಿವರ್ತಕ ಪ್ರಯಾಣ ಮತ್ತು ಈ ವೇಗವನ್ನು ಮುಂದುವರೆಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು. ಪಿಎಂ ಮೋದಿ ಅವರು ತಮ್ಮ ಸರ್ಕಾರದ ಮಹತ್ವದ ಸಾಧನೆಗಳನ್ನು ಎತ್ತಿ ತೋರಿಸುತ್ತಾ ಪ್ರತಿಪಕ್ಷಗಳ ವೈಫಲ್ಯಗಳನ್ನು ವಿಶೇಷವಾಗಿ ಇಂಡಿ ಮೈತ್ರಿಕೂಟವನ್ನು ಬಹಿರಂಗಪಡಿಸಿದರು.ಬಿಹಾರದ ಚಂಪಾರಣ್ ಮತ್ತು ಮಹಾರಾಜ್ಗಂಜ್ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
May 21st, 11:00 am
ಪ್ರಧಾನಿ ಮೋದಿಯವರು ಬಿಹಾರದ ಚಂಪಾರಣ್ ಮತ್ತು ಮಹಾರಾಜ್ಗಂಜ್ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾ, ತಮ್ಮ ನಾಯಕತ್ವದಲ್ಲಿ ಭಾರತ ಕೈಗೊಂಡಿರುವ ಪರಿವರ್ತಕ ಪ್ರಯಾಣ ಮತ್ತು ಈ ವೇಗವನ್ನು ಮುಂದುವರೆಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು. ಪಿಎಂ ಮೋದಿ ಅವರು ತಮ್ಮ ಸರ್ಕಾರದ ಮಹತ್ವದ ಸಾಧನೆಗಳನ್ನು ಎತ್ತಿ ತೋರಿಸುತ್ತಾ ಪ್ರತಿಪಕ್ಷಗಳ ವೈಫಲ್ಯಗಳನ್ನು ವಿಶೇಷವಾಗಿ ಇಂಡಿ ಮೈತ್ರಿಕೂಟವನ್ನು ಬಹಿರಂಗಪಡಿಸಿದರು.ರಾಜಸ್ಥಾನದ ಮಾನ್ ಗಢ್ ಹಿಲ್ಸ್ ನಲ್ಲಿ ನಡೆದ 'ಮಂಗರ್ ಧಾಮ್ ಕಿ ಗೌರವ್ ಗಾಥಾ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 01st, 11:20 am
ರಾಜಸ್ಥಾನದ ಮಾನ್ಯ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಜಿ, ಮಧ್ಯಪ್ರದೇಶದ ರಾಜ್ಯಪಾಲರು ಮತ್ತು ಬುಡಕಟ್ಟು ಸಮುದಾಯದ ಅತ್ಯಂತ ಎತ್ತರದ ನಾಯಕ ಶ್ರೀ ಮಂಗುಭಾಯಿ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಜಿ ಚೌಹಾಣ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಫಗ್ಗನ್ ಸಿಂಗ್ ಕುಲಸ್ತೆ ಜಿ ಮತ್ತು ಶ್ರೀ ಅರ್ಜುನ್ ಮೇಘವಾಲ್ ಜಿ, ವಿವಿಧ ಸಂಘಟನೆಗಳ ಪ್ರಮುಖರು, ಸಂಸದರು, ಶಾಸಕರು ಮತ್ತು ಬುಡಕಟ್ಟು ಸಮುದಾಯದ ಸೇವೆಗೆ ಇಡೀ ಜೀವನವನ್ನೇ ಮುಡಿಪಾಗಿಟ್ಟ ನನ್ನ ಹಳೆಯ ಸ್ನೇಹಿತ ಮತ್ತು ಸಹೋದರ ಮಹೇಶ್ ಜಿ ಮತ್ತು ನನ್ನ ಪ್ರೀತಿಯ ಬುಡಕಟ್ಟು ಬಂಧುಗಳು ಮತ್ತು ದೂರದೂರುಗಳಿಂದ ಮಂಗರ್ ಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಸಹೋದರ, ಸಹೋದರಿಯರೆ!‘ಮಂಗರ್ ಧಾಮ್ ಕಿ ಗೌರವ್ ಗಾಥಾ’ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗಿ
November 01st, 11:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ‘ಮಂಗರ್ ಧಾಮ್ ಕಿ ಗೌರವ್ ಗಾಥಾ’ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬುಡಕಟ್ಟು ಸಮುದಾಯಗಳ ಬೆಳಕಿಗೆ ಬಾರದ ಅವಿಸ್ಮರಣೀಯ ವೀರರು ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ, ಬಲಿದಾನಗೈದ ಹುತಾತ್ಮರಿಗೆ ಅವರು ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ಅವರು ಧುನಿ ದರ್ಶನ ಪಡೆದು, ಗೋವಿಂದ ಗುರುಗಳ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.ಕೋಲ್ಕೋತ್ತಾದ ವಿಕ್ಟೋರಿಯಾ ಸ್ಮಾರಕ ಸಭಾಂಗಣದಲ್ಲಿ ಬಿಪ್ಲೋಬಿ ಭಾರತ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 23rd, 06:05 pm
ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ ಧನ್ಕಾರ್ ಜೀ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕಿಶನ್ ರೆಡ್ಡಿ ಜೀ, ವಿಕ್ಟೋರಿಯಾ ಸ್ಮಾರಕ ಸಭಾಂಗಣಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೇ, ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳೇ, ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ದಿಗ್ಗಜಗಳೇ, ಮಹಿಳೆಯರೇ ಮತ್ತು ಮಹನೀಯರೇ!.ʻಶಾಹೀದ್ ದಿವಸʼದಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲರಿʼ ಉದ್ಘಾಟಿಸಿದ ಪ್ರಧಾನಿ
March 23rd, 06:00 pm
ಶಹೀದ್ ದಿವಸ್ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲʼರಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ್ ಧನಕರ್ ಮತ್ತು ಕೇಂದ್ರ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಜರ್ಮನಿಯ ಚಾನ್ಸಲರ್ ಜೊತೆ ಗಾಂಧಿ ಸ್ಮೃತಿಗೆ ಭೇಟಿ ನೀಡಿದ ಪ್ರಧಾನಮಂತ್ರಿ
November 01st, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜರ್ಮನಿಯ ಚಾನ್ಸಲರ್ ಡಾ. ಆಂಗೆಲಾ ಮರ್ಕೆಲಾ ಅವರೊಂದಿಗೆ ನವದೆಹಲಿಯಲ್ಲಿಂದು ಗಾಂಧಿ ಸ್ಮೃತಿಗೆ ಭೇಟಿ ನೀಡಿದ್ದರು.ಮಹಾತ್ಮಾ ಗಾಂಧಿ ಅವರ ಪರಂಪರೆಗೆ ಗೌರವ ಸಲ್ಲಿಕೆ
January 31st, 02:06 am
ಮಹಾತ್ಮಾ ಗಾಂಧಿ ಅವರ ಜೀವಿತ ಕಾಲದಲ್ಲಿದ್ದಂತೆ , ಇಂದಿನ ವಿಶ್ವದಲ್ಲಿ ಈಗಲೂ ಪ್ರಸ್ತುತರು ಎಂದು ನನ್ನ ಭಾವನೆ: ಶ್ರೀ ನರೇಂದ್ರ ಮೋದಿ.Swadeshi was a weapon in the freedom movement, today handloom has become a huge weapon to fight poverty: PM Modi
January 30th, 04:30 pm
PM Modi dedicated the National Salt Satyagraha Memorial to the nation in Dandi, Gujarat. PM Modi while addressing the programme, remembered Gandhi Ji’s invaluable contributions and said, “Bapu knew the value of salt. He opposed the British to make salt costly.” The PM also spoke about Mahatma Gandhi’s focus on cleanliness and said, “Gandhi Ji chose cleanliness over freedom. We are marching ahead on the path shown by Bapu.”ಗುಜರಾತ್ ನ ದಂಡಿಯಲ್ಲಿ ರಾಷ್ಟ್ರೀಯ ಉಪ್ಪಿನ ಸತ್ಯಾಗ್ರಹ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
January 30th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿ ಅವರ ಪುಣ್ಯ ತಿಥಿಯ ದಿನವಾದ ಇಂದು ಗುಜರಾತ್ ನ ನವಸಾರಿ ಜಿಲ್ಲೆಯ ದಂಡಿಯಲ್ಲಿ ರಾಷ್ಟ್ರೀಯ ಉಪ್ಪಿನ ಸತ್ಯಾಗ್ರಹ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದರು.UDAN has immensely helped to boost air connectivity in India: PM Modi
January 30th, 01:30 pm
Inaugurating the new terminal building of Surat Airport, PM Narendra Modi reiterated the Centre’s commitment to enhance ease of living as well as ease of doing business in the country. Highlighting NDA government’s focus on strengthening infrastructure and connectivity, the PM said that due to the UDAN Yojana, citizens were being benefitted as several airports were either being upgraded or extended throughout the country.ಸೂರತ್ ನಲ್ಲಿ ಪ್ರಧಾನ ಮಂತ್ರಿಯವರು ಇಂದು
January 30th, 01:30 pm
ಇಂದು ಪ್ರಧಾನ ಮಂತ್ರಿ ಶ್ರೀ. ನರೇಂದ್ರ ಮೋದಿಯವರು ಸೂರತ್ ಗೆ ಭೇಟಿ ನೀಡಿದರು. ಅವರು ಸೂರತ್ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ವಿಸ್ತರಣೆಗೆ ಅಡಿಪಾಯ ಹಾಕಿದರು, ಇದು ಸೂರತ್ ಮತ್ತು ದಕ್ಷಿಣ ಗುಜರಾತ್ ಪ್ರಾಂತ್ಯಕ್ಕೆ ಉತ್ತಮ ಸಂಪರ್ಕ ಮತ್ತು ಸಮೃದ್ಧಿಯನ್ನು ಒದಗಿಸಲಿದೆ.2019 ರಲ್ಲಿ ಭಾರತದ ಪ್ರಗತಿ ಮುಂದುವರೆಸಬಹುದು ಮತ್ತು ಮೇಲುಗೈ ಸಾಧಿಸಬಹುದು: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
December 30th, 11:30 am
ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಮಾತನಾಡಿದರು. ಪ್ರಧಾನಿ ಮೋದಿ 2018 ರಲ್ಲಿ ಭಾರತದ ಸಾಧನೆಗಳನ್ನು ನೆನಪಿಸಿಕೊಂಡರು ಮತ್ತು ಹೊಸ ವರ್ಷದ ಶುಭಾಶಯವನ್ನು ದೇಶಕ್ಕೆ ನೀಡಿದರು . ತಮ್ಮ ಭಾಷಣದಲ್ಲಿ ಪ್ರಧಾನ ಮಂತ್ರಿ ಪ್ರಯಾಗ್ ರಾಜ್ ನಲ್ಲಿ ಮುಂಬರುವ ಕುಂಭ ಮೇಳದ ಬಗ್ಗೆ ಮಾತನಾಡುತ್ತಾ, ಗುರು ಗೋಬಿಂದ್ ಸಿಂಗ್ ಜಿ, ಮಹಾತ್ಮಾ ಗಾಂಧಿ ಮತ್ತು ಸರ್ದಾರ್ ಪಟೇಲ್ ಅವರಂತಹ ಶ್ರೇಷ್ಠರ ಆಲೋಚನೆಗಳು ಮತ್ತು ಬೋಧನೆಗಳನ್ನು ನೆನಪಿಸಿಕೊಂಡರು.ಪ್ರಧಾನಮಂತ್ರಿಯವರ ಸ್ವಾತಂತ್ರ್ಯ ದಿನದ ಭಾಷಣ 2018 – ಮುಖ್ಯಾಂಶಗಳು
August 15th, 09:33 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 72ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲಿನ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.72ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲಿಂದ ಪ್ರಧಾನಮಂತ್ರಿಯವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣ
August 15th, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 72ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.